Homeಕರ್ನಾಟಕದೀರ್ಘವಾದ ಸಮರಕ್ಕೆ ತಯಾರಿ ಮಾಡಿಕೊಳ್ಳಬೇಕೆಂಬ ಸೂಚನೆ ಇದು : ಯೋಗೇಂದ್ರ ಯಾದವ್

ದೀರ್ಘವಾದ ಸಮರಕ್ಕೆ ತಯಾರಿ ಮಾಡಿಕೊಳ್ಳಬೇಕೆಂಬ ಸೂಚನೆ ಇದು : ಯೋಗೇಂದ್ರ ಯಾದವ್

- Advertisement -
- Advertisement -

| ಯೋಗೇಂದ್ರ ಯಾದವ್ |

ಲೇಖಕರು ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು

ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಿ ಹತ್ತಿಕ್ಕುವ ಪ್ರಯತ್ನದಲ್ಲಿ ಕರ್ನಾಟಕವು ಉತ್ತರ ಭಾರತವನ್ನು ಅನುಸರಿಸಲು ಶುರು ಮಾಡಿದೆಯೇ? ಇದು ಇಂತಹ ಕ್ರಮಗಳ ಸರಣಿಯಲ್ಲಿ ಮೊದಲನೆಯದೆಂದು ಮುಂದೆ ಗೊತ್ತಾಗುವುದೇ? ಇಲ್ಲಿ ನಮ್ಮ ಕಣ್ಣಿಗೆ ಕಾಣುತ್ತಿರುವುದಷ್ಟೇ ಇದೆಯೋ, ಅಥವಾ ಇದರಾಳದಲ್ಲಿ ಮತ್ತೇನಾದರೂ ಹುದುಗಿದೆಯೋ? ದೊಡ್ಡಿಪಾಳ್ಯ ನರಸಿಂಹಮೂರ್ತಿ ಯವರನ್ನು ಮೊದಲು ವಶಕ್ಕೆ ತೆಗೆದುಕೊಂಡು ನಂತರ ಬಂಧಿಸಿದ ಸುದ್ದಿ ಕೇಳಿದ ತಕ್ಷಣ ತನ್ನ ತಲೆಯೊಳಗೆ ಉದ್ಭವಿಸಿದ ಪ್ರಶ್ನೆಗಳಿವು.

ನರಸಿಂಹಮೂರ್ತಿ ಯನ್ನು ನಾನು ಸುಮಾರು 7 ವರ್ಷಗಳಿಂದ ಬಲ್ಲೆ. ನನಗನಿಸುವಂತೆ ಆಮ್ ಆದ್ಮಿ ಪಾರ್ಟಿಯನ್ನು ರಚಿಸುವ ಆರಂಭಿಕ ಹಂತದಲ್ಲಿ ಕರ್ನಾಟಕದಲ್ಲಿಯ ರಾಜಕೀಯ ಕಾರ್ಯಕರ್ತರನ್ನು ಭೇಟಿ ಮಾಡುತ್ತಿರುವಾಗ ನಾನು ಅವರನ್ನು ಮೊದಲ ಬಾರಿ ಭೇಟಿಯಾದೆ. ಕರ್ನಾಟಕದ ಚಳವಳಿಗಳ ಮತ್ತು ಕಾರ್ಯಕರ್ತರ ಆಳ ಹಾಗೂ ಅಲ್ಲಿಯ ತಿಳುವಳಿಕೆಯ ಶ್ರೀಮಂತಿಕೆಯನ್ನು ನಾನು ಯಾವಾಗಲೂ ಮೆಚ್ಚಿದ್ದೇನೆ.

ರೈತ ಚಳವಳಿಗಳಿಂದ ದಲಿತ ಚಳವಳಿಗಳವರೆಗೆ, ಉದಾರವಾದಿ ಪ್ರಗತಿಪರ ಮಾನವ ಹಕ್ಕುಗಳ ಗುಂಪುಗಳಿಂದ ಎಡಪಂಥೀಯ ಗುಂಪುಗಳವರೆಗೆ, ಹೀಗೆ ಇಡೀ ರಾಜಕೀಯ ಮತ್ತು ಸೈದ್ಧಾಂತಿಕ ಉದ್ದಗಲಗಳ ಬಗ್ಗೆ ತಿಳುವಳಿಕೆ ಹೊಂದಿರುವ ಮತ್ತು ಅವುಗಳನ್ನು ಉದಾರವಾಗಿ ಒಪ್ಪಿಕೊಳ್ಳುವ ವಿರಳ ವ್ಯಕ್ತಿಗಳಲ್ಲಿ ನರಸಿಂಹಮೂರ್ತಿ ಒಬ್ಬರಾಗಿದ್ದರು. ನನಗೆ ಅವರ ಬಗ್ಗೆ ಅಚ್ಚರಿಗೊಳಿಸಿದ್ದೇನೆಂದರೆ, ಯಾವುದೇ ವೈಯಕ್ತಿಕ ಒಲವು, ಪೂರ್ವಗ್ರಹಿಕೆಗಳು ಕಿಂಚಿತ್ತೂ ಕಾಣಿಸಿಕೊಳ್ಳದ ಅವರ ರಾಜಕೀಯ ತಿಳುವಳಿಕೆಯ ಪ್ರಬುದ್ಧತೆ.

ಅವರು ಎಡಪಂಥದಿಂದ ಬಂದವರಾಗಿದ್ದರು. ಆದರೆ ಪ್ರಜಾತಾಂತ್ರಿಕ ಪ್ರಕ್ರಿಯೆಗಳಲ್ಲಿ ಅವರ ಬದ್ಧತೆ ಇತರರಿಗಿಂತ ಹೆಚ್ಚು ಕಾಣುತ್ತಿತ್ತು. ಹಿಂಸೆಯನ್ನಂತೂ ಮರೆತೇಬಿಡಿ, ರಾಜಕೀಯ ಅಥವಾ ಸಾಮಾಜಿಕ ಚಳವಳಿಗಳಲ್ಲಿ ಅವರು ಎಂದೂ ಸಾಹಸಗಳಿಗೆ ಪ್ರೋತ್ಸಾಹಿಸಲಿಲ್ಲ. ಅವರು ಗೌರಿ ಲಂಕೇಶ್ ಟ್ರಸ್ಟ್‌ನ  ಕೆಲಸಗಳಲ್ಲಿ ನಿರತರಾಗಿ, ಪಕ್ಷದ ಅಥವಾ ಯಾವುದೇ ಪದಾಧಿಕಾರಿಯಾಗಲು ಹಿಂಜರಿಕೆ ತೋರಿದರೂ ಕರ್ನಾಟಕದ ಎಲ್ಲಾ ಸಂಗಾತಿಗಳು ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಬೇಕೆಂದು ಸೂಚಿಸಿದ್ದು ನನಗೆ ಸ್ವಲ್ಪ ಆಶ್ಚರ್ಯ ಉಂಟುಮಾಡಿತ್ತು.

ನರಸಿಂಹಮೂರ್ತಿ ಅವರ ಬಗ್ಗೆ ನನಗೆ ಗೊತ್ತಿರುವುದನ್ನು ಪರಿಗಣಿಸಿದಲ್ಲಿ, ಅವರ ಮೇಲೆ ಪೊಲೀಸರು ಹೊರೆಸಿರುವ ಆರೋಪಗಳನ್ನು ಕೇಳಿ ನನಗೆ ಆಘಾತವಾಯಿತು. ಅವರು ಉಲ್ಲೇಖಿಸಿರುವ ಪ್ರಕರಣಗಳು ತುಂಬಾ ಹಳೆಯ ಪ್ರಕರಣಗಳಾಗಿದ್ದರಿಂದ, ಅವುಗಳ ಬಗ್ಗೆ ನನಗೆ ತಿಳುವಳಿಕೆ ಇದೆಯೆಂದೋ ಅಥವಾ ಅವರು ಮುಗ್ಧ ಎಂದು ನಾನು ತೀರ್ಪು ನೀಡುವುದು ಸರಿಯಾಗುವುದಿಲ್ಲ. ಆದರೆ, ಕೆಲವು ತುಂಬಾ ಸರಳವಾದ ಮತ್ತು ಸ್ಪಷ್ಟವಾದ ಪ್ರಶ್ನೆಗಳಿವೆ. ಈ ಸರಳ ಪ್ರಶ್ನೆಗಳಿಗೆ ಪೊಲೀಸರು ಉತ್ತರಿಸುವಲ್ಲಿ ವಿಫಲವಾಗಿದ್ದಾರೆ. ಪೊಲೀಸರು ಹೇಳುವಂತೆ, ಅವರು ಕಳೆದ ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದೇ ಆದರೆ ಸಾರ್ವಜನಿಕ ಜೀವನದಲ್ಲಿ ಇಷ್ಟೊಂದು ಸಕ್ರಿಯರಾಗಿ, ಎಲ್ಲೆಡೆಯೂ ಕಾಣಿಸಿಕೊಳ್ಳುತ್ತಿದ್ದು ಹೇಗೆ? ಒಂದು ವೇಳೆ ಅವರು ಅಪರಾಧ ಪ್ರಕರಣದಲ್ಲಿ ವಾಂಟೆಡ್ ಆಗಿದ್ದರು ಎಂದರೆ, ತಾವು ಹುಡುಕುತ್ತಿರುವ ವ್ಯಕ್ತಿ ನರಸಿಂಹಮೂರ್ತಿ ಎಂದು ಸಂಶಯವಿದ್ದರೆ ಪೊಲೀಸರಿಗೆ ಅವರನ್ನು ಈ ಮೊದಲೇ ಏಕೆ ಬಂಧಿಸಲು ಆಗಲಿಲ್ಲ? ಪೊಲೀಸರು ಅವರ ವಿಚಾರಣೆ ಮಾಡಿ, ತಮ್ಮ ತನಿಖೆಯನ್ನು ಪೂರ್ಣಗೊಳಿಸಿದ ನಂತರ ಅವರನ್ನು ಬಂಧಿಸಬಹುದಿತ್ತಲ್ಲವೇ? ಪೊಲೀಸರು ಹೇಳುವ ಅಪರಾಧೀ ಕೃತ್ಯಗಳು ನಡೆದ ಸಮಯದಲ್ಲಿ ನರಸಿಂಹಮೂರ್ತಿ ಅವರು ತಮ್ಮ ಬಿಸಿನೆಸ್‍ನಲ್ಲಿ ತೊಡಗಿದ್ದರು ಎನ್ನುವ ನರಸಿಂಹಮೂರ್ತಿ ಅವರ ಆವೃತ್ತಿಯನ್ನು ಪೊಲೀಸರು ಏಕೆ ಪರಿಶೀಲಿಸಲು ಹೋಗಲಿಲ್ಲ? ನರಸಿಂಹಮೂರ್ತಿ ಅವರು ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಕ್ಕೆ ಇಚ್ಛೆ ವ್ಯಕ್ತಪಡಿಸಿದಾಗ ಹಾಗೂ ಅವರು ಇಷ್ಟೊಂದು ಸುಲಭವಾಗಿ ಹಾಗೂ ಸಾರ್ವಜನಿಕವಾಗಿ ಲಭ್ಯವಾಗಿರುವಾಗ ಅವರನ್ನು ಬಂಧಿಸುವ ಅವಸರ ಏಕೆ?

ನನಗೆ ಕಾಣಿಸಿದಂತೆ, ಈ ಪ್ರಶ್ನೆಗಳಿಗೆ ಯಾವುದೇ ಉತ್ತರಗಳಿಲ್ಲ. ಹಾಗಾಗಿ, ನರಸಿಂಹಮೂರ್ತಿ ಅವರನ್ನು ಬಂಧಿಸುವ ಈ ಹಠಾತ್ ಕ್ರಮವನ್ನು ಐಸ್‍ಬರ್ಗ್‍ನ ಒಂದು ತುದಿ ಎಂತಲೂ, ಮುಂದಿನ ದಿನಗಳಲ್ಲಿ ಕಾಣಬಹುದಾದ ದೊಡ್ಡ ಕ್ರಮಗಳ ಒಂದು ಸಂಕೇತವೆಂದು ಪರಿಗಣಿಸುವುದನ್ನು ಬಿಟ್ಟರೆ ನಮಗೆ ಬೇರೆ ಆಯ್ಕೆಗಳಿಲ್ಲ. ಕರ್ನಾಟಕದ ಅತ್ಯಂತ ಜೀವಂತಿಕೆಯುಳ್ಳ ನಾಗರಿಕ ಸಮಾಜವು ಇದಕ್ಕೆ ಅಗತ್ಯವಿರುವ ತ್ವರಿತತೆ ಮತ್ತು ದೃಢತೆಯಿಂದ ಪ್ರತಿಕ್ರಿಯೆ ನೀಡುತ್ತಿರುವುದು ಅತ್ಯಂತ ಹೃದಯಸ್ಪರ್ಶಿಯಾಗಿದೆ. ನರಸಿಂಹಮೂರ್ತಿ ಅವರ ಮೇಲೆ ಹೊರೆಸಲಾದ ಆರೋಪಗಳನ್ನು ಹಿಂತೆಗೆದುಕೊಂಡು, ಅವರ ಬಿಡುಗಡೆಯಾಗಿ ನಮ್ಮೊಂದಿಗೆ ಹೋರಾಟದಲ್ಲಿ ಜೊತೆಗೂಡುವರೆಂದು ನಾನು ಆಶಿಸುತ್ತಿರುವಾಗಲೇ, ನಾವೆಲ್ಲರೂ ಒಂದು ದೀರ್ಘ ಪ್ರಜಾತಾಂತ್ರಿಕ ಸಮರಕ್ಕಾಗಿ ತಯಾರಿ ಮಾಡಿಕೊಳ್ಳಬೇಕು ಎನ್ನುವ ಸಂದೇಶ ಸ್ಪಷ್ಟವಾಗಿ ತೇಲಿಬರುತ್ತಿದೆ.

ಅನುವಾದ: ರಾಜಶೇಖರ್‌ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...