Homeಮುಖಪುಟಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

- Advertisement -
- Advertisement -

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಶುಕ್ರವಾರ ಜಾರಿ ನಿರ್ದೇಶನಾಲಯದ ವಿರುದ್ಧ ಎರಡು ದೂರುಗಳನ್ನು ದಾಖಲಿಸಿದ್ದಾರೆ. 

ದೂರುಗಳ ಆಧಾರದ ಮೇಲೆ, ಕೋಲ್ಕತ್ತಾ ಮತ್ತು ಬಿಧಾನ್ನಗರ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಹಲವು ಮಾಧ್ಯಮಗಳು ವರದಿ ಮಾಡಿವೆ. 

ಲೌಡಾನ್‌ ರಸ್ತೆಯಲ್ಲಿರುವ ಜೈನ್‌ ಅವರ ನಿವಾಸ ಹಾಗೂ ಸಾಲ್ಟ್‌ ಲೇಕ್‌ ಕಚೇರಿ ಮೇಲೆ ಗುರುವಾರ ಇ.ಡಿ. ದಾಳಿ ನಡೆದಿತ್ತು. ಜೈನ್ ಅವರು ಟಿಎಂಸಿ ಐ.ಟಿ ಸೆಲ್‌ನ ಮುಖ್ಯಸ್ಥರೂ ಹೌದು.

ಇ.ಡಿ. ಕಾರ್ಯಾಚರಣೆ ವೇಳೆ ಖುದ್ದಾಗಿ ಭೇಟಿ ನೀಡಿದ ಸಿಎಂ, ಪ್ರಮುಖ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್‌ ಸಾಧನೆಗಳನ್ನು ಸ್ಥಳದಿಂದ ತೆಗೆದುಹಾಕಿದ್ದಾರೆ ಎನ್ನಲಾಗಿದೆ. ಈ ನಾಟಕೀಯ ಬೆಳವಣಿಗೆ ಬೆನ್ನಲ್ಲೇ, ದಾಖಲಾಗಿರುವ ದೂರುಗಳು ಮತ್ತು ಇ.ಡಿ. ವಿರುದ್ಧ ಕಲ್ಕತ್ತ ಹೈಕೋರ್ಟ್‌ಗೆ ಟಿಎಂಸಿ ಸಲ್ಲಿಸಿರುವ ಮೇಲ್ಮನವಿಯು ಸಂಘರ್ಷವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ.

ಮಮತಾ ಅವರು, ಇ.ಡಿ ಅಧಿಕಾರಿಗಳು ಹಾಗೂ ಸಿಆರ್‌ಪಿಎಫ್‌ ಸಿಬ್ಬಂದಿ ವಿರುದ್ಧ ಷೇಕ್ಸ್‌ಪಿಯರ್‌ ಸರಾನಿ ಪೊಲೀಸ್‌ ಠಾಣೆಯಲ್ಲಿ ಮತ್ತು ಎಲೆಕ್ಟ್ರಾನಿಕ್ ಕಾಂಪ್ಲೆಕ್ಸ್‌ನಲ್ಲಿ ತನಿಖೆ ನಡೆಸುತ್ತಿದ್ದ ಇ.ಡಿ. ತನಿಖಾಧಿಕಾರಿ ವಿರುದ್ಧ ಬಿಧಾನನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನು ತಮ್ಮ ಮೇಲಿನ ಆರೋಪಕ್ಕೆ ಉತ್ತರಿಸಿರುವ ಮಮತಾ ಬ್ಯಾನರ್ಜಿ ಅವರು ನಾನು “ಯಾವುದೇ ತಪ್ಪು ಮಾಡಿಲ್ಲ” ಎಂದು ಶುಕ್ರವಾರ ಹೇಳಿದ್ದಾರೆ. ತಮ್ಮ ಪಕ್ಷದ ಡೇಟಾವನ್ನು ರಕ್ಷಿಸಲು ಮತ್ತು ಆತ್ಮರಕ್ಷಣೆಗಾಗಿ ಕಾರ್ಯನಿರ್ವಹಿಸಲು ಅವರಿಗೆ ಎಲ್ಲ ಹಕ್ಕಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. 

“ಯಾರಾದರೂ ನನ್ನನ್ನು ಕೊಲ್ಲಲು ಬಂದರೆ, ನನಗೆ ಆತ್ಮರಕ್ಷಣೆಯ ಹಕ್ಕಿಲ್ಲವೇ?” ಎಂದು ಕೋಲ್ಕತ್ತಾದಲ್ಲಿ ನಡೆದ ಪ್ರತಿಭಟನಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ ಬ್ಯಾನರ್ಜಿ ಕೇಳಿದರು. 

“ನಾನು ನಿನ್ನೆ ಮಾಡಿದ್ದು ತಪ್ಪಲ್ಲ. ಅವರು ನನ್ನ ಪಕ್ಷದ ಡೇಟಾವನ್ನು ಕದಿಯಲು ಪ್ರಯತ್ನಿಸಿದರು”. ತೃಣಮೂಲ ಕಾಂಗ್ರೆಸ್ ಜೊತೆ ಕೆಲಸ ಮಾಡುವ ಜೈನ್ ಅವರ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಅವರ ನಿವಾಸ ಮತ್ತು ಕಚೇರಿಗಳಲ್ಲಿ ಜಾರಿ ನಿರ್ದೇಶನಾಲಯದ ದಾಳಿಯನ್ನು ವಿರೋಧಿಸಿ ಬ್ಯಾನರ್ಜಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ರ್ಯಾಲಿಯು 8 ಬಿ ಬಸ್ ನಿಲ್ದಾಣ ಪ್ರದೇಶದಿಂದ ಪ್ರಾರಂಭವಾಗಿ ಹಜ್ರಾ ಮೋರ್ ಕಡೆಗೆ ಸಾಗಿತು, ಪಕ್ಷದ ಹಿರಿಯ ನಾಯಕರು, ಸಚಿವರು, ಸಂಸದರು, ಶಾಸಕರು ಮತ್ತು ಬೆಂಬಲಿಗರು ಭಾಗವಹಿಸಿದ್ದರು.

ಇಡಿ ಕ್ರಮವನ್ನು ಉಲ್ಲೇಖಿಸಿ, ಬ್ಯಾನರ್ಜಿ, 2026 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ತೃಣಮೂಲ ಕಾಂಗ್ರೆಸ್ ಕಾರ್ಯತಂತ್ರ ದಾಖಲೆಗಳನ್ನು ವಶಪಡಿಸಿಕೊಳ್ಳಲು ಸಂಸ್ಥೆ ಪ್ರಯತ್ನಿಸಿದೆ ಎಂದು ಆರೋಪಿಸಿದರು. 

“ನಿನ್ನೆ ಐ-ಪಿಎಸಿಯಲ್ಲಿ ನಡೆದ ದಾಳಿಯ ಸಮಯದಲ್ಲಿ, ಅವರು ನನ್ನ ಪಕ್ಷದ ಕಾರ್ಯತಂತ್ರದ ವಿವರಗಳನ್ನು ಕದಿಯಲು ಪ್ರಯತ್ನಿಸಿದರು. ನಾವು ಇದನ್ನು ಖಂಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ. 

ರಾಜ್ಯ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಆರೋಪಿಸಿದರು. “ಯಾರಾದರೂ ನನ್ನನ್ನು ರಾಜಕೀಯವಾಗಿ ಹೊಡೆಯಲು ಪ್ರಯತ್ನಿಸಿದರೆ, ನಾನು ರಾಜಕೀಯವಾಗಿ ಪುನರುಜ್ಜೀವನಗೊಳ್ಳುತ್ತೇನೆ” ಎಂದು ಅವರು ಹೇಳಿದರು.

ಸಾಂವಿಧಾನಿಕ ಸಂಸ್ಥೆಗಳ ಸಹಾಯದಿಂದ ಬಿಜೆಪಿ ಚುನಾವಣಾ ಕುಶಲತೆಯನ್ನು ನಡೆಸಿದೆ ಎಂದು ಬ್ಯಾನರ್ಜಿ ಆರೋಪಿಸಿದರು. “ಚುನಾವಣಾ ಆಯೋಗದ ಸಹಾಯದಿಂದ ಜನಾದೇಶವನ್ನು ಕದಿಯುವ ಮೂಲಕ ಬಿಜೆಪಿ ಮಹಾರಾಷ್ಟ್ರ ಚುನಾವಣೆಯನ್ನು ಗೆದ್ದಿತು. ಈಗ ಅವರು ಬಂಗಾಳದಲ್ಲಿಯೂ ಅದೇ ವಿಷಯವನ್ನು ಪುನರಾವರ್ತಿಸಲು ಬಯಸುತ್ತಾರೆ” ಎಂದು ಆರೋಪಿಸಿದರು.

ಪಕ್ಷದ ಪ್ರತಿಭಟನೆಯನ್ನು ವಿಸ್ತರಿಸಲು ಅವರು ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರಿಗೆ ಸೂಚನೆ ನೀಡಿದರು. “ನಮ್ಮ ಮುಂದಿನ ಪ್ರತಿಭಟನೆಯ ತಾಣ ಚುನಾವಣಾ ಆಯೋಗದ ಕಚೇರಿಯಾಗಿರಲಿ” ಎಂದು ಅವರು ಹೇಳಿದ್ದಾರೆ. 

ಬಿಜೆಪಿ ನಾಯಕತ್ವವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಬ್ಯಾನರ್ಜಿ, ದೆಹಲಿಯ ಹಿರಿಯ ನಾಯಕರು ಆಪಾದಿತ ಹಗರಣಗಳಿಂದ ಲಾಭ ಪಡೆದಿದ್ದಾರೆ ಎಂದು ಹೇಳಿದ್ದಾರೆ. “ದೆಹಲಿಯ ಹಿರಿಯ ಬಿಜೆಪಿ ನಾಯಕರು ಕಲ್ಲಿದ್ದಲು ಹಗರಣದ ಆದಾಯವನ್ನು ಪಡೆದಿದ್ದಾರೆ. ಅಗತ್ಯವಿದ್ದರೆ ನಾನು ಸಾರ್ವಜನಿಕರ ಮುಂದೆ ಪುರಾವೆಗಳನ್ನು ಒದಗಿಸಬಲ್ಲೆ” ಎಂದು ಅವರು ಹೇಳಿದ್ದಾರೆ. 

ಅಧಿಕಾರಿಗಳು ನಮ್ಮನ್ನು ವಿಭಿನ್ನವಾಗಿ ನಡೆಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. “ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನಮ್ಮ ಸಂಸದರ ಮೇಲೆ ಹಲ್ಲೆ ನಡೆಸಲಾಯಿತು, ಆದರೆ ಬಂಗಾಳದಲ್ಲಿ ಬಿಜೆಪಿ ನಾಯಕರಿಗೆ ಕೆಂಪು ಹಾಸಿನ ಸ್ವಾಗತ ದೊರೆಯಿತು” ಎಂದು ಬ್ಯಾನರ್ಜಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...