Homeಮುಖಪುಟಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

- Advertisement -
- Advertisement -

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ ಇಡಿ ವಿರುದ್ದ ಸಮರ ಸಾರಿದ್ದ ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹಿನ್ನೆಡೆಯಾಗಿದೆ.

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥನ ಮನೆ ಮೇಲಿನ ದಾಳಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಇಡಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ವಿಪುಲ್ ಪಾಂಚೋಲಿ ಅವರಿದ್ದ ಪೀಠ, “ಪ್ರಸ್ತುತ ಇಡಿ ಅಥವಾ ಇತರ ಕೇಂದ್ರ ಸಂಸ್ಥೆಗಳ ತನಿಖೆ ಮತ್ತು ರಾಜ್ಯ ಸಂಸ್ಥೆಗಳ ಹಸ್ತಕ್ಷೇಪಕ್ಕೆ ಸಂಬಂಧಿಸಿದ ಗಂಭೀರ ಸಮಸ್ಯೆಯನ್ನು ಎತ್ತಿದೆ ಎಂದು ನಾವು ಮೇಲ್ನೋಟಕ್ಕೆ ಭಾವಿಸುತ್ತೇವೆ. ಇಡಿ ಎತ್ತಿರುವ ಸಮಸ್ಯೆಗಳನ್ನು ಪರಿಶೀಲಿಸದಿದ್ದರೆ ದೇಶದಲ್ಲಿ ಕಾನೂನುಬಾಹಿರತೆ ಉಂಟಾಗುತ್ತದೆ” ಎಂದು ಹೇಳಿದೆ.

“ನಮ್ಮ ಅಭಿಪ್ರಾಯದ ಪ್ರಕಾರ, ದೇಶದಲ್ಲಿ ಕಾನೂನಿನ ಆಳ್ವಿಕೆಯನ್ನು ಕಾಪಾಡಲು ಮತ್ತು ಪ್ರತಿ ಸಂಸ್ಥೆ/ಅಂಗ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅನುಮತಿಸಲು, ಈ ವಿಷಯವನ್ನು ಪರಿಶೀಲಿಸುವುದು ಅಗತ್ಯವಾಗಿದೆ. ಇದರಿಂದ ಅಪರಾಧಿಗಳು ಒಂದು ನಿರ್ದಿಷ್ಟ ರಾಜ್ಯದ ಕಾನೂನು ಜಾರಿ ಮಾಡುವ ಏಜೆನ್ಸಿಗಳ ರಕ್ಷಣೆಯ ಕವಚದಡಿ ಸಂರಕ್ಷಣೆ ಪಡೆಯದಂತೆ ಮಾಡಬೇಕು” ಎಂದು ಕೋರ್ಟ್ ತಿಳಿಸಿದೆ.

ಪಶ್ಚಿಮ ಬಂಗಾಳದ ಡಿಜಿಪಿ ರಾಜೀವ್ ಕುಮಾರ್ ಮತ್ತು ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ಸೇರಿದಂತೆ ಇತರರನ್ನು ಅಮಾನತುಗೊಳಿಸುವಂತೆ ಕೋರಿ ಇಡಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಪಟ್ಟಂತೆ ಗೃಹ ಸಚಿವಾಲಯ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಮಮತಾ ಬ್ಯಾನರ್ಜಿ ಮತ್ತು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ತನಿಖೆಗೆ ಅಡ್ಡಿಪಡಿಸಲು ಮತ್ತು ಸಾಕ್ಷ್ಯ ಕಳ್ಳತನಕ್ಕೆ ಅಧಿಕಾರಿಗಳು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿ, ಡಿಜಿಪಿ ಕುಮಾರ್ ಸೇರಿದಂತೆ ಪಶ್ಚಿಮ ಬಂಗಾಳದ ಉನ್ನತ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಕೋರಿ ಇಡಿ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಅರ್ಜಿ ಸಲ್ಲಿಸಿದೆ.

“ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದಾಳಿ (ಇಡಿ ಶೋಧ ಅಥವಾ ಪರಿಶೀಲನೆ) ನಡೆಯುತ್ತಿದ್ದ ಸ್ಥಳಕ್ಕೆ ಬಂದು ನಿಂತಿದ್ದರು. ಅವರು ದಾಖಲೆಗಳನ್ನು ತೆಗೆದುಕೊಂಡಿದ್ದಾರೆ. ಈ ಮೂಲಕ ನಮ್ಮ ಅಧಿಕಾರಿಗಳನ್ನು ಭಯಭೀತಗೊಳಿಸುವ ಪ್ರಯತ್ನ ಮಾಡಿದ್ದಾರೆ. ಅಂದರೆ, ಅಧಿಕಾರಿಗಳು ಭಯಪಟ್ಟು ಅಥವಾ ಒತ್ತಡಕ್ಕೆ ಒಳಗಾಗಿ ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾಗಿಲ್ಲ. ಇದು ನಮ್ಮ ಕಾನೂನುಬದ್ಧ ಕರ್ತವ್ಯಗಳನ್ನು ಸ್ವತಂತ್ರವಾಗಿ ನಿರ್ವಹಿಸುವ ಸಾಮರ್ಥ್ಯವನ್ನು ಗಂಭೀರವಾಗಿ ಹಾನಿಗೊಳಿಸಿದೆ” ಇಡಿ ತನ್ನ ಅರ್ಜಿಯಲ್ಲಿ ಹೇಳಿದೆ.

ಈ ಪ್ರಕರಣದ ತನಿಖೆಯನ್ನು ಕೇಂದ್ರದ ಸ್ವತಂತ್ರ ತನಿಖೆಯಾದ ಸಿಬಿಐನಿಂದ ಮಾಡಿಸಬೇಕು. ಕೋಲ್ಕತ್ತಾ ಪೊಲೀಸರು ಮಮತಾ ಬ್ಯಾನರ್ಜಿ ಸರ್ಕಾರದ ಅಧೀನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಇಡಿ ಮನವಿ ಮಾಡಿದೆ.

ದಾಳಿಯ ವೇಳೆ ದಾಖಲೆಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಪಶ್ಚಿಮ ಬಂಗಾಳದಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಇಡಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ಸಂಬಂಧ ಪಶ್ಚಿಮ ಬಂಗಾಳ ಸರ್ಕಾರ ಕೇವಿಯಟ್ ಸಲ್ಲಿಸಿದೆ. ತನ್ನ ವಾದವನ್ನು ಆಲಿಸಿದೆ ಆದೇಶಗಳನ್ನು ನೀಡದಂತೆ ಕೋರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...