Homeಕರ್ನಾಟಕಹಿರಿಯ ನಟ 'ವೈಜನಾಥ ಬಿರಾದಾರ' ಅವರ ಹುಟ್ಟುಹಬ್ಬ ಇಂದು!

ಹಿರಿಯ ನಟ ‘ವೈಜನಾಥ ಬಿರಾದಾರ’ ಅವರ ಹುಟ್ಟುಹಬ್ಬ ಇಂದು!

- Advertisement -
- Advertisement -

‘ವೈಜನಾಥ ಬಿರಾದಾರ’ ಎಂದಾಕ್ಷಣ ತೆರೆಯ ಮೇಲಿನ ಶೋಷಿತ ವ್ಯಕ್ತಿಯೊಬ್ಬನ ಚಿತ್ರ ಕಣ್ಮುಂದೆ ಬರುತ್ತದೆ. ಅವಮಾನ, ಬಡತನ, ಸಂಕಟಗಳನ್ನೆಲ್ಲಾ ಹೊಟ್ಟೆಯಲ್ಲಿಟ್ಟುಕೊಂಡು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪಾತ್ರಗಳಲ್ಲೇ ಅವರು ಹೆಚ್ಚಾಗಿ ಕಾಣಿಸಿಕೊಂಡದ್ದು. ಹಿರಿಯ ನಟ ಇಂದು 67ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಕಳೆದ ಮೂರೂವರೆ ದಶಕಗಳಿಂದ ವೃತ್ತಿರಂಗಭೂಮಿ ಮತ್ತು ಕನ್ನಡ ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ ನಟ ‘ವೈಜನಾಥ ಬಿರಾದಾರ’ ಇಂದು 68ಕ್ಕೆ ಕಾಲಿಟ್ಟಿದ್ದಾರೆ. ಅವರ ಹುಟ್ಟೂರು ಬೀದರ್ ಜಿಲ್ಲೆಯ ತೆಗಾಂಪೂರ್. ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದ. ನಟಿಸಿದ ಚಿತ್ರಗಳ ಸಂಖ್ಯೆ ಐನೂರರ ಆಸುಪಾಸಿನಲ್ಲಿದೆ. ತಮ್ಮ ‘ಬಿರಾದಾರ ಮಿತ್ರ ಮಂಡಳಿ’ ತಂಡದೊಂದಿಗೆ ಇಂದಿಗೂ ಅವರು ನಾಟಕಗಳನ್ನು ಪ್ರದರ್ಶಿಸುತ್ತಾರೆ. ಗಿರೀಶ್ ಕಾಸರವಳ್ಳಿಯವರ ‘ಕನಸೆಂಬೋ ಕುದುರೆಯನೇರಿ’ ಬಿರಾದಾರ ಅವರ ಮಹತ್ವದ ಚಿತ್ರಗಳಲ್ಲೊಂದು. ಸ್ಪೇನ್‍ನ ಮ್ಯಾಡ್ರಿಡ್ ‘ಇಂಡಿಯಾ ಇಮ್ಯಾಜಿನ್’ ಚಿತ್ರೋತ್ಸವದಲ್ಲಿ (2011) ಈ ಚಿತ್ರ ಪ್ರದರ್ಶನಗೊಂಡಿತ್ತು. ಚಿತ್ರೋತ್ಸವ ಕೊಡಮಾಡುವ ಅತ್ಯುತ್ತಮ ನಟ ಪುರಸ್ಕಾರ ಬಿರಾದಾರ ಅವರಿಗೆ ಸಂದಿದೆ.

ವೈಜನಾಥ ಬಿರಾದಾರ

ಸದ್ಯ ಕೊರೋನಾ ಸಂಕಟದಿಂದಾಗಿ ಅವರು ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದರಿಂದಾಗಿ ತೊಂದರೆಗೀಡಾಗಿರುವುದು ಅವರ ಮಾತುಗಳಲ್ಲಿ ವೇದ್ಯವಾಗುತ್ತದೆ. “ಕಲಾವಿದರಿಗೆ ಸಂಕಷ್ಟ ಯಾವಾಗ ತಪ್ಪಿದೆ? ಕೊರೋನಾ ಕಾಲ ಕಲಾವಿದರಿಗೆ ಸಂಕಷ್ಟ ತಂದಿದೆ. ನಮಗೆ ಕಲೆ ಇದೆ, ಖಾಯಂ ನೆಲೆ ಇಲ್ಲ. ಹೀಗೇ ಜೀವನ ನಡೆಸಿಕೊಂಡು ಹೋಗ್ತಾ ಇರೋದು ಅಷ್ಟೆ” ಎನ್ನುತ್ತಾರವರು.

ಕನ್ನಡಿಗರು ತಮ್ಮ ಮೇಲಿಟ್ಟಿರುವ ಅಭಿಮಾನ, ಪ್ರೀತಿಗೆ ಋಣಿ ಎನ್ನುತ್ತಾರವರು. ಮುಂದೆ ಮತ್ತಷ್ಟು ವೈವಿಧ್ಯಮಯ ಪಾತ್ರಗಳಲ್ಲಿ ತೊಡಗಿಸಿಕೊಳ್ಳುವ ಇರಾದೆ ಅವರದ್ದು. ಹುಟ್ಟುಹಬ್ಬದ ಸಂದರ್ಭದಲ್ಲಿ ಅವರು ತಮ್ಮ ವೃತ್ತಿ ಬದುಕಿನ ಆರಂಭದ ದಿನಗಳಲ್ಲಿನ ಎರಡು ಶೂಟಿಂಗ್ ಸೋಜಿಗಗಳನ್ನು ಇಲ್ಲಿ ನೆನಪಿಸಿಕೊಂಡಿದ್ದಾರೆ.

(ಬಿರಾದಾರ್ ಅವರು ಹೇಳಿಕೊಂಡಂತೆ…)

ಅದೇ ಡಬ್ಬಿಂಗ್ ಕಣೋ!

‘ಶಂಖನಾದ’ ಚಿತ್ರದಲ್ಲಿ ನಟಿಸಿದ ನಂತರ ನಿರ್ದೇಶಕ ಉಮೇಶ್ ಕುಲಕರ್ಣಿ, ‘ಏನ್ ಬ್ರದರ್ ಡಬ್ಬಿಂಗ್ ಮಾಡ್ತಿಯೇನಪ್ಪ?’ ಎಂದು ಕೇಳಿದರು. ಅದಿನ್ನೂ ನನಗೆ ಎರಡನೇ ಸಿನಿಮಾ ಆದ್ದರಿಂದ ಡಬ್ಬಿಂಗ್ ಏನೆಂದೇ ಗೊತ್ತಿರಲಿಲ್ಲ. ಹಾಗಾಗಿ, ‘ಇಲ್ಲ ಸಾರ್’ ಅಂದೆ. ‘ಆಯ್ತು, ಬೆಳಗ್ಗೆ ಚಾಮುಂಡೇಶ್ವರಿ ಸ್ಟುಡಿಯೋಗೆ ಬಾ. ಅಲ್ಲಿ ನೋಡ್ಕೋವಂತೆ’ ಎಂದರು ಕುಲಕರ್ಣಿ. ಬೆಳಕ್ಕೆ 8ಕ್ಕೆ ಹೋಗಿ ತಿಂಡಿ ತಿಂದು ಸ್ಟುಡಿಯೋದಲ್ಲಿ ಕುಳಿತುಕೊಂಡೆ. ಮಧ್ಯಾಹ್ನ ಒಂದೂವರೆಗೆ ಊಟವೂ ಆಯ್ತು. ‘ಏನಪ್ಪಾ, ಡಬ್ಬಿಂಗ್ ನೋಡಿಕೊಂಡ್ಯಾ?’ ಅಂತ ಕೇಳಿದರು ಕುಲಕರ್ಣಿ. ನಾನು ಇಲ್ಲವೆಂದೆ. ‘ಮತ್ತೆ, ಬೆಳಗ್ಗೆಯಿಂದ ಇಲ್ಲಿ ಏನು ಮಾಡಿದೆ?’ ಎಂದರು ನಿರ್ದೇಶಕರು. ‘ನೀವು ಏನೇನೋ ಮಾಡ್ತಿದ್ರಲ್ಲಾ, ನೋಡ್ತಾ ಕುಳಿತಿದ್ದೆ’ ಎಂದೆ. ‘ಏ ದಡ್ಡಾ ಅದೇ ಡಬ್ಬಿಂಗ್ ಕಣೋ!’ ಅಂದ್ರು ಉಮೇಶ್ ಕುಲಕರ್ಣಿ.

ವೈಜನಾಥ ಬಿರಾದಾರ

ಮೆಜಸ್ಟಿಕ್‍ನಲ್ಲಿ ತಗ್ಲಾಕ್ಕೊಂಡ ಕುಡುಕರು!

ಉತ್ತರ ಕರ್ನಾಟಕದಲ್ಲೊಂದು ನಾಟಕ ಮುಗಿಸಿಕೊಂಡು ಬಸ್‍ನಲ್ಲಿ ಬೆಂಗಳೂರಿಗೆ ಬಂದಿಳಿದೆ. ಮೆಜಸ್ಟಿಕ್‍ನಲ್ಲಿ ಬಸ್ ಇಳಿದು ಬಿಎಂಟಿಸಿ ಬಸ್‍ಸ್ಟ್ಯಾಂಡ್ ಕಡೆಗೆ ಬರ್ತಾ ಇದ್ದೆ. ಫುಲ್ ಟೈಟಾಗಿದ್ದ ಇಬ್ಬರು ಕುಡುಕರು ತೂರಾಡುತ್ತಾ ಎದುರಾದರು. `ಸಾರ್, ನೀವು! ನಾವು ನಿಮ್ ಅಭಿಮಾನಿಗುಳು. ಬನ್ನಿ ನಮ್ಗೆ ಕಂಪನಿ ಕೊಡಿ..’ ಎಂದು ಕೈಹಿಡಿದುಕೊಂಡರು. ಇದೇನು ಅಭಿಮಾನವೋ, ಕುಚೇಷ್ಟೆಯೋ ಒಂದೂ ಗೊತ್ತಾಗಲಿಲ್ಲ. `ಇಲ್ರಪ್ಪಾ, ನಾನು ಕುಡುಕನ ಪಾತ್ರ ಮಾಡ್ತೀನಷ್ಟೆ, ಕುಡಿಯೋಲ್ಲ’ ಅಂದೆ. `ಲೇಯ್, ಸುಳ್ಳು ಹೇಳ್ಬೇಡ! ಕುಡೀದೇ ಹೆಂಗಲೆ ನಿಶೆ ಏರ್ತದೆ? ಈಗ ಸುಮ್ನೆ ಬತ್ತಿಯೋ, ಇಲ್ವೋ!?’ ಎಂದು ಎಳೆದಾಡತೊಡಗಿದರು. ಅಷ್ಟರಲ್ಲಿ ನನ್ನನ್ನು ಗುರುತು ಹಿಡಿದ ಮೂರ್ನಾಲ್ಕು ಮಂದಿ ಸಂಕಷ್ಟದಿಂದ ಪಾರು ಮಾಡಿದರು!


ಓದಿ: ಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...