Homeಮುಖಪುಟಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

ಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

- Advertisement -
- Advertisement -

ಭಾರತದ ಖ್ಯಾತ ಸ್ಟ್ಯಾಂಡಪ್‌ ಕಾಮೆಡಿಯನ್‌ಗಳಾದ ಕುನಾಲ್ ಕಮ್ರ ಮತ್ತು ಮುನಾವರ್ ಫಾರೂಕಿಯವರ ಹಲವಾರು ಶೋಗಳು ಬಲಪಂಥೀಯ ಹಿಂದುತ್ವ ಕಾರ್ಯಕರ್ತರ ಗಲಾಟೆಯಿಂದ ರದ್ದಾಗಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ “ಕುನಾಲ್, ಮುನಾವರ್ ನಾನು ನಿಮಗಾಗಿ ಭೋಪಾಲ್‌ನಲ್ಲಿ ಒಂದು ಶೋ ಏರ್ಪಡಿಸುತ್ತೇನೆ. ಅದರ ಎಲ್ಲಾ ಜವಾಬ್ದಾರಿ ನನ್ನದಾಗಿರುತ್ತದೆ. ಆದರೆ ನಿಮ್ಮ ಕಾಮಿಡಿಯ ವಿಷಯ ಕೇವಲ ದಿಗ್ವಿಜಯ್ ಸಿಂಗ್ ಆಗಿರಬೇಕು ಎಂಬುದು ನನ್ನ ಒಂದೇ ಷರತ್ತು” ಎಂದು ತಿಳಿಸಿದ್ದಾರೆ.

“ಈ ಪ್ರದರ್ಶನಕ್ಕೆ ಸಂಘಿಗಳು ಆಕ್ಷೇಪಿಸಬಾರದು!! ಭಯಪಡಬೇಡ ಬನ್ನಿ!! ನಿಮ್ಮ ಅನುಕೂಲಕ್ಕೆ ತಕ್ಕಂತೆ ದಿನಾಂಕ ಮತ್ತು ಸಮಯವನ್ನು ನೀಡಿ. ನಿಮ್ಮ ಎಲ್ಲಾ ಷರತ್ತುಗಳನ್ನು ಸ್ವೀಕರಿಸಲಾಗಿದೆ” ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದು, ಕುನಾಲ್ ಕ್ರಮರವರ ಬಿಬಿಸಿಯೊಂದಿಗಿನ ಸಂದರ್ಶನದ ವಿಡಿಯೋ ತುಣುಕು ಹಂಚಿಕೊಂಡಿದ್ದಾರೆ.

ಗುಜರಾತ್‌ನ ಸ್ಟ್ಯಾಂಡಪ್‌ ಕಾಮೆಡಿಯನ್‌ ಆದ ಮುನಾವರ್ ಫಾರೂಕಿಯವರ 12 ಶೋಗಳನ್ನು ಬಲಪಂಥೀಯರ ಬೆದರಿಕೆಯ ಕಾರಣ ನೀಡಿ ಪೊಲೀಸರು ರದ್ದುಪಡಿಸಿದ್ದರು. ಅದೇ ರೀತಿ ಡಿಸೆಂಬರ್ 1ರಿಂದ 19ರ ನಡುವೆ ಬೆಂಗಳೂರಿನ ಜೆಪಿ ನಗರದ ಸ್ಥಳವೊಂದರಲ್ಲಿ ‘ಕುನಾಲ್ ಕಮ್ರಾ ಲೈವ್’ ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಕಮ್ರಾ ಪ್ರದರ್ಶಿಸಲು ಸಜ್ಜಾಗಿದ್ದರು. ಆದರೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪ್ರತಿಭಟನೆ ನಡೆದ ನಂತರ ಅವರ ಶೋಗಳನ್ನು ಸಹ ರದ್ದುಪಡಿಸಲಾಗಿತ್ತು.

ಈ ಕುರಿತು ಬಿಬಿಸಿ ಸಂದರ್ಶನದಲ್ಲಿ ಮಾತನಾಡಿದ್ದ ಕುನಾಲ್ “ಬೆಂಗಳೂರು ನನಗೆ ಬಹುಮುಖ್ಯ ನಗರ. ನನ್ನ ವೈರಲ್ ವಿಡಿಯೋಗಳು ಬೆಂಗಳೂರಿನಲ್ಲಿ ಪ್ರದರ್ಶಿತವಾಗಿದ್ದವು. ಇದು ಲಿಬರಲ್‌ಗಳಿರುವ ನಗರವಾಗಿತ್ತು. ಆದರೆ ಮೊದಲ ಬಾರಿಗೆ ಇಲ್ಲಿ ನನ್ನ ಶೋ ರದ್ದುಗೊಂಡಿದೆ. ಯಾರ ಬಳಿ ಅಧಿಕಾರವಿರುತ್ತದೊ ಅವರಿಗೆ ನಗುವುದು ಸಹ ಇಷ್ಟವಾಗುವುದಿಲ್ಲ. ಅವರು ಎಷ್ಟು ಪ್ರದರ್ಶನ ರದ್ದುಗೊಳಿಸುತ್ತಾರೋ ನೋಡುತ್ತೇನೆ. ನಾನು ಹೆದರುವುದಿಲ್ಲ, ಶೋ ಮಾಡಿಯೇ ಮಾಡುತ್ತೇನೆ. ನೀವೆಷ್ಟು ರದ್ದುಗೊಳಿಸುತ್ತಿರಿ ನೋಡೋಬಿಡೋಣ” ಎಂದಿದ್ದರು.

ನನ್ನ ಶೋ ರದ್ದಾದ ವಿಷಯ ಕೇಳಿ ನಗುಬಂತು. ಏಕೆಂದರೆ 40-50 ಜನ ಕೂತು ಟಿಕೆಟ್ ಖರೀದಿಸಿ ಕಾಮಿಡಿ ಶೋ ನೋಡುತ್ತಾರೆ. ಆದರೆ ಶೋ ನೋಡಲು ಇಷ್ಟಪಡದವರು ಶೋ ನಡೆಯಬಾರದೆಂದು ಧಮಕಿ ಹಾಕುತ್ತಾರೆ. ಟಿಕೆಟ್ ಖರೀದಿಸಿ ಶೋ ನೋಡುವವರಿಗೆ, ಕಲಾವಿದರಿಗೆ ಸರ್ಕಾರ ರಕ್ಷಣೆ ನೀಡದೆ ನೋಡದವರ ಧಮಕಿಗೆ ಹೆದರುತ್ತದೆ ಎಂದರೆ ನಗದೇ ಇರಲು ಸಾಧ್ಯವೇ? ಎಂದು ಕಮ್ರ ಹೇಳಿದ್ದಾರೆ.

ಒಂದು ಕಡೆ ಪ್ರಧಾನಿಗಳು ಹೇಳುತ್ತಾರೆ, ದೇಶ ಬಹಳ ಗಂಭೀರವಾಗಿದೆ. ಹ್ಯೂಮರ್ ಎಂಬುದು ಕಾಣೆಯಾಗುತ್ತಿದೆ. ಜನ ನಗುತ್ತಿಲ್ಲ ಎಂದು. ಇನ್ನೊಂದು ಕಡೆ ಜನರನ್ನು ನಗಿಸಲು ಶೋ ಮಾಡಿದರೆ ಪ್ರಧಾನಿಗಳ ಅನುಯಾಯಿಗಳೇ ಅದನ್ನು ರದ್ದುಗೊಳಿಸುತ್ತಾರೆ. ಇವರ ಚುನಾವಣಾ ರ್ಯಾಲಿಗಳಲ್ಲಿನ ಭಾಷಣ ಕೇಳಲು ಜನರಿಗೆ ದುಡ್ಡು ಕೊಟ್ಟು ಕರೆತರುತ್ತಾರೆ. ಆದರೆ ದುಡ್ಡು ಕೊಟ್ಟು ನಮ್ಮ ಕಾಮಿಡಿ ಕೇಳಲು ಬರುವವರಿಗೆ ಬೆದರಿಕೆಯೊಡ್ಡಿ ಶೋ ಕ್ಯಾನ್ಸಲ್ ಮಾಡುತ್ತಾರೆ. ಇದಕ್ಕೆ ಏನನ್ನಬೇಕು ಎಂದು ಕುನಾಲ್ ಪ್ರಶ್ನಿಸಿದ್ದಾರೆ.

ಹಾಗಾಗಿ ಇದಕ್ಕೆ ಪ್ರತಿಕ್ರಿಯಿಸಿರುವ ದಿಗ್ವಿಜಯ್ ಸಿಂಗ್ ತನ್ನ ಮೇಲೆ ಕಾಮಿಡಿ ಮಾಡಿ. ಆ ಶೋ ಏರ್ಪಡಿಸುತ್ತೇನೆ ಎಂದು ಆಹ್ವಾನಿಸಿದ್ದಾರೆ.


ಇದನ್ನೂ ಓದಿ; ಮುನವ್ವರ್ ಫಾರೂಕಿ ಮತ್ತು ಮಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....