Homeಮುಖಪುಟಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

ಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

- Advertisement -
- Advertisement -

ಭಾರತದ ಖ್ಯಾತ ಸ್ಟ್ಯಾಂಡಪ್‌ ಕಾಮೆಡಿಯನ್‌ಗಳಾದ ಕುನಾಲ್ ಕಮ್ರ ಮತ್ತು ಮುನಾವರ್ ಫಾರೂಕಿಯವರ ಹಲವಾರು ಶೋಗಳು ಬಲಪಂಥೀಯ ಹಿಂದುತ್ವ ಕಾರ್ಯಕರ್ತರ ಗಲಾಟೆಯಿಂದ ರದ್ದಾಗಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ “ಕುನಾಲ್, ಮುನಾವರ್ ನಾನು ನಿಮಗಾಗಿ ಭೋಪಾಲ್‌ನಲ್ಲಿ ಒಂದು ಶೋ ಏರ್ಪಡಿಸುತ್ತೇನೆ. ಅದರ ಎಲ್ಲಾ ಜವಾಬ್ದಾರಿ ನನ್ನದಾಗಿರುತ್ತದೆ. ಆದರೆ ನಿಮ್ಮ ಕಾಮಿಡಿಯ ವಿಷಯ ಕೇವಲ ದಿಗ್ವಿಜಯ್ ಸಿಂಗ್ ಆಗಿರಬೇಕು ಎಂಬುದು ನನ್ನ ಒಂದೇ ಷರತ್ತು” ಎಂದು ತಿಳಿಸಿದ್ದಾರೆ.

“ಈ ಪ್ರದರ್ಶನಕ್ಕೆ ಸಂಘಿಗಳು ಆಕ್ಷೇಪಿಸಬಾರದು!! ಭಯಪಡಬೇಡ ಬನ್ನಿ!! ನಿಮ್ಮ ಅನುಕೂಲಕ್ಕೆ ತಕ್ಕಂತೆ ದಿನಾಂಕ ಮತ್ತು ಸಮಯವನ್ನು ನೀಡಿ. ನಿಮ್ಮ ಎಲ್ಲಾ ಷರತ್ತುಗಳನ್ನು ಸ್ವೀಕರಿಸಲಾಗಿದೆ” ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದು, ಕುನಾಲ್ ಕ್ರಮರವರ ಬಿಬಿಸಿಯೊಂದಿಗಿನ ಸಂದರ್ಶನದ ವಿಡಿಯೋ ತುಣುಕು ಹಂಚಿಕೊಂಡಿದ್ದಾರೆ.

ಗುಜರಾತ್‌ನ ಸ್ಟ್ಯಾಂಡಪ್‌ ಕಾಮೆಡಿಯನ್‌ ಆದ ಮುನಾವರ್ ಫಾರೂಕಿಯವರ 12 ಶೋಗಳನ್ನು ಬಲಪಂಥೀಯರ ಬೆದರಿಕೆಯ ಕಾರಣ ನೀಡಿ ಪೊಲೀಸರು ರದ್ದುಪಡಿಸಿದ್ದರು. ಅದೇ ರೀತಿ ಡಿಸೆಂಬರ್ 1ರಿಂದ 19ರ ನಡುವೆ ಬೆಂಗಳೂರಿನ ಜೆಪಿ ನಗರದ ಸ್ಥಳವೊಂದರಲ್ಲಿ ‘ಕುನಾಲ್ ಕಮ್ರಾ ಲೈವ್’ ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಕಮ್ರಾ ಪ್ರದರ್ಶಿಸಲು ಸಜ್ಜಾಗಿದ್ದರು. ಆದರೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪ್ರತಿಭಟನೆ ನಡೆದ ನಂತರ ಅವರ ಶೋಗಳನ್ನು ಸಹ ರದ್ದುಪಡಿಸಲಾಗಿತ್ತು.

ಈ ಕುರಿತು ಬಿಬಿಸಿ ಸಂದರ್ಶನದಲ್ಲಿ ಮಾತನಾಡಿದ್ದ ಕುನಾಲ್ “ಬೆಂಗಳೂರು ನನಗೆ ಬಹುಮುಖ್ಯ ನಗರ. ನನ್ನ ವೈರಲ್ ವಿಡಿಯೋಗಳು ಬೆಂಗಳೂರಿನಲ್ಲಿ ಪ್ರದರ್ಶಿತವಾಗಿದ್ದವು. ಇದು ಲಿಬರಲ್‌ಗಳಿರುವ ನಗರವಾಗಿತ್ತು. ಆದರೆ ಮೊದಲ ಬಾರಿಗೆ ಇಲ್ಲಿ ನನ್ನ ಶೋ ರದ್ದುಗೊಂಡಿದೆ. ಯಾರ ಬಳಿ ಅಧಿಕಾರವಿರುತ್ತದೊ ಅವರಿಗೆ ನಗುವುದು ಸಹ ಇಷ್ಟವಾಗುವುದಿಲ್ಲ. ಅವರು ಎಷ್ಟು ಪ್ರದರ್ಶನ ರದ್ದುಗೊಳಿಸುತ್ತಾರೋ ನೋಡುತ್ತೇನೆ. ನಾನು ಹೆದರುವುದಿಲ್ಲ, ಶೋ ಮಾಡಿಯೇ ಮಾಡುತ್ತೇನೆ. ನೀವೆಷ್ಟು ರದ್ದುಗೊಳಿಸುತ್ತಿರಿ ನೋಡೋಬಿಡೋಣ” ಎಂದಿದ್ದರು.

ನನ್ನ ಶೋ ರದ್ದಾದ ವಿಷಯ ಕೇಳಿ ನಗುಬಂತು. ಏಕೆಂದರೆ 40-50 ಜನ ಕೂತು ಟಿಕೆಟ್ ಖರೀದಿಸಿ ಕಾಮಿಡಿ ಶೋ ನೋಡುತ್ತಾರೆ. ಆದರೆ ಶೋ ನೋಡಲು ಇಷ್ಟಪಡದವರು ಶೋ ನಡೆಯಬಾರದೆಂದು ಧಮಕಿ ಹಾಕುತ್ತಾರೆ. ಟಿಕೆಟ್ ಖರೀದಿಸಿ ಶೋ ನೋಡುವವರಿಗೆ, ಕಲಾವಿದರಿಗೆ ಸರ್ಕಾರ ರಕ್ಷಣೆ ನೀಡದೆ ನೋಡದವರ ಧಮಕಿಗೆ ಹೆದರುತ್ತದೆ ಎಂದರೆ ನಗದೇ ಇರಲು ಸಾಧ್ಯವೇ? ಎಂದು ಕಮ್ರ ಹೇಳಿದ್ದಾರೆ.

ಒಂದು ಕಡೆ ಪ್ರಧಾನಿಗಳು ಹೇಳುತ್ತಾರೆ, ದೇಶ ಬಹಳ ಗಂಭೀರವಾಗಿದೆ. ಹ್ಯೂಮರ್ ಎಂಬುದು ಕಾಣೆಯಾಗುತ್ತಿದೆ. ಜನ ನಗುತ್ತಿಲ್ಲ ಎಂದು. ಇನ್ನೊಂದು ಕಡೆ ಜನರನ್ನು ನಗಿಸಲು ಶೋ ಮಾಡಿದರೆ ಪ್ರಧಾನಿಗಳ ಅನುಯಾಯಿಗಳೇ ಅದನ್ನು ರದ್ದುಗೊಳಿಸುತ್ತಾರೆ. ಇವರ ಚುನಾವಣಾ ರ್ಯಾಲಿಗಳಲ್ಲಿನ ಭಾಷಣ ಕೇಳಲು ಜನರಿಗೆ ದುಡ್ಡು ಕೊಟ್ಟು ಕರೆತರುತ್ತಾರೆ. ಆದರೆ ದುಡ್ಡು ಕೊಟ್ಟು ನಮ್ಮ ಕಾಮಿಡಿ ಕೇಳಲು ಬರುವವರಿಗೆ ಬೆದರಿಕೆಯೊಡ್ಡಿ ಶೋ ಕ್ಯಾನ್ಸಲ್ ಮಾಡುತ್ತಾರೆ. ಇದಕ್ಕೆ ಏನನ್ನಬೇಕು ಎಂದು ಕುನಾಲ್ ಪ್ರಶ್ನಿಸಿದ್ದಾರೆ.

ಹಾಗಾಗಿ ಇದಕ್ಕೆ ಪ್ರತಿಕ್ರಿಯಿಸಿರುವ ದಿಗ್ವಿಜಯ್ ಸಿಂಗ್ ತನ್ನ ಮೇಲೆ ಕಾಮಿಡಿ ಮಾಡಿ. ಆ ಶೋ ಏರ್ಪಡಿಸುತ್ತೇನೆ ಎಂದು ಆಹ್ವಾನಿಸಿದ್ದಾರೆ.


ಇದನ್ನೂ ಓದಿ; ಮುನವ್ವರ್ ಫಾರೂಕಿ ಮತ್ತು ಮಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...