Homeಮುಖಪುಟಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

ಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

- Advertisement -
- Advertisement -

ಭಾರತದ ಖ್ಯಾತ ಸ್ಟ್ಯಾಂಡಪ್‌ ಕಾಮೆಡಿಯನ್‌ಗಳಾದ ಕುನಾಲ್ ಕಮ್ರ ಮತ್ತು ಮುನಾವರ್ ಫಾರೂಕಿಯವರ ಹಲವಾರು ಶೋಗಳು ಬಲಪಂಥೀಯ ಹಿಂದುತ್ವ ಕಾರ್ಯಕರ್ತರ ಗಲಾಟೆಯಿಂದ ರದ್ದಾಗಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ “ಕುನಾಲ್, ಮುನಾವರ್ ನಾನು ನಿಮಗಾಗಿ ಭೋಪಾಲ್‌ನಲ್ಲಿ ಒಂದು ಶೋ ಏರ್ಪಡಿಸುತ್ತೇನೆ. ಅದರ ಎಲ್ಲಾ ಜವಾಬ್ದಾರಿ ನನ್ನದಾಗಿರುತ್ತದೆ. ಆದರೆ ನಿಮ್ಮ ಕಾಮಿಡಿಯ ವಿಷಯ ಕೇವಲ ದಿಗ್ವಿಜಯ್ ಸಿಂಗ್ ಆಗಿರಬೇಕು ಎಂಬುದು ನನ್ನ ಒಂದೇ ಷರತ್ತು” ಎಂದು ತಿಳಿಸಿದ್ದಾರೆ.

“ಈ ಪ್ರದರ್ಶನಕ್ಕೆ ಸಂಘಿಗಳು ಆಕ್ಷೇಪಿಸಬಾರದು!! ಭಯಪಡಬೇಡ ಬನ್ನಿ!! ನಿಮ್ಮ ಅನುಕೂಲಕ್ಕೆ ತಕ್ಕಂತೆ ದಿನಾಂಕ ಮತ್ತು ಸಮಯವನ್ನು ನೀಡಿ. ನಿಮ್ಮ ಎಲ್ಲಾ ಷರತ್ತುಗಳನ್ನು ಸ್ವೀಕರಿಸಲಾಗಿದೆ” ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದು, ಕುನಾಲ್ ಕ್ರಮರವರ ಬಿಬಿಸಿಯೊಂದಿಗಿನ ಸಂದರ್ಶನದ ವಿಡಿಯೋ ತುಣುಕು ಹಂಚಿಕೊಂಡಿದ್ದಾರೆ.

ಗುಜರಾತ್‌ನ ಸ್ಟ್ಯಾಂಡಪ್‌ ಕಾಮೆಡಿಯನ್‌ ಆದ ಮುನಾವರ್ ಫಾರೂಕಿಯವರ 12 ಶೋಗಳನ್ನು ಬಲಪಂಥೀಯರ ಬೆದರಿಕೆಯ ಕಾರಣ ನೀಡಿ ಪೊಲೀಸರು ರದ್ದುಪಡಿಸಿದ್ದರು. ಅದೇ ರೀತಿ ಡಿಸೆಂಬರ್ 1ರಿಂದ 19ರ ನಡುವೆ ಬೆಂಗಳೂರಿನ ಜೆಪಿ ನಗರದ ಸ್ಥಳವೊಂದರಲ್ಲಿ ‘ಕುನಾಲ್ ಕಮ್ರಾ ಲೈವ್’ ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಕಮ್ರಾ ಪ್ರದರ್ಶಿಸಲು ಸಜ್ಜಾಗಿದ್ದರು. ಆದರೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪ್ರತಿಭಟನೆ ನಡೆದ ನಂತರ ಅವರ ಶೋಗಳನ್ನು ಸಹ ರದ್ದುಪಡಿಸಲಾಗಿತ್ತು.

ಈ ಕುರಿತು ಬಿಬಿಸಿ ಸಂದರ್ಶನದಲ್ಲಿ ಮಾತನಾಡಿದ್ದ ಕುನಾಲ್ “ಬೆಂಗಳೂರು ನನಗೆ ಬಹುಮುಖ್ಯ ನಗರ. ನನ್ನ ವೈರಲ್ ವಿಡಿಯೋಗಳು ಬೆಂಗಳೂರಿನಲ್ಲಿ ಪ್ರದರ್ಶಿತವಾಗಿದ್ದವು. ಇದು ಲಿಬರಲ್‌ಗಳಿರುವ ನಗರವಾಗಿತ್ತು. ಆದರೆ ಮೊದಲ ಬಾರಿಗೆ ಇಲ್ಲಿ ನನ್ನ ಶೋ ರದ್ದುಗೊಂಡಿದೆ. ಯಾರ ಬಳಿ ಅಧಿಕಾರವಿರುತ್ತದೊ ಅವರಿಗೆ ನಗುವುದು ಸಹ ಇಷ್ಟವಾಗುವುದಿಲ್ಲ. ಅವರು ಎಷ್ಟು ಪ್ರದರ್ಶನ ರದ್ದುಗೊಳಿಸುತ್ತಾರೋ ನೋಡುತ್ತೇನೆ. ನಾನು ಹೆದರುವುದಿಲ್ಲ, ಶೋ ಮಾಡಿಯೇ ಮಾಡುತ್ತೇನೆ. ನೀವೆಷ್ಟು ರದ್ದುಗೊಳಿಸುತ್ತಿರಿ ನೋಡೋಬಿಡೋಣ” ಎಂದಿದ್ದರು.

ನನ್ನ ಶೋ ರದ್ದಾದ ವಿಷಯ ಕೇಳಿ ನಗುಬಂತು. ಏಕೆಂದರೆ 40-50 ಜನ ಕೂತು ಟಿಕೆಟ್ ಖರೀದಿಸಿ ಕಾಮಿಡಿ ಶೋ ನೋಡುತ್ತಾರೆ. ಆದರೆ ಶೋ ನೋಡಲು ಇಷ್ಟಪಡದವರು ಶೋ ನಡೆಯಬಾರದೆಂದು ಧಮಕಿ ಹಾಕುತ್ತಾರೆ. ಟಿಕೆಟ್ ಖರೀದಿಸಿ ಶೋ ನೋಡುವವರಿಗೆ, ಕಲಾವಿದರಿಗೆ ಸರ್ಕಾರ ರಕ್ಷಣೆ ನೀಡದೆ ನೋಡದವರ ಧಮಕಿಗೆ ಹೆದರುತ್ತದೆ ಎಂದರೆ ನಗದೇ ಇರಲು ಸಾಧ್ಯವೇ? ಎಂದು ಕಮ್ರ ಹೇಳಿದ್ದಾರೆ.

ಒಂದು ಕಡೆ ಪ್ರಧಾನಿಗಳು ಹೇಳುತ್ತಾರೆ, ದೇಶ ಬಹಳ ಗಂಭೀರವಾಗಿದೆ. ಹ್ಯೂಮರ್ ಎಂಬುದು ಕಾಣೆಯಾಗುತ್ತಿದೆ. ಜನ ನಗುತ್ತಿಲ್ಲ ಎಂದು. ಇನ್ನೊಂದು ಕಡೆ ಜನರನ್ನು ನಗಿಸಲು ಶೋ ಮಾಡಿದರೆ ಪ್ರಧಾನಿಗಳ ಅನುಯಾಯಿಗಳೇ ಅದನ್ನು ರದ್ದುಗೊಳಿಸುತ್ತಾರೆ. ಇವರ ಚುನಾವಣಾ ರ್ಯಾಲಿಗಳಲ್ಲಿನ ಭಾಷಣ ಕೇಳಲು ಜನರಿಗೆ ದುಡ್ಡು ಕೊಟ್ಟು ಕರೆತರುತ್ತಾರೆ. ಆದರೆ ದುಡ್ಡು ಕೊಟ್ಟು ನಮ್ಮ ಕಾಮಿಡಿ ಕೇಳಲು ಬರುವವರಿಗೆ ಬೆದರಿಕೆಯೊಡ್ಡಿ ಶೋ ಕ್ಯಾನ್ಸಲ್ ಮಾಡುತ್ತಾರೆ. ಇದಕ್ಕೆ ಏನನ್ನಬೇಕು ಎಂದು ಕುನಾಲ್ ಪ್ರಶ್ನಿಸಿದ್ದಾರೆ.

ಹಾಗಾಗಿ ಇದಕ್ಕೆ ಪ್ರತಿಕ್ರಿಯಿಸಿರುವ ದಿಗ್ವಿಜಯ್ ಸಿಂಗ್ ತನ್ನ ಮೇಲೆ ಕಾಮಿಡಿ ಮಾಡಿ. ಆ ಶೋ ಏರ್ಪಡಿಸುತ್ತೇನೆ ಎಂದು ಆಹ್ವಾನಿಸಿದ್ದಾರೆ.


ಇದನ್ನೂ ಓದಿ; ಮುನವ್ವರ್ ಫಾರೂಕಿ ಮತ್ತು ಮಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...