HomeUncategorizedಪ್ರಶಾಂತ್ ಕಿಶೋರ್ ಇಲ್ಲದೆಯೂ TMC ಗಾಗಿ ಕೆಲಸ ಮಾಡಲಿದೆ I-PAC!

ಪ್ರಶಾಂತ್ ಕಿಶೋರ್ ಇಲ್ಲದೆಯೂ TMC ಗಾಗಿ ಕೆಲಸ ಮಾಡಲಿದೆ I-PAC!

- Advertisement -
- Advertisement -

ದೇಶದಲ್ಲಿ ಮತ್ತೊಮ್ಮೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಸುದ್ದಿಯಲ್ಲಿದ್ದಾರೆ. 2021 ರ ಪಶ್ಚಿಮ ಬಂಗಾಳ ಚುನಾವಣೆಯ ತೃಣಮೂಲ ಗೆಲುವಿನೊಂದಿಗೆ ತಮ್ಮ ರಾಜಕೀಯ ತಂತ್ರಗಾರಿಕೆಯ ವೃತ್ತಿಯಿಂದ ನಿವೃತ್ತಿ ಹೊಂದುವುದಾಗಿ ಹೇಳಿ ಪ್ರಶಾಂತ್ ಕಿಶೋರ್ ಆಶ್ಚರ್ಯ ಮೂಡಿಸಿದ್ದರು. ಇದರ ನಡುವೆ ಪ್ರಶಾಂತ್ ಕಿಶೋರ್ ರಾಜಕೀಯಕ್ಕೆ ಪ್ರವೇಶಿಸುತ್ತಾರ ಎಂಬ ಸುದ್ದಿಗಳು ಕೆಲವುದಿನ ಹರಿದಾಡುತ್ತಿತ್ತು. ಬಿಹಾರ ಮೂಲದ ಚುನಾವಣಾ ತಂತ್ರಜ್ಞ ಸದ್ಯ ರಾಜಕೀಯದ ಕಡೆ ಮುಖ ಮಾಡಿಲ್ಲ. ಹಾಗೆಂದು ರಾಜಕೀಯದಿಂದ ದೂರವೂ ಉಳಿದಿಲ್ಲ. ಇದರ ನಡುವೆ ತೃಣಮೂಲ್ ಕಾಂಗ್ರೆಸ್ ಪ್ರಶಾಂತ್ ಕಿಶೋರ್ ಹುಟ್ಟು ಹಾಕಿದ I-PAC ಚುನಾವಣಾ ವಿಶ್ಲೇಷಣಾ ಸಂಸ್ಥೆಯ ಜೊತೆ ತನ್ನ ಒಪ್ಪಂದವನ್ನು ಮುಂದುವರೆಸಿದೆ. ಪಶ್ಚಿಮ ಬಂಗಾಳದ ಜಿಲ್ಲಾ ಪಂಚಾಯತಿ, ಸ್ಥಳೀಯ ಸಂಸ್ಥೆಗಳು, ಇತರ ಚುನಾವಣೆಗಳು ಸೇರಿ ಎಲ್ಲಾ ಚುನಾವಣಾ ಪ್ರಕ್ರಿಯೆಯಲ್ಲಿ I-PAC ತೃಣಮೂಲ ಕಾಂಗ್ರೆಸ್‌ಗೆ ಸಹಾಯ ಮಾಡಲಿದೆ. ತೃಣಮೂಲ ಕಾಂಗ್ರೆಸ್‌ ಮತ್ತು I-PAC ನಡುವಿನ ಒಪ್ಪಂದ 2026 ರ ವರೆಗೂ ಮುಂದುವರೆಯಲಿದೆ. ಆದರೆ ಈಗ I-PAC ನಲ್ಲಿ ಮುಖ್ಯಸ್ಥರಾಗಿ ಪ್ರಶಾಂತ್ ಕಿಶೋರ್ ಕೆಲಸ ಮಾಡುತ್ತಿಲ್ಲ. ಅವರ ಬದಲಾಗಿ 9 ಜನ ಹಿರಿಯ ಸದಸ್ಯರ ನೇತೃತ್ವದಲ್ಲಿ I-PAC ಕಾರ್ಯನಿರ್ವಹಿಸುತ್ತಿದೆ. ಪ್ರಶಾಂತ್ ಕಿಶೋರ್ ಇಲ್ಲದೇ ತೃಣಮೂಲ್-I-PAC ಜೋಡಿ ಚುನಾವಣೆಗಳಲ್ಲಿ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂದು ಬಂಗಾಳದ ಉಪಚುನಾವಣೆಗಳು ಸ್ಪಷ್ಟಪಡಿಸಲಿವೆ.

ಇದನ್ನೂ ಓದಿ : ಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

ಇವೆಲ್ಲದರ ನಡುವೆ ಇತ್ತ ಪ್ರಶಾಂತ್ ಕಿಶೋರ್ ಸದ್ದಿಲ್ಲದೇ ಶರತ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ. ಬಂಗಾಳ ಚುನಾವಣೆಯಲ್ಲಿ ಬೆಂಬಲಿಸಿದ್ದಕ್ಕೆ ಕೃತಜ್ಞತೆ ತಿಳಿಸಲು ಪವಾರ್ ಭೇಟಿಯಾಗಿದ್ದಾಗಿ ಪ್ರಶಾಂತ್ ಕಿಶೋರ್ ಹೇಳುತ್ತಿದ್ದಾರಾದರೂ  ಭೇಟಿ ಹಿಂದೆ ಮಹತ್ವದ ರಾಜಕೀಯ ಉದ್ಧೇಶವಿದೆಯೆಂದು ಹೇಳಲಾಗುತ್ತಿದೆ. ಮಮತಾ ಬ್ಯಾನರ್ಜಿ ಪರವಾಗಿ ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ. ಮಮತಾ ಬ್ಯಾನರ್ಜಿ ರಾಷ್ಟ್ರ ಮಟ್ಟದಲ್ಲಿ ವಿರೋಧ ಪಕ್ಷಗಳ ಒಕ್ಕೂಟಗಳನ್ನು ಸಂಘಟಿಸಲು ಆರಂಭಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ಕೇಳಿ ಬರುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ತೃಣಮೂಲ್ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ ಪಕ್ಷವನ್ನು ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯುವ ಅವಶ್ಯಕತೆಯಿದೆಯೆಂದು ಹೇಳಿದ್ದಾರೆ. ಮತ್ತೊಬ್ಬ ತೃಣಮೂಲ್ ನಾಯಕ ಅಭಿಷೇಕ್ ಬ್ಯಾನರ್ಜಿ ಕೂಡ ಇದೇ ರೀತಿಯ ಹೇಳಿಕೆಯನ್ನು ಇತ್ತೀಚೆಗೆ ನೀಡಿದ್ದಾರೆ. ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು ಭೇಟಿಯಾಗಿರುವುದು, ಮಮತಾ ಬ್ಯಾನರ್ಜಿಯವರ ರಾಷ್ಟ್ರ ರಾಜಕಾರಣದ ಕನಸು ಎಲ್ಲವನ್ನೂ ತಾಳೆಹಾಕಿ ನೋಡಿದರೆ ತೃಣಮೂಲ ಕಾಂಗ್ರೆಸ್‌ ತೆರೆಮರೆಯಲ್ಲಿ ರಾಷ್ಟ್ರರಾಜಕಾರಣದಲ್ಲಿ ಮಹತ್ವದ ಹೆಜ್ಜೆಯಿಡಲು ಸಜ್ಜಾಗುತ್ತಿರುವುದು ಸ್ಪಷ್ಟವಾಗುತ್ತದೆ.

ಬಂಗಾಳದ ಗೆಲುವು ಮಮತಾ ಬ್ಯಾನರ್ಜಿ ಅವರಲ್ಲಿ ದೆಹಲಿ ಗದ್ದುಗೆಯ ಕನಸನ್ನು ಬಿತ್ತಿರಬಹುದು. ಹಾಗಾಗಿ ಮಮತಾ ಈಗಿನಿಂದಲೇ ಪ್ರಧಾನಿ ಮೋದಿ ವಿರುದ್ಧ ವಿರೋಧ ಪಕ್ಷಗಳ ಒಕ್ಕೂಟವನ್ನು ಸಂಘಟಿಸುವ ಯತ್ನಕ್ಕೆ ಕೈ ಹಾಕಿದ್ದಾರೆ. ಬಂಗಾಳ ಚುನಾವಣೆಯ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳು ಒಟ್ಟಾದರೆ ಪ್ರಧಾನಿ ಮೋದಿಯವರನ್ನು ಸೋಲಿಸಬಹುದು ಎಂದಿದ್ದರು. ಹಾಗೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿ ಹಲವು ನಾಯಕರುಗಳಿಗೆ ಬೆಂಬಲ ಕೋರಿ ಪತ್ರ ಬರೆದಿದ್ದರು.

ಇದಕ್ಕೂ ಹಿಂದೆ 2019 ರ ಲೋಕಸಭೆ ಚುನಾವಣೆಯ ಸಮಯದಲ್ಲೂ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷಗಳ ಒಕ್ಕೂಟವಾದ ತೃತೀಯ ರಂಗವನ್ನು ಸಂಘಟಿಸಲು ಪ್ರಯತ್ನಿಸಿದ್ದರು. ಈ ನಡುವೆ ಮಮಾತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿಯವರ ನಡುವಿನ ವಾಕ್ಸಮರಗಳು, ಅಧಿಕಾರಿ ವರ್ಗಾವಣೆ ತಿಕ್ಕಾಟಗಳನ್ನು ಗಮನಿಸಿದರೆ ಪ್ರಶಾಂತ್ ಕಿಶೋರ್ ಶರದ್‌ ಪವಾರ್ ಭೇಟಿಯೆ ಹಿಂದೆ ಹಲವು ಅರ್ಥಗಳು ಹುಟ್ಟಿಕೊಳ್ಳುತ್ತವೆ. ಜೊತೆಗೆ ಪ್ರಶಾಂತ್ ಕಿಶೋರ್ ಸ್ಥಾಪಿಸಿದ I-PAC  ಸಂಸ್ಥೆ ಜೊತೆ ತೃಣಮೂಲ್ ಒಪ್ಪಂದವನ್ನು ಮುಂದುವರೆಸಿರುವುದು ಸಹ ಮಮತಾ ಬ್ಯಾನರ್ಜಿಯವರ ರಾಷ್ಟ್ರ ರಾಜಕಾರಣದ ಮಹತ್ವಾಕಾಂಕ್ಷೆಯ ಜಾಡನ್ನು ಸೂಚಿಸುವಂತಿದೆ.

ಒಟ್ಟಿನಲ್ಲಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ ಗೆಲುವು, ಚುನಾವಣೆಯ ನಂತರದ ಬಿಜೆಪಿ ನಾಯಕರ ವಲಸೆ, ಪ್ರಶಾಂತ್ ಕಿಶೋರ್- ಶರದ್ ಪವಾರ್ ನಿಗೂಢ ಭೇಟಿ ಎಲ್ಲವೂ ಮಮತಾ ಬ್ಯಾನರ್ಜಿ ಅವರನ್ನು ಮತ್ತೊಮ್ಮೆ ರಾಷ್ಟ್ರ ರಾಜಕಾರಣದ ಮುನ್ನೆಲೆಗೆ ತಂದು ನಿಲ್ಲಿಸಿವೆ.


ಇದನ್ನೂ ಓದಿ : ಅಕ್ರಮ‌ ಹಣ ವರ್ಗಾವಣೆ ಆರೋಪ: ಬಿಎಸ್‌ವೈ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...