Homeಮುಖಪುಟ'ನನಗೆ ಏಳೆಂಟು ಭಾಷೆಗಳು ಗೊತ್ತು' ; ತ್ರಿಭಾಷಾ ನೀತಿ ಬೆಂಬಲಿಸಿದ ಸುಧಾಮೂರ್ತಿ

‘ನನಗೆ ಏಳೆಂಟು ಭಾಷೆಗಳು ಗೊತ್ತು’ ; ತ್ರಿಭಾಷಾ ನೀತಿ ಬೆಂಬಲಿಸಿದ ಸುಧಾಮೂರ್ತಿ

- Advertisement -
- Advertisement -

ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ಮತ್ತು ತ್ರಿಭಾಷಾ ನೀತಿಗಳನ್ನು ಬೆಂಬಲಿಸುವ ಮೂಲಕ ರಾಜ್ಯಸಭಾ ಸಂಸದೆ ಸುಧಾಮೂರ್ತಿ, ಪ್ರಸ್ತುತ ಇವುಗಳ ಕುರಿತು ನಡೆಯುತ್ತಿರುವ ಚರ್ಚೆಗೆ ಎಂಟ್ರಿ ಕೊಟ್ಟಿದ್ದಾರೆ.

ತನ್ನ ಸ್ವಂತ ವಿಷಯವನ್ನು ಉಲ್ಲೇಖಿಸಿದ ಸುಧಾಮೂರ್ತಿ “ನನಗೆ ಏಳೆಂಟು ಭಾಷೆಗಳು ಗೊತ್ತು. ಭಾಷೆಗಳು ಕಲಿಯುವುದನ್ನು ನಾನು ಆನಂದಿಸುತ್ತೇನೆ. ಮಕ್ಕಳೂ ಹೆಚ್ಚಿನ ಭಾಷೆಗಳನ್ನು ಕಲಿಯಬಹುದು. ಒಬ್ಬರು ವ್ಯಕ್ತಿ ಬಹು ಭಾಷೆಗಳನ್ನು ಕಲಿಯಬಹುದು ಎಂದು ನಾನು ನಂಬಿದ್ದೇನೆ” ಎಂದಿದ್ದಾರೆ.

ತ್ರಿಭಾಷಾ ನೀತಿಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕೇಂದ್ರ ಸರ್ಕಾರದ ನಡುವೆ ತೀವ್ರ ಜಟಾಪಟಿ ನಡೆಯುತ್ತಿರುವ ನಡುವೆ, ಕೇಂದ್ರದ ನೀತಿಗಳನ್ನು ಬೆಂಬಲಿಸಿ ಸುದ್ದಿ ಸಂಸ್ಥೆ ಎಎನ್‌ಐಗೆ ಸುಧಾಮೂರ್ತಿ ಈ ಹೇಳಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಸಂಸತ್‌ನಲ್ಲಿ ಮಾತನಾಡಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಸುಧಾಮೂರ್ತಿ ಅವರೊಂದಿಗೆ ಚರ್ಚೆ ನಡೆಸಿದ್ದನ್ನು ಉಲ್ಲೇಖಿಸಿದ್ದರು. “ಯಾರೂ ಯಾರ ಮೇಲೂ ಏನನ್ನೂ ಹೇರಿಕೆ ಮಾಡುತ್ತಿದ್ದ” ಎಂದಿದ್ದರು.

“ನಾನು ಸುಧಾ ಮೂರ್ತಿ ಅವರೊಂದಿಗೆ ನಿಮಗೆ ಎಷ್ಟು ಭಾಷೆಗಳು ಗೊತ್ತು ಎಂದು ಕೇಳಿದೆ? ಅದಕ್ಕೆ ಅವರು ಹುಟ್ಟಿನಿಂದ ಕನ್ನಡತಿ, ವೃತ್ತಿಯಿಂದ ಇಂಗ್ಲಿಷ್ ಕಲಿತೆ, ಅಭ್ಯಾಸದಿಂದ ಸಂಸ್ಕೃತ, ಹಿಂದಿ, ಒಡಿಯಾ, ತೆಲುಗು ಮತ್ತು ಮರಾಠಿ ಭಾಷೆಗಳನ್ನು ಕಲಿತೆ ಎಂದು ಹೇಳಿದರು. ಅದರಲ್ಲಿ ತಪ್ಪೇನು? ಸುಧಾ ಮೂರ್ತಿ ಅವರ ಮೇಲೆ ಈ ಭಾಷೆಗಳನ್ನು ಕಲಿಯುವಂತೆ ಹೇರಿಕೆ ಮಾಡಿದ್ದು ಯಾರು? ಯಾರೂ ಯಾರ ಮೇಲೂ ಏನನ್ನೂ ಹೇರುತ್ತಿಲ್ಲ. ಇದು ಪ್ರಜಾಪ್ರಭುತ್ವ ಸಮಾಜ. ಕೆಲವೊಮ್ಮೆ ನೀವು ಬಹುಭಾಷಿಕರಾಗಿರಬೇಕು” ಎಂದು ಪ್ರಧಾನ್ ಹೇಳಿದ್ದರು.

‘ಸಮಗ್ರ ಶಿಕ್ಷಣ ಅಭಿಯಾನ’ದಡಿ ಹಣ ಬಿಡುಗಡೆ ಮಾಡಲು ತ್ರಿಭಾಷಾ ನೀತಿ ಅಳವಡಿಸಿಕೊಳ್ಳುವಂತೆ ಕೇಂದ್ರ ಸರ್ಕಾರ ತಮಿಳುನಾಡು ರಾಜ್ಯ ಸರ್ಕಾರಕ್ಕೆ ಷರತ್ತು ವಿಧಿಸಿದೆ ಎಂದು ಆರೋಪಿಸಲಾಗಿದೆ. ಇದನ್ನು ತೀವ್ರವಾಗಿ ವಿರೋಧಿಸಿರುವ ಡಿಎಂಕೆ ನೇತೃತ್ವದ ತಮಿಳುನಾಡು ರಾಜ್ಯ ಸರ್ಕಾರ, “ಇದು ಹಿಂದಿ ಹೇರಿಕೆಯ ಪ್ರಯತ್ನ” ಎಂದಿದೆ.

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಕೇಂದ್ರ ಸರ್ಕಾರದ ನಿಲುವನ್ನು ತೀವ್ರವಾಗಿ ವಿರೋಧಿಸಿದ್ದಾರೆ. “ತಮಿಳುನಾಡು ಪ್ರಸ್ತುತ ಜಾರಿಯಲ್ಲಿರುವ ದ್ವಿಭಾಷಾ ಸೂತ್ರವಾದ ಇಂಗ್ಲಿಷ್ ಮತ್ತು ತಮಿಳು ಮೂಲಕ ಮಕ್ಕಳಿಗೆ ಸಮರ್ಪಕವಾಗಿ ಶಿಕ್ಷಣ ನೀಡುತ್ತಿದೆ. ಮೂರನೇ ಭಾಷೆಯ ಆಯ್ಕೆಯಾಗಬೇಕೆ ಹೊರತು, ಹೇರಿಕೆಯಾಗಬಾರದು” ಎಂದಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರ ಭಾಷಾ ಸಮಸ್ಯೆಯನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದಿರುವ ಕಾಂಗ್ರೆಸ್ ಸಂಸದ ಜೆಬಿ ಮಾಥರ್, “ಭಾಷೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬಾರದು. ಇದು ಅತ್ಯಂತ ಸೂಕ್ಷ್ಮ ವಿಷಯ” ಎಂದು ಹೇಳಿದ್ದಾರೆ.

“ಭಾಷೆಯು ಸೂಕ್ಷ್ಮವಾದ ಭಾವನಾತ್ಮಕ ವಿಷಯ ಎಂಬುದನ್ನು ಬಿಜೆಪಿ ಅರಿತುಕೊಳ್ಳಬೇಕು. ಜನರ ಭಾವನೆಗಳಿಗೆ ನೋವುಂಟು ಮಾಡುವ ಯಾವುದನ್ನೂ ಪ್ರಚಾರ ಮಾಡಬಾರದು. ಧರ್ಮೇಂದ್ರ ಪ್ರಧಾನ್ ಅನಗತ್ಯವಾಗಿ ಸಮಾಜದಲ್ಲಿ ವಿಭಜನೆಯನ್ನು ಉಂಟುಮಾಡುತ್ತಿದ್ದಾರೆ. ಬಿಜೆಪಿಗೆ ಎನ್‌ಇಪಿ ಒಂದು ಕಾರ್ಯಸೂಚಿ” ಎಂದು ಮಾಥರ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಸಭೆಯಲ್ಲಿ ಸರ್ಕಾರದ ನಿಲುವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಮರ್ಥಿಸಿಕೊಂಡಿದ್ದು, ವಿಭಜಕ ಉದ್ದೇಶದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಭಾಷಾ ವೈವಿಧ್ಯತೆಗೆ ಧಕ್ಕೆಯಾಗದಂತೆ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ಗುರಿಯನ್ನು ಎನ್‌ಇಪಿ ಹೊಂದಿದೆ ಎಂದು ಪ್ರತಿಪಾದಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಮಾಜವನ್ನು ವಿಭಜಿಸಲು ಭಾಷೆಯನ್ನು ಎಂದಿಗೂ ಬಳಸುವುದಿಲ್ಲ” ಎಂದಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರು ಸಂಸತ್ತಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಂಸದರನ್ನು “ಪ್ರಜಾಪ್ರಭುತ್ವ ವಿರೋಧಿ ಮತ್ತು ಅನಾಗರಿಕರು” ಎಂದು ಕರೆದಿದ್ದು ಇತ್ತೀಚೆಗೆ ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ಪ್ರಧಾನ್ ಹೇಳಿಕೆಗಳು ತಮಿಳುನಾಡಿಗೆ ಮಾಡಿದ ಅವಮಾನ ಎಂದು ರಾಜ್ಯದ ಸಂಸದರು ಕಿಡಿಕಾರಿದ್ದಾರೆ. ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಧರ್ಮೇಂದ್ರ ಕ್ಷಮೆಯಾಚಿಸಿ, ತನ್ನ ಹೇಳಿಕೆಯನ್ನು ಹಿಂಪಡೆದಿದ್ದಾರೆ. ತಮಿಳುನಾಡು ಸರ್ಕಾರ ಎನ್‌ಇಪಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ.

‘ಶಮ್ಲತ್ ದೇಹ್’ ಭೂಮಿಯನ್ನು ವಕ್ಫ್ ಮಂಡಳಿಗೆ ವರ್ಗಾಯಿಸುವ ಕುರಿತು ಸರ್ಕಾರ ತನಿಖೆ ನಡೆಸಲಿದೆ: ಹರಿಯಾಣ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...

ಪ್ರಬಲಜಾತಿ ಯುವತಿಯೊಂದಿಗೆ ಗ್ರಾಮ ತೊರೆದ ದಲಿತ ಯುವಕ; ಕುಟುಂಬದ ಮೇಲೆ ದಾಳಿ ಮಾಡಿದ ಹದಿಮೂರು ಜನರ ಬಂಧನ

ಸೂರತ್ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ಮತ್ತು ಆಕೆಯ ಇಬ್ಬರು ವಯಸ್ಕ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಶನಿವಾರ ಒಂದೇ ಕುಟುಂಬದ 13 ಸದಸ್ಯರನ್ನು ಬಂಧಿಸಿದ್ದಾರೆ. ಆಕೆಯ...

‘ದೆಹಲಿ ಖಾಲಿಸ್ತಾನವಾಗಲಿದೆ’: 10 ಶಾಲೆಗಳು, ಸಂಸತ್ತಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ ವಿದ್ಯಾರ್ಥಿಗಳ ಸ್ಥಳಾಂತರ

ಸೋಮವಾರ ರಾಷ್ಟ್ರ ರಾಜಧಾನಿ ಮತ್ತು ಸಂಸತ್ತಿನ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಭಾರಿ ಭದ್ರತಾ ಪ್ರತಿಕ್ರಿಯೆ ನೀಡಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು (ಡಿಎಫ್‌ಎಸ್) ತಿಳಿಸಿವೆ. ಡಿಎಫ್‌ಎಸ್ ಪ್ರಕಾರ, ಬೆಳಿಗ್ಗೆ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ...

ಉತ್ತರ ಪ್ರದೇಶ| ಜಾತಿ ನಿಂದನೆ-ಹಲ್ಲೆ; ದೃಷ್ಟಿ ಕಳೆದುಕೊಂಡ ದಲಿತ ಯುವಕ

ಕಾಲುವೆ ಬಳಿ ಮಲವಿಸರ್ಜನೆ ಮಾಡುತ್ತಿದ್ದ ದಲಿತ ಯುವಕನ ಜೊತೆಗೆ ನಡೆದ ಜಗಳ ತೀವ್ರಗೊಂಡು, ದಾಳಿಕೋರನೊಬ್ಬ ಮೋಟಾರ್ ಸೈಕಲ್ ಕೀಲಿಯಿಂದ ಚುಚ್ಚಿದ ಪರಿಣಾಮ ಆತ ಒಂದು ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದಾರೆ. 20 ರ ಹರೆಯದ...

ಮಣಿಪುರದ ಉಖ್ರುಲ್‌ನಲ್ಲಿ ಬುಡಕಟ್ಟು ಸಮುದಾಯಗಳ ನಡುವೆ ಉದ್ವಿಗ್ನತೆ: ಸಶಸ್ತ್ರ ಗುಂಪುಗಳಿಂದ ನಾಗಾ, ಕುಕಿ ಮನೆಗಳಿಗೆ ಬೆಂಕಿ

ಮಣಿಪುರದ ತಂಗ್ಖುಲ್ ನಾಗಾ ಮತ್ತು ಕುಕಿ ಸಮುದಾಯಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಸೋಮವಾರ ಉಖ್ರುಲ್ ಜಿಲ್ಲೆಯಲ್ಲಿ ಹಲವಾರು ಸಶಸ್ತ್ರ ಉಗ್ರಗಾಮಿಗಳು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಲಿಟಾನ್ ಸರೈಖಾಂಗ್ ಗ್ರಾಮದಲ್ಲಿ ಎರಡೂ...

ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ಹೈಕೋರ್ಟ್ ನೋಟಿಸ್ : ಏನಿದು ಹೊಸ ಬೆಳವಣಿಗೆ?

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಹೊರಡಿಸಿದ ನಿರ್ದೇಶನಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಕೇಂದ್ರ ತನಿಖಾ ದಳ (ಸಿಬಿಐ)...

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....