Homeಮುಖಪುಟಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

ಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

- Advertisement -
- Advertisement -

ಭಾರತದ ಖ್ಯಾತ ಸ್ಟ್ಯಾಂಡಪ್‌ ಕಾಮೆಡಿಯನ್‌ಗಳಾದ ಕುನಾಲ್ ಕಮ್ರ ಮತ್ತು ಮುನಾವರ್ ಫಾರೂಕಿಯವರ ಹಲವಾರು ಶೋಗಳು ಬಲಪಂಥೀಯ ಹಿಂದುತ್ವ ಕಾರ್ಯಕರ್ತರ ಗಲಾಟೆಯಿಂದ ರದ್ದಾಗಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ “ಕುನಾಲ್, ಮುನಾವರ್ ನಾನು ನಿಮಗಾಗಿ ಭೋಪಾಲ್‌ನಲ್ಲಿ ಒಂದು ಶೋ ಏರ್ಪಡಿಸುತ್ತೇನೆ. ಅದರ ಎಲ್ಲಾ ಜವಾಬ್ದಾರಿ ನನ್ನದಾಗಿರುತ್ತದೆ. ಆದರೆ ನಿಮ್ಮ ಕಾಮಿಡಿಯ ವಿಷಯ ಕೇವಲ ದಿಗ್ವಿಜಯ್ ಸಿಂಗ್ ಆಗಿರಬೇಕು ಎಂಬುದು ನನ್ನ ಒಂದೇ ಷರತ್ತು” ಎಂದು ತಿಳಿಸಿದ್ದಾರೆ.

“ಈ ಪ್ರದರ್ಶನಕ್ಕೆ ಸಂಘಿಗಳು ಆಕ್ಷೇಪಿಸಬಾರದು!! ಭಯಪಡಬೇಡ ಬನ್ನಿ!! ನಿಮ್ಮ ಅನುಕೂಲಕ್ಕೆ ತಕ್ಕಂತೆ ದಿನಾಂಕ ಮತ್ತು ಸಮಯವನ್ನು ನೀಡಿ. ನಿಮ್ಮ ಎಲ್ಲಾ ಷರತ್ತುಗಳನ್ನು ಸ್ವೀಕರಿಸಲಾಗಿದೆ” ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದು, ಕುನಾಲ್ ಕ್ರಮರವರ ಬಿಬಿಸಿಯೊಂದಿಗಿನ ಸಂದರ್ಶನದ ವಿಡಿಯೋ ತುಣುಕು ಹಂಚಿಕೊಂಡಿದ್ದಾರೆ.

ಗುಜರಾತ್‌ನ ಸ್ಟ್ಯಾಂಡಪ್‌ ಕಾಮೆಡಿಯನ್‌ ಆದ ಮುನಾವರ್ ಫಾರೂಕಿಯವರ 12 ಶೋಗಳನ್ನು ಬಲಪಂಥೀಯರ ಬೆದರಿಕೆಯ ಕಾರಣ ನೀಡಿ ಪೊಲೀಸರು ರದ್ದುಪಡಿಸಿದ್ದರು. ಅದೇ ರೀತಿ ಡಿಸೆಂಬರ್ 1ರಿಂದ 19ರ ನಡುವೆ ಬೆಂಗಳೂರಿನ ಜೆಪಿ ನಗರದ ಸ್ಥಳವೊಂದರಲ್ಲಿ ‘ಕುನಾಲ್ ಕಮ್ರಾ ಲೈವ್’ ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಕಮ್ರಾ ಪ್ರದರ್ಶಿಸಲು ಸಜ್ಜಾಗಿದ್ದರು. ಆದರೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪ್ರತಿಭಟನೆ ನಡೆದ ನಂತರ ಅವರ ಶೋಗಳನ್ನು ಸಹ ರದ್ದುಪಡಿಸಲಾಗಿತ್ತು.

ಈ ಕುರಿತು ಬಿಬಿಸಿ ಸಂದರ್ಶನದಲ್ಲಿ ಮಾತನಾಡಿದ್ದ ಕುನಾಲ್ “ಬೆಂಗಳೂರು ನನಗೆ ಬಹುಮುಖ್ಯ ನಗರ. ನನ್ನ ವೈರಲ್ ವಿಡಿಯೋಗಳು ಬೆಂಗಳೂರಿನಲ್ಲಿ ಪ್ರದರ್ಶಿತವಾಗಿದ್ದವು. ಇದು ಲಿಬರಲ್‌ಗಳಿರುವ ನಗರವಾಗಿತ್ತು. ಆದರೆ ಮೊದಲ ಬಾರಿಗೆ ಇಲ್ಲಿ ನನ್ನ ಶೋ ರದ್ದುಗೊಂಡಿದೆ. ಯಾರ ಬಳಿ ಅಧಿಕಾರವಿರುತ್ತದೊ ಅವರಿಗೆ ನಗುವುದು ಸಹ ಇಷ್ಟವಾಗುವುದಿಲ್ಲ. ಅವರು ಎಷ್ಟು ಪ್ರದರ್ಶನ ರದ್ದುಗೊಳಿಸುತ್ತಾರೋ ನೋಡುತ್ತೇನೆ. ನಾನು ಹೆದರುವುದಿಲ್ಲ, ಶೋ ಮಾಡಿಯೇ ಮಾಡುತ್ತೇನೆ. ನೀವೆಷ್ಟು ರದ್ದುಗೊಳಿಸುತ್ತಿರಿ ನೋಡೋಬಿಡೋಣ” ಎಂದಿದ್ದರು.

ನನ್ನ ಶೋ ರದ್ದಾದ ವಿಷಯ ಕೇಳಿ ನಗುಬಂತು. ಏಕೆಂದರೆ 40-50 ಜನ ಕೂತು ಟಿಕೆಟ್ ಖರೀದಿಸಿ ಕಾಮಿಡಿ ಶೋ ನೋಡುತ್ತಾರೆ. ಆದರೆ ಶೋ ನೋಡಲು ಇಷ್ಟಪಡದವರು ಶೋ ನಡೆಯಬಾರದೆಂದು ಧಮಕಿ ಹಾಕುತ್ತಾರೆ. ಟಿಕೆಟ್ ಖರೀದಿಸಿ ಶೋ ನೋಡುವವರಿಗೆ, ಕಲಾವಿದರಿಗೆ ಸರ್ಕಾರ ರಕ್ಷಣೆ ನೀಡದೆ ನೋಡದವರ ಧಮಕಿಗೆ ಹೆದರುತ್ತದೆ ಎಂದರೆ ನಗದೇ ಇರಲು ಸಾಧ್ಯವೇ? ಎಂದು ಕಮ್ರ ಹೇಳಿದ್ದಾರೆ.

ಒಂದು ಕಡೆ ಪ್ರಧಾನಿಗಳು ಹೇಳುತ್ತಾರೆ, ದೇಶ ಬಹಳ ಗಂಭೀರವಾಗಿದೆ. ಹ್ಯೂಮರ್ ಎಂಬುದು ಕಾಣೆಯಾಗುತ್ತಿದೆ. ಜನ ನಗುತ್ತಿಲ್ಲ ಎಂದು. ಇನ್ನೊಂದು ಕಡೆ ಜನರನ್ನು ನಗಿಸಲು ಶೋ ಮಾಡಿದರೆ ಪ್ರಧಾನಿಗಳ ಅನುಯಾಯಿಗಳೇ ಅದನ್ನು ರದ್ದುಗೊಳಿಸುತ್ತಾರೆ. ಇವರ ಚುನಾವಣಾ ರ್ಯಾಲಿಗಳಲ್ಲಿನ ಭಾಷಣ ಕೇಳಲು ಜನರಿಗೆ ದುಡ್ಡು ಕೊಟ್ಟು ಕರೆತರುತ್ತಾರೆ. ಆದರೆ ದುಡ್ಡು ಕೊಟ್ಟು ನಮ್ಮ ಕಾಮಿಡಿ ಕೇಳಲು ಬರುವವರಿಗೆ ಬೆದರಿಕೆಯೊಡ್ಡಿ ಶೋ ಕ್ಯಾನ್ಸಲ್ ಮಾಡುತ್ತಾರೆ. ಇದಕ್ಕೆ ಏನನ್ನಬೇಕು ಎಂದು ಕುನಾಲ್ ಪ್ರಶ್ನಿಸಿದ್ದಾರೆ.

ಹಾಗಾಗಿ ಇದಕ್ಕೆ ಪ್ರತಿಕ್ರಿಯಿಸಿರುವ ದಿಗ್ವಿಜಯ್ ಸಿಂಗ್ ತನ್ನ ಮೇಲೆ ಕಾಮಿಡಿ ಮಾಡಿ. ಆ ಶೋ ಏರ್ಪಡಿಸುತ್ತೇನೆ ಎಂದು ಆಹ್ವಾನಿಸಿದ್ದಾರೆ.


ಇದನ್ನೂ ಓದಿ; ಮುನವ್ವರ್ ಫಾರೂಕಿ ಮತ್ತು ಮಾಬ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...