Homeಕರ್ನಾಟಕದೀರ್ಘವಾದ ಸಮರಕ್ಕೆ ತಯಾರಿ ಮಾಡಿಕೊಳ್ಳಬೇಕೆಂಬ ಸೂಚನೆ ಇದು : ಯೋಗೇಂದ್ರ ಯಾದವ್

ದೀರ್ಘವಾದ ಸಮರಕ್ಕೆ ತಯಾರಿ ಮಾಡಿಕೊಳ್ಳಬೇಕೆಂಬ ಸೂಚನೆ ಇದು : ಯೋಗೇಂದ್ರ ಯಾದವ್

- Advertisement -
- Advertisement -

| ಯೋಗೇಂದ್ರ ಯಾದವ್ |

ಲೇಖಕರು ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು

ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಿ ಹತ್ತಿಕ್ಕುವ ಪ್ರಯತ್ನದಲ್ಲಿ ಕರ್ನಾಟಕವು ಉತ್ತರ ಭಾರತವನ್ನು ಅನುಸರಿಸಲು ಶುರು ಮಾಡಿದೆಯೇ? ಇದು ಇಂತಹ ಕ್ರಮಗಳ ಸರಣಿಯಲ್ಲಿ ಮೊದಲನೆಯದೆಂದು ಮುಂದೆ ಗೊತ್ತಾಗುವುದೇ? ಇಲ್ಲಿ ನಮ್ಮ ಕಣ್ಣಿಗೆ ಕಾಣುತ್ತಿರುವುದಷ್ಟೇ ಇದೆಯೋ, ಅಥವಾ ಇದರಾಳದಲ್ಲಿ ಮತ್ತೇನಾದರೂ ಹುದುಗಿದೆಯೋ? ದೊಡ್ಡಿಪಾಳ್ಯ ನರಸಿಂಹಮೂರ್ತಿ ಯವರನ್ನು ಮೊದಲು ವಶಕ್ಕೆ ತೆಗೆದುಕೊಂಡು ನಂತರ ಬಂಧಿಸಿದ ಸುದ್ದಿ ಕೇಳಿದ ತಕ್ಷಣ ತನ್ನ ತಲೆಯೊಳಗೆ ಉದ್ಭವಿಸಿದ ಪ್ರಶ್ನೆಗಳಿವು.

ನರಸಿಂಹಮೂರ್ತಿ ಯನ್ನು ನಾನು ಸುಮಾರು 7 ವರ್ಷಗಳಿಂದ ಬಲ್ಲೆ. ನನಗನಿಸುವಂತೆ ಆಮ್ ಆದ್ಮಿ ಪಾರ್ಟಿಯನ್ನು ರಚಿಸುವ ಆರಂಭಿಕ ಹಂತದಲ್ಲಿ ಕರ್ನಾಟಕದಲ್ಲಿಯ ರಾಜಕೀಯ ಕಾರ್ಯಕರ್ತರನ್ನು ಭೇಟಿ ಮಾಡುತ್ತಿರುವಾಗ ನಾನು ಅವರನ್ನು ಮೊದಲ ಬಾರಿ ಭೇಟಿಯಾದೆ. ಕರ್ನಾಟಕದ ಚಳವಳಿಗಳ ಮತ್ತು ಕಾರ್ಯಕರ್ತರ ಆಳ ಹಾಗೂ ಅಲ್ಲಿಯ ತಿಳುವಳಿಕೆಯ ಶ್ರೀಮಂತಿಕೆಯನ್ನು ನಾನು ಯಾವಾಗಲೂ ಮೆಚ್ಚಿದ್ದೇನೆ.

ರೈತ ಚಳವಳಿಗಳಿಂದ ದಲಿತ ಚಳವಳಿಗಳವರೆಗೆ, ಉದಾರವಾದಿ ಪ್ರಗತಿಪರ ಮಾನವ ಹಕ್ಕುಗಳ ಗುಂಪುಗಳಿಂದ ಎಡಪಂಥೀಯ ಗುಂಪುಗಳವರೆಗೆ, ಹೀಗೆ ಇಡೀ ರಾಜಕೀಯ ಮತ್ತು ಸೈದ್ಧಾಂತಿಕ ಉದ್ದಗಲಗಳ ಬಗ್ಗೆ ತಿಳುವಳಿಕೆ ಹೊಂದಿರುವ ಮತ್ತು ಅವುಗಳನ್ನು ಉದಾರವಾಗಿ ಒಪ್ಪಿಕೊಳ್ಳುವ ವಿರಳ ವ್ಯಕ್ತಿಗಳಲ್ಲಿ ನರಸಿಂಹಮೂರ್ತಿ ಒಬ್ಬರಾಗಿದ್ದರು. ನನಗೆ ಅವರ ಬಗ್ಗೆ ಅಚ್ಚರಿಗೊಳಿಸಿದ್ದೇನೆಂದರೆ, ಯಾವುದೇ ವೈಯಕ್ತಿಕ ಒಲವು, ಪೂರ್ವಗ್ರಹಿಕೆಗಳು ಕಿಂಚಿತ್ತೂ ಕಾಣಿಸಿಕೊಳ್ಳದ ಅವರ ರಾಜಕೀಯ ತಿಳುವಳಿಕೆಯ ಪ್ರಬುದ್ಧತೆ.

ಅವರು ಎಡಪಂಥದಿಂದ ಬಂದವರಾಗಿದ್ದರು. ಆದರೆ ಪ್ರಜಾತಾಂತ್ರಿಕ ಪ್ರಕ್ರಿಯೆಗಳಲ್ಲಿ ಅವರ ಬದ್ಧತೆ ಇತರರಿಗಿಂತ ಹೆಚ್ಚು ಕಾಣುತ್ತಿತ್ತು. ಹಿಂಸೆಯನ್ನಂತೂ ಮರೆತೇಬಿಡಿ, ರಾಜಕೀಯ ಅಥವಾ ಸಾಮಾಜಿಕ ಚಳವಳಿಗಳಲ್ಲಿ ಅವರು ಎಂದೂ ಸಾಹಸಗಳಿಗೆ ಪ್ರೋತ್ಸಾಹಿಸಲಿಲ್ಲ. ಅವರು ಗೌರಿ ಲಂಕೇಶ್ ಟ್ರಸ್ಟ್‌ನ  ಕೆಲಸಗಳಲ್ಲಿ ನಿರತರಾಗಿ, ಪಕ್ಷದ ಅಥವಾ ಯಾವುದೇ ಪದಾಧಿಕಾರಿಯಾಗಲು ಹಿಂಜರಿಕೆ ತೋರಿದರೂ ಕರ್ನಾಟಕದ ಎಲ್ಲಾ ಸಂಗಾತಿಗಳು ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಬೇಕೆಂದು ಸೂಚಿಸಿದ್ದು ನನಗೆ ಸ್ವಲ್ಪ ಆಶ್ಚರ್ಯ ಉಂಟುಮಾಡಿತ್ತು.

ನರಸಿಂಹಮೂರ್ತಿ ಅವರ ಬಗ್ಗೆ ನನಗೆ ಗೊತ್ತಿರುವುದನ್ನು ಪರಿಗಣಿಸಿದಲ್ಲಿ, ಅವರ ಮೇಲೆ ಪೊಲೀಸರು ಹೊರೆಸಿರುವ ಆರೋಪಗಳನ್ನು ಕೇಳಿ ನನಗೆ ಆಘಾತವಾಯಿತು. ಅವರು ಉಲ್ಲೇಖಿಸಿರುವ ಪ್ರಕರಣಗಳು ತುಂಬಾ ಹಳೆಯ ಪ್ರಕರಣಗಳಾಗಿದ್ದರಿಂದ, ಅವುಗಳ ಬಗ್ಗೆ ನನಗೆ ತಿಳುವಳಿಕೆ ಇದೆಯೆಂದೋ ಅಥವಾ ಅವರು ಮುಗ್ಧ ಎಂದು ನಾನು ತೀರ್ಪು ನೀಡುವುದು ಸರಿಯಾಗುವುದಿಲ್ಲ. ಆದರೆ, ಕೆಲವು ತುಂಬಾ ಸರಳವಾದ ಮತ್ತು ಸ್ಪಷ್ಟವಾದ ಪ್ರಶ್ನೆಗಳಿವೆ. ಈ ಸರಳ ಪ್ರಶ್ನೆಗಳಿಗೆ ಪೊಲೀಸರು ಉತ್ತರಿಸುವಲ್ಲಿ ವಿಫಲವಾಗಿದ್ದಾರೆ. ಪೊಲೀಸರು ಹೇಳುವಂತೆ, ಅವರು ಕಳೆದ ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದೇ ಆದರೆ ಸಾರ್ವಜನಿಕ ಜೀವನದಲ್ಲಿ ಇಷ್ಟೊಂದು ಸಕ್ರಿಯರಾಗಿ, ಎಲ್ಲೆಡೆಯೂ ಕಾಣಿಸಿಕೊಳ್ಳುತ್ತಿದ್ದು ಹೇಗೆ? ಒಂದು ವೇಳೆ ಅವರು ಅಪರಾಧ ಪ್ರಕರಣದಲ್ಲಿ ವಾಂಟೆಡ್ ಆಗಿದ್ದರು ಎಂದರೆ, ತಾವು ಹುಡುಕುತ್ತಿರುವ ವ್ಯಕ್ತಿ ನರಸಿಂಹಮೂರ್ತಿ ಎಂದು ಸಂಶಯವಿದ್ದರೆ ಪೊಲೀಸರಿಗೆ ಅವರನ್ನು ಈ ಮೊದಲೇ ಏಕೆ ಬಂಧಿಸಲು ಆಗಲಿಲ್ಲ? ಪೊಲೀಸರು ಅವರ ವಿಚಾರಣೆ ಮಾಡಿ, ತಮ್ಮ ತನಿಖೆಯನ್ನು ಪೂರ್ಣಗೊಳಿಸಿದ ನಂತರ ಅವರನ್ನು ಬಂಧಿಸಬಹುದಿತ್ತಲ್ಲವೇ? ಪೊಲೀಸರು ಹೇಳುವ ಅಪರಾಧೀ ಕೃತ್ಯಗಳು ನಡೆದ ಸಮಯದಲ್ಲಿ ನರಸಿಂಹಮೂರ್ತಿ ಅವರು ತಮ್ಮ ಬಿಸಿನೆಸ್‍ನಲ್ಲಿ ತೊಡಗಿದ್ದರು ಎನ್ನುವ ನರಸಿಂಹಮೂರ್ತಿ ಅವರ ಆವೃತ್ತಿಯನ್ನು ಪೊಲೀಸರು ಏಕೆ ಪರಿಶೀಲಿಸಲು ಹೋಗಲಿಲ್ಲ? ನರಸಿಂಹಮೂರ್ತಿ ಅವರು ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಕ್ಕೆ ಇಚ್ಛೆ ವ್ಯಕ್ತಪಡಿಸಿದಾಗ ಹಾಗೂ ಅವರು ಇಷ್ಟೊಂದು ಸುಲಭವಾಗಿ ಹಾಗೂ ಸಾರ್ವಜನಿಕವಾಗಿ ಲಭ್ಯವಾಗಿರುವಾಗ ಅವರನ್ನು ಬಂಧಿಸುವ ಅವಸರ ಏಕೆ?

ನನಗೆ ಕಾಣಿಸಿದಂತೆ, ಈ ಪ್ರಶ್ನೆಗಳಿಗೆ ಯಾವುದೇ ಉತ್ತರಗಳಿಲ್ಲ. ಹಾಗಾಗಿ, ನರಸಿಂಹಮೂರ್ತಿ ಅವರನ್ನು ಬಂಧಿಸುವ ಈ ಹಠಾತ್ ಕ್ರಮವನ್ನು ಐಸ್‍ಬರ್ಗ್‍ನ ಒಂದು ತುದಿ ಎಂತಲೂ, ಮುಂದಿನ ದಿನಗಳಲ್ಲಿ ಕಾಣಬಹುದಾದ ದೊಡ್ಡ ಕ್ರಮಗಳ ಒಂದು ಸಂಕೇತವೆಂದು ಪರಿಗಣಿಸುವುದನ್ನು ಬಿಟ್ಟರೆ ನಮಗೆ ಬೇರೆ ಆಯ್ಕೆಗಳಿಲ್ಲ. ಕರ್ನಾಟಕದ ಅತ್ಯಂತ ಜೀವಂತಿಕೆಯುಳ್ಳ ನಾಗರಿಕ ಸಮಾಜವು ಇದಕ್ಕೆ ಅಗತ್ಯವಿರುವ ತ್ವರಿತತೆ ಮತ್ತು ದೃಢತೆಯಿಂದ ಪ್ರತಿಕ್ರಿಯೆ ನೀಡುತ್ತಿರುವುದು ಅತ್ಯಂತ ಹೃದಯಸ್ಪರ್ಶಿಯಾಗಿದೆ. ನರಸಿಂಹಮೂರ್ತಿ ಅವರ ಮೇಲೆ ಹೊರೆಸಲಾದ ಆರೋಪಗಳನ್ನು ಹಿಂತೆಗೆದುಕೊಂಡು, ಅವರ ಬಿಡುಗಡೆಯಾಗಿ ನಮ್ಮೊಂದಿಗೆ ಹೋರಾಟದಲ್ಲಿ ಜೊತೆಗೂಡುವರೆಂದು ನಾನು ಆಶಿಸುತ್ತಿರುವಾಗಲೇ, ನಾವೆಲ್ಲರೂ ಒಂದು ದೀರ್ಘ ಪ್ರಜಾತಾಂತ್ರಿಕ ಸಮರಕ್ಕಾಗಿ ತಯಾರಿ ಮಾಡಿಕೊಳ್ಳಬೇಕು ಎನ್ನುವ ಸಂದೇಶ ಸ್ಪಷ್ಟವಾಗಿ ತೇಲಿಬರುತ್ತಿದೆ.

ಅನುವಾದ: ರಾಜಶೇಖರ್‌ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...