Homeಮುಖಪುಟ’ನಾನು ಅಧಿಕಾರಿಗಳಿಗೆ ಕರೆ ಮಾಡುತ್ತಲೇ ಇದ್ದೆ, ಯಾರು ಸ್ಪಂದಿಸಲಿಲ್ಲ’: ಗುಂಡೇಟಿಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ

’ನಾನು ಅಧಿಕಾರಿಗಳಿಗೆ ಕರೆ ಮಾಡುತ್ತಲೇ ಇದ್ದೆ, ಯಾರು ಸ್ಪಂದಿಸಲಿಲ್ಲ’: ಗುಂಡೇಟಿಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ

- Advertisement -
- Advertisement -

ಉಕ್ರೇನ್ ರಾಜಧಾನಿ ಕೀವ್‌ನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಭಾರತೀಯ ವಿದ್ಯಾರ್ಥಿ ಹರ್ಜೋತ್ ಸಿಂಗ್ ಗುಂಡೇಟಿಗೆ ಒಳಗಾಗಿದ್ದರು. ಪ್ರಸ್ತುತ ಕೀವ್ ಸಿಟಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಅವರು, ’ನಾನು ಅಧಿಕಾರಿಗಳಿಗೆ ಕರೆ ಮಾಡುತ್ತಲೇ ಇದ್ದೆ, ಯಾರು ಸ್ಪಂದಿಸಲಿಲ್ಲ’ ಎಂದು ಆರೋಪಿಸಿದ್ದಾರೆ.

ಎನ್‌ಡಿಟಿವಿ ಜೊತೆಗೆ ಮಾತನಾಡಿರುವ ಹರ್ಜೋತ್ ಸಿಂಗ್, “ನನ್ನ ಭುಜಕ್ಕೆ ಗುಂಡೇಟು ಬಿದ್ದಿದೆ. ವೈದ್ಯರು ನನ್ನ ಎದೆಯ ಭಾಗದಿಂದ ಗುಂಡನ್ನು ಹೊರತೆಗೆದಿದ್ದಾರೆ. ನನ್ನ ಕಾಲು ಮುರಿದಿದೆ” ಎಂದು ಹೇಳಿದ್ದಾರೆ.

“ನಾನು ಅಧಿಕಾರಿಗಳಿಗೆ ಕರೆ ಮಾಡುತ್ತಲೇ ಇದ್ದೆ. ನಾನು ಎಲ್ವಿವ್‌ಗೆ ಹೋಗಲು ನನಗೆ ಕೆಲವು ಸೌಲಭ್ಯಗಳು ಬೇಕಾಗಿದ್ದವು. ಆದರೆ ಯಾರೂ ನನ್ನನ್ನು ಸಂಪರ್ಕಿಸಲಿಲ್ಲ. ಎನ್‌ಡಿಟಿವಿ ಮಾತ್ರ ನನ್ನ ಬಳಿಗೆ ಬಂದಿದೆ. ಈಗ ಇಲ್ಲಿ ಏನಾಗುತ್ತಿದೆ ಎಂಬುದರ ವಾಸ್ತವತೆ ಇಡೀ ಜಗತ್ತಿಗೆ ತಿಳಿಯುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಆಪದ್ಬಾಂಧವನಾದ ನಟ ಸೋನು ಸೂದ್

ದೆಹಲಿ ಬಳಿಯ ಛತ್ತರ್‌ಪುರದ ವಿದ್ಯಾರ್ಥಿ ಹರ್ಜೋತ್ ಸಿಂಗ್ ತನ್ನ ಸ್ನೇಹಿತರೊಂದಿಗೆ ಕ್ಯಾಬ್‌ನಲ್ಲಿ ಗಡಿಯನ್ನು ತಲುಪಲು ಪ್ರಯತ್ನಿಸುತ್ತಿದ್ದರು. ಕೀವ್‌ನಿಂದ ಹೇಗಾದರೂ ತಪ್ಪಿಸಿಕೊಂಡು ಎಲ್ವಿವ್ ತಲುಪಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಗುಂಡೇಟು ಬಿದ್ದಿತ್ತು.

“ನಾನು ರಾಯಭಾರ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಿದೆ.ನನಗೆ ನಡೆಯಲು ಸಾಧ್ಯವಿಲ್ಲದ್ದ ಕಾರಣ, ನನ್ನನ್ನು ಎಲ್ವಿವ್‌ಗೆ ಕರೆದೊಯ್ಯಲು ಏನಾದರೂ ಸೌಲಭ್ಯವನ್ನು ಒದಗಿಸಬಹುದೇ ಎಂದು ಕೇಳಿದೆ. ಆದರೆ ನನಗೆ ಬರೀ ಸುಳ್ಳು ಹೇಳಿಕೆಗಳು, ಭರವಸೆಗಳು ಸಿಕ್ಕವು. ಇನ್ನೂ ಅನೇಕ ಮಂದಿ ಕೀವ್‌ನಲ್ಲಿ ಸಿಕ್ಕಿಬಿದ್ದಿದ್ದಾರೆ” ಎಂದಿದ್ದಾರೆ.

“ಅನೇಕರು ತಮ್ಮ ತಮ್ಮ ಮನೆಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ, ಏನಾಗುತ್ತಿದೆ ಎಂದು ಅವರಿಗೆ ತಿಳಿದಿಲ್ಲ. ನಾನು ನಿರಂತರವಾಗಿ ರಾಯಭಾರ ಕಚೇರಿಯೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿದ್ದೇನೆ. ನಾನು ಹೇಳುವುದೇನೆಂದರೇ, ಏನಾಯಿತು, ಅದರ ಬಗ್ಗೆ ನಾವು ಏನೂ ಮಾಡಲು ಸಾಧ್ಯವಿಲ್ಲ. ನಾವು ಒಳ್ಳೆಯದನ್ನು ಮಾತ್ರ ನಿರೀಕ್ಷಿಸಬಹುದು. ಜನರು ನನ್ನನ್ನು ಟಿವಿ ಮೂಲಕ ನೋಡಿದ್ದಾರೆ. ಈಗ ಜನರಿಗೆ ಇಲ್ಲಿ ಏನಾಗುತ್ತಿದೆ, ವಾಸ್ತವ ಏನೆಂದು ತಿಳಿಯುತ್ತಿದೆ” ಎಂದು ಹೇಳಿದ್ದಾರೆ.

“ಕೀವ್‌‌ನಿಂದ ಹೊರಟ ವಿದ್ಯಾರ್ಥಿಗೆ ಗುಂಡು ಹಾರಿಸಲಾಗಿದೆ ಎಂಬ ವರದಿಗಳನ್ನು ನಾವು ಕೇಳಿದ್ದೇವೆ. ಅವರನ್ನು ಮತ್ತೆ ಕೀವ್‌ಗೆ ಕರೆದೊಯ್ಯಲಾಗಿದೆ. ಯುದ್ಧದಲ್ಲಿ ಈ ಘಟನೆ ಸಂಭವಿಸಿದೆ” ಎಂದು ಬೆಳಗ್ಗೆ  ಕೇಂದ್ರ ಸಚಿವ ವಿ.ಕೆ.ಸಿಂಗ್ ತಿಳಿಸಿದ್ದರು.

ಇನ್ನು, ಸರ್ಕಾರದ ಪ್ರಕಾರ, ಕಳೆದ ಕೆಲವು ದಿನಗಳಲ್ಲಿ ಸುಮಾರು 17,000 ಭಾರತೀಯರು ಉಕ್ರೇನ್‌ನ ಗಡಿಯನ್ನು ತೊರೆದಿದ್ದಾರೆ. 6,000 ಕ್ಕೂ ಹೆಚ್ಚು ಜನರು ಮನೆಗೆ ಮರಳಿದ್ದಾರೆ. ಸುಮಾರು 1,700 ಜನರು ಉಕ್ರೇನ್ ತೊರೆಯಲು ಕಾಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯುದ್ಧ ಪ್ರಾರಂಭವಾಗುವ ಮೊದಲು, ಸುಮಾರು 20,000 ಭಾರತೀಯರು, ಮುಖ್ಯವಾಗಿ ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿದ್ದರು.


ಇದನ್ನೂ ಓದಿ: ಉಕ್ರೇನ್‌- ರಷ್ಯಾ ಯುದ್ಧ: ಭಾರತೀಯ ವಿದ್ಯಾರ್ಥಿಯ ಮೇಲೆ ಗುಂಡಿನ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...