Homeಮುಖಪುಟಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

- Advertisement -
- Advertisement -

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಶುಕ್ರವಾರ ಜಾರಿ ನಿರ್ದೇಶನಾಲಯದ ವಿರುದ್ಧ ಎರಡು ದೂರುಗಳನ್ನು ದಾಖಲಿಸಿದ್ದಾರೆ. 

ದೂರುಗಳ ಆಧಾರದ ಮೇಲೆ, ಕೋಲ್ಕತ್ತಾ ಮತ್ತು ಬಿಧಾನ್ನಗರ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಹಲವು ಮಾಧ್ಯಮಗಳು ವರದಿ ಮಾಡಿವೆ. 

ಲೌಡಾನ್‌ ರಸ್ತೆಯಲ್ಲಿರುವ ಜೈನ್‌ ಅವರ ನಿವಾಸ ಹಾಗೂ ಸಾಲ್ಟ್‌ ಲೇಕ್‌ ಕಚೇರಿ ಮೇಲೆ ಗುರುವಾರ ಇ.ಡಿ. ದಾಳಿ ನಡೆದಿತ್ತು. ಜೈನ್ ಅವರು ಟಿಎಂಸಿ ಐ.ಟಿ ಸೆಲ್‌ನ ಮುಖ್ಯಸ್ಥರೂ ಹೌದು.

ಇ.ಡಿ. ಕಾರ್ಯಾಚರಣೆ ವೇಳೆ ಖುದ್ದಾಗಿ ಭೇಟಿ ನೀಡಿದ ಸಿಎಂ, ಪ್ರಮುಖ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್‌ ಸಾಧನೆಗಳನ್ನು ಸ್ಥಳದಿಂದ ತೆಗೆದುಹಾಕಿದ್ದಾರೆ ಎನ್ನಲಾಗಿದೆ. ಈ ನಾಟಕೀಯ ಬೆಳವಣಿಗೆ ಬೆನ್ನಲ್ಲೇ, ದಾಖಲಾಗಿರುವ ದೂರುಗಳು ಮತ್ತು ಇ.ಡಿ. ವಿರುದ್ಧ ಕಲ್ಕತ್ತ ಹೈಕೋರ್ಟ್‌ಗೆ ಟಿಎಂಸಿ ಸಲ್ಲಿಸಿರುವ ಮೇಲ್ಮನವಿಯು ಸಂಘರ್ಷವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ.

ಮಮತಾ ಅವರು, ಇ.ಡಿ ಅಧಿಕಾರಿಗಳು ಹಾಗೂ ಸಿಆರ್‌ಪಿಎಫ್‌ ಸಿಬ್ಬಂದಿ ವಿರುದ್ಧ ಷೇಕ್ಸ್‌ಪಿಯರ್‌ ಸರಾನಿ ಪೊಲೀಸ್‌ ಠಾಣೆಯಲ್ಲಿ ಮತ್ತು ಎಲೆಕ್ಟ್ರಾನಿಕ್ ಕಾಂಪ್ಲೆಕ್ಸ್‌ನಲ್ಲಿ ತನಿಖೆ ನಡೆಸುತ್ತಿದ್ದ ಇ.ಡಿ. ತನಿಖಾಧಿಕಾರಿ ವಿರುದ್ಧ ಬಿಧಾನನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನು ತಮ್ಮ ಮೇಲಿನ ಆರೋಪಕ್ಕೆ ಉತ್ತರಿಸಿರುವ ಮಮತಾ ಬ್ಯಾನರ್ಜಿ ಅವರು ನಾನು “ಯಾವುದೇ ತಪ್ಪು ಮಾಡಿಲ್ಲ” ಎಂದು ಶುಕ್ರವಾರ ಹೇಳಿದ್ದಾರೆ. ತಮ್ಮ ಪಕ್ಷದ ಡೇಟಾವನ್ನು ರಕ್ಷಿಸಲು ಮತ್ತು ಆತ್ಮರಕ್ಷಣೆಗಾಗಿ ಕಾರ್ಯನಿರ್ವಹಿಸಲು ಅವರಿಗೆ ಎಲ್ಲ ಹಕ್ಕಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. 

“ಯಾರಾದರೂ ನನ್ನನ್ನು ಕೊಲ್ಲಲು ಬಂದರೆ, ನನಗೆ ಆತ್ಮರಕ್ಷಣೆಯ ಹಕ್ಕಿಲ್ಲವೇ?” ಎಂದು ಕೋಲ್ಕತ್ತಾದಲ್ಲಿ ನಡೆದ ಪ್ರತಿಭಟನಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ ಬ್ಯಾನರ್ಜಿ ಕೇಳಿದರು. 

“ನಾನು ನಿನ್ನೆ ಮಾಡಿದ್ದು ತಪ್ಪಲ್ಲ. ಅವರು ನನ್ನ ಪಕ್ಷದ ಡೇಟಾವನ್ನು ಕದಿಯಲು ಪ್ರಯತ್ನಿಸಿದರು”. ತೃಣಮೂಲ ಕಾಂಗ್ರೆಸ್ ಜೊತೆ ಕೆಲಸ ಮಾಡುವ ಜೈನ್ ಅವರ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಅವರ ನಿವಾಸ ಮತ್ತು ಕಚೇರಿಗಳಲ್ಲಿ ಜಾರಿ ನಿರ್ದೇಶನಾಲಯದ ದಾಳಿಯನ್ನು ವಿರೋಧಿಸಿ ಬ್ಯಾನರ್ಜಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ರ್ಯಾಲಿಯು 8 ಬಿ ಬಸ್ ನಿಲ್ದಾಣ ಪ್ರದೇಶದಿಂದ ಪ್ರಾರಂಭವಾಗಿ ಹಜ್ರಾ ಮೋರ್ ಕಡೆಗೆ ಸಾಗಿತು, ಪಕ್ಷದ ಹಿರಿಯ ನಾಯಕರು, ಸಚಿವರು, ಸಂಸದರು, ಶಾಸಕರು ಮತ್ತು ಬೆಂಬಲಿಗರು ಭಾಗವಹಿಸಿದ್ದರು.

ಇಡಿ ಕ್ರಮವನ್ನು ಉಲ್ಲೇಖಿಸಿ, ಬ್ಯಾನರ್ಜಿ, 2026 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ತೃಣಮೂಲ ಕಾಂಗ್ರೆಸ್ ಕಾರ್ಯತಂತ್ರ ದಾಖಲೆಗಳನ್ನು ವಶಪಡಿಸಿಕೊಳ್ಳಲು ಸಂಸ್ಥೆ ಪ್ರಯತ್ನಿಸಿದೆ ಎಂದು ಆರೋಪಿಸಿದರು. 

“ನಿನ್ನೆ ಐ-ಪಿಎಸಿಯಲ್ಲಿ ನಡೆದ ದಾಳಿಯ ಸಮಯದಲ್ಲಿ, ಅವರು ನನ್ನ ಪಕ್ಷದ ಕಾರ್ಯತಂತ್ರದ ವಿವರಗಳನ್ನು ಕದಿಯಲು ಪ್ರಯತ್ನಿಸಿದರು. ನಾವು ಇದನ್ನು ಖಂಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ. 

ರಾಜ್ಯ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಆರೋಪಿಸಿದರು. “ಯಾರಾದರೂ ನನ್ನನ್ನು ರಾಜಕೀಯವಾಗಿ ಹೊಡೆಯಲು ಪ್ರಯತ್ನಿಸಿದರೆ, ನಾನು ರಾಜಕೀಯವಾಗಿ ಪುನರುಜ್ಜೀವನಗೊಳ್ಳುತ್ತೇನೆ” ಎಂದು ಅವರು ಹೇಳಿದರು.

ಸಾಂವಿಧಾನಿಕ ಸಂಸ್ಥೆಗಳ ಸಹಾಯದಿಂದ ಬಿಜೆಪಿ ಚುನಾವಣಾ ಕುಶಲತೆಯನ್ನು ನಡೆಸಿದೆ ಎಂದು ಬ್ಯಾನರ್ಜಿ ಆರೋಪಿಸಿದರು. “ಚುನಾವಣಾ ಆಯೋಗದ ಸಹಾಯದಿಂದ ಜನಾದೇಶವನ್ನು ಕದಿಯುವ ಮೂಲಕ ಬಿಜೆಪಿ ಮಹಾರಾಷ್ಟ್ರ ಚುನಾವಣೆಯನ್ನು ಗೆದ್ದಿತು. ಈಗ ಅವರು ಬಂಗಾಳದಲ್ಲಿಯೂ ಅದೇ ವಿಷಯವನ್ನು ಪುನರಾವರ್ತಿಸಲು ಬಯಸುತ್ತಾರೆ” ಎಂದು ಆರೋಪಿಸಿದರು.

ಪಕ್ಷದ ಪ್ರತಿಭಟನೆಯನ್ನು ವಿಸ್ತರಿಸಲು ಅವರು ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರಿಗೆ ಸೂಚನೆ ನೀಡಿದರು. “ನಮ್ಮ ಮುಂದಿನ ಪ್ರತಿಭಟನೆಯ ತಾಣ ಚುನಾವಣಾ ಆಯೋಗದ ಕಚೇರಿಯಾಗಿರಲಿ” ಎಂದು ಅವರು ಹೇಳಿದ್ದಾರೆ. 

ಬಿಜೆಪಿ ನಾಯಕತ್ವವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಬ್ಯಾನರ್ಜಿ, ದೆಹಲಿಯ ಹಿರಿಯ ನಾಯಕರು ಆಪಾದಿತ ಹಗರಣಗಳಿಂದ ಲಾಭ ಪಡೆದಿದ್ದಾರೆ ಎಂದು ಹೇಳಿದ್ದಾರೆ. “ದೆಹಲಿಯ ಹಿರಿಯ ಬಿಜೆಪಿ ನಾಯಕರು ಕಲ್ಲಿದ್ದಲು ಹಗರಣದ ಆದಾಯವನ್ನು ಪಡೆದಿದ್ದಾರೆ. ಅಗತ್ಯವಿದ್ದರೆ ನಾನು ಸಾರ್ವಜನಿಕರ ಮುಂದೆ ಪುರಾವೆಗಳನ್ನು ಒದಗಿಸಬಲ್ಲೆ” ಎಂದು ಅವರು ಹೇಳಿದ್ದಾರೆ. 

ಅಧಿಕಾರಿಗಳು ನಮ್ಮನ್ನು ವಿಭಿನ್ನವಾಗಿ ನಡೆಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. “ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನಮ್ಮ ಸಂಸದರ ಮೇಲೆ ಹಲ್ಲೆ ನಡೆಸಲಾಯಿತು, ಆದರೆ ಬಂಗಾಳದಲ್ಲಿ ಬಿಜೆಪಿ ನಾಯಕರಿಗೆ ಕೆಂಪು ಹಾಸಿನ ಸ್ವಾಗತ ದೊರೆಯಿತು” ಎಂದು ಬ್ಯಾನರ್ಜಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...