Homeಕರ್ನಾಟಕದೀರ್ಘವಾದ ಸಮರಕ್ಕೆ ತಯಾರಿ ಮಾಡಿಕೊಳ್ಳಬೇಕೆಂಬ ಸೂಚನೆ ಇದು : ಯೋಗೇಂದ್ರ ಯಾದವ್

ದೀರ್ಘವಾದ ಸಮರಕ್ಕೆ ತಯಾರಿ ಮಾಡಿಕೊಳ್ಳಬೇಕೆಂಬ ಸೂಚನೆ ಇದು : ಯೋಗೇಂದ್ರ ಯಾದವ್

- Advertisement -
- Advertisement -

| ಯೋಗೇಂದ್ರ ಯಾದವ್ |

ಲೇಖಕರು ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು

ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಿ ಹತ್ತಿಕ್ಕುವ ಪ್ರಯತ್ನದಲ್ಲಿ ಕರ್ನಾಟಕವು ಉತ್ತರ ಭಾರತವನ್ನು ಅನುಸರಿಸಲು ಶುರು ಮಾಡಿದೆಯೇ? ಇದು ಇಂತಹ ಕ್ರಮಗಳ ಸರಣಿಯಲ್ಲಿ ಮೊದಲನೆಯದೆಂದು ಮುಂದೆ ಗೊತ್ತಾಗುವುದೇ? ಇಲ್ಲಿ ನಮ್ಮ ಕಣ್ಣಿಗೆ ಕಾಣುತ್ತಿರುವುದಷ್ಟೇ ಇದೆಯೋ, ಅಥವಾ ಇದರಾಳದಲ್ಲಿ ಮತ್ತೇನಾದರೂ ಹುದುಗಿದೆಯೋ? ದೊಡ್ಡಿಪಾಳ್ಯ ನರಸಿಂಹಮೂರ್ತಿ ಯವರನ್ನು ಮೊದಲು ವಶಕ್ಕೆ ತೆಗೆದುಕೊಂಡು ನಂತರ ಬಂಧಿಸಿದ ಸುದ್ದಿ ಕೇಳಿದ ತಕ್ಷಣ ತನ್ನ ತಲೆಯೊಳಗೆ ಉದ್ಭವಿಸಿದ ಪ್ರಶ್ನೆಗಳಿವು.

ನರಸಿಂಹಮೂರ್ತಿ ಯನ್ನು ನಾನು ಸುಮಾರು 7 ವರ್ಷಗಳಿಂದ ಬಲ್ಲೆ. ನನಗನಿಸುವಂತೆ ಆಮ್ ಆದ್ಮಿ ಪಾರ್ಟಿಯನ್ನು ರಚಿಸುವ ಆರಂಭಿಕ ಹಂತದಲ್ಲಿ ಕರ್ನಾಟಕದಲ್ಲಿಯ ರಾಜಕೀಯ ಕಾರ್ಯಕರ್ತರನ್ನು ಭೇಟಿ ಮಾಡುತ್ತಿರುವಾಗ ನಾನು ಅವರನ್ನು ಮೊದಲ ಬಾರಿ ಭೇಟಿಯಾದೆ. ಕರ್ನಾಟಕದ ಚಳವಳಿಗಳ ಮತ್ತು ಕಾರ್ಯಕರ್ತರ ಆಳ ಹಾಗೂ ಅಲ್ಲಿಯ ತಿಳುವಳಿಕೆಯ ಶ್ರೀಮಂತಿಕೆಯನ್ನು ನಾನು ಯಾವಾಗಲೂ ಮೆಚ್ಚಿದ್ದೇನೆ.

ರೈತ ಚಳವಳಿಗಳಿಂದ ದಲಿತ ಚಳವಳಿಗಳವರೆಗೆ, ಉದಾರವಾದಿ ಪ್ರಗತಿಪರ ಮಾನವ ಹಕ್ಕುಗಳ ಗುಂಪುಗಳಿಂದ ಎಡಪಂಥೀಯ ಗುಂಪುಗಳವರೆಗೆ, ಹೀಗೆ ಇಡೀ ರಾಜಕೀಯ ಮತ್ತು ಸೈದ್ಧಾಂತಿಕ ಉದ್ದಗಲಗಳ ಬಗ್ಗೆ ತಿಳುವಳಿಕೆ ಹೊಂದಿರುವ ಮತ್ತು ಅವುಗಳನ್ನು ಉದಾರವಾಗಿ ಒಪ್ಪಿಕೊಳ್ಳುವ ವಿರಳ ವ್ಯಕ್ತಿಗಳಲ್ಲಿ ನರಸಿಂಹಮೂರ್ತಿ ಒಬ್ಬರಾಗಿದ್ದರು. ನನಗೆ ಅವರ ಬಗ್ಗೆ ಅಚ್ಚರಿಗೊಳಿಸಿದ್ದೇನೆಂದರೆ, ಯಾವುದೇ ವೈಯಕ್ತಿಕ ಒಲವು, ಪೂರ್ವಗ್ರಹಿಕೆಗಳು ಕಿಂಚಿತ್ತೂ ಕಾಣಿಸಿಕೊಳ್ಳದ ಅವರ ರಾಜಕೀಯ ತಿಳುವಳಿಕೆಯ ಪ್ರಬುದ್ಧತೆ.

ಅವರು ಎಡಪಂಥದಿಂದ ಬಂದವರಾಗಿದ್ದರು. ಆದರೆ ಪ್ರಜಾತಾಂತ್ರಿಕ ಪ್ರಕ್ರಿಯೆಗಳಲ್ಲಿ ಅವರ ಬದ್ಧತೆ ಇತರರಿಗಿಂತ ಹೆಚ್ಚು ಕಾಣುತ್ತಿತ್ತು. ಹಿಂಸೆಯನ್ನಂತೂ ಮರೆತೇಬಿಡಿ, ರಾಜಕೀಯ ಅಥವಾ ಸಾಮಾಜಿಕ ಚಳವಳಿಗಳಲ್ಲಿ ಅವರು ಎಂದೂ ಸಾಹಸಗಳಿಗೆ ಪ್ರೋತ್ಸಾಹಿಸಲಿಲ್ಲ. ಅವರು ಗೌರಿ ಲಂಕೇಶ್ ಟ್ರಸ್ಟ್‌ನ  ಕೆಲಸಗಳಲ್ಲಿ ನಿರತರಾಗಿ, ಪಕ್ಷದ ಅಥವಾ ಯಾವುದೇ ಪದಾಧಿಕಾರಿಯಾಗಲು ಹಿಂಜರಿಕೆ ತೋರಿದರೂ ಕರ್ನಾಟಕದ ಎಲ್ಲಾ ಸಂಗಾತಿಗಳು ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಬೇಕೆಂದು ಸೂಚಿಸಿದ್ದು ನನಗೆ ಸ್ವಲ್ಪ ಆಶ್ಚರ್ಯ ಉಂಟುಮಾಡಿತ್ತು.

ನರಸಿಂಹಮೂರ್ತಿ ಅವರ ಬಗ್ಗೆ ನನಗೆ ಗೊತ್ತಿರುವುದನ್ನು ಪರಿಗಣಿಸಿದಲ್ಲಿ, ಅವರ ಮೇಲೆ ಪೊಲೀಸರು ಹೊರೆಸಿರುವ ಆರೋಪಗಳನ್ನು ಕೇಳಿ ನನಗೆ ಆಘಾತವಾಯಿತು. ಅವರು ಉಲ್ಲೇಖಿಸಿರುವ ಪ್ರಕರಣಗಳು ತುಂಬಾ ಹಳೆಯ ಪ್ರಕರಣಗಳಾಗಿದ್ದರಿಂದ, ಅವುಗಳ ಬಗ್ಗೆ ನನಗೆ ತಿಳುವಳಿಕೆ ಇದೆಯೆಂದೋ ಅಥವಾ ಅವರು ಮುಗ್ಧ ಎಂದು ನಾನು ತೀರ್ಪು ನೀಡುವುದು ಸರಿಯಾಗುವುದಿಲ್ಲ. ಆದರೆ, ಕೆಲವು ತುಂಬಾ ಸರಳವಾದ ಮತ್ತು ಸ್ಪಷ್ಟವಾದ ಪ್ರಶ್ನೆಗಳಿವೆ. ಈ ಸರಳ ಪ್ರಶ್ನೆಗಳಿಗೆ ಪೊಲೀಸರು ಉತ್ತರಿಸುವಲ್ಲಿ ವಿಫಲವಾಗಿದ್ದಾರೆ. ಪೊಲೀಸರು ಹೇಳುವಂತೆ, ಅವರು ಕಳೆದ ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದೇ ಆದರೆ ಸಾರ್ವಜನಿಕ ಜೀವನದಲ್ಲಿ ಇಷ್ಟೊಂದು ಸಕ್ರಿಯರಾಗಿ, ಎಲ್ಲೆಡೆಯೂ ಕಾಣಿಸಿಕೊಳ್ಳುತ್ತಿದ್ದು ಹೇಗೆ? ಒಂದು ವೇಳೆ ಅವರು ಅಪರಾಧ ಪ್ರಕರಣದಲ್ಲಿ ವಾಂಟೆಡ್ ಆಗಿದ್ದರು ಎಂದರೆ, ತಾವು ಹುಡುಕುತ್ತಿರುವ ವ್ಯಕ್ತಿ ನರಸಿಂಹಮೂರ್ತಿ ಎಂದು ಸಂಶಯವಿದ್ದರೆ ಪೊಲೀಸರಿಗೆ ಅವರನ್ನು ಈ ಮೊದಲೇ ಏಕೆ ಬಂಧಿಸಲು ಆಗಲಿಲ್ಲ? ಪೊಲೀಸರು ಅವರ ವಿಚಾರಣೆ ಮಾಡಿ, ತಮ್ಮ ತನಿಖೆಯನ್ನು ಪೂರ್ಣಗೊಳಿಸಿದ ನಂತರ ಅವರನ್ನು ಬಂಧಿಸಬಹುದಿತ್ತಲ್ಲವೇ? ಪೊಲೀಸರು ಹೇಳುವ ಅಪರಾಧೀ ಕೃತ್ಯಗಳು ನಡೆದ ಸಮಯದಲ್ಲಿ ನರಸಿಂಹಮೂರ್ತಿ ಅವರು ತಮ್ಮ ಬಿಸಿನೆಸ್‍ನಲ್ಲಿ ತೊಡಗಿದ್ದರು ಎನ್ನುವ ನರಸಿಂಹಮೂರ್ತಿ ಅವರ ಆವೃತ್ತಿಯನ್ನು ಪೊಲೀಸರು ಏಕೆ ಪರಿಶೀಲಿಸಲು ಹೋಗಲಿಲ್ಲ? ನರಸಿಂಹಮೂರ್ತಿ ಅವರು ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಕ್ಕೆ ಇಚ್ಛೆ ವ್ಯಕ್ತಪಡಿಸಿದಾಗ ಹಾಗೂ ಅವರು ಇಷ್ಟೊಂದು ಸುಲಭವಾಗಿ ಹಾಗೂ ಸಾರ್ವಜನಿಕವಾಗಿ ಲಭ್ಯವಾಗಿರುವಾಗ ಅವರನ್ನು ಬಂಧಿಸುವ ಅವಸರ ಏಕೆ?

ನನಗೆ ಕಾಣಿಸಿದಂತೆ, ಈ ಪ್ರಶ್ನೆಗಳಿಗೆ ಯಾವುದೇ ಉತ್ತರಗಳಿಲ್ಲ. ಹಾಗಾಗಿ, ನರಸಿಂಹಮೂರ್ತಿ ಅವರನ್ನು ಬಂಧಿಸುವ ಈ ಹಠಾತ್ ಕ್ರಮವನ್ನು ಐಸ್‍ಬರ್ಗ್‍ನ ಒಂದು ತುದಿ ಎಂತಲೂ, ಮುಂದಿನ ದಿನಗಳಲ್ಲಿ ಕಾಣಬಹುದಾದ ದೊಡ್ಡ ಕ್ರಮಗಳ ಒಂದು ಸಂಕೇತವೆಂದು ಪರಿಗಣಿಸುವುದನ್ನು ಬಿಟ್ಟರೆ ನಮಗೆ ಬೇರೆ ಆಯ್ಕೆಗಳಿಲ್ಲ. ಕರ್ನಾಟಕದ ಅತ್ಯಂತ ಜೀವಂತಿಕೆಯುಳ್ಳ ನಾಗರಿಕ ಸಮಾಜವು ಇದಕ್ಕೆ ಅಗತ್ಯವಿರುವ ತ್ವರಿತತೆ ಮತ್ತು ದೃಢತೆಯಿಂದ ಪ್ರತಿಕ್ರಿಯೆ ನೀಡುತ್ತಿರುವುದು ಅತ್ಯಂತ ಹೃದಯಸ್ಪರ್ಶಿಯಾಗಿದೆ. ನರಸಿಂಹಮೂರ್ತಿ ಅವರ ಮೇಲೆ ಹೊರೆಸಲಾದ ಆರೋಪಗಳನ್ನು ಹಿಂತೆಗೆದುಕೊಂಡು, ಅವರ ಬಿಡುಗಡೆಯಾಗಿ ನಮ್ಮೊಂದಿಗೆ ಹೋರಾಟದಲ್ಲಿ ಜೊತೆಗೂಡುವರೆಂದು ನಾನು ಆಶಿಸುತ್ತಿರುವಾಗಲೇ, ನಾವೆಲ್ಲರೂ ಒಂದು ದೀರ್ಘ ಪ್ರಜಾತಾಂತ್ರಿಕ ಸಮರಕ್ಕಾಗಿ ತಯಾರಿ ಮಾಡಿಕೊಳ್ಳಬೇಕು ಎನ್ನುವ ಸಂದೇಶ ಸ್ಪಷ್ಟವಾಗಿ ತೇಲಿಬರುತ್ತಿದೆ.

ಅನುವಾದ: ರಾಜಶೇಖರ್‌ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...