Homeಕರ್ನಾಟಕಹಿರಿಯ ನಟ 'ವೈಜನಾಥ ಬಿರಾದಾರ' ಅವರ ಹುಟ್ಟುಹಬ್ಬ ಇಂದು!

ಹಿರಿಯ ನಟ ‘ವೈಜನಾಥ ಬಿರಾದಾರ’ ಅವರ ಹುಟ್ಟುಹಬ್ಬ ಇಂದು!

- Advertisement -
- Advertisement -

‘ವೈಜನಾಥ ಬಿರಾದಾರ’ ಎಂದಾಕ್ಷಣ ತೆರೆಯ ಮೇಲಿನ ಶೋಷಿತ ವ್ಯಕ್ತಿಯೊಬ್ಬನ ಚಿತ್ರ ಕಣ್ಮುಂದೆ ಬರುತ್ತದೆ. ಅವಮಾನ, ಬಡತನ, ಸಂಕಟಗಳನ್ನೆಲ್ಲಾ ಹೊಟ್ಟೆಯಲ್ಲಿಟ್ಟುಕೊಂಡು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪಾತ್ರಗಳಲ್ಲೇ ಅವರು ಹೆಚ್ಚಾಗಿ ಕಾಣಿಸಿಕೊಂಡದ್ದು. ಹಿರಿಯ ನಟ ಇಂದು 67ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಕಳೆದ ಮೂರೂವರೆ ದಶಕಗಳಿಂದ ವೃತ್ತಿರಂಗಭೂಮಿ ಮತ್ತು ಕನ್ನಡ ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ ನಟ ‘ವೈಜನಾಥ ಬಿರಾದಾರ’ ಇಂದು 68ಕ್ಕೆ ಕಾಲಿಟ್ಟಿದ್ದಾರೆ. ಅವರ ಹುಟ್ಟೂರು ಬೀದರ್ ಜಿಲ್ಲೆಯ ತೆಗಾಂಪೂರ್. ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದ. ನಟಿಸಿದ ಚಿತ್ರಗಳ ಸಂಖ್ಯೆ ಐನೂರರ ಆಸುಪಾಸಿನಲ್ಲಿದೆ. ತಮ್ಮ ‘ಬಿರಾದಾರ ಮಿತ್ರ ಮಂಡಳಿ’ ತಂಡದೊಂದಿಗೆ ಇಂದಿಗೂ ಅವರು ನಾಟಕಗಳನ್ನು ಪ್ರದರ್ಶಿಸುತ್ತಾರೆ. ಗಿರೀಶ್ ಕಾಸರವಳ್ಳಿಯವರ ‘ಕನಸೆಂಬೋ ಕುದುರೆಯನೇರಿ’ ಬಿರಾದಾರ ಅವರ ಮಹತ್ವದ ಚಿತ್ರಗಳಲ್ಲೊಂದು. ಸ್ಪೇನ್‍ನ ಮ್ಯಾಡ್ರಿಡ್ ‘ಇಂಡಿಯಾ ಇಮ್ಯಾಜಿನ್’ ಚಿತ್ರೋತ್ಸವದಲ್ಲಿ (2011) ಈ ಚಿತ್ರ ಪ್ರದರ್ಶನಗೊಂಡಿತ್ತು. ಚಿತ್ರೋತ್ಸವ ಕೊಡಮಾಡುವ ಅತ್ಯುತ್ತಮ ನಟ ಪುರಸ್ಕಾರ ಬಿರಾದಾರ ಅವರಿಗೆ ಸಂದಿದೆ.

ವೈಜನಾಥ ಬಿರಾದಾರ

ಸದ್ಯ ಕೊರೋನಾ ಸಂಕಟದಿಂದಾಗಿ ಅವರು ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದರಿಂದಾಗಿ ತೊಂದರೆಗೀಡಾಗಿರುವುದು ಅವರ ಮಾತುಗಳಲ್ಲಿ ವೇದ್ಯವಾಗುತ್ತದೆ. “ಕಲಾವಿದರಿಗೆ ಸಂಕಷ್ಟ ಯಾವಾಗ ತಪ್ಪಿದೆ? ಕೊರೋನಾ ಕಾಲ ಕಲಾವಿದರಿಗೆ ಸಂಕಷ್ಟ ತಂದಿದೆ. ನಮಗೆ ಕಲೆ ಇದೆ, ಖಾಯಂ ನೆಲೆ ಇಲ್ಲ. ಹೀಗೇ ಜೀವನ ನಡೆಸಿಕೊಂಡು ಹೋಗ್ತಾ ಇರೋದು ಅಷ್ಟೆ” ಎನ್ನುತ್ತಾರವರು.

ಕನ್ನಡಿಗರು ತಮ್ಮ ಮೇಲಿಟ್ಟಿರುವ ಅಭಿಮಾನ, ಪ್ರೀತಿಗೆ ಋಣಿ ಎನ್ನುತ್ತಾರವರು. ಮುಂದೆ ಮತ್ತಷ್ಟು ವೈವಿಧ್ಯಮಯ ಪಾತ್ರಗಳಲ್ಲಿ ತೊಡಗಿಸಿಕೊಳ್ಳುವ ಇರಾದೆ ಅವರದ್ದು. ಹುಟ್ಟುಹಬ್ಬದ ಸಂದರ್ಭದಲ್ಲಿ ಅವರು ತಮ್ಮ ವೃತ್ತಿ ಬದುಕಿನ ಆರಂಭದ ದಿನಗಳಲ್ಲಿನ ಎರಡು ಶೂಟಿಂಗ್ ಸೋಜಿಗಗಳನ್ನು ಇಲ್ಲಿ ನೆನಪಿಸಿಕೊಂಡಿದ್ದಾರೆ.

(ಬಿರಾದಾರ್ ಅವರು ಹೇಳಿಕೊಂಡಂತೆ…)

ಅದೇ ಡಬ್ಬಿಂಗ್ ಕಣೋ!

‘ಶಂಖನಾದ’ ಚಿತ್ರದಲ್ಲಿ ನಟಿಸಿದ ನಂತರ ನಿರ್ದೇಶಕ ಉಮೇಶ್ ಕುಲಕರ್ಣಿ, ‘ಏನ್ ಬ್ರದರ್ ಡಬ್ಬಿಂಗ್ ಮಾಡ್ತಿಯೇನಪ್ಪ?’ ಎಂದು ಕೇಳಿದರು. ಅದಿನ್ನೂ ನನಗೆ ಎರಡನೇ ಸಿನಿಮಾ ಆದ್ದರಿಂದ ಡಬ್ಬಿಂಗ್ ಏನೆಂದೇ ಗೊತ್ತಿರಲಿಲ್ಲ. ಹಾಗಾಗಿ, ‘ಇಲ್ಲ ಸಾರ್’ ಅಂದೆ. ‘ಆಯ್ತು, ಬೆಳಗ್ಗೆ ಚಾಮುಂಡೇಶ್ವರಿ ಸ್ಟುಡಿಯೋಗೆ ಬಾ. ಅಲ್ಲಿ ನೋಡ್ಕೋವಂತೆ’ ಎಂದರು ಕುಲಕರ್ಣಿ. ಬೆಳಕ್ಕೆ 8ಕ್ಕೆ ಹೋಗಿ ತಿಂಡಿ ತಿಂದು ಸ್ಟುಡಿಯೋದಲ್ಲಿ ಕುಳಿತುಕೊಂಡೆ. ಮಧ್ಯಾಹ್ನ ಒಂದೂವರೆಗೆ ಊಟವೂ ಆಯ್ತು. ‘ಏನಪ್ಪಾ, ಡಬ್ಬಿಂಗ್ ನೋಡಿಕೊಂಡ್ಯಾ?’ ಅಂತ ಕೇಳಿದರು ಕುಲಕರ್ಣಿ. ನಾನು ಇಲ್ಲವೆಂದೆ. ‘ಮತ್ತೆ, ಬೆಳಗ್ಗೆಯಿಂದ ಇಲ್ಲಿ ಏನು ಮಾಡಿದೆ?’ ಎಂದರು ನಿರ್ದೇಶಕರು. ‘ನೀವು ಏನೇನೋ ಮಾಡ್ತಿದ್ರಲ್ಲಾ, ನೋಡ್ತಾ ಕುಳಿತಿದ್ದೆ’ ಎಂದೆ. ‘ಏ ದಡ್ಡಾ ಅದೇ ಡಬ್ಬಿಂಗ್ ಕಣೋ!’ ಅಂದ್ರು ಉಮೇಶ್ ಕುಲಕರ್ಣಿ.

ವೈಜನಾಥ ಬಿರಾದಾರ

ಮೆಜಸ್ಟಿಕ್‍ನಲ್ಲಿ ತಗ್ಲಾಕ್ಕೊಂಡ ಕುಡುಕರು!

ಉತ್ತರ ಕರ್ನಾಟಕದಲ್ಲೊಂದು ನಾಟಕ ಮುಗಿಸಿಕೊಂಡು ಬಸ್‍ನಲ್ಲಿ ಬೆಂಗಳೂರಿಗೆ ಬಂದಿಳಿದೆ. ಮೆಜಸ್ಟಿಕ್‍ನಲ್ಲಿ ಬಸ್ ಇಳಿದು ಬಿಎಂಟಿಸಿ ಬಸ್‍ಸ್ಟ್ಯಾಂಡ್ ಕಡೆಗೆ ಬರ್ತಾ ಇದ್ದೆ. ಫುಲ್ ಟೈಟಾಗಿದ್ದ ಇಬ್ಬರು ಕುಡುಕರು ತೂರಾಡುತ್ತಾ ಎದುರಾದರು. `ಸಾರ್, ನೀವು! ನಾವು ನಿಮ್ ಅಭಿಮಾನಿಗುಳು. ಬನ್ನಿ ನಮ್ಗೆ ಕಂಪನಿ ಕೊಡಿ..’ ಎಂದು ಕೈಹಿಡಿದುಕೊಂಡರು. ಇದೇನು ಅಭಿಮಾನವೋ, ಕುಚೇಷ್ಟೆಯೋ ಒಂದೂ ಗೊತ್ತಾಗಲಿಲ್ಲ. `ಇಲ್ರಪ್ಪಾ, ನಾನು ಕುಡುಕನ ಪಾತ್ರ ಮಾಡ್ತೀನಷ್ಟೆ, ಕುಡಿಯೋಲ್ಲ’ ಅಂದೆ. `ಲೇಯ್, ಸುಳ್ಳು ಹೇಳ್ಬೇಡ! ಕುಡೀದೇ ಹೆಂಗಲೆ ನಿಶೆ ಏರ್ತದೆ? ಈಗ ಸುಮ್ನೆ ಬತ್ತಿಯೋ, ಇಲ್ವೋ!?’ ಎಂದು ಎಳೆದಾಡತೊಡಗಿದರು. ಅಷ್ಟರಲ್ಲಿ ನನ್ನನ್ನು ಗುರುತು ಹಿಡಿದ ಮೂರ್ನಾಲ್ಕು ಮಂದಿ ಸಂಕಷ್ಟದಿಂದ ಪಾರು ಮಾಡಿದರು!


ಓದಿ: ಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...