Homeಮುಖಪುಟ'ನನಗೆ ಏಳೆಂಟು ಭಾಷೆಗಳು ಗೊತ್ತು' ; ತ್ರಿಭಾಷಾ ನೀತಿ ಬೆಂಬಲಿಸಿದ ಸುಧಾಮೂರ್ತಿ

‘ನನಗೆ ಏಳೆಂಟು ಭಾಷೆಗಳು ಗೊತ್ತು’ ; ತ್ರಿಭಾಷಾ ನೀತಿ ಬೆಂಬಲಿಸಿದ ಸುಧಾಮೂರ್ತಿ

- Advertisement -
- Advertisement -

ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ಮತ್ತು ತ್ರಿಭಾಷಾ ನೀತಿಗಳನ್ನು ಬೆಂಬಲಿಸುವ ಮೂಲಕ ರಾಜ್ಯಸಭಾ ಸಂಸದೆ ಸುಧಾಮೂರ್ತಿ, ಪ್ರಸ್ತುತ ಇವುಗಳ ಕುರಿತು ನಡೆಯುತ್ತಿರುವ ಚರ್ಚೆಗೆ ಎಂಟ್ರಿ ಕೊಟ್ಟಿದ್ದಾರೆ.

ತನ್ನ ಸ್ವಂತ ವಿಷಯವನ್ನು ಉಲ್ಲೇಖಿಸಿದ ಸುಧಾಮೂರ್ತಿ “ನನಗೆ ಏಳೆಂಟು ಭಾಷೆಗಳು ಗೊತ್ತು. ಭಾಷೆಗಳು ಕಲಿಯುವುದನ್ನು ನಾನು ಆನಂದಿಸುತ್ತೇನೆ. ಮಕ್ಕಳೂ ಹೆಚ್ಚಿನ ಭಾಷೆಗಳನ್ನು ಕಲಿಯಬಹುದು. ಒಬ್ಬರು ವ್ಯಕ್ತಿ ಬಹು ಭಾಷೆಗಳನ್ನು ಕಲಿಯಬಹುದು ಎಂದು ನಾನು ನಂಬಿದ್ದೇನೆ” ಎಂದಿದ್ದಾರೆ.

ತ್ರಿಭಾಷಾ ನೀತಿಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕೇಂದ್ರ ಸರ್ಕಾರದ ನಡುವೆ ತೀವ್ರ ಜಟಾಪಟಿ ನಡೆಯುತ್ತಿರುವ ನಡುವೆ, ಕೇಂದ್ರದ ನೀತಿಗಳನ್ನು ಬೆಂಬಲಿಸಿ ಸುದ್ದಿ ಸಂಸ್ಥೆ ಎಎನ್‌ಐಗೆ ಸುಧಾಮೂರ್ತಿ ಈ ಹೇಳಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಸಂಸತ್‌ನಲ್ಲಿ ಮಾತನಾಡಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಸುಧಾಮೂರ್ತಿ ಅವರೊಂದಿಗೆ ಚರ್ಚೆ ನಡೆಸಿದ್ದನ್ನು ಉಲ್ಲೇಖಿಸಿದ್ದರು. “ಯಾರೂ ಯಾರ ಮೇಲೂ ಏನನ್ನೂ ಹೇರಿಕೆ ಮಾಡುತ್ತಿದ್ದ” ಎಂದಿದ್ದರು.

“ನಾನು ಸುಧಾ ಮೂರ್ತಿ ಅವರೊಂದಿಗೆ ನಿಮಗೆ ಎಷ್ಟು ಭಾಷೆಗಳು ಗೊತ್ತು ಎಂದು ಕೇಳಿದೆ? ಅದಕ್ಕೆ ಅವರು ಹುಟ್ಟಿನಿಂದ ಕನ್ನಡತಿ, ವೃತ್ತಿಯಿಂದ ಇಂಗ್ಲಿಷ್ ಕಲಿತೆ, ಅಭ್ಯಾಸದಿಂದ ಸಂಸ್ಕೃತ, ಹಿಂದಿ, ಒಡಿಯಾ, ತೆಲುಗು ಮತ್ತು ಮರಾಠಿ ಭಾಷೆಗಳನ್ನು ಕಲಿತೆ ಎಂದು ಹೇಳಿದರು. ಅದರಲ್ಲಿ ತಪ್ಪೇನು? ಸುಧಾ ಮೂರ್ತಿ ಅವರ ಮೇಲೆ ಈ ಭಾಷೆಗಳನ್ನು ಕಲಿಯುವಂತೆ ಹೇರಿಕೆ ಮಾಡಿದ್ದು ಯಾರು? ಯಾರೂ ಯಾರ ಮೇಲೂ ಏನನ್ನೂ ಹೇರುತ್ತಿಲ್ಲ. ಇದು ಪ್ರಜಾಪ್ರಭುತ್ವ ಸಮಾಜ. ಕೆಲವೊಮ್ಮೆ ನೀವು ಬಹುಭಾಷಿಕರಾಗಿರಬೇಕು” ಎಂದು ಪ್ರಧಾನ್ ಹೇಳಿದ್ದರು.

‘ಸಮಗ್ರ ಶಿಕ್ಷಣ ಅಭಿಯಾನ’ದಡಿ ಹಣ ಬಿಡುಗಡೆ ಮಾಡಲು ತ್ರಿಭಾಷಾ ನೀತಿ ಅಳವಡಿಸಿಕೊಳ್ಳುವಂತೆ ಕೇಂದ್ರ ಸರ್ಕಾರ ತಮಿಳುನಾಡು ರಾಜ್ಯ ಸರ್ಕಾರಕ್ಕೆ ಷರತ್ತು ವಿಧಿಸಿದೆ ಎಂದು ಆರೋಪಿಸಲಾಗಿದೆ. ಇದನ್ನು ತೀವ್ರವಾಗಿ ವಿರೋಧಿಸಿರುವ ಡಿಎಂಕೆ ನೇತೃತ್ವದ ತಮಿಳುನಾಡು ರಾಜ್ಯ ಸರ್ಕಾರ, “ಇದು ಹಿಂದಿ ಹೇರಿಕೆಯ ಪ್ರಯತ್ನ” ಎಂದಿದೆ.

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಕೇಂದ್ರ ಸರ್ಕಾರದ ನಿಲುವನ್ನು ತೀವ್ರವಾಗಿ ವಿರೋಧಿಸಿದ್ದಾರೆ. “ತಮಿಳುನಾಡು ಪ್ರಸ್ತುತ ಜಾರಿಯಲ್ಲಿರುವ ದ್ವಿಭಾಷಾ ಸೂತ್ರವಾದ ಇಂಗ್ಲಿಷ್ ಮತ್ತು ತಮಿಳು ಮೂಲಕ ಮಕ್ಕಳಿಗೆ ಸಮರ್ಪಕವಾಗಿ ಶಿಕ್ಷಣ ನೀಡುತ್ತಿದೆ. ಮೂರನೇ ಭಾಷೆಯ ಆಯ್ಕೆಯಾಗಬೇಕೆ ಹೊರತು, ಹೇರಿಕೆಯಾಗಬಾರದು” ಎಂದಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರ ಭಾಷಾ ಸಮಸ್ಯೆಯನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದಿರುವ ಕಾಂಗ್ರೆಸ್ ಸಂಸದ ಜೆಬಿ ಮಾಥರ್, “ಭಾಷೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬಾರದು. ಇದು ಅತ್ಯಂತ ಸೂಕ್ಷ್ಮ ವಿಷಯ” ಎಂದು ಹೇಳಿದ್ದಾರೆ.

“ಭಾಷೆಯು ಸೂಕ್ಷ್ಮವಾದ ಭಾವನಾತ್ಮಕ ವಿಷಯ ಎಂಬುದನ್ನು ಬಿಜೆಪಿ ಅರಿತುಕೊಳ್ಳಬೇಕು. ಜನರ ಭಾವನೆಗಳಿಗೆ ನೋವುಂಟು ಮಾಡುವ ಯಾವುದನ್ನೂ ಪ್ರಚಾರ ಮಾಡಬಾರದು. ಧರ್ಮೇಂದ್ರ ಪ್ರಧಾನ್ ಅನಗತ್ಯವಾಗಿ ಸಮಾಜದಲ್ಲಿ ವಿಭಜನೆಯನ್ನು ಉಂಟುಮಾಡುತ್ತಿದ್ದಾರೆ. ಬಿಜೆಪಿಗೆ ಎನ್‌ಇಪಿ ಒಂದು ಕಾರ್ಯಸೂಚಿ” ಎಂದು ಮಾಥರ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಸಭೆಯಲ್ಲಿ ಸರ್ಕಾರದ ನಿಲುವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಮರ್ಥಿಸಿಕೊಂಡಿದ್ದು, ವಿಭಜಕ ಉದ್ದೇಶದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಭಾಷಾ ವೈವಿಧ್ಯತೆಗೆ ಧಕ್ಕೆಯಾಗದಂತೆ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ಗುರಿಯನ್ನು ಎನ್‌ಇಪಿ ಹೊಂದಿದೆ ಎಂದು ಪ್ರತಿಪಾದಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಮಾಜವನ್ನು ವಿಭಜಿಸಲು ಭಾಷೆಯನ್ನು ಎಂದಿಗೂ ಬಳಸುವುದಿಲ್ಲ” ಎಂದಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರು ಸಂಸತ್ತಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಂಸದರನ್ನು “ಪ್ರಜಾಪ್ರಭುತ್ವ ವಿರೋಧಿ ಮತ್ತು ಅನಾಗರಿಕರು” ಎಂದು ಕರೆದಿದ್ದು ಇತ್ತೀಚೆಗೆ ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ಪ್ರಧಾನ್ ಹೇಳಿಕೆಗಳು ತಮಿಳುನಾಡಿಗೆ ಮಾಡಿದ ಅವಮಾನ ಎಂದು ರಾಜ್ಯದ ಸಂಸದರು ಕಿಡಿಕಾರಿದ್ದಾರೆ. ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಧರ್ಮೇಂದ್ರ ಕ್ಷಮೆಯಾಚಿಸಿ, ತನ್ನ ಹೇಳಿಕೆಯನ್ನು ಹಿಂಪಡೆದಿದ್ದಾರೆ. ತಮಿಳುನಾಡು ಸರ್ಕಾರ ಎನ್‌ಇಪಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ.

‘ಶಮ್ಲತ್ ದೇಹ್’ ಭೂಮಿಯನ್ನು ವಕ್ಫ್ ಮಂಡಳಿಗೆ ವರ್ಗಾಯಿಸುವ ಕುರಿತು ಸರ್ಕಾರ ತನಿಖೆ ನಡೆಸಲಿದೆ: ಹರಿಯಾಣ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...