Homeಕರ್ನಾಟಕದೀರ್ಘವಾದ ಸಮರಕ್ಕೆ ತಯಾರಿ ಮಾಡಿಕೊಳ್ಳಬೇಕೆಂಬ ಸೂಚನೆ ಇದು : ಯೋಗೇಂದ್ರ ಯಾದವ್

ದೀರ್ಘವಾದ ಸಮರಕ್ಕೆ ತಯಾರಿ ಮಾಡಿಕೊಳ್ಳಬೇಕೆಂಬ ಸೂಚನೆ ಇದು : ಯೋಗೇಂದ್ರ ಯಾದವ್

- Advertisement -
- Advertisement -

| ಯೋಗೇಂದ್ರ ಯಾದವ್ |

ಲೇಖಕರು ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು

ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಿ ಹತ್ತಿಕ್ಕುವ ಪ್ರಯತ್ನದಲ್ಲಿ ಕರ್ನಾಟಕವು ಉತ್ತರ ಭಾರತವನ್ನು ಅನುಸರಿಸಲು ಶುರು ಮಾಡಿದೆಯೇ? ಇದು ಇಂತಹ ಕ್ರಮಗಳ ಸರಣಿಯಲ್ಲಿ ಮೊದಲನೆಯದೆಂದು ಮುಂದೆ ಗೊತ್ತಾಗುವುದೇ? ಇಲ್ಲಿ ನಮ್ಮ ಕಣ್ಣಿಗೆ ಕಾಣುತ್ತಿರುವುದಷ್ಟೇ ಇದೆಯೋ, ಅಥವಾ ಇದರಾಳದಲ್ಲಿ ಮತ್ತೇನಾದರೂ ಹುದುಗಿದೆಯೋ? ದೊಡ್ಡಿಪಾಳ್ಯ ನರಸಿಂಹಮೂರ್ತಿ ಯವರನ್ನು ಮೊದಲು ವಶಕ್ಕೆ ತೆಗೆದುಕೊಂಡು ನಂತರ ಬಂಧಿಸಿದ ಸುದ್ದಿ ಕೇಳಿದ ತಕ್ಷಣ ತನ್ನ ತಲೆಯೊಳಗೆ ಉದ್ಭವಿಸಿದ ಪ್ರಶ್ನೆಗಳಿವು.

ನರಸಿಂಹಮೂರ್ತಿ ಯನ್ನು ನಾನು ಸುಮಾರು 7 ವರ್ಷಗಳಿಂದ ಬಲ್ಲೆ. ನನಗನಿಸುವಂತೆ ಆಮ್ ಆದ್ಮಿ ಪಾರ್ಟಿಯನ್ನು ರಚಿಸುವ ಆರಂಭಿಕ ಹಂತದಲ್ಲಿ ಕರ್ನಾಟಕದಲ್ಲಿಯ ರಾಜಕೀಯ ಕಾರ್ಯಕರ್ತರನ್ನು ಭೇಟಿ ಮಾಡುತ್ತಿರುವಾಗ ನಾನು ಅವರನ್ನು ಮೊದಲ ಬಾರಿ ಭೇಟಿಯಾದೆ. ಕರ್ನಾಟಕದ ಚಳವಳಿಗಳ ಮತ್ತು ಕಾರ್ಯಕರ್ತರ ಆಳ ಹಾಗೂ ಅಲ್ಲಿಯ ತಿಳುವಳಿಕೆಯ ಶ್ರೀಮಂತಿಕೆಯನ್ನು ನಾನು ಯಾವಾಗಲೂ ಮೆಚ್ಚಿದ್ದೇನೆ.

ರೈತ ಚಳವಳಿಗಳಿಂದ ದಲಿತ ಚಳವಳಿಗಳವರೆಗೆ, ಉದಾರವಾದಿ ಪ್ರಗತಿಪರ ಮಾನವ ಹಕ್ಕುಗಳ ಗುಂಪುಗಳಿಂದ ಎಡಪಂಥೀಯ ಗುಂಪುಗಳವರೆಗೆ, ಹೀಗೆ ಇಡೀ ರಾಜಕೀಯ ಮತ್ತು ಸೈದ್ಧಾಂತಿಕ ಉದ್ದಗಲಗಳ ಬಗ್ಗೆ ತಿಳುವಳಿಕೆ ಹೊಂದಿರುವ ಮತ್ತು ಅವುಗಳನ್ನು ಉದಾರವಾಗಿ ಒಪ್ಪಿಕೊಳ್ಳುವ ವಿರಳ ವ್ಯಕ್ತಿಗಳಲ್ಲಿ ನರಸಿಂಹಮೂರ್ತಿ ಒಬ್ಬರಾಗಿದ್ದರು. ನನಗೆ ಅವರ ಬಗ್ಗೆ ಅಚ್ಚರಿಗೊಳಿಸಿದ್ದೇನೆಂದರೆ, ಯಾವುದೇ ವೈಯಕ್ತಿಕ ಒಲವು, ಪೂರ್ವಗ್ರಹಿಕೆಗಳು ಕಿಂಚಿತ್ತೂ ಕಾಣಿಸಿಕೊಳ್ಳದ ಅವರ ರಾಜಕೀಯ ತಿಳುವಳಿಕೆಯ ಪ್ರಬುದ್ಧತೆ.

ಅವರು ಎಡಪಂಥದಿಂದ ಬಂದವರಾಗಿದ್ದರು. ಆದರೆ ಪ್ರಜಾತಾಂತ್ರಿಕ ಪ್ರಕ್ರಿಯೆಗಳಲ್ಲಿ ಅವರ ಬದ್ಧತೆ ಇತರರಿಗಿಂತ ಹೆಚ್ಚು ಕಾಣುತ್ತಿತ್ತು. ಹಿಂಸೆಯನ್ನಂತೂ ಮರೆತೇಬಿಡಿ, ರಾಜಕೀಯ ಅಥವಾ ಸಾಮಾಜಿಕ ಚಳವಳಿಗಳಲ್ಲಿ ಅವರು ಎಂದೂ ಸಾಹಸಗಳಿಗೆ ಪ್ರೋತ್ಸಾಹಿಸಲಿಲ್ಲ. ಅವರು ಗೌರಿ ಲಂಕೇಶ್ ಟ್ರಸ್ಟ್‌ನ  ಕೆಲಸಗಳಲ್ಲಿ ನಿರತರಾಗಿ, ಪಕ್ಷದ ಅಥವಾ ಯಾವುದೇ ಪದಾಧಿಕಾರಿಯಾಗಲು ಹಿಂಜರಿಕೆ ತೋರಿದರೂ ಕರ್ನಾಟಕದ ಎಲ್ಲಾ ಸಂಗಾತಿಗಳು ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಬೇಕೆಂದು ಸೂಚಿಸಿದ್ದು ನನಗೆ ಸ್ವಲ್ಪ ಆಶ್ಚರ್ಯ ಉಂಟುಮಾಡಿತ್ತು.

ನರಸಿಂಹಮೂರ್ತಿ ಅವರ ಬಗ್ಗೆ ನನಗೆ ಗೊತ್ತಿರುವುದನ್ನು ಪರಿಗಣಿಸಿದಲ್ಲಿ, ಅವರ ಮೇಲೆ ಪೊಲೀಸರು ಹೊರೆಸಿರುವ ಆರೋಪಗಳನ್ನು ಕೇಳಿ ನನಗೆ ಆಘಾತವಾಯಿತು. ಅವರು ಉಲ್ಲೇಖಿಸಿರುವ ಪ್ರಕರಣಗಳು ತುಂಬಾ ಹಳೆಯ ಪ್ರಕರಣಗಳಾಗಿದ್ದರಿಂದ, ಅವುಗಳ ಬಗ್ಗೆ ನನಗೆ ತಿಳುವಳಿಕೆ ಇದೆಯೆಂದೋ ಅಥವಾ ಅವರು ಮುಗ್ಧ ಎಂದು ನಾನು ತೀರ್ಪು ನೀಡುವುದು ಸರಿಯಾಗುವುದಿಲ್ಲ. ಆದರೆ, ಕೆಲವು ತುಂಬಾ ಸರಳವಾದ ಮತ್ತು ಸ್ಪಷ್ಟವಾದ ಪ್ರಶ್ನೆಗಳಿವೆ. ಈ ಸರಳ ಪ್ರಶ್ನೆಗಳಿಗೆ ಪೊಲೀಸರು ಉತ್ತರಿಸುವಲ್ಲಿ ವಿಫಲವಾಗಿದ್ದಾರೆ. ಪೊಲೀಸರು ಹೇಳುವಂತೆ, ಅವರು ಕಳೆದ ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದೇ ಆದರೆ ಸಾರ್ವಜನಿಕ ಜೀವನದಲ್ಲಿ ಇಷ್ಟೊಂದು ಸಕ್ರಿಯರಾಗಿ, ಎಲ್ಲೆಡೆಯೂ ಕಾಣಿಸಿಕೊಳ್ಳುತ್ತಿದ್ದು ಹೇಗೆ? ಒಂದು ವೇಳೆ ಅವರು ಅಪರಾಧ ಪ್ರಕರಣದಲ್ಲಿ ವಾಂಟೆಡ್ ಆಗಿದ್ದರು ಎಂದರೆ, ತಾವು ಹುಡುಕುತ್ತಿರುವ ವ್ಯಕ್ತಿ ನರಸಿಂಹಮೂರ್ತಿ ಎಂದು ಸಂಶಯವಿದ್ದರೆ ಪೊಲೀಸರಿಗೆ ಅವರನ್ನು ಈ ಮೊದಲೇ ಏಕೆ ಬಂಧಿಸಲು ಆಗಲಿಲ್ಲ? ಪೊಲೀಸರು ಅವರ ವಿಚಾರಣೆ ಮಾಡಿ, ತಮ್ಮ ತನಿಖೆಯನ್ನು ಪೂರ್ಣಗೊಳಿಸಿದ ನಂತರ ಅವರನ್ನು ಬಂಧಿಸಬಹುದಿತ್ತಲ್ಲವೇ? ಪೊಲೀಸರು ಹೇಳುವ ಅಪರಾಧೀ ಕೃತ್ಯಗಳು ನಡೆದ ಸಮಯದಲ್ಲಿ ನರಸಿಂಹಮೂರ್ತಿ ಅವರು ತಮ್ಮ ಬಿಸಿನೆಸ್‍ನಲ್ಲಿ ತೊಡಗಿದ್ದರು ಎನ್ನುವ ನರಸಿಂಹಮೂರ್ತಿ ಅವರ ಆವೃತ್ತಿಯನ್ನು ಪೊಲೀಸರು ಏಕೆ ಪರಿಶೀಲಿಸಲು ಹೋಗಲಿಲ್ಲ? ನರಸಿಂಹಮೂರ್ತಿ ಅವರು ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಕ್ಕೆ ಇಚ್ಛೆ ವ್ಯಕ್ತಪಡಿಸಿದಾಗ ಹಾಗೂ ಅವರು ಇಷ್ಟೊಂದು ಸುಲಭವಾಗಿ ಹಾಗೂ ಸಾರ್ವಜನಿಕವಾಗಿ ಲಭ್ಯವಾಗಿರುವಾಗ ಅವರನ್ನು ಬಂಧಿಸುವ ಅವಸರ ಏಕೆ?

ನನಗೆ ಕಾಣಿಸಿದಂತೆ, ಈ ಪ್ರಶ್ನೆಗಳಿಗೆ ಯಾವುದೇ ಉತ್ತರಗಳಿಲ್ಲ. ಹಾಗಾಗಿ, ನರಸಿಂಹಮೂರ್ತಿ ಅವರನ್ನು ಬಂಧಿಸುವ ಈ ಹಠಾತ್ ಕ್ರಮವನ್ನು ಐಸ್‍ಬರ್ಗ್‍ನ ಒಂದು ತುದಿ ಎಂತಲೂ, ಮುಂದಿನ ದಿನಗಳಲ್ಲಿ ಕಾಣಬಹುದಾದ ದೊಡ್ಡ ಕ್ರಮಗಳ ಒಂದು ಸಂಕೇತವೆಂದು ಪರಿಗಣಿಸುವುದನ್ನು ಬಿಟ್ಟರೆ ನಮಗೆ ಬೇರೆ ಆಯ್ಕೆಗಳಿಲ್ಲ. ಕರ್ನಾಟಕದ ಅತ್ಯಂತ ಜೀವಂತಿಕೆಯುಳ್ಳ ನಾಗರಿಕ ಸಮಾಜವು ಇದಕ್ಕೆ ಅಗತ್ಯವಿರುವ ತ್ವರಿತತೆ ಮತ್ತು ದೃಢತೆಯಿಂದ ಪ್ರತಿಕ್ರಿಯೆ ನೀಡುತ್ತಿರುವುದು ಅತ್ಯಂತ ಹೃದಯಸ್ಪರ್ಶಿಯಾಗಿದೆ. ನರಸಿಂಹಮೂರ್ತಿ ಅವರ ಮೇಲೆ ಹೊರೆಸಲಾದ ಆರೋಪಗಳನ್ನು ಹಿಂತೆಗೆದುಕೊಂಡು, ಅವರ ಬಿಡುಗಡೆಯಾಗಿ ನಮ್ಮೊಂದಿಗೆ ಹೋರಾಟದಲ್ಲಿ ಜೊತೆಗೂಡುವರೆಂದು ನಾನು ಆಶಿಸುತ್ತಿರುವಾಗಲೇ, ನಾವೆಲ್ಲರೂ ಒಂದು ದೀರ್ಘ ಪ್ರಜಾತಾಂತ್ರಿಕ ಸಮರಕ್ಕಾಗಿ ತಯಾರಿ ಮಾಡಿಕೊಳ್ಳಬೇಕು ಎನ್ನುವ ಸಂದೇಶ ಸ್ಪಷ್ಟವಾಗಿ ತೇಲಿಬರುತ್ತಿದೆ.

ಅನುವಾದ: ರಾಜಶೇಖರ್‌ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...