Homeಮುಖಪುಟಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

ಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

- Advertisement -
- Advertisement -

ಭಾರತದ ಖ್ಯಾತ ಸ್ಟ್ಯಾಂಡಪ್‌ ಕಾಮೆಡಿಯನ್‌ಗಳಾದ ಕುನಾಲ್ ಕಮ್ರ ಮತ್ತು ಮುನಾವರ್ ಫಾರೂಕಿಯವರ ಹಲವಾರು ಶೋಗಳು ಬಲಪಂಥೀಯ ಹಿಂದುತ್ವ ಕಾರ್ಯಕರ್ತರ ಗಲಾಟೆಯಿಂದ ರದ್ದಾಗಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ “ಕುನಾಲ್, ಮುನಾವರ್ ನಾನು ನಿಮಗಾಗಿ ಭೋಪಾಲ್‌ನಲ್ಲಿ ಒಂದು ಶೋ ಏರ್ಪಡಿಸುತ್ತೇನೆ. ಅದರ ಎಲ್ಲಾ ಜವಾಬ್ದಾರಿ ನನ್ನದಾಗಿರುತ್ತದೆ. ಆದರೆ ನಿಮ್ಮ ಕಾಮಿಡಿಯ ವಿಷಯ ಕೇವಲ ದಿಗ್ವಿಜಯ್ ಸಿಂಗ್ ಆಗಿರಬೇಕು ಎಂಬುದು ನನ್ನ ಒಂದೇ ಷರತ್ತು” ಎಂದು ತಿಳಿಸಿದ್ದಾರೆ.

“ಈ ಪ್ರದರ್ಶನಕ್ಕೆ ಸಂಘಿಗಳು ಆಕ್ಷೇಪಿಸಬಾರದು!! ಭಯಪಡಬೇಡ ಬನ್ನಿ!! ನಿಮ್ಮ ಅನುಕೂಲಕ್ಕೆ ತಕ್ಕಂತೆ ದಿನಾಂಕ ಮತ್ತು ಸಮಯವನ್ನು ನೀಡಿ. ನಿಮ್ಮ ಎಲ್ಲಾ ಷರತ್ತುಗಳನ್ನು ಸ್ವೀಕರಿಸಲಾಗಿದೆ” ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದು, ಕುನಾಲ್ ಕ್ರಮರವರ ಬಿಬಿಸಿಯೊಂದಿಗಿನ ಸಂದರ್ಶನದ ವಿಡಿಯೋ ತುಣುಕು ಹಂಚಿಕೊಂಡಿದ್ದಾರೆ.

ಗುಜರಾತ್‌ನ ಸ್ಟ್ಯಾಂಡಪ್‌ ಕಾಮೆಡಿಯನ್‌ ಆದ ಮುನಾವರ್ ಫಾರೂಕಿಯವರ 12 ಶೋಗಳನ್ನು ಬಲಪಂಥೀಯರ ಬೆದರಿಕೆಯ ಕಾರಣ ನೀಡಿ ಪೊಲೀಸರು ರದ್ದುಪಡಿಸಿದ್ದರು. ಅದೇ ರೀತಿ ಡಿಸೆಂಬರ್ 1ರಿಂದ 19ರ ನಡುವೆ ಬೆಂಗಳೂರಿನ ಜೆಪಿ ನಗರದ ಸ್ಥಳವೊಂದರಲ್ಲಿ ‘ಕುನಾಲ್ ಕಮ್ರಾ ಲೈವ್’ ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಕಮ್ರಾ ಪ್ರದರ್ಶಿಸಲು ಸಜ್ಜಾಗಿದ್ದರು. ಆದರೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪ್ರತಿಭಟನೆ ನಡೆದ ನಂತರ ಅವರ ಶೋಗಳನ್ನು ಸಹ ರದ್ದುಪಡಿಸಲಾಗಿತ್ತು.

ಈ ಕುರಿತು ಬಿಬಿಸಿ ಸಂದರ್ಶನದಲ್ಲಿ ಮಾತನಾಡಿದ್ದ ಕುನಾಲ್ “ಬೆಂಗಳೂರು ನನಗೆ ಬಹುಮುಖ್ಯ ನಗರ. ನನ್ನ ವೈರಲ್ ವಿಡಿಯೋಗಳು ಬೆಂಗಳೂರಿನಲ್ಲಿ ಪ್ರದರ್ಶಿತವಾಗಿದ್ದವು. ಇದು ಲಿಬರಲ್‌ಗಳಿರುವ ನಗರವಾಗಿತ್ತು. ಆದರೆ ಮೊದಲ ಬಾರಿಗೆ ಇಲ್ಲಿ ನನ್ನ ಶೋ ರದ್ದುಗೊಂಡಿದೆ. ಯಾರ ಬಳಿ ಅಧಿಕಾರವಿರುತ್ತದೊ ಅವರಿಗೆ ನಗುವುದು ಸಹ ಇಷ್ಟವಾಗುವುದಿಲ್ಲ. ಅವರು ಎಷ್ಟು ಪ್ರದರ್ಶನ ರದ್ದುಗೊಳಿಸುತ್ತಾರೋ ನೋಡುತ್ತೇನೆ. ನಾನು ಹೆದರುವುದಿಲ್ಲ, ಶೋ ಮಾಡಿಯೇ ಮಾಡುತ್ತೇನೆ. ನೀವೆಷ್ಟು ರದ್ದುಗೊಳಿಸುತ್ತಿರಿ ನೋಡೋಬಿಡೋಣ” ಎಂದಿದ್ದರು.

ನನ್ನ ಶೋ ರದ್ದಾದ ವಿಷಯ ಕೇಳಿ ನಗುಬಂತು. ಏಕೆಂದರೆ 40-50 ಜನ ಕೂತು ಟಿಕೆಟ್ ಖರೀದಿಸಿ ಕಾಮಿಡಿ ಶೋ ನೋಡುತ್ತಾರೆ. ಆದರೆ ಶೋ ನೋಡಲು ಇಷ್ಟಪಡದವರು ಶೋ ನಡೆಯಬಾರದೆಂದು ಧಮಕಿ ಹಾಕುತ್ತಾರೆ. ಟಿಕೆಟ್ ಖರೀದಿಸಿ ಶೋ ನೋಡುವವರಿಗೆ, ಕಲಾವಿದರಿಗೆ ಸರ್ಕಾರ ರಕ್ಷಣೆ ನೀಡದೆ ನೋಡದವರ ಧಮಕಿಗೆ ಹೆದರುತ್ತದೆ ಎಂದರೆ ನಗದೇ ಇರಲು ಸಾಧ್ಯವೇ? ಎಂದು ಕಮ್ರ ಹೇಳಿದ್ದಾರೆ.

ಒಂದು ಕಡೆ ಪ್ರಧಾನಿಗಳು ಹೇಳುತ್ತಾರೆ, ದೇಶ ಬಹಳ ಗಂಭೀರವಾಗಿದೆ. ಹ್ಯೂಮರ್ ಎಂಬುದು ಕಾಣೆಯಾಗುತ್ತಿದೆ. ಜನ ನಗುತ್ತಿಲ್ಲ ಎಂದು. ಇನ್ನೊಂದು ಕಡೆ ಜನರನ್ನು ನಗಿಸಲು ಶೋ ಮಾಡಿದರೆ ಪ್ರಧಾನಿಗಳ ಅನುಯಾಯಿಗಳೇ ಅದನ್ನು ರದ್ದುಗೊಳಿಸುತ್ತಾರೆ. ಇವರ ಚುನಾವಣಾ ರ್ಯಾಲಿಗಳಲ್ಲಿನ ಭಾಷಣ ಕೇಳಲು ಜನರಿಗೆ ದುಡ್ಡು ಕೊಟ್ಟು ಕರೆತರುತ್ತಾರೆ. ಆದರೆ ದುಡ್ಡು ಕೊಟ್ಟು ನಮ್ಮ ಕಾಮಿಡಿ ಕೇಳಲು ಬರುವವರಿಗೆ ಬೆದರಿಕೆಯೊಡ್ಡಿ ಶೋ ಕ್ಯಾನ್ಸಲ್ ಮಾಡುತ್ತಾರೆ. ಇದಕ್ಕೆ ಏನನ್ನಬೇಕು ಎಂದು ಕುನಾಲ್ ಪ್ರಶ್ನಿಸಿದ್ದಾರೆ.

ಹಾಗಾಗಿ ಇದಕ್ಕೆ ಪ್ರತಿಕ್ರಿಯಿಸಿರುವ ದಿಗ್ವಿಜಯ್ ಸಿಂಗ್ ತನ್ನ ಮೇಲೆ ಕಾಮಿಡಿ ಮಾಡಿ. ಆ ಶೋ ಏರ್ಪಡಿಸುತ್ತೇನೆ ಎಂದು ಆಹ್ವಾನಿಸಿದ್ದಾರೆ.


ಇದನ್ನೂ ಓದಿ; ಮುನವ್ವರ್ ಫಾರೂಕಿ ಮತ್ತು ಮಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...