Homeಕರ್ನಾಟಕಹಿರಿಯ ನಟ 'ವೈಜನಾಥ ಬಿರಾದಾರ' ಅವರ ಹುಟ್ಟುಹಬ್ಬ ಇಂದು!

ಹಿರಿಯ ನಟ ‘ವೈಜನಾಥ ಬಿರಾದಾರ’ ಅವರ ಹುಟ್ಟುಹಬ್ಬ ಇಂದು!

- Advertisement -
- Advertisement -

‘ವೈಜನಾಥ ಬಿರಾದಾರ’ ಎಂದಾಕ್ಷಣ ತೆರೆಯ ಮೇಲಿನ ಶೋಷಿತ ವ್ಯಕ್ತಿಯೊಬ್ಬನ ಚಿತ್ರ ಕಣ್ಮುಂದೆ ಬರುತ್ತದೆ. ಅವಮಾನ, ಬಡತನ, ಸಂಕಟಗಳನ್ನೆಲ್ಲಾ ಹೊಟ್ಟೆಯಲ್ಲಿಟ್ಟುಕೊಂಡು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪಾತ್ರಗಳಲ್ಲೇ ಅವರು ಹೆಚ್ಚಾಗಿ ಕಾಣಿಸಿಕೊಂಡದ್ದು. ಹಿರಿಯ ನಟ ಇಂದು 67ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಕಳೆದ ಮೂರೂವರೆ ದಶಕಗಳಿಂದ ವೃತ್ತಿರಂಗಭೂಮಿ ಮತ್ತು ಕನ್ನಡ ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ ನಟ ‘ವೈಜನಾಥ ಬಿರಾದಾರ’ ಇಂದು 68ಕ್ಕೆ ಕಾಲಿಟ್ಟಿದ್ದಾರೆ. ಅವರ ಹುಟ್ಟೂರು ಬೀದರ್ ಜಿಲ್ಲೆಯ ತೆಗಾಂಪೂರ್. ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದ. ನಟಿಸಿದ ಚಿತ್ರಗಳ ಸಂಖ್ಯೆ ಐನೂರರ ಆಸುಪಾಸಿನಲ್ಲಿದೆ. ತಮ್ಮ ‘ಬಿರಾದಾರ ಮಿತ್ರ ಮಂಡಳಿ’ ತಂಡದೊಂದಿಗೆ ಇಂದಿಗೂ ಅವರು ನಾಟಕಗಳನ್ನು ಪ್ರದರ್ಶಿಸುತ್ತಾರೆ. ಗಿರೀಶ್ ಕಾಸರವಳ್ಳಿಯವರ ‘ಕನಸೆಂಬೋ ಕುದುರೆಯನೇರಿ’ ಬಿರಾದಾರ ಅವರ ಮಹತ್ವದ ಚಿತ್ರಗಳಲ್ಲೊಂದು. ಸ್ಪೇನ್‍ನ ಮ್ಯಾಡ್ರಿಡ್ ‘ಇಂಡಿಯಾ ಇಮ್ಯಾಜಿನ್’ ಚಿತ್ರೋತ್ಸವದಲ್ಲಿ (2011) ಈ ಚಿತ್ರ ಪ್ರದರ್ಶನಗೊಂಡಿತ್ತು. ಚಿತ್ರೋತ್ಸವ ಕೊಡಮಾಡುವ ಅತ್ಯುತ್ತಮ ನಟ ಪುರಸ್ಕಾರ ಬಿರಾದಾರ ಅವರಿಗೆ ಸಂದಿದೆ.

ವೈಜನಾಥ ಬಿರಾದಾರ

ಸದ್ಯ ಕೊರೋನಾ ಸಂಕಟದಿಂದಾಗಿ ಅವರು ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದರಿಂದಾಗಿ ತೊಂದರೆಗೀಡಾಗಿರುವುದು ಅವರ ಮಾತುಗಳಲ್ಲಿ ವೇದ್ಯವಾಗುತ್ತದೆ. “ಕಲಾವಿದರಿಗೆ ಸಂಕಷ್ಟ ಯಾವಾಗ ತಪ್ಪಿದೆ? ಕೊರೋನಾ ಕಾಲ ಕಲಾವಿದರಿಗೆ ಸಂಕಷ್ಟ ತಂದಿದೆ. ನಮಗೆ ಕಲೆ ಇದೆ, ಖಾಯಂ ನೆಲೆ ಇಲ್ಲ. ಹೀಗೇ ಜೀವನ ನಡೆಸಿಕೊಂಡು ಹೋಗ್ತಾ ಇರೋದು ಅಷ್ಟೆ” ಎನ್ನುತ್ತಾರವರು.

ಕನ್ನಡಿಗರು ತಮ್ಮ ಮೇಲಿಟ್ಟಿರುವ ಅಭಿಮಾನ, ಪ್ರೀತಿಗೆ ಋಣಿ ಎನ್ನುತ್ತಾರವರು. ಮುಂದೆ ಮತ್ತಷ್ಟು ವೈವಿಧ್ಯಮಯ ಪಾತ್ರಗಳಲ್ಲಿ ತೊಡಗಿಸಿಕೊಳ್ಳುವ ಇರಾದೆ ಅವರದ್ದು. ಹುಟ್ಟುಹಬ್ಬದ ಸಂದರ್ಭದಲ್ಲಿ ಅವರು ತಮ್ಮ ವೃತ್ತಿ ಬದುಕಿನ ಆರಂಭದ ದಿನಗಳಲ್ಲಿನ ಎರಡು ಶೂಟಿಂಗ್ ಸೋಜಿಗಗಳನ್ನು ಇಲ್ಲಿ ನೆನಪಿಸಿಕೊಂಡಿದ್ದಾರೆ.

(ಬಿರಾದಾರ್ ಅವರು ಹೇಳಿಕೊಂಡಂತೆ…)

ಅದೇ ಡಬ್ಬಿಂಗ್ ಕಣೋ!

‘ಶಂಖನಾದ’ ಚಿತ್ರದಲ್ಲಿ ನಟಿಸಿದ ನಂತರ ನಿರ್ದೇಶಕ ಉಮೇಶ್ ಕುಲಕರ್ಣಿ, ‘ಏನ್ ಬ್ರದರ್ ಡಬ್ಬಿಂಗ್ ಮಾಡ್ತಿಯೇನಪ್ಪ?’ ಎಂದು ಕೇಳಿದರು. ಅದಿನ್ನೂ ನನಗೆ ಎರಡನೇ ಸಿನಿಮಾ ಆದ್ದರಿಂದ ಡಬ್ಬಿಂಗ್ ಏನೆಂದೇ ಗೊತ್ತಿರಲಿಲ್ಲ. ಹಾಗಾಗಿ, ‘ಇಲ್ಲ ಸಾರ್’ ಅಂದೆ. ‘ಆಯ್ತು, ಬೆಳಗ್ಗೆ ಚಾಮುಂಡೇಶ್ವರಿ ಸ್ಟುಡಿಯೋಗೆ ಬಾ. ಅಲ್ಲಿ ನೋಡ್ಕೋವಂತೆ’ ಎಂದರು ಕುಲಕರ್ಣಿ. ಬೆಳಕ್ಕೆ 8ಕ್ಕೆ ಹೋಗಿ ತಿಂಡಿ ತಿಂದು ಸ್ಟುಡಿಯೋದಲ್ಲಿ ಕುಳಿತುಕೊಂಡೆ. ಮಧ್ಯಾಹ್ನ ಒಂದೂವರೆಗೆ ಊಟವೂ ಆಯ್ತು. ‘ಏನಪ್ಪಾ, ಡಬ್ಬಿಂಗ್ ನೋಡಿಕೊಂಡ್ಯಾ?’ ಅಂತ ಕೇಳಿದರು ಕುಲಕರ್ಣಿ. ನಾನು ಇಲ್ಲವೆಂದೆ. ‘ಮತ್ತೆ, ಬೆಳಗ್ಗೆಯಿಂದ ಇಲ್ಲಿ ಏನು ಮಾಡಿದೆ?’ ಎಂದರು ನಿರ್ದೇಶಕರು. ‘ನೀವು ಏನೇನೋ ಮಾಡ್ತಿದ್ರಲ್ಲಾ, ನೋಡ್ತಾ ಕುಳಿತಿದ್ದೆ’ ಎಂದೆ. ‘ಏ ದಡ್ಡಾ ಅದೇ ಡಬ್ಬಿಂಗ್ ಕಣೋ!’ ಅಂದ್ರು ಉಮೇಶ್ ಕುಲಕರ್ಣಿ.

ವೈಜನಾಥ ಬಿರಾದಾರ

ಮೆಜಸ್ಟಿಕ್‍ನಲ್ಲಿ ತಗ್ಲಾಕ್ಕೊಂಡ ಕುಡುಕರು!

ಉತ್ತರ ಕರ್ನಾಟಕದಲ್ಲೊಂದು ನಾಟಕ ಮುಗಿಸಿಕೊಂಡು ಬಸ್‍ನಲ್ಲಿ ಬೆಂಗಳೂರಿಗೆ ಬಂದಿಳಿದೆ. ಮೆಜಸ್ಟಿಕ್‍ನಲ್ಲಿ ಬಸ್ ಇಳಿದು ಬಿಎಂಟಿಸಿ ಬಸ್‍ಸ್ಟ್ಯಾಂಡ್ ಕಡೆಗೆ ಬರ್ತಾ ಇದ್ದೆ. ಫುಲ್ ಟೈಟಾಗಿದ್ದ ಇಬ್ಬರು ಕುಡುಕರು ತೂರಾಡುತ್ತಾ ಎದುರಾದರು. `ಸಾರ್, ನೀವು! ನಾವು ನಿಮ್ ಅಭಿಮಾನಿಗುಳು. ಬನ್ನಿ ನಮ್ಗೆ ಕಂಪನಿ ಕೊಡಿ..’ ಎಂದು ಕೈಹಿಡಿದುಕೊಂಡರು. ಇದೇನು ಅಭಿಮಾನವೋ, ಕುಚೇಷ್ಟೆಯೋ ಒಂದೂ ಗೊತ್ತಾಗಲಿಲ್ಲ. `ಇಲ್ರಪ್ಪಾ, ನಾನು ಕುಡುಕನ ಪಾತ್ರ ಮಾಡ್ತೀನಷ್ಟೆ, ಕುಡಿಯೋಲ್ಲ’ ಅಂದೆ. `ಲೇಯ್, ಸುಳ್ಳು ಹೇಳ್ಬೇಡ! ಕುಡೀದೇ ಹೆಂಗಲೆ ನಿಶೆ ಏರ್ತದೆ? ಈಗ ಸುಮ್ನೆ ಬತ್ತಿಯೋ, ಇಲ್ವೋ!?’ ಎಂದು ಎಳೆದಾಡತೊಡಗಿದರು. ಅಷ್ಟರಲ್ಲಿ ನನ್ನನ್ನು ಗುರುತು ಹಿಡಿದ ಮೂರ್ನಾಲ್ಕು ಮಂದಿ ಸಂಕಷ್ಟದಿಂದ ಪಾರು ಮಾಡಿದರು!


ಓದಿ: ಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...