Homeಕರ್ನಾಟಕದೀರ್ಘವಾದ ಸಮರಕ್ಕೆ ತಯಾರಿ ಮಾಡಿಕೊಳ್ಳಬೇಕೆಂಬ ಸೂಚನೆ ಇದು : ಯೋಗೇಂದ್ರ ಯಾದವ್

ದೀರ್ಘವಾದ ಸಮರಕ್ಕೆ ತಯಾರಿ ಮಾಡಿಕೊಳ್ಳಬೇಕೆಂಬ ಸೂಚನೆ ಇದು : ಯೋಗೇಂದ್ರ ಯಾದವ್

- Advertisement -
- Advertisement -

| ಯೋಗೇಂದ್ರ ಯಾದವ್ |

ಲೇಖಕರು ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು

ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಿ ಹತ್ತಿಕ್ಕುವ ಪ್ರಯತ್ನದಲ್ಲಿ ಕರ್ನಾಟಕವು ಉತ್ತರ ಭಾರತವನ್ನು ಅನುಸರಿಸಲು ಶುರು ಮಾಡಿದೆಯೇ? ಇದು ಇಂತಹ ಕ್ರಮಗಳ ಸರಣಿಯಲ್ಲಿ ಮೊದಲನೆಯದೆಂದು ಮುಂದೆ ಗೊತ್ತಾಗುವುದೇ? ಇಲ್ಲಿ ನಮ್ಮ ಕಣ್ಣಿಗೆ ಕಾಣುತ್ತಿರುವುದಷ್ಟೇ ಇದೆಯೋ, ಅಥವಾ ಇದರಾಳದಲ್ಲಿ ಮತ್ತೇನಾದರೂ ಹುದುಗಿದೆಯೋ? ದೊಡ್ಡಿಪಾಳ್ಯ ನರಸಿಂಹಮೂರ್ತಿ ಯವರನ್ನು ಮೊದಲು ವಶಕ್ಕೆ ತೆಗೆದುಕೊಂಡು ನಂತರ ಬಂಧಿಸಿದ ಸುದ್ದಿ ಕೇಳಿದ ತಕ್ಷಣ ತನ್ನ ತಲೆಯೊಳಗೆ ಉದ್ಭವಿಸಿದ ಪ್ರಶ್ನೆಗಳಿವು.

ನರಸಿಂಹಮೂರ್ತಿ ಯನ್ನು ನಾನು ಸುಮಾರು 7 ವರ್ಷಗಳಿಂದ ಬಲ್ಲೆ. ನನಗನಿಸುವಂತೆ ಆಮ್ ಆದ್ಮಿ ಪಾರ್ಟಿಯನ್ನು ರಚಿಸುವ ಆರಂಭಿಕ ಹಂತದಲ್ಲಿ ಕರ್ನಾಟಕದಲ್ಲಿಯ ರಾಜಕೀಯ ಕಾರ್ಯಕರ್ತರನ್ನು ಭೇಟಿ ಮಾಡುತ್ತಿರುವಾಗ ನಾನು ಅವರನ್ನು ಮೊದಲ ಬಾರಿ ಭೇಟಿಯಾದೆ. ಕರ್ನಾಟಕದ ಚಳವಳಿಗಳ ಮತ್ತು ಕಾರ್ಯಕರ್ತರ ಆಳ ಹಾಗೂ ಅಲ್ಲಿಯ ತಿಳುವಳಿಕೆಯ ಶ್ರೀಮಂತಿಕೆಯನ್ನು ನಾನು ಯಾವಾಗಲೂ ಮೆಚ್ಚಿದ್ದೇನೆ.

ರೈತ ಚಳವಳಿಗಳಿಂದ ದಲಿತ ಚಳವಳಿಗಳವರೆಗೆ, ಉದಾರವಾದಿ ಪ್ರಗತಿಪರ ಮಾನವ ಹಕ್ಕುಗಳ ಗುಂಪುಗಳಿಂದ ಎಡಪಂಥೀಯ ಗುಂಪುಗಳವರೆಗೆ, ಹೀಗೆ ಇಡೀ ರಾಜಕೀಯ ಮತ್ತು ಸೈದ್ಧಾಂತಿಕ ಉದ್ದಗಲಗಳ ಬಗ್ಗೆ ತಿಳುವಳಿಕೆ ಹೊಂದಿರುವ ಮತ್ತು ಅವುಗಳನ್ನು ಉದಾರವಾಗಿ ಒಪ್ಪಿಕೊಳ್ಳುವ ವಿರಳ ವ್ಯಕ್ತಿಗಳಲ್ಲಿ ನರಸಿಂಹಮೂರ್ತಿ ಒಬ್ಬರಾಗಿದ್ದರು. ನನಗೆ ಅವರ ಬಗ್ಗೆ ಅಚ್ಚರಿಗೊಳಿಸಿದ್ದೇನೆಂದರೆ, ಯಾವುದೇ ವೈಯಕ್ತಿಕ ಒಲವು, ಪೂರ್ವಗ್ರಹಿಕೆಗಳು ಕಿಂಚಿತ್ತೂ ಕಾಣಿಸಿಕೊಳ್ಳದ ಅವರ ರಾಜಕೀಯ ತಿಳುವಳಿಕೆಯ ಪ್ರಬುದ್ಧತೆ.

ಅವರು ಎಡಪಂಥದಿಂದ ಬಂದವರಾಗಿದ್ದರು. ಆದರೆ ಪ್ರಜಾತಾಂತ್ರಿಕ ಪ್ರಕ್ರಿಯೆಗಳಲ್ಲಿ ಅವರ ಬದ್ಧತೆ ಇತರರಿಗಿಂತ ಹೆಚ್ಚು ಕಾಣುತ್ತಿತ್ತು. ಹಿಂಸೆಯನ್ನಂತೂ ಮರೆತೇಬಿಡಿ, ರಾಜಕೀಯ ಅಥವಾ ಸಾಮಾಜಿಕ ಚಳವಳಿಗಳಲ್ಲಿ ಅವರು ಎಂದೂ ಸಾಹಸಗಳಿಗೆ ಪ್ರೋತ್ಸಾಹಿಸಲಿಲ್ಲ. ಅವರು ಗೌರಿ ಲಂಕೇಶ್ ಟ್ರಸ್ಟ್‌ನ  ಕೆಲಸಗಳಲ್ಲಿ ನಿರತರಾಗಿ, ಪಕ್ಷದ ಅಥವಾ ಯಾವುದೇ ಪದಾಧಿಕಾರಿಯಾಗಲು ಹಿಂಜರಿಕೆ ತೋರಿದರೂ ಕರ್ನಾಟಕದ ಎಲ್ಲಾ ಸಂಗಾತಿಗಳು ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಬೇಕೆಂದು ಸೂಚಿಸಿದ್ದು ನನಗೆ ಸ್ವಲ್ಪ ಆಶ್ಚರ್ಯ ಉಂಟುಮಾಡಿತ್ತು.

ನರಸಿಂಹಮೂರ್ತಿ ಅವರ ಬಗ್ಗೆ ನನಗೆ ಗೊತ್ತಿರುವುದನ್ನು ಪರಿಗಣಿಸಿದಲ್ಲಿ, ಅವರ ಮೇಲೆ ಪೊಲೀಸರು ಹೊರೆಸಿರುವ ಆರೋಪಗಳನ್ನು ಕೇಳಿ ನನಗೆ ಆಘಾತವಾಯಿತು. ಅವರು ಉಲ್ಲೇಖಿಸಿರುವ ಪ್ರಕರಣಗಳು ತುಂಬಾ ಹಳೆಯ ಪ್ರಕರಣಗಳಾಗಿದ್ದರಿಂದ, ಅವುಗಳ ಬಗ್ಗೆ ನನಗೆ ತಿಳುವಳಿಕೆ ಇದೆಯೆಂದೋ ಅಥವಾ ಅವರು ಮುಗ್ಧ ಎಂದು ನಾನು ತೀರ್ಪು ನೀಡುವುದು ಸರಿಯಾಗುವುದಿಲ್ಲ. ಆದರೆ, ಕೆಲವು ತುಂಬಾ ಸರಳವಾದ ಮತ್ತು ಸ್ಪಷ್ಟವಾದ ಪ್ರಶ್ನೆಗಳಿವೆ. ಈ ಸರಳ ಪ್ರಶ್ನೆಗಳಿಗೆ ಪೊಲೀಸರು ಉತ್ತರಿಸುವಲ್ಲಿ ವಿಫಲವಾಗಿದ್ದಾರೆ. ಪೊಲೀಸರು ಹೇಳುವಂತೆ, ಅವರು ಕಳೆದ ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದೇ ಆದರೆ ಸಾರ್ವಜನಿಕ ಜೀವನದಲ್ಲಿ ಇಷ್ಟೊಂದು ಸಕ್ರಿಯರಾಗಿ, ಎಲ್ಲೆಡೆಯೂ ಕಾಣಿಸಿಕೊಳ್ಳುತ್ತಿದ್ದು ಹೇಗೆ? ಒಂದು ವೇಳೆ ಅವರು ಅಪರಾಧ ಪ್ರಕರಣದಲ್ಲಿ ವಾಂಟೆಡ್ ಆಗಿದ್ದರು ಎಂದರೆ, ತಾವು ಹುಡುಕುತ್ತಿರುವ ವ್ಯಕ್ತಿ ನರಸಿಂಹಮೂರ್ತಿ ಎಂದು ಸಂಶಯವಿದ್ದರೆ ಪೊಲೀಸರಿಗೆ ಅವರನ್ನು ಈ ಮೊದಲೇ ಏಕೆ ಬಂಧಿಸಲು ಆಗಲಿಲ್ಲ? ಪೊಲೀಸರು ಅವರ ವಿಚಾರಣೆ ಮಾಡಿ, ತಮ್ಮ ತನಿಖೆಯನ್ನು ಪೂರ್ಣಗೊಳಿಸಿದ ನಂತರ ಅವರನ್ನು ಬಂಧಿಸಬಹುದಿತ್ತಲ್ಲವೇ? ಪೊಲೀಸರು ಹೇಳುವ ಅಪರಾಧೀ ಕೃತ್ಯಗಳು ನಡೆದ ಸಮಯದಲ್ಲಿ ನರಸಿಂಹಮೂರ್ತಿ ಅವರು ತಮ್ಮ ಬಿಸಿನೆಸ್‍ನಲ್ಲಿ ತೊಡಗಿದ್ದರು ಎನ್ನುವ ನರಸಿಂಹಮೂರ್ತಿ ಅವರ ಆವೃತ್ತಿಯನ್ನು ಪೊಲೀಸರು ಏಕೆ ಪರಿಶೀಲಿಸಲು ಹೋಗಲಿಲ್ಲ? ನರಸಿಂಹಮೂರ್ತಿ ಅವರು ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಕ್ಕೆ ಇಚ್ಛೆ ವ್ಯಕ್ತಪಡಿಸಿದಾಗ ಹಾಗೂ ಅವರು ಇಷ್ಟೊಂದು ಸುಲಭವಾಗಿ ಹಾಗೂ ಸಾರ್ವಜನಿಕವಾಗಿ ಲಭ್ಯವಾಗಿರುವಾಗ ಅವರನ್ನು ಬಂಧಿಸುವ ಅವಸರ ಏಕೆ?

ನನಗೆ ಕಾಣಿಸಿದಂತೆ, ಈ ಪ್ರಶ್ನೆಗಳಿಗೆ ಯಾವುದೇ ಉತ್ತರಗಳಿಲ್ಲ. ಹಾಗಾಗಿ, ನರಸಿಂಹಮೂರ್ತಿ ಅವರನ್ನು ಬಂಧಿಸುವ ಈ ಹಠಾತ್ ಕ್ರಮವನ್ನು ಐಸ್‍ಬರ್ಗ್‍ನ ಒಂದು ತುದಿ ಎಂತಲೂ, ಮುಂದಿನ ದಿನಗಳಲ್ಲಿ ಕಾಣಬಹುದಾದ ದೊಡ್ಡ ಕ್ರಮಗಳ ಒಂದು ಸಂಕೇತವೆಂದು ಪರಿಗಣಿಸುವುದನ್ನು ಬಿಟ್ಟರೆ ನಮಗೆ ಬೇರೆ ಆಯ್ಕೆಗಳಿಲ್ಲ. ಕರ್ನಾಟಕದ ಅತ್ಯಂತ ಜೀವಂತಿಕೆಯುಳ್ಳ ನಾಗರಿಕ ಸಮಾಜವು ಇದಕ್ಕೆ ಅಗತ್ಯವಿರುವ ತ್ವರಿತತೆ ಮತ್ತು ದೃಢತೆಯಿಂದ ಪ್ರತಿಕ್ರಿಯೆ ನೀಡುತ್ತಿರುವುದು ಅತ್ಯಂತ ಹೃದಯಸ್ಪರ್ಶಿಯಾಗಿದೆ. ನರಸಿಂಹಮೂರ್ತಿ ಅವರ ಮೇಲೆ ಹೊರೆಸಲಾದ ಆರೋಪಗಳನ್ನು ಹಿಂತೆಗೆದುಕೊಂಡು, ಅವರ ಬಿಡುಗಡೆಯಾಗಿ ನಮ್ಮೊಂದಿಗೆ ಹೋರಾಟದಲ್ಲಿ ಜೊತೆಗೂಡುವರೆಂದು ನಾನು ಆಶಿಸುತ್ತಿರುವಾಗಲೇ, ನಾವೆಲ್ಲರೂ ಒಂದು ದೀರ್ಘ ಪ್ರಜಾತಾಂತ್ರಿಕ ಸಮರಕ್ಕಾಗಿ ತಯಾರಿ ಮಾಡಿಕೊಳ್ಳಬೇಕು ಎನ್ನುವ ಸಂದೇಶ ಸ್ಪಷ್ಟವಾಗಿ ತೇಲಿಬರುತ್ತಿದೆ.

ಅನುವಾದ: ರಾಜಶೇಖರ್‌ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...