Homeಮುಖಪುಟ'ಐ ಲವ್ ಮುಹಮ್ಮದ್' ವಿವಾದ: ದೇಶದಾದ್ಯಂತ 3000ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

‘ಐ ಲವ್ ಮುಹಮ್ಮದ್’ ವಿವಾದ: ದೇಶದಾದ್ಯಂತ 3000ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

- Advertisement -
- Advertisement -

ದೇಶದಾದ್ಯಂತ ಇದುವರೆಗೆ ‘ಐ ಲವ್ ಮುಹಮ್ಮದ್’ ಬ್ಯಾನರ್ ವಿವಾದಕ್ಕೆ ಸಂಬಂಧಿಸಿದ 28 ಎಫ್‌ಐಆರ್‌ಗಳಲ್ಲಿ 3000ಕ್ಕೂ ಅಧಿಕ ಮುಸ್ಲಿಮರ ವಿರುದ್ದ ಪ್ರಕರಣದ ದಾಖಲಾಗಿದೆ. ಸುಮಾರು 120 ಜನರನ್ನು ಬಂಧಿಸಲಾಗಿದೆ

ಈದ್ ಮೀಲಾದ್ ಪ್ರಯುಕ್ತ ಸೆಪ್ಟೆಂಬರ್ 4ರಂದು ಕಾನ್ಪುರದಲ್ಲಿ ನಡೆದ ಮೆರವಣಿಗೆಯಲ್ಲಿ ಮುಸ್ಲಿಮರ ಗುಂಪೊಂದು “ಐ ಲವ್ ಮುಹಮ್ಮದ್” ಬ್ಯಾನರ್ ಹಿಡಿದಾಗಿನಿಂದ ವಿವಾದ ಉಂಟಾಗಿದೆ. ಹಿಂದುತ್ವ ಗುಂಪುಗಳು ಮೆರವಣಿಗೆಯಲ್ಲಿ ಹೊಸ ಸಂಪ್ರದಾಯವನ್ನು ಪರಿಚಯಿಸಲಾಗುತ್ತಿದೆ ಎಂದು ಆರೋಪಿಸಿ ಬ್ಯಾನರ್‌ಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಆ ಬಳಿಕ ಪೊಲೀಸರು ಯುವಕರನ್ನು ಬಂಧಿಸಿದ್ದರು.

ಧಾರ್ಮಿಕ ಮೆರವಣಿಗೆಗಳಲ್ಲಿ ಹೊಸ ಪದ್ಧತಿಗಳನ್ನು ಪರಿಚಯಿಸುವುದನ್ನು ಸರ್ಕಾರಿ ನಿಯಮಗಳು ನಿಷೇಧಿಸುತ್ತದೆ ಎಂದು ಕಾನ್ಪುರ ಉಪ ಪೊಲೀಸ್ ಆಯುಕ್ತ ದಿನೇಶ್ ತ್ರಿಪಾಠಿ ಹೇಳಿದ್ದರು.

ಮೆರವಣಿಗೆಯ ಸಮಯದಲ್ಲಿ ಹೊಸ ಪದ್ಧತಿಯನ್ನು ಪರಿಚಯಿಸಿದ ಮತ್ತು ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಮಾಡಿದ ಆರೋಪದ ಮೇಲೆ ಸೆಪ್ಟೆಂಬರ್ 9ರಂದು ಪೊಲೀಸರು 24 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಪೈಕಿ 15 ಮಂದಿಯನ್ನು ಗುರುತಿಸಲಾಗಿರಲಿಲ್ಲ.

ಆದರೆ, ಮತ್ತೊಂದೆಡೆ ಬ್ಯಾನರ್ ಹಾಕಿದ್ದಕ್ಕಾಗಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಕಾನ್ಪುರ ಪೊಲೀಸರು ಹೇಳಿದ್ದರು. ಹೊಸ ಸ್ಥಳದಲ್ಲಿ ಬ್ಯಾನರ್ ಹಾಕಿದ್ದಕ್ಕಾಗಿ ಮತ್ತು ಇನ್ನೊಂದು ಗುಂಪಿನ ಪೋಸ್ಟರ್‌ಗಳನ್ನು ಹರಿದು ಹಾಕಿದ್ದಕ್ಕಾಗಿ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದ್ದರು.

ಆದಾಗ್ಯೂ, ಪೊಲೀಸರ ಕ್ರಮ ಖಂಡಿಸಿ ಉತ್ತರ ಪ್ರದೇಶದ ಇತರ ಜಿಲ್ಲೆಗಳು ಮತ್ತು ಇತರ ರಾಜ್ಯಗಳಲ್ಲಿ “ಐ ಲವ್ ಮುಹಮ್ಮದ್” ಬ್ಯಾನರ್‌ಗಳೊಂದಿಗೆ ಪ್ರತಿಭಟನೆ, ಮೆರವಣಿಗೆಗಳು ನಡೆದಿವೆ. ಕೆಲವು ಪ್ರತಿಭಟನೆಗಳಲ್ಲಿ ಪೊಲೀಸರೊಂದಿಗೆ ಘರ್ಷಣೆ ಉಂಟಾದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪ್ರಕರಣಗಳು ದಾಖಲಾಗಿವೆ.

ಪ್ರತಿಭಟನೆಗಳಿಗೆ ಸಂಬಂಧಿಸಿದ ಹೆಚ್ಚಿನ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದು, 2,700ಕ್ಕೂ ಹೆಚ್ಚು ಜನರ ಮೇಲೆ 20 ಎಫ್‌ಐಆರ್‌ಗಳು ದಾಖಲಿಸಲಾಗಿದೆ.

ಇವುಗಳಲ್ಲಿ ಉನ್ನಾವ್ (ಎಂಟು ಪ್ರಕರಣಗಳು, 85 ಆರೋಪಿಗಳು, ಐವರ ಬಂಧನ), ಬಾಗ್‌ಪತ್ (150 ಆರೋಪಿಗಳು, ಇಬ್ಬರ ಬಂಧನ), ಕೈಸರ್‌ಗಂಜ್ (355 ಆರೋಪಿಗಳು), ಶಹಜಹಾನ್‌ಪುರ (200 ಆರೋಪಿಗಳು) ಮತ್ತು ಕೌಶಾಂಬಿ (24 ಆರೋಪಿಗಳು, ಮೂವರು ಬಂಧನ) ಸೇರಿವೆ.

ಉತ್ತರಾಖಂಡದ ಕಾಶಿಪುರದಲ್ಲಿಯೂ ಒಂದು ಪ್ರಕರಣ ದಾಖಲಾಗಿದೆ. ಇದರಲ್ಲಿ ಪೊಲೀಸರು 401 ಆರೋಪಿಗಳನ್ನು ಹೆಸರಿಸಿ, ಏಳು ಜನರನ್ನು ಬಂಧಿಸಿದ್ದಾರೆ.

ಗುಜರಾತ್‌ನ ಗೋಧ್ರಾದಲ್ಲಿ (88 ಜನರ ಮೇಲೆ ಆರೋಪ, 17 ಜನರ ಬಂಧನ) ಮತ್ತು ಬರೋಡಾದಲ್ಲಿ (ಒಬ್ಬ ವ್ಯಕ್ತಿಯ ಮೇಲೆ ಆರೋಪ ಮತ್ತು ಬಂಧನ) ಪ್ರಕರಣ ದಾಖಲಾಗಿದೆ. ಮುಂಬೈನ ಬೈಕುಲ್ಲಾ ಪ್ರದೇಶದಲ್ಲಿ, ಒಬ್ಬ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಉತ್ತರ ಪ್ರದೇಶದ ಬರೇಲಿಯಲ್ಲಿ ಶುಕ್ರವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು ಮತ್ತು ಪೊಲೀಸರು 1700ರಷ್ಟು ಜನರ ಮೇಲೆ ಪ್ರಕರಣದ ದಾಖಲಿಸಿ, 50 ಜನರನ್ನು ಬಂಧಿಸಿದ್ದಾರೆ.

ಹಾಗಾಗಿ, ಇತ್ತೀಚಿನ ವರದಿಗಳ ಪ್ರಕಾರ, ದೇಶದಾದ್ಯಂತ ಸುಮಾರು 28 ಎಫ್ಐಆರ್‌ಗಳಲ್ಲಿ 3000ಕ್ಕೂ ಅಧಿಕ ಮುಸ್ಲಿಮರ ಮೇಲೆ ಪ್ರಕರಣ ದಾಖಲಿಸಲಾಗಿದೆ.

“ಪ್ರವಾದಿಯವರ ಮೇಲಿನ ಪ್ರೀತಿ ಮತ್ತು ಗೌರವವನ್ನು ವ್ಯಕ್ತಪಡಿಸುವ ಜನರನ್ನು ಗುರಿಯಾಗಿಸಿಕೊಳ್ಳುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಶಾಂತಿಯುತ ಧಾರ್ಮಿಕ ಅಭಿವ್ಯಕ್ತಿಯನ್ನು ಎಂದಿಗೂ ಅಪರಾಧೀಕರಿಸಬಾರದು” ಎಂದು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ನ ಕಾರ್ಯದರ್ಶಿ ನದೀಮ್ ಖಾನ್ ಹೇಳಿದ್ದಾರೆ.

ವಾಂಗ್‌ಚುಕ್ ಬಂಧನವು ಲಡಾಖ್‌ನ ದೃಢಸಂಕಲ್ಪವನ್ನು ತಡೆಯುವುದಿಲ್ಲ: ಕಾಂಗ್ರೆಸ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...