Homeಮುಖಪುಟಗರ್ಭಾಶಯವಿಲ್ಲದ ಯಾವ ಸಲಿಂಗ ಕಾಮಿಗೆ ಋತುಚಕ್ರವಿದೆ ಹೇಳಿ? ಸ್ಮೃತಿ ಇರಾನಿ ಹೇಳಿಕೆಗೆ ಪ್ರತಿಪಕ್ಷಗಳ ಟೀಕೆ

ಗರ್ಭಾಶಯವಿಲ್ಲದ ಯಾವ ಸಲಿಂಗ ಕಾಮಿಗೆ ಋತುಚಕ್ರವಿದೆ ಹೇಳಿ? ಸ್ಮೃತಿ ಇರಾನಿ ಹೇಳಿಕೆಗೆ ಪ್ರತಿಪಕ್ಷಗಳ ಟೀಕೆ

- Advertisement -
- Advertisement -

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಸಂಸತ್ತಿನಲ್ಲಿ ಮಹಿಳೆಯರಿಗೆ  ಮುಟ್ಟಿನ ರಜೆಗೆ ಪಾವತಿ ಪರಿಕಲ್ಪನೆಯನ್ನು ವಿರೋಧಿಸಿದ ನಂತರ ಪ್ರತಿಪಕ್ಷ I.N.D.I.A ಬಣದಿಂದ ಟೀಕೆಗೆ ಗುರಿಯಾಗಿದ್ದಾರೆ.

ಆರ್‌ಜೆಡಿ ಸಂಸದ ಮನೋಜ್ ಝಾ ಅವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವೆ, ಸ್ಮೃತಿ ಇರಾನಿ, ಗರ್ಭಾಶಯವಿಲ್ಲದ ಯಾವ ಸಲಿಂಗ ಕಾಮಿಗೆ ಋತುಚಕ್ರವಿದೆ ಹೇಳಿ ಎಂದು ಪ್ರಶ್ನಿಸಿದ್ದರು. ಕೇಂದ್ರ ಸಚಿವರ ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಸ್ಮೃತಿ ಹೇಳಿಕೆಯನ್ನು ವಿರೋಧಿಸಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ ಮತ್ತು ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಇರಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಾವು ಎಲ್‌ಜಿಬಿಟಿಕ್ಯೂಐಎ ಪ್ಲಸ್ ಸಮುದಾಯದ ಬಗ್ಗೆ ಅರಿವಿಲ್ಲದ ಸಚಿವರನ್ನು ಹೊಂದಿದ್ದೇವೆ ಎಂಬುದು ನಾಚಿಕೆಗೇಡಿನ ಸಂಗತಿಯಾಗಿದೆ. ಅವರಲ್ಲಿ ಅನೇಕರು ಋತುಮತಿಯಾಗುತ್ತಾರೆ. ಅನೇಕರ ಜೀವಂತ ಅನುಭವವಾಗಿರುವ ಈ ಸಮಸ್ಯೆಯ ಬಗ್ಗೆ ಅವರ ಅಹಂಕಾರದ ಪ್ರತಿಕ್ರಿಯೆಯು ಆಘಾತಕಾರಿ ಮತ್ತು ಸಂವೇದನಾಶೀಲವಲ್ಲ ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಪ್ರಿಯಾಂಕಾ ಚತುರ್ವೇದಿ ಅವರು ಹೇಳಿದ್ದಾರೆ. ಈ ವೇಳೆ ಅವರು ಸ್ಮೃತಿ ಇರಾನಿ ಅವರ ಸಂದರ್ಶನದ ವಿಡಿಯೋವನ್ನು ಕೂಡ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸುಪ್ರಿಯಾ ಶ್ರೀನೇಟ್, ಈ ವಿಚಾರದಲ್ಲಿ ಸ್ಮೃತಿ ಇರಾನಿ ಅವರ ನಿರಾಸಕ್ತಿ, ದುರಹಂಕಾರ ಮತ್ತು ಅಜ್ಞಾನವು ಭಯಾನಕವಾಗಿದೆ. ಎಲ್‌ಜಿಬಿಟಿಕ್ಯೂಐಎ+ ಕೇವಲ ಸಲಿಂಗಕಾಮಿ ಪುರುಷರಲ್ಲ, ಸಮುದಾಯವು ಪುರುಷರು ಮತ್ತು ಹಲವಾರು ಮುಟ್ಟಿನ ಮಹಿಳೆಯರನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಇದರಲ್ಲಿ ಲೆಸ್ಬಿಯನ್, ಗೇ, ಬೈ ಸೆಕ್ಸುವಲ್, ಟ್ರಾನ್ಸ್‌ಜಂಡರ್‌, ಕ್ವೀರ್‌, ಇಂಟರ್‌ಸೆಕ್ಸ್‌ ಮತ್ತು ಇತರರು ಸೇರಿದ್ದಾರೆ ಎಂದು ಪೋಸ್ಟ್‌ನಲ್ಲಿ ಪಟ್ಟಿಯನ್ನು ಉಲ್ಲೇಖಿಸಿದ್ದಾರೆ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಮುಟ್ಟು ಮತ್ತು ಋತುಚಕ್ರವು ಅಂಗವೈಕಲ್ಯವಲ್ಲ; ಇದು ಮಹಿಳೆಯರ ಜೀವನ ಪಯಣದಲ್ಲಿ ಸಹಜ,  ಪ್ರತಿ ತಿಂಗಳು ವೇತನ ಸಹಿತ ರಜೆ ನೀಡುವುದರ ಮೂಲಕ ಉದ್ಯೋಗದಾತರಿಗೆ ಆಕೆಯ ಮುಟ್ಟಿನ ಕುರಿತು ಯಾಕೆ ತಿಳಿದಿರಬೇಕು? ಸರ್ಕಾರವು ಮಹಿಳಾ ಉದ್ಯೋಗಿಗಳಿಗೆ ಅವರ ಮುಟ್ಟಿನ ಸಮಯದಲ್ಲಿ ಕಡ್ಡಾಯ ವೇತನ ಸಹಿತ ರಜೆ ನೀತಿಯನ್ನು ಅಳವಡಿಸಿಕೊಂಡರೆ ಇದೆಲ್ಲಾ ಉಂಟಾಗುತ್ತದೆ ಎಂದು ಹೇಳಿದ್ದರು.

ಮುಟ್ಟು ಅಂಗವೈಕಲ್ಯವಲ್ಲ ಮತ್ತು ಕಡ್ಡಾಯವಾಗಿ ವೇತನ ಸಹಿತ ರಜೆಗಾಗಿ ಸರ್ಕಾರವು ಯಾವುದೇ ನೀತಿಯನ್ನು ತರುತ್ತಿಲ್ಲ ಎಂದು ಸಂಸತ್ತಿನಲ್ಲಿ ಹೇಳಿಕೆ ನೀಡಿದ ನಂತರ ವಿವಾದ ಸ್ವರೂಪ ಪಡೆದುಕೊಂಡಿತ್ತು.  ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶದಲ್ಲಿ ಅವರು ಮನೋಜ್ ಝಾ ಅವರ ಪ್ರಶ್ನೆಗೆ ಉತ್ತರಿಸಿ ಸ್ಮೃತಿ ಇರಾನಿ, ಗರ್ಭಾಶಯವಿಲ್ಲದ ಯಾವ ಸಲಿಂಗ ಕಾಮಿಗೆ ಋತುಚಕ್ರವಿದೆ ಹೇಳಿ ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ರಾಜಸ್ಥಾನ: ಪ್ರಯಾಣಿಕರ ಮೇಲೆ ಗುಂಪು ಹಲ್ಲೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...