Homeಮುಖಪುಟಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

- Advertisement -
- Advertisement -

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ ಇಡಿ ವಿರುದ್ದ ಸಮರ ಸಾರಿದ್ದ ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹಿನ್ನೆಡೆಯಾಗಿದೆ.

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥನ ಮನೆ ಮೇಲಿನ ದಾಳಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಇಡಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ವಿಪುಲ್ ಪಾಂಚೋಲಿ ಅವರಿದ್ದ ಪೀಠ, “ಪ್ರಸ್ತುತ ಇಡಿ ಅಥವಾ ಇತರ ಕೇಂದ್ರ ಸಂಸ್ಥೆಗಳ ತನಿಖೆ ಮತ್ತು ರಾಜ್ಯ ಸಂಸ್ಥೆಗಳ ಹಸ್ತಕ್ಷೇಪಕ್ಕೆ ಸಂಬಂಧಿಸಿದ ಗಂಭೀರ ಸಮಸ್ಯೆಯನ್ನು ಎತ್ತಿದೆ ಎಂದು ನಾವು ಮೇಲ್ನೋಟಕ್ಕೆ ಭಾವಿಸುತ್ತೇವೆ. ಇಡಿ ಎತ್ತಿರುವ ಸಮಸ್ಯೆಗಳನ್ನು ಪರಿಶೀಲಿಸದಿದ್ದರೆ ದೇಶದಲ್ಲಿ ಕಾನೂನುಬಾಹಿರತೆ ಉಂಟಾಗುತ್ತದೆ” ಎಂದು ಹೇಳಿದೆ.

“ನಮ್ಮ ಅಭಿಪ್ರಾಯದ ಪ್ರಕಾರ, ದೇಶದಲ್ಲಿ ಕಾನೂನಿನ ಆಳ್ವಿಕೆಯನ್ನು ಕಾಪಾಡಲು ಮತ್ತು ಪ್ರತಿ ಸಂಸ್ಥೆ/ಅಂಗ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅನುಮತಿಸಲು, ಈ ವಿಷಯವನ್ನು ಪರಿಶೀಲಿಸುವುದು ಅಗತ್ಯವಾಗಿದೆ. ಇದರಿಂದ ಅಪರಾಧಿಗಳು ಒಂದು ನಿರ್ದಿಷ್ಟ ರಾಜ್ಯದ ಕಾನೂನು ಜಾರಿ ಮಾಡುವ ಏಜೆನ್ಸಿಗಳ ರಕ್ಷಣೆಯ ಕವಚದಡಿ ಸಂರಕ್ಷಣೆ ಪಡೆಯದಂತೆ ಮಾಡಬೇಕು” ಎಂದು ಕೋರ್ಟ್ ತಿಳಿಸಿದೆ.

ಪಶ್ಚಿಮ ಬಂಗಾಳದ ಡಿಜಿಪಿ ರಾಜೀವ್ ಕುಮಾರ್ ಮತ್ತು ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ಸೇರಿದಂತೆ ಇತರರನ್ನು ಅಮಾನತುಗೊಳಿಸುವಂತೆ ಕೋರಿ ಇಡಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಪಟ್ಟಂತೆ ಗೃಹ ಸಚಿವಾಲಯ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಮಮತಾ ಬ್ಯಾನರ್ಜಿ ಮತ್ತು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ತನಿಖೆಗೆ ಅಡ್ಡಿಪಡಿಸಲು ಮತ್ತು ಸಾಕ್ಷ್ಯ ಕಳ್ಳತನಕ್ಕೆ ಅಧಿಕಾರಿಗಳು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿ, ಡಿಜಿಪಿ ಕುಮಾರ್ ಸೇರಿದಂತೆ ಪಶ್ಚಿಮ ಬಂಗಾಳದ ಉನ್ನತ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಕೋರಿ ಇಡಿ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಅರ್ಜಿ ಸಲ್ಲಿಸಿದೆ.

“ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದಾಳಿ (ಇಡಿ ಶೋಧ ಅಥವಾ ಪರಿಶೀಲನೆ) ನಡೆಯುತ್ತಿದ್ದ ಸ್ಥಳಕ್ಕೆ ಬಂದು ನಿಂತಿದ್ದರು. ಅವರು ದಾಖಲೆಗಳನ್ನು ತೆಗೆದುಕೊಂಡಿದ್ದಾರೆ. ಈ ಮೂಲಕ ನಮ್ಮ ಅಧಿಕಾರಿಗಳನ್ನು ಭಯಭೀತಗೊಳಿಸುವ ಪ್ರಯತ್ನ ಮಾಡಿದ್ದಾರೆ. ಅಂದರೆ, ಅಧಿಕಾರಿಗಳು ಭಯಪಟ್ಟು ಅಥವಾ ಒತ್ತಡಕ್ಕೆ ಒಳಗಾಗಿ ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾಗಿಲ್ಲ. ಇದು ನಮ್ಮ ಕಾನೂನುಬದ್ಧ ಕರ್ತವ್ಯಗಳನ್ನು ಸ್ವತಂತ್ರವಾಗಿ ನಿರ್ವಹಿಸುವ ಸಾಮರ್ಥ್ಯವನ್ನು ಗಂಭೀರವಾಗಿ ಹಾನಿಗೊಳಿಸಿದೆ” ಇಡಿ ತನ್ನ ಅರ್ಜಿಯಲ್ಲಿ ಹೇಳಿದೆ.

ಈ ಪ್ರಕರಣದ ತನಿಖೆಯನ್ನು ಕೇಂದ್ರದ ಸ್ವತಂತ್ರ ತನಿಖೆಯಾದ ಸಿಬಿಐನಿಂದ ಮಾಡಿಸಬೇಕು. ಕೋಲ್ಕತ್ತಾ ಪೊಲೀಸರು ಮಮತಾ ಬ್ಯಾನರ್ಜಿ ಸರ್ಕಾರದ ಅಧೀನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಇಡಿ ಮನವಿ ಮಾಡಿದೆ.

ದಾಳಿಯ ವೇಳೆ ದಾಖಲೆಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಪಶ್ಚಿಮ ಬಂಗಾಳದಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಇಡಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ಸಂಬಂಧ ಪಶ್ಚಿಮ ಬಂಗಾಳ ಸರ್ಕಾರ ಕೇವಿಯಟ್ ಸಲ್ಲಿಸಿದೆ. ತನ್ನ ವಾದವನ್ನು ಆಲಿಸಿದೆ ಆದೇಶಗಳನ್ನು ನೀಡದಂತೆ ಕೋರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...