Homeಮುಖಪುಟಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

ಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

- Advertisement -
- Advertisement -

ಭಾರತದ ಖ್ಯಾತ ಸ್ಟ್ಯಾಂಡಪ್‌ ಕಾಮೆಡಿಯನ್‌ಗಳಾದ ಕುನಾಲ್ ಕಮ್ರ ಮತ್ತು ಮುನಾವರ್ ಫಾರೂಕಿಯವರ ಹಲವಾರು ಶೋಗಳು ಬಲಪಂಥೀಯ ಹಿಂದುತ್ವ ಕಾರ್ಯಕರ್ತರ ಗಲಾಟೆಯಿಂದ ರದ್ದಾಗಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ “ಕುನಾಲ್, ಮುನಾವರ್ ನಾನು ನಿಮಗಾಗಿ ಭೋಪಾಲ್‌ನಲ್ಲಿ ಒಂದು ಶೋ ಏರ್ಪಡಿಸುತ್ತೇನೆ. ಅದರ ಎಲ್ಲಾ ಜವಾಬ್ದಾರಿ ನನ್ನದಾಗಿರುತ್ತದೆ. ಆದರೆ ನಿಮ್ಮ ಕಾಮಿಡಿಯ ವಿಷಯ ಕೇವಲ ದಿಗ್ವಿಜಯ್ ಸಿಂಗ್ ಆಗಿರಬೇಕು ಎಂಬುದು ನನ್ನ ಒಂದೇ ಷರತ್ತು” ಎಂದು ತಿಳಿಸಿದ್ದಾರೆ.

“ಈ ಪ್ರದರ್ಶನಕ್ಕೆ ಸಂಘಿಗಳು ಆಕ್ಷೇಪಿಸಬಾರದು!! ಭಯಪಡಬೇಡ ಬನ್ನಿ!! ನಿಮ್ಮ ಅನುಕೂಲಕ್ಕೆ ತಕ್ಕಂತೆ ದಿನಾಂಕ ಮತ್ತು ಸಮಯವನ್ನು ನೀಡಿ. ನಿಮ್ಮ ಎಲ್ಲಾ ಷರತ್ತುಗಳನ್ನು ಸ್ವೀಕರಿಸಲಾಗಿದೆ” ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದು, ಕುನಾಲ್ ಕ್ರಮರವರ ಬಿಬಿಸಿಯೊಂದಿಗಿನ ಸಂದರ್ಶನದ ವಿಡಿಯೋ ತುಣುಕು ಹಂಚಿಕೊಂಡಿದ್ದಾರೆ.

ಗುಜರಾತ್‌ನ ಸ್ಟ್ಯಾಂಡಪ್‌ ಕಾಮೆಡಿಯನ್‌ ಆದ ಮುನಾವರ್ ಫಾರೂಕಿಯವರ 12 ಶೋಗಳನ್ನು ಬಲಪಂಥೀಯರ ಬೆದರಿಕೆಯ ಕಾರಣ ನೀಡಿ ಪೊಲೀಸರು ರದ್ದುಪಡಿಸಿದ್ದರು. ಅದೇ ರೀತಿ ಡಿಸೆಂಬರ್ 1ರಿಂದ 19ರ ನಡುವೆ ಬೆಂಗಳೂರಿನ ಜೆಪಿ ನಗರದ ಸ್ಥಳವೊಂದರಲ್ಲಿ ‘ಕುನಾಲ್ ಕಮ್ರಾ ಲೈವ್’ ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಕಮ್ರಾ ಪ್ರದರ್ಶಿಸಲು ಸಜ್ಜಾಗಿದ್ದರು. ಆದರೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪ್ರತಿಭಟನೆ ನಡೆದ ನಂತರ ಅವರ ಶೋಗಳನ್ನು ಸಹ ರದ್ದುಪಡಿಸಲಾಗಿತ್ತು.

ಈ ಕುರಿತು ಬಿಬಿಸಿ ಸಂದರ್ಶನದಲ್ಲಿ ಮಾತನಾಡಿದ್ದ ಕುನಾಲ್ “ಬೆಂಗಳೂರು ನನಗೆ ಬಹುಮುಖ್ಯ ನಗರ. ನನ್ನ ವೈರಲ್ ವಿಡಿಯೋಗಳು ಬೆಂಗಳೂರಿನಲ್ಲಿ ಪ್ರದರ್ಶಿತವಾಗಿದ್ದವು. ಇದು ಲಿಬರಲ್‌ಗಳಿರುವ ನಗರವಾಗಿತ್ತು. ಆದರೆ ಮೊದಲ ಬಾರಿಗೆ ಇಲ್ಲಿ ನನ್ನ ಶೋ ರದ್ದುಗೊಂಡಿದೆ. ಯಾರ ಬಳಿ ಅಧಿಕಾರವಿರುತ್ತದೊ ಅವರಿಗೆ ನಗುವುದು ಸಹ ಇಷ್ಟವಾಗುವುದಿಲ್ಲ. ಅವರು ಎಷ್ಟು ಪ್ರದರ್ಶನ ರದ್ದುಗೊಳಿಸುತ್ತಾರೋ ನೋಡುತ್ತೇನೆ. ನಾನು ಹೆದರುವುದಿಲ್ಲ, ಶೋ ಮಾಡಿಯೇ ಮಾಡುತ್ತೇನೆ. ನೀವೆಷ್ಟು ರದ್ದುಗೊಳಿಸುತ್ತಿರಿ ನೋಡೋಬಿಡೋಣ” ಎಂದಿದ್ದರು.

ನನ್ನ ಶೋ ರದ್ದಾದ ವಿಷಯ ಕೇಳಿ ನಗುಬಂತು. ಏಕೆಂದರೆ 40-50 ಜನ ಕೂತು ಟಿಕೆಟ್ ಖರೀದಿಸಿ ಕಾಮಿಡಿ ಶೋ ನೋಡುತ್ತಾರೆ. ಆದರೆ ಶೋ ನೋಡಲು ಇಷ್ಟಪಡದವರು ಶೋ ನಡೆಯಬಾರದೆಂದು ಧಮಕಿ ಹಾಕುತ್ತಾರೆ. ಟಿಕೆಟ್ ಖರೀದಿಸಿ ಶೋ ನೋಡುವವರಿಗೆ, ಕಲಾವಿದರಿಗೆ ಸರ್ಕಾರ ರಕ್ಷಣೆ ನೀಡದೆ ನೋಡದವರ ಧಮಕಿಗೆ ಹೆದರುತ್ತದೆ ಎಂದರೆ ನಗದೇ ಇರಲು ಸಾಧ್ಯವೇ? ಎಂದು ಕಮ್ರ ಹೇಳಿದ್ದಾರೆ.

ಒಂದು ಕಡೆ ಪ್ರಧಾನಿಗಳು ಹೇಳುತ್ತಾರೆ, ದೇಶ ಬಹಳ ಗಂಭೀರವಾಗಿದೆ. ಹ್ಯೂಮರ್ ಎಂಬುದು ಕಾಣೆಯಾಗುತ್ತಿದೆ. ಜನ ನಗುತ್ತಿಲ್ಲ ಎಂದು. ಇನ್ನೊಂದು ಕಡೆ ಜನರನ್ನು ನಗಿಸಲು ಶೋ ಮಾಡಿದರೆ ಪ್ರಧಾನಿಗಳ ಅನುಯಾಯಿಗಳೇ ಅದನ್ನು ರದ್ದುಗೊಳಿಸುತ್ತಾರೆ. ಇವರ ಚುನಾವಣಾ ರ್ಯಾಲಿಗಳಲ್ಲಿನ ಭಾಷಣ ಕೇಳಲು ಜನರಿಗೆ ದುಡ್ಡು ಕೊಟ್ಟು ಕರೆತರುತ್ತಾರೆ. ಆದರೆ ದುಡ್ಡು ಕೊಟ್ಟು ನಮ್ಮ ಕಾಮಿಡಿ ಕೇಳಲು ಬರುವವರಿಗೆ ಬೆದರಿಕೆಯೊಡ್ಡಿ ಶೋ ಕ್ಯಾನ್ಸಲ್ ಮಾಡುತ್ತಾರೆ. ಇದಕ್ಕೆ ಏನನ್ನಬೇಕು ಎಂದು ಕುನಾಲ್ ಪ್ರಶ್ನಿಸಿದ್ದಾರೆ.

ಹಾಗಾಗಿ ಇದಕ್ಕೆ ಪ್ರತಿಕ್ರಿಯಿಸಿರುವ ದಿಗ್ವಿಜಯ್ ಸಿಂಗ್ ತನ್ನ ಮೇಲೆ ಕಾಮಿಡಿ ಮಾಡಿ. ಆ ಶೋ ಏರ್ಪಡಿಸುತ್ತೇನೆ ಎಂದು ಆಹ್ವಾನಿಸಿದ್ದಾರೆ.


ಇದನ್ನೂ ಓದಿ; ಮುನವ್ವರ್ ಫಾರೂಕಿ ಮತ್ತು ಮಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...