Homeಮುಖಪುಟ'ನನಗೆ ಏಳೆಂಟು ಭಾಷೆಗಳು ಗೊತ್ತು' ; ತ್ರಿಭಾಷಾ ನೀತಿ ಬೆಂಬಲಿಸಿದ ಸುಧಾಮೂರ್ತಿ

‘ನನಗೆ ಏಳೆಂಟು ಭಾಷೆಗಳು ಗೊತ್ತು’ ; ತ್ರಿಭಾಷಾ ನೀತಿ ಬೆಂಬಲಿಸಿದ ಸುಧಾಮೂರ್ತಿ

- Advertisement -
- Advertisement -

ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ಮತ್ತು ತ್ರಿಭಾಷಾ ನೀತಿಗಳನ್ನು ಬೆಂಬಲಿಸುವ ಮೂಲಕ ರಾಜ್ಯಸಭಾ ಸಂಸದೆ ಸುಧಾಮೂರ್ತಿ, ಪ್ರಸ್ತುತ ಇವುಗಳ ಕುರಿತು ನಡೆಯುತ್ತಿರುವ ಚರ್ಚೆಗೆ ಎಂಟ್ರಿ ಕೊಟ್ಟಿದ್ದಾರೆ.

ತನ್ನ ಸ್ವಂತ ವಿಷಯವನ್ನು ಉಲ್ಲೇಖಿಸಿದ ಸುಧಾಮೂರ್ತಿ “ನನಗೆ ಏಳೆಂಟು ಭಾಷೆಗಳು ಗೊತ್ತು. ಭಾಷೆಗಳು ಕಲಿಯುವುದನ್ನು ನಾನು ಆನಂದಿಸುತ್ತೇನೆ. ಮಕ್ಕಳೂ ಹೆಚ್ಚಿನ ಭಾಷೆಗಳನ್ನು ಕಲಿಯಬಹುದು. ಒಬ್ಬರು ವ್ಯಕ್ತಿ ಬಹು ಭಾಷೆಗಳನ್ನು ಕಲಿಯಬಹುದು ಎಂದು ನಾನು ನಂಬಿದ್ದೇನೆ” ಎಂದಿದ್ದಾರೆ.

ತ್ರಿಭಾಷಾ ನೀತಿಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕೇಂದ್ರ ಸರ್ಕಾರದ ನಡುವೆ ತೀವ್ರ ಜಟಾಪಟಿ ನಡೆಯುತ್ತಿರುವ ನಡುವೆ, ಕೇಂದ್ರದ ನೀತಿಗಳನ್ನು ಬೆಂಬಲಿಸಿ ಸುದ್ದಿ ಸಂಸ್ಥೆ ಎಎನ್‌ಐಗೆ ಸುಧಾಮೂರ್ತಿ ಈ ಹೇಳಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಸಂಸತ್‌ನಲ್ಲಿ ಮಾತನಾಡಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಸುಧಾಮೂರ್ತಿ ಅವರೊಂದಿಗೆ ಚರ್ಚೆ ನಡೆಸಿದ್ದನ್ನು ಉಲ್ಲೇಖಿಸಿದ್ದರು. “ಯಾರೂ ಯಾರ ಮೇಲೂ ಏನನ್ನೂ ಹೇರಿಕೆ ಮಾಡುತ್ತಿದ್ದ” ಎಂದಿದ್ದರು.

“ನಾನು ಸುಧಾ ಮೂರ್ತಿ ಅವರೊಂದಿಗೆ ನಿಮಗೆ ಎಷ್ಟು ಭಾಷೆಗಳು ಗೊತ್ತು ಎಂದು ಕೇಳಿದೆ? ಅದಕ್ಕೆ ಅವರು ಹುಟ್ಟಿನಿಂದ ಕನ್ನಡತಿ, ವೃತ್ತಿಯಿಂದ ಇಂಗ್ಲಿಷ್ ಕಲಿತೆ, ಅಭ್ಯಾಸದಿಂದ ಸಂಸ್ಕೃತ, ಹಿಂದಿ, ಒಡಿಯಾ, ತೆಲುಗು ಮತ್ತು ಮರಾಠಿ ಭಾಷೆಗಳನ್ನು ಕಲಿತೆ ಎಂದು ಹೇಳಿದರು. ಅದರಲ್ಲಿ ತಪ್ಪೇನು? ಸುಧಾ ಮೂರ್ತಿ ಅವರ ಮೇಲೆ ಈ ಭಾಷೆಗಳನ್ನು ಕಲಿಯುವಂತೆ ಹೇರಿಕೆ ಮಾಡಿದ್ದು ಯಾರು? ಯಾರೂ ಯಾರ ಮೇಲೂ ಏನನ್ನೂ ಹೇರುತ್ತಿಲ್ಲ. ಇದು ಪ್ರಜಾಪ್ರಭುತ್ವ ಸಮಾಜ. ಕೆಲವೊಮ್ಮೆ ನೀವು ಬಹುಭಾಷಿಕರಾಗಿರಬೇಕು” ಎಂದು ಪ್ರಧಾನ್ ಹೇಳಿದ್ದರು.

‘ಸಮಗ್ರ ಶಿಕ್ಷಣ ಅಭಿಯಾನ’ದಡಿ ಹಣ ಬಿಡುಗಡೆ ಮಾಡಲು ತ್ರಿಭಾಷಾ ನೀತಿ ಅಳವಡಿಸಿಕೊಳ್ಳುವಂತೆ ಕೇಂದ್ರ ಸರ್ಕಾರ ತಮಿಳುನಾಡು ರಾಜ್ಯ ಸರ್ಕಾರಕ್ಕೆ ಷರತ್ತು ವಿಧಿಸಿದೆ ಎಂದು ಆರೋಪಿಸಲಾಗಿದೆ. ಇದನ್ನು ತೀವ್ರವಾಗಿ ವಿರೋಧಿಸಿರುವ ಡಿಎಂಕೆ ನೇತೃತ್ವದ ತಮಿಳುನಾಡು ರಾಜ್ಯ ಸರ್ಕಾರ, “ಇದು ಹಿಂದಿ ಹೇರಿಕೆಯ ಪ್ರಯತ್ನ” ಎಂದಿದೆ.

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಕೇಂದ್ರ ಸರ್ಕಾರದ ನಿಲುವನ್ನು ತೀವ್ರವಾಗಿ ವಿರೋಧಿಸಿದ್ದಾರೆ. “ತಮಿಳುನಾಡು ಪ್ರಸ್ತುತ ಜಾರಿಯಲ್ಲಿರುವ ದ್ವಿಭಾಷಾ ಸೂತ್ರವಾದ ಇಂಗ್ಲಿಷ್ ಮತ್ತು ತಮಿಳು ಮೂಲಕ ಮಕ್ಕಳಿಗೆ ಸಮರ್ಪಕವಾಗಿ ಶಿಕ್ಷಣ ನೀಡುತ್ತಿದೆ. ಮೂರನೇ ಭಾಷೆಯ ಆಯ್ಕೆಯಾಗಬೇಕೆ ಹೊರತು, ಹೇರಿಕೆಯಾಗಬಾರದು” ಎಂದಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರ ಭಾಷಾ ಸಮಸ್ಯೆಯನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದಿರುವ ಕಾಂಗ್ರೆಸ್ ಸಂಸದ ಜೆಬಿ ಮಾಥರ್, “ಭಾಷೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬಾರದು. ಇದು ಅತ್ಯಂತ ಸೂಕ್ಷ್ಮ ವಿಷಯ” ಎಂದು ಹೇಳಿದ್ದಾರೆ.

“ಭಾಷೆಯು ಸೂಕ್ಷ್ಮವಾದ ಭಾವನಾತ್ಮಕ ವಿಷಯ ಎಂಬುದನ್ನು ಬಿಜೆಪಿ ಅರಿತುಕೊಳ್ಳಬೇಕು. ಜನರ ಭಾವನೆಗಳಿಗೆ ನೋವುಂಟು ಮಾಡುವ ಯಾವುದನ್ನೂ ಪ್ರಚಾರ ಮಾಡಬಾರದು. ಧರ್ಮೇಂದ್ರ ಪ್ರಧಾನ್ ಅನಗತ್ಯವಾಗಿ ಸಮಾಜದಲ್ಲಿ ವಿಭಜನೆಯನ್ನು ಉಂಟುಮಾಡುತ್ತಿದ್ದಾರೆ. ಬಿಜೆಪಿಗೆ ಎನ್‌ಇಪಿ ಒಂದು ಕಾರ್ಯಸೂಚಿ” ಎಂದು ಮಾಥರ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಸಭೆಯಲ್ಲಿ ಸರ್ಕಾರದ ನಿಲುವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಮರ್ಥಿಸಿಕೊಂಡಿದ್ದು, ವಿಭಜಕ ಉದ್ದೇಶದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಭಾಷಾ ವೈವಿಧ್ಯತೆಗೆ ಧಕ್ಕೆಯಾಗದಂತೆ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ಗುರಿಯನ್ನು ಎನ್‌ಇಪಿ ಹೊಂದಿದೆ ಎಂದು ಪ್ರತಿಪಾದಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಮಾಜವನ್ನು ವಿಭಜಿಸಲು ಭಾಷೆಯನ್ನು ಎಂದಿಗೂ ಬಳಸುವುದಿಲ್ಲ” ಎಂದಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರು ಸಂಸತ್ತಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಂಸದರನ್ನು “ಪ್ರಜಾಪ್ರಭುತ್ವ ವಿರೋಧಿ ಮತ್ತು ಅನಾಗರಿಕರು” ಎಂದು ಕರೆದಿದ್ದು ಇತ್ತೀಚೆಗೆ ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ಪ್ರಧಾನ್ ಹೇಳಿಕೆಗಳು ತಮಿಳುನಾಡಿಗೆ ಮಾಡಿದ ಅವಮಾನ ಎಂದು ರಾಜ್ಯದ ಸಂಸದರು ಕಿಡಿಕಾರಿದ್ದಾರೆ. ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಧರ್ಮೇಂದ್ರ ಕ್ಷಮೆಯಾಚಿಸಿ, ತನ್ನ ಹೇಳಿಕೆಯನ್ನು ಹಿಂಪಡೆದಿದ್ದಾರೆ. ತಮಿಳುನಾಡು ಸರ್ಕಾರ ಎನ್‌ಇಪಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ.

‘ಶಮ್ಲತ್ ದೇಹ್’ ಭೂಮಿಯನ್ನು ವಕ್ಫ್ ಮಂಡಳಿಗೆ ವರ್ಗಾಯಿಸುವ ಕುರಿತು ಸರ್ಕಾರ ತನಿಖೆ ನಡೆಸಲಿದೆ: ಹರಿಯಾಣ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...