HomeUncategorizedಪ್ರಶಾಂತ್ ಕಿಶೋರ್ ಇಲ್ಲದೆಯೂ TMC ಗಾಗಿ ಕೆಲಸ ಮಾಡಲಿದೆ I-PAC!

ಪ್ರಶಾಂತ್ ಕಿಶೋರ್ ಇಲ್ಲದೆಯೂ TMC ಗಾಗಿ ಕೆಲಸ ಮಾಡಲಿದೆ I-PAC!

- Advertisement -
- Advertisement -

ದೇಶದಲ್ಲಿ ಮತ್ತೊಮ್ಮೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಸುದ್ದಿಯಲ್ಲಿದ್ದಾರೆ. 2021 ರ ಪಶ್ಚಿಮ ಬಂಗಾಳ ಚುನಾವಣೆಯ ತೃಣಮೂಲ ಗೆಲುವಿನೊಂದಿಗೆ ತಮ್ಮ ರಾಜಕೀಯ ತಂತ್ರಗಾರಿಕೆಯ ವೃತ್ತಿಯಿಂದ ನಿವೃತ್ತಿ ಹೊಂದುವುದಾಗಿ ಹೇಳಿ ಪ್ರಶಾಂತ್ ಕಿಶೋರ್ ಆಶ್ಚರ್ಯ ಮೂಡಿಸಿದ್ದರು. ಇದರ ನಡುವೆ ಪ್ರಶಾಂತ್ ಕಿಶೋರ್ ರಾಜಕೀಯಕ್ಕೆ ಪ್ರವೇಶಿಸುತ್ತಾರ ಎಂಬ ಸುದ್ದಿಗಳು ಕೆಲವುದಿನ ಹರಿದಾಡುತ್ತಿತ್ತು. ಬಿಹಾರ ಮೂಲದ ಚುನಾವಣಾ ತಂತ್ರಜ್ಞ ಸದ್ಯ ರಾಜಕೀಯದ ಕಡೆ ಮುಖ ಮಾಡಿಲ್ಲ. ಹಾಗೆಂದು ರಾಜಕೀಯದಿಂದ ದೂರವೂ ಉಳಿದಿಲ್ಲ. ಇದರ ನಡುವೆ ತೃಣಮೂಲ್ ಕಾಂಗ್ರೆಸ್ ಪ್ರಶಾಂತ್ ಕಿಶೋರ್ ಹುಟ್ಟು ಹಾಕಿದ I-PAC ಚುನಾವಣಾ ವಿಶ್ಲೇಷಣಾ ಸಂಸ್ಥೆಯ ಜೊತೆ ತನ್ನ ಒಪ್ಪಂದವನ್ನು ಮುಂದುವರೆಸಿದೆ. ಪಶ್ಚಿಮ ಬಂಗಾಳದ ಜಿಲ್ಲಾ ಪಂಚಾಯತಿ, ಸ್ಥಳೀಯ ಸಂಸ್ಥೆಗಳು, ಇತರ ಚುನಾವಣೆಗಳು ಸೇರಿ ಎಲ್ಲಾ ಚುನಾವಣಾ ಪ್ರಕ್ರಿಯೆಯಲ್ಲಿ I-PAC ತೃಣಮೂಲ ಕಾಂಗ್ರೆಸ್‌ಗೆ ಸಹಾಯ ಮಾಡಲಿದೆ. ತೃಣಮೂಲ ಕಾಂಗ್ರೆಸ್‌ ಮತ್ತು I-PAC ನಡುವಿನ ಒಪ್ಪಂದ 2026 ರ ವರೆಗೂ ಮುಂದುವರೆಯಲಿದೆ. ಆದರೆ ಈಗ I-PAC ನಲ್ಲಿ ಮುಖ್ಯಸ್ಥರಾಗಿ ಪ್ರಶಾಂತ್ ಕಿಶೋರ್ ಕೆಲಸ ಮಾಡುತ್ತಿಲ್ಲ. ಅವರ ಬದಲಾಗಿ 9 ಜನ ಹಿರಿಯ ಸದಸ್ಯರ ನೇತೃತ್ವದಲ್ಲಿ I-PAC ಕಾರ್ಯನಿರ್ವಹಿಸುತ್ತಿದೆ. ಪ್ರಶಾಂತ್ ಕಿಶೋರ್ ಇಲ್ಲದೇ ತೃಣಮೂಲ್-I-PAC ಜೋಡಿ ಚುನಾವಣೆಗಳಲ್ಲಿ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂದು ಬಂಗಾಳದ ಉಪಚುನಾವಣೆಗಳು ಸ್ಪಷ್ಟಪಡಿಸಲಿವೆ.

ಇದನ್ನೂ ಓದಿ : ಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

ಇವೆಲ್ಲದರ ನಡುವೆ ಇತ್ತ ಪ್ರಶಾಂತ್ ಕಿಶೋರ್ ಸದ್ದಿಲ್ಲದೇ ಶರತ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ. ಬಂಗಾಳ ಚುನಾವಣೆಯಲ್ಲಿ ಬೆಂಬಲಿಸಿದ್ದಕ್ಕೆ ಕೃತಜ್ಞತೆ ತಿಳಿಸಲು ಪವಾರ್ ಭೇಟಿಯಾಗಿದ್ದಾಗಿ ಪ್ರಶಾಂತ್ ಕಿಶೋರ್ ಹೇಳುತ್ತಿದ್ದಾರಾದರೂ  ಭೇಟಿ ಹಿಂದೆ ಮಹತ್ವದ ರಾಜಕೀಯ ಉದ್ಧೇಶವಿದೆಯೆಂದು ಹೇಳಲಾಗುತ್ತಿದೆ. ಮಮತಾ ಬ್ಯಾನರ್ಜಿ ಪರವಾಗಿ ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ. ಮಮತಾ ಬ್ಯಾನರ್ಜಿ ರಾಷ್ಟ್ರ ಮಟ್ಟದಲ್ಲಿ ವಿರೋಧ ಪಕ್ಷಗಳ ಒಕ್ಕೂಟಗಳನ್ನು ಸಂಘಟಿಸಲು ಆರಂಭಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ಕೇಳಿ ಬರುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ತೃಣಮೂಲ್ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ ಪಕ್ಷವನ್ನು ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯುವ ಅವಶ್ಯಕತೆಯಿದೆಯೆಂದು ಹೇಳಿದ್ದಾರೆ. ಮತ್ತೊಬ್ಬ ತೃಣಮೂಲ್ ನಾಯಕ ಅಭಿಷೇಕ್ ಬ್ಯಾನರ್ಜಿ ಕೂಡ ಇದೇ ರೀತಿಯ ಹೇಳಿಕೆಯನ್ನು ಇತ್ತೀಚೆಗೆ ನೀಡಿದ್ದಾರೆ. ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು ಭೇಟಿಯಾಗಿರುವುದು, ಮಮತಾ ಬ್ಯಾನರ್ಜಿಯವರ ರಾಷ್ಟ್ರ ರಾಜಕಾರಣದ ಕನಸು ಎಲ್ಲವನ್ನೂ ತಾಳೆಹಾಕಿ ನೋಡಿದರೆ ತೃಣಮೂಲ ಕಾಂಗ್ರೆಸ್‌ ತೆರೆಮರೆಯಲ್ಲಿ ರಾಷ್ಟ್ರರಾಜಕಾರಣದಲ್ಲಿ ಮಹತ್ವದ ಹೆಜ್ಜೆಯಿಡಲು ಸಜ್ಜಾಗುತ್ತಿರುವುದು ಸ್ಪಷ್ಟವಾಗುತ್ತದೆ.

ಬಂಗಾಳದ ಗೆಲುವು ಮಮತಾ ಬ್ಯಾನರ್ಜಿ ಅವರಲ್ಲಿ ದೆಹಲಿ ಗದ್ದುಗೆಯ ಕನಸನ್ನು ಬಿತ್ತಿರಬಹುದು. ಹಾಗಾಗಿ ಮಮತಾ ಈಗಿನಿಂದಲೇ ಪ್ರಧಾನಿ ಮೋದಿ ವಿರುದ್ಧ ವಿರೋಧ ಪಕ್ಷಗಳ ಒಕ್ಕೂಟವನ್ನು ಸಂಘಟಿಸುವ ಯತ್ನಕ್ಕೆ ಕೈ ಹಾಕಿದ್ದಾರೆ. ಬಂಗಾಳ ಚುನಾವಣೆಯ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳು ಒಟ್ಟಾದರೆ ಪ್ರಧಾನಿ ಮೋದಿಯವರನ್ನು ಸೋಲಿಸಬಹುದು ಎಂದಿದ್ದರು. ಹಾಗೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿ ಹಲವು ನಾಯಕರುಗಳಿಗೆ ಬೆಂಬಲ ಕೋರಿ ಪತ್ರ ಬರೆದಿದ್ದರು.

ಇದಕ್ಕೂ ಹಿಂದೆ 2019 ರ ಲೋಕಸಭೆ ಚುನಾವಣೆಯ ಸಮಯದಲ್ಲೂ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷಗಳ ಒಕ್ಕೂಟವಾದ ತೃತೀಯ ರಂಗವನ್ನು ಸಂಘಟಿಸಲು ಪ್ರಯತ್ನಿಸಿದ್ದರು. ಈ ನಡುವೆ ಮಮಾತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿಯವರ ನಡುವಿನ ವಾಕ್ಸಮರಗಳು, ಅಧಿಕಾರಿ ವರ್ಗಾವಣೆ ತಿಕ್ಕಾಟಗಳನ್ನು ಗಮನಿಸಿದರೆ ಪ್ರಶಾಂತ್ ಕಿಶೋರ್ ಶರದ್‌ ಪವಾರ್ ಭೇಟಿಯೆ ಹಿಂದೆ ಹಲವು ಅರ್ಥಗಳು ಹುಟ್ಟಿಕೊಳ್ಳುತ್ತವೆ. ಜೊತೆಗೆ ಪ್ರಶಾಂತ್ ಕಿಶೋರ್ ಸ್ಥಾಪಿಸಿದ I-PAC  ಸಂಸ್ಥೆ ಜೊತೆ ತೃಣಮೂಲ್ ಒಪ್ಪಂದವನ್ನು ಮುಂದುವರೆಸಿರುವುದು ಸಹ ಮಮತಾ ಬ್ಯಾನರ್ಜಿಯವರ ರಾಷ್ಟ್ರ ರಾಜಕಾರಣದ ಮಹತ್ವಾಕಾಂಕ್ಷೆಯ ಜಾಡನ್ನು ಸೂಚಿಸುವಂತಿದೆ.

ಒಟ್ಟಿನಲ್ಲಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ ಗೆಲುವು, ಚುನಾವಣೆಯ ನಂತರದ ಬಿಜೆಪಿ ನಾಯಕರ ವಲಸೆ, ಪ್ರಶಾಂತ್ ಕಿಶೋರ್- ಶರದ್ ಪವಾರ್ ನಿಗೂಢ ಭೇಟಿ ಎಲ್ಲವೂ ಮಮತಾ ಬ್ಯಾನರ್ಜಿ ಅವರನ್ನು ಮತ್ತೊಮ್ಮೆ ರಾಷ್ಟ್ರ ರಾಜಕಾರಣದ ಮುನ್ನೆಲೆಗೆ ತಂದು ನಿಲ್ಲಿಸಿವೆ.


ಇದನ್ನೂ ಓದಿ : ಅಕ್ರಮ‌ ಹಣ ವರ್ಗಾವಣೆ ಆರೋಪ: ಬಿಎಸ್‌ವೈ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...