Homeಕರ್ನಾಟಕಹಿರಿಯ ನಟ 'ವೈಜನಾಥ ಬಿರಾದಾರ' ಅವರ ಹುಟ್ಟುಹಬ್ಬ ಇಂದು!

ಹಿರಿಯ ನಟ ‘ವೈಜನಾಥ ಬಿರಾದಾರ’ ಅವರ ಹುಟ್ಟುಹಬ್ಬ ಇಂದು!

- Advertisement -
- Advertisement -

‘ವೈಜನಾಥ ಬಿರಾದಾರ’ ಎಂದಾಕ್ಷಣ ತೆರೆಯ ಮೇಲಿನ ಶೋಷಿತ ವ್ಯಕ್ತಿಯೊಬ್ಬನ ಚಿತ್ರ ಕಣ್ಮುಂದೆ ಬರುತ್ತದೆ. ಅವಮಾನ, ಬಡತನ, ಸಂಕಟಗಳನ್ನೆಲ್ಲಾ ಹೊಟ್ಟೆಯಲ್ಲಿಟ್ಟುಕೊಂಡು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪಾತ್ರಗಳಲ್ಲೇ ಅವರು ಹೆಚ್ಚಾಗಿ ಕಾಣಿಸಿಕೊಂಡದ್ದು. ಹಿರಿಯ ನಟ ಇಂದು 67ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಕಳೆದ ಮೂರೂವರೆ ದಶಕಗಳಿಂದ ವೃತ್ತಿರಂಗಭೂಮಿ ಮತ್ತು ಕನ್ನಡ ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ ನಟ ‘ವೈಜನಾಥ ಬಿರಾದಾರ’ ಇಂದು 68ಕ್ಕೆ ಕಾಲಿಟ್ಟಿದ್ದಾರೆ. ಅವರ ಹುಟ್ಟೂರು ಬೀದರ್ ಜಿಲ್ಲೆಯ ತೆಗಾಂಪೂರ್. ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದ. ನಟಿಸಿದ ಚಿತ್ರಗಳ ಸಂಖ್ಯೆ ಐನೂರರ ಆಸುಪಾಸಿನಲ್ಲಿದೆ. ತಮ್ಮ ‘ಬಿರಾದಾರ ಮಿತ್ರ ಮಂಡಳಿ’ ತಂಡದೊಂದಿಗೆ ಇಂದಿಗೂ ಅವರು ನಾಟಕಗಳನ್ನು ಪ್ರದರ್ಶಿಸುತ್ತಾರೆ. ಗಿರೀಶ್ ಕಾಸರವಳ್ಳಿಯವರ ‘ಕನಸೆಂಬೋ ಕುದುರೆಯನೇರಿ’ ಬಿರಾದಾರ ಅವರ ಮಹತ್ವದ ಚಿತ್ರಗಳಲ್ಲೊಂದು. ಸ್ಪೇನ್‍ನ ಮ್ಯಾಡ್ರಿಡ್ ‘ಇಂಡಿಯಾ ಇಮ್ಯಾಜಿನ್’ ಚಿತ್ರೋತ್ಸವದಲ್ಲಿ (2011) ಈ ಚಿತ್ರ ಪ್ರದರ್ಶನಗೊಂಡಿತ್ತು. ಚಿತ್ರೋತ್ಸವ ಕೊಡಮಾಡುವ ಅತ್ಯುತ್ತಮ ನಟ ಪುರಸ್ಕಾರ ಬಿರಾದಾರ ಅವರಿಗೆ ಸಂದಿದೆ.

ವೈಜನಾಥ ಬಿರಾದಾರ

ಸದ್ಯ ಕೊರೋನಾ ಸಂಕಟದಿಂದಾಗಿ ಅವರು ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದರಿಂದಾಗಿ ತೊಂದರೆಗೀಡಾಗಿರುವುದು ಅವರ ಮಾತುಗಳಲ್ಲಿ ವೇದ್ಯವಾಗುತ್ತದೆ. “ಕಲಾವಿದರಿಗೆ ಸಂಕಷ್ಟ ಯಾವಾಗ ತಪ್ಪಿದೆ? ಕೊರೋನಾ ಕಾಲ ಕಲಾವಿದರಿಗೆ ಸಂಕಷ್ಟ ತಂದಿದೆ. ನಮಗೆ ಕಲೆ ಇದೆ, ಖಾಯಂ ನೆಲೆ ಇಲ್ಲ. ಹೀಗೇ ಜೀವನ ನಡೆಸಿಕೊಂಡು ಹೋಗ್ತಾ ಇರೋದು ಅಷ್ಟೆ” ಎನ್ನುತ್ತಾರವರು.

ಕನ್ನಡಿಗರು ತಮ್ಮ ಮೇಲಿಟ್ಟಿರುವ ಅಭಿಮಾನ, ಪ್ರೀತಿಗೆ ಋಣಿ ಎನ್ನುತ್ತಾರವರು. ಮುಂದೆ ಮತ್ತಷ್ಟು ವೈವಿಧ್ಯಮಯ ಪಾತ್ರಗಳಲ್ಲಿ ತೊಡಗಿಸಿಕೊಳ್ಳುವ ಇರಾದೆ ಅವರದ್ದು. ಹುಟ್ಟುಹಬ್ಬದ ಸಂದರ್ಭದಲ್ಲಿ ಅವರು ತಮ್ಮ ವೃತ್ತಿ ಬದುಕಿನ ಆರಂಭದ ದಿನಗಳಲ್ಲಿನ ಎರಡು ಶೂಟಿಂಗ್ ಸೋಜಿಗಗಳನ್ನು ಇಲ್ಲಿ ನೆನಪಿಸಿಕೊಂಡಿದ್ದಾರೆ.

(ಬಿರಾದಾರ್ ಅವರು ಹೇಳಿಕೊಂಡಂತೆ…)

ಅದೇ ಡಬ್ಬಿಂಗ್ ಕಣೋ!

‘ಶಂಖನಾದ’ ಚಿತ್ರದಲ್ಲಿ ನಟಿಸಿದ ನಂತರ ನಿರ್ದೇಶಕ ಉಮೇಶ್ ಕುಲಕರ್ಣಿ, ‘ಏನ್ ಬ್ರದರ್ ಡಬ್ಬಿಂಗ್ ಮಾಡ್ತಿಯೇನಪ್ಪ?’ ಎಂದು ಕೇಳಿದರು. ಅದಿನ್ನೂ ನನಗೆ ಎರಡನೇ ಸಿನಿಮಾ ಆದ್ದರಿಂದ ಡಬ್ಬಿಂಗ್ ಏನೆಂದೇ ಗೊತ್ತಿರಲಿಲ್ಲ. ಹಾಗಾಗಿ, ‘ಇಲ್ಲ ಸಾರ್’ ಅಂದೆ. ‘ಆಯ್ತು, ಬೆಳಗ್ಗೆ ಚಾಮುಂಡೇಶ್ವರಿ ಸ್ಟುಡಿಯೋಗೆ ಬಾ. ಅಲ್ಲಿ ನೋಡ್ಕೋವಂತೆ’ ಎಂದರು ಕುಲಕರ್ಣಿ. ಬೆಳಕ್ಕೆ 8ಕ್ಕೆ ಹೋಗಿ ತಿಂಡಿ ತಿಂದು ಸ್ಟುಡಿಯೋದಲ್ಲಿ ಕುಳಿತುಕೊಂಡೆ. ಮಧ್ಯಾಹ್ನ ಒಂದೂವರೆಗೆ ಊಟವೂ ಆಯ್ತು. ‘ಏನಪ್ಪಾ, ಡಬ್ಬಿಂಗ್ ನೋಡಿಕೊಂಡ್ಯಾ?’ ಅಂತ ಕೇಳಿದರು ಕುಲಕರ್ಣಿ. ನಾನು ಇಲ್ಲವೆಂದೆ. ‘ಮತ್ತೆ, ಬೆಳಗ್ಗೆಯಿಂದ ಇಲ್ಲಿ ಏನು ಮಾಡಿದೆ?’ ಎಂದರು ನಿರ್ದೇಶಕರು. ‘ನೀವು ಏನೇನೋ ಮಾಡ್ತಿದ್ರಲ್ಲಾ, ನೋಡ್ತಾ ಕುಳಿತಿದ್ದೆ’ ಎಂದೆ. ‘ಏ ದಡ್ಡಾ ಅದೇ ಡಬ್ಬಿಂಗ್ ಕಣೋ!’ ಅಂದ್ರು ಉಮೇಶ್ ಕುಲಕರ್ಣಿ.

ವೈಜನಾಥ ಬಿರಾದಾರ

ಮೆಜಸ್ಟಿಕ್‍ನಲ್ಲಿ ತಗ್ಲಾಕ್ಕೊಂಡ ಕುಡುಕರು!

ಉತ್ತರ ಕರ್ನಾಟಕದಲ್ಲೊಂದು ನಾಟಕ ಮುಗಿಸಿಕೊಂಡು ಬಸ್‍ನಲ್ಲಿ ಬೆಂಗಳೂರಿಗೆ ಬಂದಿಳಿದೆ. ಮೆಜಸ್ಟಿಕ್‍ನಲ್ಲಿ ಬಸ್ ಇಳಿದು ಬಿಎಂಟಿಸಿ ಬಸ್‍ಸ್ಟ್ಯಾಂಡ್ ಕಡೆಗೆ ಬರ್ತಾ ಇದ್ದೆ. ಫುಲ್ ಟೈಟಾಗಿದ್ದ ಇಬ್ಬರು ಕುಡುಕರು ತೂರಾಡುತ್ತಾ ಎದುರಾದರು. `ಸಾರ್, ನೀವು! ನಾವು ನಿಮ್ ಅಭಿಮಾನಿಗುಳು. ಬನ್ನಿ ನಮ್ಗೆ ಕಂಪನಿ ಕೊಡಿ..’ ಎಂದು ಕೈಹಿಡಿದುಕೊಂಡರು. ಇದೇನು ಅಭಿಮಾನವೋ, ಕುಚೇಷ್ಟೆಯೋ ಒಂದೂ ಗೊತ್ತಾಗಲಿಲ್ಲ. `ಇಲ್ರಪ್ಪಾ, ನಾನು ಕುಡುಕನ ಪಾತ್ರ ಮಾಡ್ತೀನಷ್ಟೆ, ಕುಡಿಯೋಲ್ಲ’ ಅಂದೆ. `ಲೇಯ್, ಸುಳ್ಳು ಹೇಳ್ಬೇಡ! ಕುಡೀದೇ ಹೆಂಗಲೆ ನಿಶೆ ಏರ್ತದೆ? ಈಗ ಸುಮ್ನೆ ಬತ್ತಿಯೋ, ಇಲ್ವೋ!?’ ಎಂದು ಎಳೆದಾಡತೊಡಗಿದರು. ಅಷ್ಟರಲ್ಲಿ ನನ್ನನ್ನು ಗುರುತು ಹಿಡಿದ ಮೂರ್ನಾಲ್ಕು ಮಂದಿ ಸಂಕಷ್ಟದಿಂದ ಪಾರು ಮಾಡಿದರು!


ಓದಿ: ಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...