Homeಮುಖಪುಟಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

ಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

- Advertisement -
- Advertisement -

ಭಾರತದ ಖ್ಯಾತ ಸ್ಟ್ಯಾಂಡಪ್‌ ಕಾಮೆಡಿಯನ್‌ಗಳಾದ ಕುನಾಲ್ ಕಮ್ರ ಮತ್ತು ಮುನಾವರ್ ಫಾರೂಕಿಯವರ ಹಲವಾರು ಶೋಗಳು ಬಲಪಂಥೀಯ ಹಿಂದುತ್ವ ಕಾರ್ಯಕರ್ತರ ಗಲಾಟೆಯಿಂದ ರದ್ದಾಗಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ “ಕುನಾಲ್, ಮುನಾವರ್ ನಾನು ನಿಮಗಾಗಿ ಭೋಪಾಲ್‌ನಲ್ಲಿ ಒಂದು ಶೋ ಏರ್ಪಡಿಸುತ್ತೇನೆ. ಅದರ ಎಲ್ಲಾ ಜವಾಬ್ದಾರಿ ನನ್ನದಾಗಿರುತ್ತದೆ. ಆದರೆ ನಿಮ್ಮ ಕಾಮಿಡಿಯ ವಿಷಯ ಕೇವಲ ದಿಗ್ವಿಜಯ್ ಸಿಂಗ್ ಆಗಿರಬೇಕು ಎಂಬುದು ನನ್ನ ಒಂದೇ ಷರತ್ತು” ಎಂದು ತಿಳಿಸಿದ್ದಾರೆ.

“ಈ ಪ್ರದರ್ಶನಕ್ಕೆ ಸಂಘಿಗಳು ಆಕ್ಷೇಪಿಸಬಾರದು!! ಭಯಪಡಬೇಡ ಬನ್ನಿ!! ನಿಮ್ಮ ಅನುಕೂಲಕ್ಕೆ ತಕ್ಕಂತೆ ದಿನಾಂಕ ಮತ್ತು ಸಮಯವನ್ನು ನೀಡಿ. ನಿಮ್ಮ ಎಲ್ಲಾ ಷರತ್ತುಗಳನ್ನು ಸ್ವೀಕರಿಸಲಾಗಿದೆ” ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದು, ಕುನಾಲ್ ಕ್ರಮರವರ ಬಿಬಿಸಿಯೊಂದಿಗಿನ ಸಂದರ್ಶನದ ವಿಡಿಯೋ ತುಣುಕು ಹಂಚಿಕೊಂಡಿದ್ದಾರೆ.

ಗುಜರಾತ್‌ನ ಸ್ಟ್ಯಾಂಡಪ್‌ ಕಾಮೆಡಿಯನ್‌ ಆದ ಮುನಾವರ್ ಫಾರೂಕಿಯವರ 12 ಶೋಗಳನ್ನು ಬಲಪಂಥೀಯರ ಬೆದರಿಕೆಯ ಕಾರಣ ನೀಡಿ ಪೊಲೀಸರು ರದ್ದುಪಡಿಸಿದ್ದರು. ಅದೇ ರೀತಿ ಡಿಸೆಂಬರ್ 1ರಿಂದ 19ರ ನಡುವೆ ಬೆಂಗಳೂರಿನ ಜೆಪಿ ನಗರದ ಸ್ಥಳವೊಂದರಲ್ಲಿ ‘ಕುನಾಲ್ ಕಮ್ರಾ ಲೈವ್’ ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಕಮ್ರಾ ಪ್ರದರ್ಶಿಸಲು ಸಜ್ಜಾಗಿದ್ದರು. ಆದರೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪ್ರತಿಭಟನೆ ನಡೆದ ನಂತರ ಅವರ ಶೋಗಳನ್ನು ಸಹ ರದ್ದುಪಡಿಸಲಾಗಿತ್ತು.

ಈ ಕುರಿತು ಬಿಬಿಸಿ ಸಂದರ್ಶನದಲ್ಲಿ ಮಾತನಾಡಿದ್ದ ಕುನಾಲ್ “ಬೆಂಗಳೂರು ನನಗೆ ಬಹುಮುಖ್ಯ ನಗರ. ನನ್ನ ವೈರಲ್ ವಿಡಿಯೋಗಳು ಬೆಂಗಳೂರಿನಲ್ಲಿ ಪ್ರದರ್ಶಿತವಾಗಿದ್ದವು. ಇದು ಲಿಬರಲ್‌ಗಳಿರುವ ನಗರವಾಗಿತ್ತು. ಆದರೆ ಮೊದಲ ಬಾರಿಗೆ ಇಲ್ಲಿ ನನ್ನ ಶೋ ರದ್ದುಗೊಂಡಿದೆ. ಯಾರ ಬಳಿ ಅಧಿಕಾರವಿರುತ್ತದೊ ಅವರಿಗೆ ನಗುವುದು ಸಹ ಇಷ್ಟವಾಗುವುದಿಲ್ಲ. ಅವರು ಎಷ್ಟು ಪ್ರದರ್ಶನ ರದ್ದುಗೊಳಿಸುತ್ತಾರೋ ನೋಡುತ್ತೇನೆ. ನಾನು ಹೆದರುವುದಿಲ್ಲ, ಶೋ ಮಾಡಿಯೇ ಮಾಡುತ್ತೇನೆ. ನೀವೆಷ್ಟು ರದ್ದುಗೊಳಿಸುತ್ತಿರಿ ನೋಡೋಬಿಡೋಣ” ಎಂದಿದ್ದರು.

ನನ್ನ ಶೋ ರದ್ದಾದ ವಿಷಯ ಕೇಳಿ ನಗುಬಂತು. ಏಕೆಂದರೆ 40-50 ಜನ ಕೂತು ಟಿಕೆಟ್ ಖರೀದಿಸಿ ಕಾಮಿಡಿ ಶೋ ನೋಡುತ್ತಾರೆ. ಆದರೆ ಶೋ ನೋಡಲು ಇಷ್ಟಪಡದವರು ಶೋ ನಡೆಯಬಾರದೆಂದು ಧಮಕಿ ಹಾಕುತ್ತಾರೆ. ಟಿಕೆಟ್ ಖರೀದಿಸಿ ಶೋ ನೋಡುವವರಿಗೆ, ಕಲಾವಿದರಿಗೆ ಸರ್ಕಾರ ರಕ್ಷಣೆ ನೀಡದೆ ನೋಡದವರ ಧಮಕಿಗೆ ಹೆದರುತ್ತದೆ ಎಂದರೆ ನಗದೇ ಇರಲು ಸಾಧ್ಯವೇ? ಎಂದು ಕಮ್ರ ಹೇಳಿದ್ದಾರೆ.

ಒಂದು ಕಡೆ ಪ್ರಧಾನಿಗಳು ಹೇಳುತ್ತಾರೆ, ದೇಶ ಬಹಳ ಗಂಭೀರವಾಗಿದೆ. ಹ್ಯೂಮರ್ ಎಂಬುದು ಕಾಣೆಯಾಗುತ್ತಿದೆ. ಜನ ನಗುತ್ತಿಲ್ಲ ಎಂದು. ಇನ್ನೊಂದು ಕಡೆ ಜನರನ್ನು ನಗಿಸಲು ಶೋ ಮಾಡಿದರೆ ಪ್ರಧಾನಿಗಳ ಅನುಯಾಯಿಗಳೇ ಅದನ್ನು ರದ್ದುಗೊಳಿಸುತ್ತಾರೆ. ಇವರ ಚುನಾವಣಾ ರ್ಯಾಲಿಗಳಲ್ಲಿನ ಭಾಷಣ ಕೇಳಲು ಜನರಿಗೆ ದುಡ್ಡು ಕೊಟ್ಟು ಕರೆತರುತ್ತಾರೆ. ಆದರೆ ದುಡ್ಡು ಕೊಟ್ಟು ನಮ್ಮ ಕಾಮಿಡಿ ಕೇಳಲು ಬರುವವರಿಗೆ ಬೆದರಿಕೆಯೊಡ್ಡಿ ಶೋ ಕ್ಯಾನ್ಸಲ್ ಮಾಡುತ್ತಾರೆ. ಇದಕ್ಕೆ ಏನನ್ನಬೇಕು ಎಂದು ಕುನಾಲ್ ಪ್ರಶ್ನಿಸಿದ್ದಾರೆ.

ಹಾಗಾಗಿ ಇದಕ್ಕೆ ಪ್ರತಿಕ್ರಿಯಿಸಿರುವ ದಿಗ್ವಿಜಯ್ ಸಿಂಗ್ ತನ್ನ ಮೇಲೆ ಕಾಮಿಡಿ ಮಾಡಿ. ಆ ಶೋ ಏರ್ಪಡಿಸುತ್ತೇನೆ ಎಂದು ಆಹ್ವಾನಿಸಿದ್ದಾರೆ.


ಇದನ್ನೂ ಓದಿ; ಮುನವ್ವರ್ ಫಾರೂಕಿ ಮತ್ತು ಮಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...