Homeಮುಖಪುಟ'ಐ ಲವ್ ಮುಹಮ್ಮದ್' ವಿವಾದ: ದೇಶದಾದ್ಯಂತ 3000ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

‘ಐ ಲವ್ ಮುಹಮ್ಮದ್’ ವಿವಾದ: ದೇಶದಾದ್ಯಂತ 3000ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

- Advertisement -
- Advertisement -

ದೇಶದಾದ್ಯಂತ ಇದುವರೆಗೆ ‘ಐ ಲವ್ ಮುಹಮ್ಮದ್’ ಬ್ಯಾನರ್ ವಿವಾದಕ್ಕೆ ಸಂಬಂಧಿಸಿದ 28 ಎಫ್‌ಐಆರ್‌ಗಳಲ್ಲಿ 3000ಕ್ಕೂ ಅಧಿಕ ಮುಸ್ಲಿಮರ ವಿರುದ್ದ ಪ್ರಕರಣದ ದಾಖಲಾಗಿದೆ. ಸುಮಾರು 120 ಜನರನ್ನು ಬಂಧಿಸಲಾಗಿದೆ

ಈದ್ ಮೀಲಾದ್ ಪ್ರಯುಕ್ತ ಸೆಪ್ಟೆಂಬರ್ 4ರಂದು ಕಾನ್ಪುರದಲ್ಲಿ ನಡೆದ ಮೆರವಣಿಗೆಯಲ್ಲಿ ಮುಸ್ಲಿಮರ ಗುಂಪೊಂದು “ಐ ಲವ್ ಮುಹಮ್ಮದ್” ಬ್ಯಾನರ್ ಹಿಡಿದಾಗಿನಿಂದ ವಿವಾದ ಉಂಟಾಗಿದೆ. ಹಿಂದುತ್ವ ಗುಂಪುಗಳು ಮೆರವಣಿಗೆಯಲ್ಲಿ ಹೊಸ ಸಂಪ್ರದಾಯವನ್ನು ಪರಿಚಯಿಸಲಾಗುತ್ತಿದೆ ಎಂದು ಆರೋಪಿಸಿ ಬ್ಯಾನರ್‌ಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಆ ಬಳಿಕ ಪೊಲೀಸರು ಯುವಕರನ್ನು ಬಂಧಿಸಿದ್ದರು.

ಧಾರ್ಮಿಕ ಮೆರವಣಿಗೆಗಳಲ್ಲಿ ಹೊಸ ಪದ್ಧತಿಗಳನ್ನು ಪರಿಚಯಿಸುವುದನ್ನು ಸರ್ಕಾರಿ ನಿಯಮಗಳು ನಿಷೇಧಿಸುತ್ತದೆ ಎಂದು ಕಾನ್ಪುರ ಉಪ ಪೊಲೀಸ್ ಆಯುಕ್ತ ದಿನೇಶ್ ತ್ರಿಪಾಠಿ ಹೇಳಿದ್ದರು.

ಮೆರವಣಿಗೆಯ ಸಮಯದಲ್ಲಿ ಹೊಸ ಪದ್ಧತಿಯನ್ನು ಪರಿಚಯಿಸಿದ ಮತ್ತು ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಮಾಡಿದ ಆರೋಪದ ಮೇಲೆ ಸೆಪ್ಟೆಂಬರ್ 9ರಂದು ಪೊಲೀಸರು 24 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಪೈಕಿ 15 ಮಂದಿಯನ್ನು ಗುರುತಿಸಲಾಗಿರಲಿಲ್ಲ.

ಆದರೆ, ಮತ್ತೊಂದೆಡೆ ಬ್ಯಾನರ್ ಹಾಕಿದ್ದಕ್ಕಾಗಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಕಾನ್ಪುರ ಪೊಲೀಸರು ಹೇಳಿದ್ದರು. ಹೊಸ ಸ್ಥಳದಲ್ಲಿ ಬ್ಯಾನರ್ ಹಾಕಿದ್ದಕ್ಕಾಗಿ ಮತ್ತು ಇನ್ನೊಂದು ಗುಂಪಿನ ಪೋಸ್ಟರ್‌ಗಳನ್ನು ಹರಿದು ಹಾಕಿದ್ದಕ್ಕಾಗಿ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದ್ದರು.

ಆದಾಗ್ಯೂ, ಪೊಲೀಸರ ಕ್ರಮ ಖಂಡಿಸಿ ಉತ್ತರ ಪ್ರದೇಶದ ಇತರ ಜಿಲ್ಲೆಗಳು ಮತ್ತು ಇತರ ರಾಜ್ಯಗಳಲ್ಲಿ “ಐ ಲವ್ ಮುಹಮ್ಮದ್” ಬ್ಯಾನರ್‌ಗಳೊಂದಿಗೆ ಪ್ರತಿಭಟನೆ, ಮೆರವಣಿಗೆಗಳು ನಡೆದಿವೆ. ಕೆಲವು ಪ್ರತಿಭಟನೆಗಳಲ್ಲಿ ಪೊಲೀಸರೊಂದಿಗೆ ಘರ್ಷಣೆ ಉಂಟಾದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪ್ರಕರಣಗಳು ದಾಖಲಾಗಿವೆ.

ಪ್ರತಿಭಟನೆಗಳಿಗೆ ಸಂಬಂಧಿಸಿದ ಹೆಚ್ಚಿನ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದು, 2,700ಕ್ಕೂ ಹೆಚ್ಚು ಜನರ ಮೇಲೆ 20 ಎಫ್‌ಐಆರ್‌ಗಳು ದಾಖಲಿಸಲಾಗಿದೆ.

ಇವುಗಳಲ್ಲಿ ಉನ್ನಾವ್ (ಎಂಟು ಪ್ರಕರಣಗಳು, 85 ಆರೋಪಿಗಳು, ಐವರ ಬಂಧನ), ಬಾಗ್‌ಪತ್ (150 ಆರೋಪಿಗಳು, ಇಬ್ಬರ ಬಂಧನ), ಕೈಸರ್‌ಗಂಜ್ (355 ಆರೋಪಿಗಳು), ಶಹಜಹಾನ್‌ಪುರ (200 ಆರೋಪಿಗಳು) ಮತ್ತು ಕೌಶಾಂಬಿ (24 ಆರೋಪಿಗಳು, ಮೂವರು ಬಂಧನ) ಸೇರಿವೆ.

ಉತ್ತರಾಖಂಡದ ಕಾಶಿಪುರದಲ್ಲಿಯೂ ಒಂದು ಪ್ರಕರಣ ದಾಖಲಾಗಿದೆ. ಇದರಲ್ಲಿ ಪೊಲೀಸರು 401 ಆರೋಪಿಗಳನ್ನು ಹೆಸರಿಸಿ, ಏಳು ಜನರನ್ನು ಬಂಧಿಸಿದ್ದಾರೆ.

ಗುಜರಾತ್‌ನ ಗೋಧ್ರಾದಲ್ಲಿ (88 ಜನರ ಮೇಲೆ ಆರೋಪ, 17 ಜನರ ಬಂಧನ) ಮತ್ತು ಬರೋಡಾದಲ್ಲಿ (ಒಬ್ಬ ವ್ಯಕ್ತಿಯ ಮೇಲೆ ಆರೋಪ ಮತ್ತು ಬಂಧನ) ಪ್ರಕರಣ ದಾಖಲಾಗಿದೆ. ಮುಂಬೈನ ಬೈಕುಲ್ಲಾ ಪ್ರದೇಶದಲ್ಲಿ, ಒಬ್ಬ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಉತ್ತರ ಪ್ರದೇಶದ ಬರೇಲಿಯಲ್ಲಿ ಶುಕ್ರವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು ಮತ್ತು ಪೊಲೀಸರು 1700ರಷ್ಟು ಜನರ ಮೇಲೆ ಪ್ರಕರಣದ ದಾಖಲಿಸಿ, 50 ಜನರನ್ನು ಬಂಧಿಸಿದ್ದಾರೆ.

ಹಾಗಾಗಿ, ಇತ್ತೀಚಿನ ವರದಿಗಳ ಪ್ರಕಾರ, ದೇಶದಾದ್ಯಂತ ಸುಮಾರು 28 ಎಫ್ಐಆರ್‌ಗಳಲ್ಲಿ 3000ಕ್ಕೂ ಅಧಿಕ ಮುಸ್ಲಿಮರ ಮೇಲೆ ಪ್ರಕರಣ ದಾಖಲಿಸಲಾಗಿದೆ.

“ಪ್ರವಾದಿಯವರ ಮೇಲಿನ ಪ್ರೀತಿ ಮತ್ತು ಗೌರವವನ್ನು ವ್ಯಕ್ತಪಡಿಸುವ ಜನರನ್ನು ಗುರಿಯಾಗಿಸಿಕೊಳ್ಳುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಶಾಂತಿಯುತ ಧಾರ್ಮಿಕ ಅಭಿವ್ಯಕ್ತಿಯನ್ನು ಎಂದಿಗೂ ಅಪರಾಧೀಕರಿಸಬಾರದು” ಎಂದು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ನ ಕಾರ್ಯದರ್ಶಿ ನದೀಮ್ ಖಾನ್ ಹೇಳಿದ್ದಾರೆ.

ವಾಂಗ್‌ಚುಕ್ ಬಂಧನವು ಲಡಾಖ್‌ನ ದೃಢಸಂಕಲ್ಪವನ್ನು ತಡೆಯುವುದಿಲ್ಲ: ಕಾಂಗ್ರೆಸ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...