Homeಮುಖಪುಟ'ನನಗೆ ಏಳೆಂಟು ಭಾಷೆಗಳು ಗೊತ್ತು' ; ತ್ರಿಭಾಷಾ ನೀತಿ ಬೆಂಬಲಿಸಿದ ಸುಧಾಮೂರ್ತಿ

‘ನನಗೆ ಏಳೆಂಟು ಭಾಷೆಗಳು ಗೊತ್ತು’ ; ತ್ರಿಭಾಷಾ ನೀತಿ ಬೆಂಬಲಿಸಿದ ಸುಧಾಮೂರ್ತಿ

- Advertisement -
- Advertisement -

ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ಮತ್ತು ತ್ರಿಭಾಷಾ ನೀತಿಗಳನ್ನು ಬೆಂಬಲಿಸುವ ಮೂಲಕ ರಾಜ್ಯಸಭಾ ಸಂಸದೆ ಸುಧಾಮೂರ್ತಿ, ಪ್ರಸ್ತುತ ಇವುಗಳ ಕುರಿತು ನಡೆಯುತ್ತಿರುವ ಚರ್ಚೆಗೆ ಎಂಟ್ರಿ ಕೊಟ್ಟಿದ್ದಾರೆ.

ತನ್ನ ಸ್ವಂತ ವಿಷಯವನ್ನು ಉಲ್ಲೇಖಿಸಿದ ಸುಧಾಮೂರ್ತಿ “ನನಗೆ ಏಳೆಂಟು ಭಾಷೆಗಳು ಗೊತ್ತು. ಭಾಷೆಗಳು ಕಲಿಯುವುದನ್ನು ನಾನು ಆನಂದಿಸುತ್ತೇನೆ. ಮಕ್ಕಳೂ ಹೆಚ್ಚಿನ ಭಾಷೆಗಳನ್ನು ಕಲಿಯಬಹುದು. ಒಬ್ಬರು ವ್ಯಕ್ತಿ ಬಹು ಭಾಷೆಗಳನ್ನು ಕಲಿಯಬಹುದು ಎಂದು ನಾನು ನಂಬಿದ್ದೇನೆ” ಎಂದಿದ್ದಾರೆ.

ತ್ರಿಭಾಷಾ ನೀತಿಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕೇಂದ್ರ ಸರ್ಕಾರದ ನಡುವೆ ತೀವ್ರ ಜಟಾಪಟಿ ನಡೆಯುತ್ತಿರುವ ನಡುವೆ, ಕೇಂದ್ರದ ನೀತಿಗಳನ್ನು ಬೆಂಬಲಿಸಿ ಸುದ್ದಿ ಸಂಸ್ಥೆ ಎಎನ್‌ಐಗೆ ಸುಧಾಮೂರ್ತಿ ಈ ಹೇಳಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಸಂಸತ್‌ನಲ್ಲಿ ಮಾತನಾಡಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಸುಧಾಮೂರ್ತಿ ಅವರೊಂದಿಗೆ ಚರ್ಚೆ ನಡೆಸಿದ್ದನ್ನು ಉಲ್ಲೇಖಿಸಿದ್ದರು. “ಯಾರೂ ಯಾರ ಮೇಲೂ ಏನನ್ನೂ ಹೇರಿಕೆ ಮಾಡುತ್ತಿದ್ದ” ಎಂದಿದ್ದರು.

“ನಾನು ಸುಧಾ ಮೂರ್ತಿ ಅವರೊಂದಿಗೆ ನಿಮಗೆ ಎಷ್ಟು ಭಾಷೆಗಳು ಗೊತ್ತು ಎಂದು ಕೇಳಿದೆ? ಅದಕ್ಕೆ ಅವರು ಹುಟ್ಟಿನಿಂದ ಕನ್ನಡತಿ, ವೃತ್ತಿಯಿಂದ ಇಂಗ್ಲಿಷ್ ಕಲಿತೆ, ಅಭ್ಯಾಸದಿಂದ ಸಂಸ್ಕೃತ, ಹಿಂದಿ, ಒಡಿಯಾ, ತೆಲುಗು ಮತ್ತು ಮರಾಠಿ ಭಾಷೆಗಳನ್ನು ಕಲಿತೆ ಎಂದು ಹೇಳಿದರು. ಅದರಲ್ಲಿ ತಪ್ಪೇನು? ಸುಧಾ ಮೂರ್ತಿ ಅವರ ಮೇಲೆ ಈ ಭಾಷೆಗಳನ್ನು ಕಲಿಯುವಂತೆ ಹೇರಿಕೆ ಮಾಡಿದ್ದು ಯಾರು? ಯಾರೂ ಯಾರ ಮೇಲೂ ಏನನ್ನೂ ಹೇರುತ್ತಿಲ್ಲ. ಇದು ಪ್ರಜಾಪ್ರಭುತ್ವ ಸಮಾಜ. ಕೆಲವೊಮ್ಮೆ ನೀವು ಬಹುಭಾಷಿಕರಾಗಿರಬೇಕು” ಎಂದು ಪ್ರಧಾನ್ ಹೇಳಿದ್ದರು.

‘ಸಮಗ್ರ ಶಿಕ್ಷಣ ಅಭಿಯಾನ’ದಡಿ ಹಣ ಬಿಡುಗಡೆ ಮಾಡಲು ತ್ರಿಭಾಷಾ ನೀತಿ ಅಳವಡಿಸಿಕೊಳ್ಳುವಂತೆ ಕೇಂದ್ರ ಸರ್ಕಾರ ತಮಿಳುನಾಡು ರಾಜ್ಯ ಸರ್ಕಾರಕ್ಕೆ ಷರತ್ತು ವಿಧಿಸಿದೆ ಎಂದು ಆರೋಪಿಸಲಾಗಿದೆ. ಇದನ್ನು ತೀವ್ರವಾಗಿ ವಿರೋಧಿಸಿರುವ ಡಿಎಂಕೆ ನೇತೃತ್ವದ ತಮಿಳುನಾಡು ರಾಜ್ಯ ಸರ್ಕಾರ, “ಇದು ಹಿಂದಿ ಹೇರಿಕೆಯ ಪ್ರಯತ್ನ” ಎಂದಿದೆ.

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಕೇಂದ್ರ ಸರ್ಕಾರದ ನಿಲುವನ್ನು ತೀವ್ರವಾಗಿ ವಿರೋಧಿಸಿದ್ದಾರೆ. “ತಮಿಳುನಾಡು ಪ್ರಸ್ತುತ ಜಾರಿಯಲ್ಲಿರುವ ದ್ವಿಭಾಷಾ ಸೂತ್ರವಾದ ಇಂಗ್ಲಿಷ್ ಮತ್ತು ತಮಿಳು ಮೂಲಕ ಮಕ್ಕಳಿಗೆ ಸಮರ್ಪಕವಾಗಿ ಶಿಕ್ಷಣ ನೀಡುತ್ತಿದೆ. ಮೂರನೇ ಭಾಷೆಯ ಆಯ್ಕೆಯಾಗಬೇಕೆ ಹೊರತು, ಹೇರಿಕೆಯಾಗಬಾರದು” ಎಂದಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರ ಭಾಷಾ ಸಮಸ್ಯೆಯನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದಿರುವ ಕಾಂಗ್ರೆಸ್ ಸಂಸದ ಜೆಬಿ ಮಾಥರ್, “ಭಾಷೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬಾರದು. ಇದು ಅತ್ಯಂತ ಸೂಕ್ಷ್ಮ ವಿಷಯ” ಎಂದು ಹೇಳಿದ್ದಾರೆ.

“ಭಾಷೆಯು ಸೂಕ್ಷ್ಮವಾದ ಭಾವನಾತ್ಮಕ ವಿಷಯ ಎಂಬುದನ್ನು ಬಿಜೆಪಿ ಅರಿತುಕೊಳ್ಳಬೇಕು. ಜನರ ಭಾವನೆಗಳಿಗೆ ನೋವುಂಟು ಮಾಡುವ ಯಾವುದನ್ನೂ ಪ್ರಚಾರ ಮಾಡಬಾರದು. ಧರ್ಮೇಂದ್ರ ಪ್ರಧಾನ್ ಅನಗತ್ಯವಾಗಿ ಸಮಾಜದಲ್ಲಿ ವಿಭಜನೆಯನ್ನು ಉಂಟುಮಾಡುತ್ತಿದ್ದಾರೆ. ಬಿಜೆಪಿಗೆ ಎನ್‌ಇಪಿ ಒಂದು ಕಾರ್ಯಸೂಚಿ” ಎಂದು ಮಾಥರ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಸಭೆಯಲ್ಲಿ ಸರ್ಕಾರದ ನಿಲುವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಮರ್ಥಿಸಿಕೊಂಡಿದ್ದು, ವಿಭಜಕ ಉದ್ದೇಶದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಭಾಷಾ ವೈವಿಧ್ಯತೆಗೆ ಧಕ್ಕೆಯಾಗದಂತೆ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ಗುರಿಯನ್ನು ಎನ್‌ಇಪಿ ಹೊಂದಿದೆ ಎಂದು ಪ್ರತಿಪಾದಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಮಾಜವನ್ನು ವಿಭಜಿಸಲು ಭಾಷೆಯನ್ನು ಎಂದಿಗೂ ಬಳಸುವುದಿಲ್ಲ” ಎಂದಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರು ಸಂಸತ್ತಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಂಸದರನ್ನು “ಪ್ರಜಾಪ್ರಭುತ್ವ ವಿರೋಧಿ ಮತ್ತು ಅನಾಗರಿಕರು” ಎಂದು ಕರೆದಿದ್ದು ಇತ್ತೀಚೆಗೆ ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ಪ್ರಧಾನ್ ಹೇಳಿಕೆಗಳು ತಮಿಳುನಾಡಿಗೆ ಮಾಡಿದ ಅವಮಾನ ಎಂದು ರಾಜ್ಯದ ಸಂಸದರು ಕಿಡಿಕಾರಿದ್ದಾರೆ. ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಧರ್ಮೇಂದ್ರ ಕ್ಷಮೆಯಾಚಿಸಿ, ತನ್ನ ಹೇಳಿಕೆಯನ್ನು ಹಿಂಪಡೆದಿದ್ದಾರೆ. ತಮಿಳುನಾಡು ಸರ್ಕಾರ ಎನ್‌ಇಪಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ.

‘ಶಮ್ಲತ್ ದೇಹ್’ ಭೂಮಿಯನ್ನು ವಕ್ಫ್ ಮಂಡಳಿಗೆ ವರ್ಗಾಯಿಸುವ ಕುರಿತು ಸರ್ಕಾರ ತನಿಖೆ ನಡೆಸಲಿದೆ: ಹರಿಯಾಣ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...