Homeಮುಖಪುಟಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

- Advertisement -
- Advertisement -

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಶುಕ್ರವಾರ ಜಾರಿ ನಿರ್ದೇಶನಾಲಯದ ವಿರುದ್ಧ ಎರಡು ದೂರುಗಳನ್ನು ದಾಖಲಿಸಿದ್ದಾರೆ. 

ದೂರುಗಳ ಆಧಾರದ ಮೇಲೆ, ಕೋಲ್ಕತ್ತಾ ಮತ್ತು ಬಿಧಾನ್ನಗರ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಹಲವು ಮಾಧ್ಯಮಗಳು ವರದಿ ಮಾಡಿವೆ. 

ಲೌಡಾನ್‌ ರಸ್ತೆಯಲ್ಲಿರುವ ಜೈನ್‌ ಅವರ ನಿವಾಸ ಹಾಗೂ ಸಾಲ್ಟ್‌ ಲೇಕ್‌ ಕಚೇರಿ ಮೇಲೆ ಗುರುವಾರ ಇ.ಡಿ. ದಾಳಿ ನಡೆದಿತ್ತು. ಜೈನ್ ಅವರು ಟಿಎಂಸಿ ಐ.ಟಿ ಸೆಲ್‌ನ ಮುಖ್ಯಸ್ಥರೂ ಹೌದು.

ಇ.ಡಿ. ಕಾರ್ಯಾಚರಣೆ ವೇಳೆ ಖುದ್ದಾಗಿ ಭೇಟಿ ನೀಡಿದ ಸಿಎಂ, ಪ್ರಮುಖ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್‌ ಸಾಧನೆಗಳನ್ನು ಸ್ಥಳದಿಂದ ತೆಗೆದುಹಾಕಿದ್ದಾರೆ ಎನ್ನಲಾಗಿದೆ. ಈ ನಾಟಕೀಯ ಬೆಳವಣಿಗೆ ಬೆನ್ನಲ್ಲೇ, ದಾಖಲಾಗಿರುವ ದೂರುಗಳು ಮತ್ತು ಇ.ಡಿ. ವಿರುದ್ಧ ಕಲ್ಕತ್ತ ಹೈಕೋರ್ಟ್‌ಗೆ ಟಿಎಂಸಿ ಸಲ್ಲಿಸಿರುವ ಮೇಲ್ಮನವಿಯು ಸಂಘರ್ಷವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ.

ಮಮತಾ ಅವರು, ಇ.ಡಿ ಅಧಿಕಾರಿಗಳು ಹಾಗೂ ಸಿಆರ್‌ಪಿಎಫ್‌ ಸಿಬ್ಬಂದಿ ವಿರುದ್ಧ ಷೇಕ್ಸ್‌ಪಿಯರ್‌ ಸರಾನಿ ಪೊಲೀಸ್‌ ಠಾಣೆಯಲ್ಲಿ ಮತ್ತು ಎಲೆಕ್ಟ್ರಾನಿಕ್ ಕಾಂಪ್ಲೆಕ್ಸ್‌ನಲ್ಲಿ ತನಿಖೆ ನಡೆಸುತ್ತಿದ್ದ ಇ.ಡಿ. ತನಿಖಾಧಿಕಾರಿ ವಿರುದ್ಧ ಬಿಧಾನನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನು ತಮ್ಮ ಮೇಲಿನ ಆರೋಪಕ್ಕೆ ಉತ್ತರಿಸಿರುವ ಮಮತಾ ಬ್ಯಾನರ್ಜಿ ಅವರು ನಾನು “ಯಾವುದೇ ತಪ್ಪು ಮಾಡಿಲ್ಲ” ಎಂದು ಶುಕ್ರವಾರ ಹೇಳಿದ್ದಾರೆ. ತಮ್ಮ ಪಕ್ಷದ ಡೇಟಾವನ್ನು ರಕ್ಷಿಸಲು ಮತ್ತು ಆತ್ಮರಕ್ಷಣೆಗಾಗಿ ಕಾರ್ಯನಿರ್ವಹಿಸಲು ಅವರಿಗೆ ಎಲ್ಲ ಹಕ್ಕಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. 

“ಯಾರಾದರೂ ನನ್ನನ್ನು ಕೊಲ್ಲಲು ಬಂದರೆ, ನನಗೆ ಆತ್ಮರಕ್ಷಣೆಯ ಹಕ್ಕಿಲ್ಲವೇ?” ಎಂದು ಕೋಲ್ಕತ್ತಾದಲ್ಲಿ ನಡೆದ ಪ್ರತಿಭಟನಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ ಬ್ಯಾನರ್ಜಿ ಕೇಳಿದರು. 

“ನಾನು ನಿನ್ನೆ ಮಾಡಿದ್ದು ತಪ್ಪಲ್ಲ. ಅವರು ನನ್ನ ಪಕ್ಷದ ಡೇಟಾವನ್ನು ಕದಿಯಲು ಪ್ರಯತ್ನಿಸಿದರು”. ತೃಣಮೂಲ ಕಾಂಗ್ರೆಸ್ ಜೊತೆ ಕೆಲಸ ಮಾಡುವ ಜೈನ್ ಅವರ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಅವರ ನಿವಾಸ ಮತ್ತು ಕಚೇರಿಗಳಲ್ಲಿ ಜಾರಿ ನಿರ್ದೇಶನಾಲಯದ ದಾಳಿಯನ್ನು ವಿರೋಧಿಸಿ ಬ್ಯಾನರ್ಜಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ರ್ಯಾಲಿಯು 8 ಬಿ ಬಸ್ ನಿಲ್ದಾಣ ಪ್ರದೇಶದಿಂದ ಪ್ರಾರಂಭವಾಗಿ ಹಜ್ರಾ ಮೋರ್ ಕಡೆಗೆ ಸಾಗಿತು, ಪಕ್ಷದ ಹಿರಿಯ ನಾಯಕರು, ಸಚಿವರು, ಸಂಸದರು, ಶಾಸಕರು ಮತ್ತು ಬೆಂಬಲಿಗರು ಭಾಗವಹಿಸಿದ್ದರು.

ಇಡಿ ಕ್ರಮವನ್ನು ಉಲ್ಲೇಖಿಸಿ, ಬ್ಯಾನರ್ಜಿ, 2026 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ತೃಣಮೂಲ ಕಾಂಗ್ರೆಸ್ ಕಾರ್ಯತಂತ್ರ ದಾಖಲೆಗಳನ್ನು ವಶಪಡಿಸಿಕೊಳ್ಳಲು ಸಂಸ್ಥೆ ಪ್ರಯತ್ನಿಸಿದೆ ಎಂದು ಆರೋಪಿಸಿದರು. 

“ನಿನ್ನೆ ಐ-ಪಿಎಸಿಯಲ್ಲಿ ನಡೆದ ದಾಳಿಯ ಸಮಯದಲ್ಲಿ, ಅವರು ನನ್ನ ಪಕ್ಷದ ಕಾರ್ಯತಂತ್ರದ ವಿವರಗಳನ್ನು ಕದಿಯಲು ಪ್ರಯತ್ನಿಸಿದರು. ನಾವು ಇದನ್ನು ಖಂಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ. 

ರಾಜ್ಯ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಆರೋಪಿಸಿದರು. “ಯಾರಾದರೂ ನನ್ನನ್ನು ರಾಜಕೀಯವಾಗಿ ಹೊಡೆಯಲು ಪ್ರಯತ್ನಿಸಿದರೆ, ನಾನು ರಾಜಕೀಯವಾಗಿ ಪುನರುಜ್ಜೀವನಗೊಳ್ಳುತ್ತೇನೆ” ಎಂದು ಅವರು ಹೇಳಿದರು.

ಸಾಂವಿಧಾನಿಕ ಸಂಸ್ಥೆಗಳ ಸಹಾಯದಿಂದ ಬಿಜೆಪಿ ಚುನಾವಣಾ ಕುಶಲತೆಯನ್ನು ನಡೆಸಿದೆ ಎಂದು ಬ್ಯಾನರ್ಜಿ ಆರೋಪಿಸಿದರು. “ಚುನಾವಣಾ ಆಯೋಗದ ಸಹಾಯದಿಂದ ಜನಾದೇಶವನ್ನು ಕದಿಯುವ ಮೂಲಕ ಬಿಜೆಪಿ ಮಹಾರಾಷ್ಟ್ರ ಚುನಾವಣೆಯನ್ನು ಗೆದ್ದಿತು. ಈಗ ಅವರು ಬಂಗಾಳದಲ್ಲಿಯೂ ಅದೇ ವಿಷಯವನ್ನು ಪುನರಾವರ್ತಿಸಲು ಬಯಸುತ್ತಾರೆ” ಎಂದು ಆರೋಪಿಸಿದರು.

ಪಕ್ಷದ ಪ್ರತಿಭಟನೆಯನ್ನು ವಿಸ್ತರಿಸಲು ಅವರು ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರಿಗೆ ಸೂಚನೆ ನೀಡಿದರು. “ನಮ್ಮ ಮುಂದಿನ ಪ್ರತಿಭಟನೆಯ ತಾಣ ಚುನಾವಣಾ ಆಯೋಗದ ಕಚೇರಿಯಾಗಿರಲಿ” ಎಂದು ಅವರು ಹೇಳಿದ್ದಾರೆ. 

ಬಿಜೆಪಿ ನಾಯಕತ್ವವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಬ್ಯಾನರ್ಜಿ, ದೆಹಲಿಯ ಹಿರಿಯ ನಾಯಕರು ಆಪಾದಿತ ಹಗರಣಗಳಿಂದ ಲಾಭ ಪಡೆದಿದ್ದಾರೆ ಎಂದು ಹೇಳಿದ್ದಾರೆ. “ದೆಹಲಿಯ ಹಿರಿಯ ಬಿಜೆಪಿ ನಾಯಕರು ಕಲ್ಲಿದ್ದಲು ಹಗರಣದ ಆದಾಯವನ್ನು ಪಡೆದಿದ್ದಾರೆ. ಅಗತ್ಯವಿದ್ದರೆ ನಾನು ಸಾರ್ವಜನಿಕರ ಮುಂದೆ ಪುರಾವೆಗಳನ್ನು ಒದಗಿಸಬಲ್ಲೆ” ಎಂದು ಅವರು ಹೇಳಿದ್ದಾರೆ. 

ಅಧಿಕಾರಿಗಳು ನಮ್ಮನ್ನು ವಿಭಿನ್ನವಾಗಿ ನಡೆಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. “ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನಮ್ಮ ಸಂಸದರ ಮೇಲೆ ಹಲ್ಲೆ ನಡೆಸಲಾಯಿತು, ಆದರೆ ಬಂಗಾಳದಲ್ಲಿ ಬಿಜೆಪಿ ನಾಯಕರಿಗೆ ಕೆಂಪು ಹಾಸಿನ ಸ್ವಾಗತ ದೊರೆಯಿತು” ಎಂದು ಬ್ಯಾನರ್ಜಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...