Homeಮುಖಪುಟಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

ಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

- Advertisement -
- Advertisement -

ಭಾರತದ ಖ್ಯಾತ ಸ್ಟ್ಯಾಂಡಪ್‌ ಕಾಮೆಡಿಯನ್‌ಗಳಾದ ಕುನಾಲ್ ಕಮ್ರ ಮತ್ತು ಮುನಾವರ್ ಫಾರೂಕಿಯವರ ಹಲವಾರು ಶೋಗಳು ಬಲಪಂಥೀಯ ಹಿಂದುತ್ವ ಕಾರ್ಯಕರ್ತರ ಗಲಾಟೆಯಿಂದ ರದ್ದಾಗಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ “ಕುನಾಲ್, ಮುನಾವರ್ ನಾನು ನಿಮಗಾಗಿ ಭೋಪಾಲ್‌ನಲ್ಲಿ ಒಂದು ಶೋ ಏರ್ಪಡಿಸುತ್ತೇನೆ. ಅದರ ಎಲ್ಲಾ ಜವಾಬ್ದಾರಿ ನನ್ನದಾಗಿರುತ್ತದೆ. ಆದರೆ ನಿಮ್ಮ ಕಾಮಿಡಿಯ ವಿಷಯ ಕೇವಲ ದಿಗ್ವಿಜಯ್ ಸಿಂಗ್ ಆಗಿರಬೇಕು ಎಂಬುದು ನನ್ನ ಒಂದೇ ಷರತ್ತು” ಎಂದು ತಿಳಿಸಿದ್ದಾರೆ.

“ಈ ಪ್ರದರ್ಶನಕ್ಕೆ ಸಂಘಿಗಳು ಆಕ್ಷೇಪಿಸಬಾರದು!! ಭಯಪಡಬೇಡ ಬನ್ನಿ!! ನಿಮ್ಮ ಅನುಕೂಲಕ್ಕೆ ತಕ್ಕಂತೆ ದಿನಾಂಕ ಮತ್ತು ಸಮಯವನ್ನು ನೀಡಿ. ನಿಮ್ಮ ಎಲ್ಲಾ ಷರತ್ತುಗಳನ್ನು ಸ್ವೀಕರಿಸಲಾಗಿದೆ” ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದು, ಕುನಾಲ್ ಕ್ರಮರವರ ಬಿಬಿಸಿಯೊಂದಿಗಿನ ಸಂದರ್ಶನದ ವಿಡಿಯೋ ತುಣುಕು ಹಂಚಿಕೊಂಡಿದ್ದಾರೆ.

ಗುಜರಾತ್‌ನ ಸ್ಟ್ಯಾಂಡಪ್‌ ಕಾಮೆಡಿಯನ್‌ ಆದ ಮುನಾವರ್ ಫಾರೂಕಿಯವರ 12 ಶೋಗಳನ್ನು ಬಲಪಂಥೀಯರ ಬೆದರಿಕೆಯ ಕಾರಣ ನೀಡಿ ಪೊಲೀಸರು ರದ್ದುಪಡಿಸಿದ್ದರು. ಅದೇ ರೀತಿ ಡಿಸೆಂಬರ್ 1ರಿಂದ 19ರ ನಡುವೆ ಬೆಂಗಳೂರಿನ ಜೆಪಿ ನಗರದ ಸ್ಥಳವೊಂದರಲ್ಲಿ ‘ಕುನಾಲ್ ಕಮ್ರಾ ಲೈವ್’ ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಕಮ್ರಾ ಪ್ರದರ್ಶಿಸಲು ಸಜ್ಜಾಗಿದ್ದರು. ಆದರೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪ್ರತಿಭಟನೆ ನಡೆದ ನಂತರ ಅವರ ಶೋಗಳನ್ನು ಸಹ ರದ್ದುಪಡಿಸಲಾಗಿತ್ತು.

ಈ ಕುರಿತು ಬಿಬಿಸಿ ಸಂದರ್ಶನದಲ್ಲಿ ಮಾತನಾಡಿದ್ದ ಕುನಾಲ್ “ಬೆಂಗಳೂರು ನನಗೆ ಬಹುಮುಖ್ಯ ನಗರ. ನನ್ನ ವೈರಲ್ ವಿಡಿಯೋಗಳು ಬೆಂಗಳೂರಿನಲ್ಲಿ ಪ್ರದರ್ಶಿತವಾಗಿದ್ದವು. ಇದು ಲಿಬರಲ್‌ಗಳಿರುವ ನಗರವಾಗಿತ್ತು. ಆದರೆ ಮೊದಲ ಬಾರಿಗೆ ಇಲ್ಲಿ ನನ್ನ ಶೋ ರದ್ದುಗೊಂಡಿದೆ. ಯಾರ ಬಳಿ ಅಧಿಕಾರವಿರುತ್ತದೊ ಅವರಿಗೆ ನಗುವುದು ಸಹ ಇಷ್ಟವಾಗುವುದಿಲ್ಲ. ಅವರು ಎಷ್ಟು ಪ್ರದರ್ಶನ ರದ್ದುಗೊಳಿಸುತ್ತಾರೋ ನೋಡುತ್ತೇನೆ. ನಾನು ಹೆದರುವುದಿಲ್ಲ, ಶೋ ಮಾಡಿಯೇ ಮಾಡುತ್ತೇನೆ. ನೀವೆಷ್ಟು ರದ್ದುಗೊಳಿಸುತ್ತಿರಿ ನೋಡೋಬಿಡೋಣ” ಎಂದಿದ್ದರು.

ನನ್ನ ಶೋ ರದ್ದಾದ ವಿಷಯ ಕೇಳಿ ನಗುಬಂತು. ಏಕೆಂದರೆ 40-50 ಜನ ಕೂತು ಟಿಕೆಟ್ ಖರೀದಿಸಿ ಕಾಮಿಡಿ ಶೋ ನೋಡುತ್ತಾರೆ. ಆದರೆ ಶೋ ನೋಡಲು ಇಷ್ಟಪಡದವರು ಶೋ ನಡೆಯಬಾರದೆಂದು ಧಮಕಿ ಹಾಕುತ್ತಾರೆ. ಟಿಕೆಟ್ ಖರೀದಿಸಿ ಶೋ ನೋಡುವವರಿಗೆ, ಕಲಾವಿದರಿಗೆ ಸರ್ಕಾರ ರಕ್ಷಣೆ ನೀಡದೆ ನೋಡದವರ ಧಮಕಿಗೆ ಹೆದರುತ್ತದೆ ಎಂದರೆ ನಗದೇ ಇರಲು ಸಾಧ್ಯವೇ? ಎಂದು ಕಮ್ರ ಹೇಳಿದ್ದಾರೆ.

ಒಂದು ಕಡೆ ಪ್ರಧಾನಿಗಳು ಹೇಳುತ್ತಾರೆ, ದೇಶ ಬಹಳ ಗಂಭೀರವಾಗಿದೆ. ಹ್ಯೂಮರ್ ಎಂಬುದು ಕಾಣೆಯಾಗುತ್ತಿದೆ. ಜನ ನಗುತ್ತಿಲ್ಲ ಎಂದು. ಇನ್ನೊಂದು ಕಡೆ ಜನರನ್ನು ನಗಿಸಲು ಶೋ ಮಾಡಿದರೆ ಪ್ರಧಾನಿಗಳ ಅನುಯಾಯಿಗಳೇ ಅದನ್ನು ರದ್ದುಗೊಳಿಸುತ್ತಾರೆ. ಇವರ ಚುನಾವಣಾ ರ್ಯಾಲಿಗಳಲ್ಲಿನ ಭಾಷಣ ಕೇಳಲು ಜನರಿಗೆ ದುಡ್ಡು ಕೊಟ್ಟು ಕರೆತರುತ್ತಾರೆ. ಆದರೆ ದುಡ್ಡು ಕೊಟ್ಟು ನಮ್ಮ ಕಾಮಿಡಿ ಕೇಳಲು ಬರುವವರಿಗೆ ಬೆದರಿಕೆಯೊಡ್ಡಿ ಶೋ ಕ್ಯಾನ್ಸಲ್ ಮಾಡುತ್ತಾರೆ. ಇದಕ್ಕೆ ಏನನ್ನಬೇಕು ಎಂದು ಕುನಾಲ್ ಪ್ರಶ್ನಿಸಿದ್ದಾರೆ.

ಹಾಗಾಗಿ ಇದಕ್ಕೆ ಪ್ರತಿಕ್ರಿಯಿಸಿರುವ ದಿಗ್ವಿಜಯ್ ಸಿಂಗ್ ತನ್ನ ಮೇಲೆ ಕಾಮಿಡಿ ಮಾಡಿ. ಆ ಶೋ ಏರ್ಪಡಿಸುತ್ತೇನೆ ಎಂದು ಆಹ್ವಾನಿಸಿದ್ದಾರೆ.


ಇದನ್ನೂ ಓದಿ; ಮುನವ್ವರ್ ಫಾರೂಕಿ ಮತ್ತು ಮಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...