Homeಮುಖಪುಟಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

ಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

- Advertisement -
- Advertisement -

ಭಾರತದ ಖ್ಯಾತ ಸ್ಟ್ಯಾಂಡಪ್‌ ಕಾಮೆಡಿಯನ್‌ಗಳಾದ ಕುನಾಲ್ ಕಮ್ರ ಮತ್ತು ಮುನಾವರ್ ಫಾರೂಕಿಯವರ ಹಲವಾರು ಶೋಗಳು ಬಲಪಂಥೀಯ ಹಿಂದುತ್ವ ಕಾರ್ಯಕರ್ತರ ಗಲಾಟೆಯಿಂದ ರದ್ದಾಗಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ “ಕುನಾಲ್, ಮುನಾವರ್ ನಾನು ನಿಮಗಾಗಿ ಭೋಪಾಲ್‌ನಲ್ಲಿ ಒಂದು ಶೋ ಏರ್ಪಡಿಸುತ್ತೇನೆ. ಅದರ ಎಲ್ಲಾ ಜವಾಬ್ದಾರಿ ನನ್ನದಾಗಿರುತ್ತದೆ. ಆದರೆ ನಿಮ್ಮ ಕಾಮಿಡಿಯ ವಿಷಯ ಕೇವಲ ದಿಗ್ವಿಜಯ್ ಸಿಂಗ್ ಆಗಿರಬೇಕು ಎಂಬುದು ನನ್ನ ಒಂದೇ ಷರತ್ತು” ಎಂದು ತಿಳಿಸಿದ್ದಾರೆ.

“ಈ ಪ್ರದರ್ಶನಕ್ಕೆ ಸಂಘಿಗಳು ಆಕ್ಷೇಪಿಸಬಾರದು!! ಭಯಪಡಬೇಡ ಬನ್ನಿ!! ನಿಮ್ಮ ಅನುಕೂಲಕ್ಕೆ ತಕ್ಕಂತೆ ದಿನಾಂಕ ಮತ್ತು ಸಮಯವನ್ನು ನೀಡಿ. ನಿಮ್ಮ ಎಲ್ಲಾ ಷರತ್ತುಗಳನ್ನು ಸ್ವೀಕರಿಸಲಾಗಿದೆ” ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದು, ಕುನಾಲ್ ಕ್ರಮರವರ ಬಿಬಿಸಿಯೊಂದಿಗಿನ ಸಂದರ್ಶನದ ವಿಡಿಯೋ ತುಣುಕು ಹಂಚಿಕೊಂಡಿದ್ದಾರೆ.

ಗುಜರಾತ್‌ನ ಸ್ಟ್ಯಾಂಡಪ್‌ ಕಾಮೆಡಿಯನ್‌ ಆದ ಮುನಾವರ್ ಫಾರೂಕಿಯವರ 12 ಶೋಗಳನ್ನು ಬಲಪಂಥೀಯರ ಬೆದರಿಕೆಯ ಕಾರಣ ನೀಡಿ ಪೊಲೀಸರು ರದ್ದುಪಡಿಸಿದ್ದರು. ಅದೇ ರೀತಿ ಡಿಸೆಂಬರ್ 1ರಿಂದ 19ರ ನಡುವೆ ಬೆಂಗಳೂರಿನ ಜೆಪಿ ನಗರದ ಸ್ಥಳವೊಂದರಲ್ಲಿ ‘ಕುನಾಲ್ ಕಮ್ರಾ ಲೈವ್’ ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಕಮ್ರಾ ಪ್ರದರ್ಶಿಸಲು ಸಜ್ಜಾಗಿದ್ದರು. ಆದರೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪ್ರತಿಭಟನೆ ನಡೆದ ನಂತರ ಅವರ ಶೋಗಳನ್ನು ಸಹ ರದ್ದುಪಡಿಸಲಾಗಿತ್ತು.

ಈ ಕುರಿತು ಬಿಬಿಸಿ ಸಂದರ್ಶನದಲ್ಲಿ ಮಾತನಾಡಿದ್ದ ಕುನಾಲ್ “ಬೆಂಗಳೂರು ನನಗೆ ಬಹುಮುಖ್ಯ ನಗರ. ನನ್ನ ವೈರಲ್ ವಿಡಿಯೋಗಳು ಬೆಂಗಳೂರಿನಲ್ಲಿ ಪ್ರದರ್ಶಿತವಾಗಿದ್ದವು. ಇದು ಲಿಬರಲ್‌ಗಳಿರುವ ನಗರವಾಗಿತ್ತು. ಆದರೆ ಮೊದಲ ಬಾರಿಗೆ ಇಲ್ಲಿ ನನ್ನ ಶೋ ರದ್ದುಗೊಂಡಿದೆ. ಯಾರ ಬಳಿ ಅಧಿಕಾರವಿರುತ್ತದೊ ಅವರಿಗೆ ನಗುವುದು ಸಹ ಇಷ್ಟವಾಗುವುದಿಲ್ಲ. ಅವರು ಎಷ್ಟು ಪ್ರದರ್ಶನ ರದ್ದುಗೊಳಿಸುತ್ತಾರೋ ನೋಡುತ್ತೇನೆ. ನಾನು ಹೆದರುವುದಿಲ್ಲ, ಶೋ ಮಾಡಿಯೇ ಮಾಡುತ್ತೇನೆ. ನೀವೆಷ್ಟು ರದ್ದುಗೊಳಿಸುತ್ತಿರಿ ನೋಡೋಬಿಡೋಣ” ಎಂದಿದ್ದರು.

ನನ್ನ ಶೋ ರದ್ದಾದ ವಿಷಯ ಕೇಳಿ ನಗುಬಂತು. ಏಕೆಂದರೆ 40-50 ಜನ ಕೂತು ಟಿಕೆಟ್ ಖರೀದಿಸಿ ಕಾಮಿಡಿ ಶೋ ನೋಡುತ್ತಾರೆ. ಆದರೆ ಶೋ ನೋಡಲು ಇಷ್ಟಪಡದವರು ಶೋ ನಡೆಯಬಾರದೆಂದು ಧಮಕಿ ಹಾಕುತ್ತಾರೆ. ಟಿಕೆಟ್ ಖರೀದಿಸಿ ಶೋ ನೋಡುವವರಿಗೆ, ಕಲಾವಿದರಿಗೆ ಸರ್ಕಾರ ರಕ್ಷಣೆ ನೀಡದೆ ನೋಡದವರ ಧಮಕಿಗೆ ಹೆದರುತ್ತದೆ ಎಂದರೆ ನಗದೇ ಇರಲು ಸಾಧ್ಯವೇ? ಎಂದು ಕಮ್ರ ಹೇಳಿದ್ದಾರೆ.

ಒಂದು ಕಡೆ ಪ್ರಧಾನಿಗಳು ಹೇಳುತ್ತಾರೆ, ದೇಶ ಬಹಳ ಗಂಭೀರವಾಗಿದೆ. ಹ್ಯೂಮರ್ ಎಂಬುದು ಕಾಣೆಯಾಗುತ್ತಿದೆ. ಜನ ನಗುತ್ತಿಲ್ಲ ಎಂದು. ಇನ್ನೊಂದು ಕಡೆ ಜನರನ್ನು ನಗಿಸಲು ಶೋ ಮಾಡಿದರೆ ಪ್ರಧಾನಿಗಳ ಅನುಯಾಯಿಗಳೇ ಅದನ್ನು ರದ್ದುಗೊಳಿಸುತ್ತಾರೆ. ಇವರ ಚುನಾವಣಾ ರ್ಯಾಲಿಗಳಲ್ಲಿನ ಭಾಷಣ ಕೇಳಲು ಜನರಿಗೆ ದುಡ್ಡು ಕೊಟ್ಟು ಕರೆತರುತ್ತಾರೆ. ಆದರೆ ದುಡ್ಡು ಕೊಟ್ಟು ನಮ್ಮ ಕಾಮಿಡಿ ಕೇಳಲು ಬರುವವರಿಗೆ ಬೆದರಿಕೆಯೊಡ್ಡಿ ಶೋ ಕ್ಯಾನ್ಸಲ್ ಮಾಡುತ್ತಾರೆ. ಇದಕ್ಕೆ ಏನನ್ನಬೇಕು ಎಂದು ಕುನಾಲ್ ಪ್ರಶ್ನಿಸಿದ್ದಾರೆ.

ಹಾಗಾಗಿ ಇದಕ್ಕೆ ಪ್ರತಿಕ್ರಿಯಿಸಿರುವ ದಿಗ್ವಿಜಯ್ ಸಿಂಗ್ ತನ್ನ ಮೇಲೆ ಕಾಮಿಡಿ ಮಾಡಿ. ಆ ಶೋ ಏರ್ಪಡಿಸುತ್ತೇನೆ ಎಂದು ಆಹ್ವಾನಿಸಿದ್ದಾರೆ.


ಇದನ್ನೂ ಓದಿ; ಮುನವ್ವರ್ ಫಾರೂಕಿ ಮತ್ತು ಮಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...