Homeಮುಖಪುಟಹತ್ಯೆಯ ಕೆಲವೇ ಗಂಟೆಗಳ ಮೊದಲು ನಾನು ಹಮಾಸ್ ಮುಖ್ಯಸ್ಥರನ್ನು ಭೇಟಿಯಾಗಿದ್ದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹತ್ಯೆಯ ಕೆಲವೇ ಗಂಟೆಗಳ ಮೊದಲು ನಾನು ಹಮಾಸ್ ಮುಖ್ಯಸ್ಥರನ್ನು ಭೇಟಿಯಾಗಿದ್ದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

- Advertisement -
- Advertisement -

ಹತ್ಯೆಯಾಗುವ ಕೆಲವೇ ಗಂಟೆಗಳ ಮೊದಲು ಟೆಹ್ರಾನ್‌ನಲ್ಲಿ ಹಮಾಸ್‌ನ ಮಾಜಿ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಅವರನ್ನು ಭೇಟಿಯಾಗಿದ್ದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಬಹಿರಂಗಪಡಿಸಿದ್ದಾರೆ.

ನವದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಲು ಇರಾನ್ ರಾಜಧಾನಿಯಲ್ಲಿದ್ದಾಗ ನಡೆದ ಹನಿಯಾ ಹತ್ಯೆ ವಿಷಯವನ್ನು ನೆನಪಿಸಿಕೊಂಡರು.

“ಹೊಸದಾಗಿ ಆಯ್ಕೆಯಾದ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರ ಸೂಚನೆಯ ಮೇರೆಗೆ ಭಾರತವನ್ನು ಪ್ರತಿನಿಧಿಸಲು ನಾನು ಇರಾನ್‌ಗೆ ಹೋಗಿದ್ದೆ” ಎಂದು ಗಡ್ಕರಿ ಹೇಳಿದರು.

ಸಮಾರಂಭಕ್ಕೂ ಮೊದಲು, ವಿವಿಧ ರಾಷ್ಟ್ರಗಳ ಮುಖ್ಯಸ್ಥರು ಮತ್ತು ಗಣ್ಯರು ಟೆಹ್ರಾನ್‌ನ ಪಂಚತಾರಾ ಹೋಟೆಲ್‌ನಲ್ಲಿ ಅನೌಪಚಾರಿಕವಾಗಿ ಚಹಾ ಸೇವಿಸಲು ಸೇರಿದ್ದರು ಎಂದು ಅವರು ವಿವರಿಸಿದರು.

“ರಾಷ್ಟ್ರದ ಮುಖ್ಯಸ್ಥರಲ್ಲದ ಒಬ್ಬ ವ್ಯಕ್ತಿ, ಹಮಾಸ್ ನಾಯಕ ಇಸ್ಮಾಯಿಲ್ ಹನಿಯಾ ಇದ್ದರು. ನಾನು ಅವರನ್ನು ಭೇಟಿಯಾದೆ. ಅಧ್ಯಕ್ಷರು ಮತ್ತು ಮುಖ್ಯ ನ್ಯಾಯಾಧೀಶರೊಂದಿಗೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಅವರು ಹೋಗುವುದನ್ನು ನಾನು ನೋಡಿದೆ” ಎಂದು ಸಚಿವರು ನೆನಪಿಸಿಕೊಂಡರು.

ಸಮಾರಂಭದ ನಂತರ ತಮ್ಮ ಹೋಟೆಲ್‌ಗೆ ಹಿಂತಿರುಗಿದೆವು. ಆದರೆ, ಬೆಳಗಿನ ಜಾವ ಬಂದ ಬ್ರೇಕಿಂಗ್ ನ್ಯೂಸ್‌ನಿಂದ ಎಚ್ಚರವಾಯಿತು. ಬೆಳಿಗ್ಗೆ 4 ಗಂಟೆ ಸುಮಾರಿಗೆ, ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಅಧಿಕಾರಿ ನನ್ನ ಬಳಿಗೆ ಬಂದು ತಕ್ಷಣ ಹೊರಡುವಂತೆ ಹೇಳಿದರು. ಏನಾಯಿತು ಎಂದು ನಾನು ಕೇಳಿದೆ, ಅವರು ಹಮಾಸ್ ಮುಖ್ಯಸ್ಥನನ್ನು ಕೊಲ್ಲಲಾಗಿದೆ ಎಂದು ಹೇಳಿದರು. ನಾನು ಆಘಾತಕ್ಕೊಳಗಾಗಿದ್ದೆ, ಹೇಗೆ ಸಂಭವಿಸಿತು ಎಂದು ಕೇಳಿದೆ. ನನಗೆ ತಿಳಿದಿಲ್ಲ ಎಂದು ಅವರು ಹೇಳಿದರು ಎಂದು ಗಡ್ಕರಿ ಹೇಳಿದರು.

ಜುಲೈ 31, 2024 ರಂದು ಬೆಳಗಿನ ಜಾವ 1:15 ರ ಸುಮಾರಿಗೆ ಇಸ್ಮಾಯಿಲ್ ಹನಿಯೇ ಅವರು ತಂಗಿದ್ದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನಡೆಸುತ್ತಿದ್ದ ಅತ್ಯಂತ ಸುರಕ್ಷಿತ ಮಿಲಿಟರಿ ಆವರಣದಲ್ಲಿ ಕೊಲ್ಲಲ್ಪಟ್ಟರು. ಅವರ ಅಂಗರಕ್ಷಕ ಕೂಡ ದಾಳಿಯಲ್ಲಿ ಕೊಲ್ಲಲ್ಪಟ್ಟರು.

ಘಟನೆಯ ಬಗ್ಗೆ ಯೋಚಿಸುತ್ತಾ, ಹತ್ಯೆಯ ನಿರ್ದಿಷ್ಟ ವಿವರಗಳು ಇನ್ನೂ ಅನಿಶ್ಚಿತತೆಯಿಂದ ಸುತ್ತುವರೆದಿವೆ ಎಂದು ಗಡ್ಕರಿ ಹೇಳಿದರು. “ಅವರು ಮೊಬೈಲ್ ಫೋನ್ ಬಳಸಿದ್ದರಿಂದ ಕೊಲ್ಲಲ್ಪಟ್ಟರು ಎಂದು ಕೆಲವರು ಹೇಳುತ್ತಾರೆ. ಇತರರು ಅದು ಬೇರೆ ರೀತಿಯಲ್ಲಿ ಸಂಭವಿಸಿದೆ ಎಂದು ಹೇಳುತ್ತಾರೆ” ಎಂದು ಅವರು ಹೇಳಿದರು.

ರಾಷ್ಟ್ರೀಯ ಭದ್ರತೆಯನ್ನು ಚರ್ಚಿಸಲು ಈ ಘಟನೆಯನ್ನು ಬಳಸಿಕೊಂಡು, ಒಂದು ದೇಶ ಬಲಿಷ್ಠವಾಗಿದ್ದರೆ, ಬೇರೆ ಯಾವುದೇ ರಾಷ್ಟ್ರವು ಅದನ್ನು ಮುಟ್ಟಲು ಸಾಧ್ಯವಿಲ್ಲ ಎಂದು ಗಡ್ಕರಿ ಹೇಳಿದರು. ಇಸ್ರೇಲ್ ಅನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಅವರು, ಇಸ್ರೇಲ್ ತನ್ನ ತಾಂತ್ರಿಕ ಪರಿಣತಿ ಮತ್ತು ಮಿಲಿಟರಿ ಸಾಮರ್ಥ್ಯಗಳ ಮೂಲಕ ಜಾಗತಿಕ ಪ್ರಭಾವವನ್ನು ಗಳಿಸಿರುವ ಒಂದು ಸಣ್ಣ ರಾಷ್ಟ್ರವಾಗಿದೆ ಎಂದು ಹೊಗಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...