Homeಮುಖಪುಟಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

- Advertisement -
- Advertisement -

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಶುಕ್ರವಾರ ಜಾರಿ ನಿರ್ದೇಶನಾಲಯದ ವಿರುದ್ಧ ಎರಡು ದೂರುಗಳನ್ನು ದಾಖಲಿಸಿದ್ದಾರೆ. 

ದೂರುಗಳ ಆಧಾರದ ಮೇಲೆ, ಕೋಲ್ಕತ್ತಾ ಮತ್ತು ಬಿಧಾನ್ನಗರ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಹಲವು ಮಾಧ್ಯಮಗಳು ವರದಿ ಮಾಡಿವೆ. 

ಲೌಡಾನ್‌ ರಸ್ತೆಯಲ್ಲಿರುವ ಜೈನ್‌ ಅವರ ನಿವಾಸ ಹಾಗೂ ಸಾಲ್ಟ್‌ ಲೇಕ್‌ ಕಚೇರಿ ಮೇಲೆ ಗುರುವಾರ ಇ.ಡಿ. ದಾಳಿ ನಡೆದಿತ್ತು. ಜೈನ್ ಅವರು ಟಿಎಂಸಿ ಐ.ಟಿ ಸೆಲ್‌ನ ಮುಖ್ಯಸ್ಥರೂ ಹೌದು.

ಇ.ಡಿ. ಕಾರ್ಯಾಚರಣೆ ವೇಳೆ ಖುದ್ದಾಗಿ ಭೇಟಿ ನೀಡಿದ ಸಿಎಂ, ಪ್ರಮುಖ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್‌ ಸಾಧನೆಗಳನ್ನು ಸ್ಥಳದಿಂದ ತೆಗೆದುಹಾಕಿದ್ದಾರೆ ಎನ್ನಲಾಗಿದೆ. ಈ ನಾಟಕೀಯ ಬೆಳವಣಿಗೆ ಬೆನ್ನಲ್ಲೇ, ದಾಖಲಾಗಿರುವ ದೂರುಗಳು ಮತ್ತು ಇ.ಡಿ. ವಿರುದ್ಧ ಕಲ್ಕತ್ತ ಹೈಕೋರ್ಟ್‌ಗೆ ಟಿಎಂಸಿ ಸಲ್ಲಿಸಿರುವ ಮೇಲ್ಮನವಿಯು ಸಂಘರ್ಷವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ.

ಮಮತಾ ಅವರು, ಇ.ಡಿ ಅಧಿಕಾರಿಗಳು ಹಾಗೂ ಸಿಆರ್‌ಪಿಎಫ್‌ ಸಿಬ್ಬಂದಿ ವಿರುದ್ಧ ಷೇಕ್ಸ್‌ಪಿಯರ್‌ ಸರಾನಿ ಪೊಲೀಸ್‌ ಠಾಣೆಯಲ್ಲಿ ಮತ್ತು ಎಲೆಕ್ಟ್ರಾನಿಕ್ ಕಾಂಪ್ಲೆಕ್ಸ್‌ನಲ್ಲಿ ತನಿಖೆ ನಡೆಸುತ್ತಿದ್ದ ಇ.ಡಿ. ತನಿಖಾಧಿಕಾರಿ ವಿರುದ್ಧ ಬಿಧಾನನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನು ತಮ್ಮ ಮೇಲಿನ ಆರೋಪಕ್ಕೆ ಉತ್ತರಿಸಿರುವ ಮಮತಾ ಬ್ಯಾನರ್ಜಿ ಅವರು ನಾನು “ಯಾವುದೇ ತಪ್ಪು ಮಾಡಿಲ್ಲ” ಎಂದು ಶುಕ್ರವಾರ ಹೇಳಿದ್ದಾರೆ. ತಮ್ಮ ಪಕ್ಷದ ಡೇಟಾವನ್ನು ರಕ್ಷಿಸಲು ಮತ್ತು ಆತ್ಮರಕ್ಷಣೆಗಾಗಿ ಕಾರ್ಯನಿರ್ವಹಿಸಲು ಅವರಿಗೆ ಎಲ್ಲ ಹಕ್ಕಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. 

“ಯಾರಾದರೂ ನನ್ನನ್ನು ಕೊಲ್ಲಲು ಬಂದರೆ, ನನಗೆ ಆತ್ಮರಕ್ಷಣೆಯ ಹಕ್ಕಿಲ್ಲವೇ?” ಎಂದು ಕೋಲ್ಕತ್ತಾದಲ್ಲಿ ನಡೆದ ಪ್ರತಿಭಟನಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ ಬ್ಯಾನರ್ಜಿ ಕೇಳಿದರು. 

“ನಾನು ನಿನ್ನೆ ಮಾಡಿದ್ದು ತಪ್ಪಲ್ಲ. ಅವರು ನನ್ನ ಪಕ್ಷದ ಡೇಟಾವನ್ನು ಕದಿಯಲು ಪ್ರಯತ್ನಿಸಿದರು”. ತೃಣಮೂಲ ಕಾಂಗ್ರೆಸ್ ಜೊತೆ ಕೆಲಸ ಮಾಡುವ ಜೈನ್ ಅವರ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಅವರ ನಿವಾಸ ಮತ್ತು ಕಚೇರಿಗಳಲ್ಲಿ ಜಾರಿ ನಿರ್ದೇಶನಾಲಯದ ದಾಳಿಯನ್ನು ವಿರೋಧಿಸಿ ಬ್ಯಾನರ್ಜಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ರ್ಯಾಲಿಯು 8 ಬಿ ಬಸ್ ನಿಲ್ದಾಣ ಪ್ರದೇಶದಿಂದ ಪ್ರಾರಂಭವಾಗಿ ಹಜ್ರಾ ಮೋರ್ ಕಡೆಗೆ ಸಾಗಿತು, ಪಕ್ಷದ ಹಿರಿಯ ನಾಯಕರು, ಸಚಿವರು, ಸಂಸದರು, ಶಾಸಕರು ಮತ್ತು ಬೆಂಬಲಿಗರು ಭಾಗವಹಿಸಿದ್ದರು.

ಇಡಿ ಕ್ರಮವನ್ನು ಉಲ್ಲೇಖಿಸಿ, ಬ್ಯಾನರ್ಜಿ, 2026 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ತೃಣಮೂಲ ಕಾಂಗ್ರೆಸ್ ಕಾರ್ಯತಂತ್ರ ದಾಖಲೆಗಳನ್ನು ವಶಪಡಿಸಿಕೊಳ್ಳಲು ಸಂಸ್ಥೆ ಪ್ರಯತ್ನಿಸಿದೆ ಎಂದು ಆರೋಪಿಸಿದರು. 

“ನಿನ್ನೆ ಐ-ಪಿಎಸಿಯಲ್ಲಿ ನಡೆದ ದಾಳಿಯ ಸಮಯದಲ್ಲಿ, ಅವರು ನನ್ನ ಪಕ್ಷದ ಕಾರ್ಯತಂತ್ರದ ವಿವರಗಳನ್ನು ಕದಿಯಲು ಪ್ರಯತ್ನಿಸಿದರು. ನಾವು ಇದನ್ನು ಖಂಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ. 

ರಾಜ್ಯ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಆರೋಪಿಸಿದರು. “ಯಾರಾದರೂ ನನ್ನನ್ನು ರಾಜಕೀಯವಾಗಿ ಹೊಡೆಯಲು ಪ್ರಯತ್ನಿಸಿದರೆ, ನಾನು ರಾಜಕೀಯವಾಗಿ ಪುನರುಜ್ಜೀವನಗೊಳ್ಳುತ್ತೇನೆ” ಎಂದು ಅವರು ಹೇಳಿದರು.

ಸಾಂವಿಧಾನಿಕ ಸಂಸ್ಥೆಗಳ ಸಹಾಯದಿಂದ ಬಿಜೆಪಿ ಚುನಾವಣಾ ಕುಶಲತೆಯನ್ನು ನಡೆಸಿದೆ ಎಂದು ಬ್ಯಾನರ್ಜಿ ಆರೋಪಿಸಿದರು. “ಚುನಾವಣಾ ಆಯೋಗದ ಸಹಾಯದಿಂದ ಜನಾದೇಶವನ್ನು ಕದಿಯುವ ಮೂಲಕ ಬಿಜೆಪಿ ಮಹಾರಾಷ್ಟ್ರ ಚುನಾವಣೆಯನ್ನು ಗೆದ್ದಿತು. ಈಗ ಅವರು ಬಂಗಾಳದಲ್ಲಿಯೂ ಅದೇ ವಿಷಯವನ್ನು ಪುನರಾವರ್ತಿಸಲು ಬಯಸುತ್ತಾರೆ” ಎಂದು ಆರೋಪಿಸಿದರು.

ಪಕ್ಷದ ಪ್ರತಿಭಟನೆಯನ್ನು ವಿಸ್ತರಿಸಲು ಅವರು ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರಿಗೆ ಸೂಚನೆ ನೀಡಿದರು. “ನಮ್ಮ ಮುಂದಿನ ಪ್ರತಿಭಟನೆಯ ತಾಣ ಚುನಾವಣಾ ಆಯೋಗದ ಕಚೇರಿಯಾಗಿರಲಿ” ಎಂದು ಅವರು ಹೇಳಿದ್ದಾರೆ. 

ಬಿಜೆಪಿ ನಾಯಕತ್ವವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಬ್ಯಾನರ್ಜಿ, ದೆಹಲಿಯ ಹಿರಿಯ ನಾಯಕರು ಆಪಾದಿತ ಹಗರಣಗಳಿಂದ ಲಾಭ ಪಡೆದಿದ್ದಾರೆ ಎಂದು ಹೇಳಿದ್ದಾರೆ. “ದೆಹಲಿಯ ಹಿರಿಯ ಬಿಜೆಪಿ ನಾಯಕರು ಕಲ್ಲಿದ್ದಲು ಹಗರಣದ ಆದಾಯವನ್ನು ಪಡೆದಿದ್ದಾರೆ. ಅಗತ್ಯವಿದ್ದರೆ ನಾನು ಸಾರ್ವಜನಿಕರ ಮುಂದೆ ಪುರಾವೆಗಳನ್ನು ಒದಗಿಸಬಲ್ಲೆ” ಎಂದು ಅವರು ಹೇಳಿದ್ದಾರೆ. 

ಅಧಿಕಾರಿಗಳು ನಮ್ಮನ್ನು ವಿಭಿನ್ನವಾಗಿ ನಡೆಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. “ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನಮ್ಮ ಸಂಸದರ ಮೇಲೆ ಹಲ್ಲೆ ನಡೆಸಲಾಯಿತು, ಆದರೆ ಬಂಗಾಳದಲ್ಲಿ ಬಿಜೆಪಿ ನಾಯಕರಿಗೆ ಕೆಂಪು ಹಾಸಿನ ಸ್ವಾಗತ ದೊರೆಯಿತು” ಎಂದು ಬ್ಯಾನರ್ಜಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...