Homeಮುಖಪುಟಗರ್ಭಾಶಯವಿಲ್ಲದ ಯಾವ ಸಲಿಂಗ ಕಾಮಿಗೆ ಋತುಚಕ್ರವಿದೆ ಹೇಳಿ? ಸ್ಮೃತಿ ಇರಾನಿ ಹೇಳಿಕೆಗೆ ಪ್ರತಿಪಕ್ಷಗಳ ಟೀಕೆ

ಗರ್ಭಾಶಯವಿಲ್ಲದ ಯಾವ ಸಲಿಂಗ ಕಾಮಿಗೆ ಋತುಚಕ್ರವಿದೆ ಹೇಳಿ? ಸ್ಮೃತಿ ಇರಾನಿ ಹೇಳಿಕೆಗೆ ಪ್ರತಿಪಕ್ಷಗಳ ಟೀಕೆ

- Advertisement -
- Advertisement -

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಸಂಸತ್ತಿನಲ್ಲಿ ಮಹಿಳೆಯರಿಗೆ  ಮುಟ್ಟಿನ ರಜೆಗೆ ಪಾವತಿ ಪರಿಕಲ್ಪನೆಯನ್ನು ವಿರೋಧಿಸಿದ ನಂತರ ಪ್ರತಿಪಕ್ಷ I.N.D.I.A ಬಣದಿಂದ ಟೀಕೆಗೆ ಗುರಿಯಾಗಿದ್ದಾರೆ.

ಆರ್‌ಜೆಡಿ ಸಂಸದ ಮನೋಜ್ ಝಾ ಅವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವೆ, ಸ್ಮೃತಿ ಇರಾನಿ, ಗರ್ಭಾಶಯವಿಲ್ಲದ ಯಾವ ಸಲಿಂಗ ಕಾಮಿಗೆ ಋತುಚಕ್ರವಿದೆ ಹೇಳಿ ಎಂದು ಪ್ರಶ್ನಿಸಿದ್ದರು. ಕೇಂದ್ರ ಸಚಿವರ ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಸ್ಮೃತಿ ಹೇಳಿಕೆಯನ್ನು ವಿರೋಧಿಸಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ ಮತ್ತು ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಇರಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಾವು ಎಲ್‌ಜಿಬಿಟಿಕ್ಯೂಐಎ ಪ್ಲಸ್ ಸಮುದಾಯದ ಬಗ್ಗೆ ಅರಿವಿಲ್ಲದ ಸಚಿವರನ್ನು ಹೊಂದಿದ್ದೇವೆ ಎಂಬುದು ನಾಚಿಕೆಗೇಡಿನ ಸಂಗತಿಯಾಗಿದೆ. ಅವರಲ್ಲಿ ಅನೇಕರು ಋತುಮತಿಯಾಗುತ್ತಾರೆ. ಅನೇಕರ ಜೀವಂತ ಅನುಭವವಾಗಿರುವ ಈ ಸಮಸ್ಯೆಯ ಬಗ್ಗೆ ಅವರ ಅಹಂಕಾರದ ಪ್ರತಿಕ್ರಿಯೆಯು ಆಘಾತಕಾರಿ ಮತ್ತು ಸಂವೇದನಾಶೀಲವಲ್ಲ ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಪ್ರಿಯಾಂಕಾ ಚತುರ್ವೇದಿ ಅವರು ಹೇಳಿದ್ದಾರೆ. ಈ ವೇಳೆ ಅವರು ಸ್ಮೃತಿ ಇರಾನಿ ಅವರ ಸಂದರ್ಶನದ ವಿಡಿಯೋವನ್ನು ಕೂಡ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸುಪ್ರಿಯಾ ಶ್ರೀನೇಟ್, ಈ ವಿಚಾರದಲ್ಲಿ ಸ್ಮೃತಿ ಇರಾನಿ ಅವರ ನಿರಾಸಕ್ತಿ, ದುರಹಂಕಾರ ಮತ್ತು ಅಜ್ಞಾನವು ಭಯಾನಕವಾಗಿದೆ. ಎಲ್‌ಜಿಬಿಟಿಕ್ಯೂಐಎ+ ಕೇವಲ ಸಲಿಂಗಕಾಮಿ ಪುರುಷರಲ್ಲ, ಸಮುದಾಯವು ಪುರುಷರು ಮತ್ತು ಹಲವಾರು ಮುಟ್ಟಿನ ಮಹಿಳೆಯರನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಇದರಲ್ಲಿ ಲೆಸ್ಬಿಯನ್, ಗೇ, ಬೈ ಸೆಕ್ಸುವಲ್, ಟ್ರಾನ್ಸ್‌ಜಂಡರ್‌, ಕ್ವೀರ್‌, ಇಂಟರ್‌ಸೆಕ್ಸ್‌ ಮತ್ತು ಇತರರು ಸೇರಿದ್ದಾರೆ ಎಂದು ಪೋಸ್ಟ್‌ನಲ್ಲಿ ಪಟ್ಟಿಯನ್ನು ಉಲ್ಲೇಖಿಸಿದ್ದಾರೆ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಮುಟ್ಟು ಮತ್ತು ಋತುಚಕ್ರವು ಅಂಗವೈಕಲ್ಯವಲ್ಲ; ಇದು ಮಹಿಳೆಯರ ಜೀವನ ಪಯಣದಲ್ಲಿ ಸಹಜ,  ಪ್ರತಿ ತಿಂಗಳು ವೇತನ ಸಹಿತ ರಜೆ ನೀಡುವುದರ ಮೂಲಕ ಉದ್ಯೋಗದಾತರಿಗೆ ಆಕೆಯ ಮುಟ್ಟಿನ ಕುರಿತು ಯಾಕೆ ತಿಳಿದಿರಬೇಕು? ಸರ್ಕಾರವು ಮಹಿಳಾ ಉದ್ಯೋಗಿಗಳಿಗೆ ಅವರ ಮುಟ್ಟಿನ ಸಮಯದಲ್ಲಿ ಕಡ್ಡಾಯ ವೇತನ ಸಹಿತ ರಜೆ ನೀತಿಯನ್ನು ಅಳವಡಿಸಿಕೊಂಡರೆ ಇದೆಲ್ಲಾ ಉಂಟಾಗುತ್ತದೆ ಎಂದು ಹೇಳಿದ್ದರು.

ಮುಟ್ಟು ಅಂಗವೈಕಲ್ಯವಲ್ಲ ಮತ್ತು ಕಡ್ಡಾಯವಾಗಿ ವೇತನ ಸಹಿತ ರಜೆಗಾಗಿ ಸರ್ಕಾರವು ಯಾವುದೇ ನೀತಿಯನ್ನು ತರುತ್ತಿಲ್ಲ ಎಂದು ಸಂಸತ್ತಿನಲ್ಲಿ ಹೇಳಿಕೆ ನೀಡಿದ ನಂತರ ವಿವಾದ ಸ್ವರೂಪ ಪಡೆದುಕೊಂಡಿತ್ತು.  ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶದಲ್ಲಿ ಅವರು ಮನೋಜ್ ಝಾ ಅವರ ಪ್ರಶ್ನೆಗೆ ಉತ್ತರಿಸಿ ಸ್ಮೃತಿ ಇರಾನಿ, ಗರ್ಭಾಶಯವಿಲ್ಲದ ಯಾವ ಸಲಿಂಗ ಕಾಮಿಗೆ ಋತುಚಕ್ರವಿದೆ ಹೇಳಿ ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ರಾಜಸ್ಥಾನ: ಪ್ರಯಾಣಿಕರ ಮೇಲೆ ಗುಂಪು ಹಲ್ಲೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...