HomeUncategorizedಪ್ರಶಾಂತ್ ಕಿಶೋರ್ ಇಲ್ಲದೆಯೂ TMC ಗಾಗಿ ಕೆಲಸ ಮಾಡಲಿದೆ I-PAC!

ಪ್ರಶಾಂತ್ ಕಿಶೋರ್ ಇಲ್ಲದೆಯೂ TMC ಗಾಗಿ ಕೆಲಸ ಮಾಡಲಿದೆ I-PAC!

- Advertisement -
- Advertisement -

ದೇಶದಲ್ಲಿ ಮತ್ತೊಮ್ಮೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಸುದ್ದಿಯಲ್ಲಿದ್ದಾರೆ. 2021 ರ ಪಶ್ಚಿಮ ಬಂಗಾಳ ಚುನಾವಣೆಯ ತೃಣಮೂಲ ಗೆಲುವಿನೊಂದಿಗೆ ತಮ್ಮ ರಾಜಕೀಯ ತಂತ್ರಗಾರಿಕೆಯ ವೃತ್ತಿಯಿಂದ ನಿವೃತ್ತಿ ಹೊಂದುವುದಾಗಿ ಹೇಳಿ ಪ್ರಶಾಂತ್ ಕಿಶೋರ್ ಆಶ್ಚರ್ಯ ಮೂಡಿಸಿದ್ದರು. ಇದರ ನಡುವೆ ಪ್ರಶಾಂತ್ ಕಿಶೋರ್ ರಾಜಕೀಯಕ್ಕೆ ಪ್ರವೇಶಿಸುತ್ತಾರ ಎಂಬ ಸುದ್ದಿಗಳು ಕೆಲವುದಿನ ಹರಿದಾಡುತ್ತಿತ್ತು. ಬಿಹಾರ ಮೂಲದ ಚುನಾವಣಾ ತಂತ್ರಜ್ಞ ಸದ್ಯ ರಾಜಕೀಯದ ಕಡೆ ಮುಖ ಮಾಡಿಲ್ಲ. ಹಾಗೆಂದು ರಾಜಕೀಯದಿಂದ ದೂರವೂ ಉಳಿದಿಲ್ಲ. ಇದರ ನಡುವೆ ತೃಣಮೂಲ್ ಕಾಂಗ್ರೆಸ್ ಪ್ರಶಾಂತ್ ಕಿಶೋರ್ ಹುಟ್ಟು ಹಾಕಿದ I-PAC ಚುನಾವಣಾ ವಿಶ್ಲೇಷಣಾ ಸಂಸ್ಥೆಯ ಜೊತೆ ತನ್ನ ಒಪ್ಪಂದವನ್ನು ಮುಂದುವರೆಸಿದೆ. ಪಶ್ಚಿಮ ಬಂಗಾಳದ ಜಿಲ್ಲಾ ಪಂಚಾಯತಿ, ಸ್ಥಳೀಯ ಸಂಸ್ಥೆಗಳು, ಇತರ ಚುನಾವಣೆಗಳು ಸೇರಿ ಎಲ್ಲಾ ಚುನಾವಣಾ ಪ್ರಕ್ರಿಯೆಯಲ್ಲಿ I-PAC ತೃಣಮೂಲ ಕಾಂಗ್ರೆಸ್‌ಗೆ ಸಹಾಯ ಮಾಡಲಿದೆ. ತೃಣಮೂಲ ಕಾಂಗ್ರೆಸ್‌ ಮತ್ತು I-PAC ನಡುವಿನ ಒಪ್ಪಂದ 2026 ರ ವರೆಗೂ ಮುಂದುವರೆಯಲಿದೆ. ಆದರೆ ಈಗ I-PAC ನಲ್ಲಿ ಮುಖ್ಯಸ್ಥರಾಗಿ ಪ್ರಶಾಂತ್ ಕಿಶೋರ್ ಕೆಲಸ ಮಾಡುತ್ತಿಲ್ಲ. ಅವರ ಬದಲಾಗಿ 9 ಜನ ಹಿರಿಯ ಸದಸ್ಯರ ನೇತೃತ್ವದಲ್ಲಿ I-PAC ಕಾರ್ಯನಿರ್ವಹಿಸುತ್ತಿದೆ. ಪ್ರಶಾಂತ್ ಕಿಶೋರ್ ಇಲ್ಲದೇ ತೃಣಮೂಲ್-I-PAC ಜೋಡಿ ಚುನಾವಣೆಗಳಲ್ಲಿ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂದು ಬಂಗಾಳದ ಉಪಚುನಾವಣೆಗಳು ಸ್ಪಷ್ಟಪಡಿಸಲಿವೆ.

ಇದನ್ನೂ ಓದಿ : ಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

ಇವೆಲ್ಲದರ ನಡುವೆ ಇತ್ತ ಪ್ರಶಾಂತ್ ಕಿಶೋರ್ ಸದ್ದಿಲ್ಲದೇ ಶರತ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ. ಬಂಗಾಳ ಚುನಾವಣೆಯಲ್ಲಿ ಬೆಂಬಲಿಸಿದ್ದಕ್ಕೆ ಕೃತಜ್ಞತೆ ತಿಳಿಸಲು ಪವಾರ್ ಭೇಟಿಯಾಗಿದ್ದಾಗಿ ಪ್ರಶಾಂತ್ ಕಿಶೋರ್ ಹೇಳುತ್ತಿದ್ದಾರಾದರೂ  ಭೇಟಿ ಹಿಂದೆ ಮಹತ್ವದ ರಾಜಕೀಯ ಉದ್ಧೇಶವಿದೆಯೆಂದು ಹೇಳಲಾಗುತ್ತಿದೆ. ಮಮತಾ ಬ್ಯಾನರ್ಜಿ ಪರವಾಗಿ ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ. ಮಮತಾ ಬ್ಯಾನರ್ಜಿ ರಾಷ್ಟ್ರ ಮಟ್ಟದಲ್ಲಿ ವಿರೋಧ ಪಕ್ಷಗಳ ಒಕ್ಕೂಟಗಳನ್ನು ಸಂಘಟಿಸಲು ಆರಂಭಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ಕೇಳಿ ಬರುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ತೃಣಮೂಲ್ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ ಪಕ್ಷವನ್ನು ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯುವ ಅವಶ್ಯಕತೆಯಿದೆಯೆಂದು ಹೇಳಿದ್ದಾರೆ. ಮತ್ತೊಬ್ಬ ತೃಣಮೂಲ್ ನಾಯಕ ಅಭಿಷೇಕ್ ಬ್ಯಾನರ್ಜಿ ಕೂಡ ಇದೇ ರೀತಿಯ ಹೇಳಿಕೆಯನ್ನು ಇತ್ತೀಚೆಗೆ ನೀಡಿದ್ದಾರೆ. ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು ಭೇಟಿಯಾಗಿರುವುದು, ಮಮತಾ ಬ್ಯಾನರ್ಜಿಯವರ ರಾಷ್ಟ್ರ ರಾಜಕಾರಣದ ಕನಸು ಎಲ್ಲವನ್ನೂ ತಾಳೆಹಾಕಿ ನೋಡಿದರೆ ತೃಣಮೂಲ ಕಾಂಗ್ರೆಸ್‌ ತೆರೆಮರೆಯಲ್ಲಿ ರಾಷ್ಟ್ರರಾಜಕಾರಣದಲ್ಲಿ ಮಹತ್ವದ ಹೆಜ್ಜೆಯಿಡಲು ಸಜ್ಜಾಗುತ್ತಿರುವುದು ಸ್ಪಷ್ಟವಾಗುತ್ತದೆ.

ಬಂಗಾಳದ ಗೆಲುವು ಮಮತಾ ಬ್ಯಾನರ್ಜಿ ಅವರಲ್ಲಿ ದೆಹಲಿ ಗದ್ದುಗೆಯ ಕನಸನ್ನು ಬಿತ್ತಿರಬಹುದು. ಹಾಗಾಗಿ ಮಮತಾ ಈಗಿನಿಂದಲೇ ಪ್ರಧಾನಿ ಮೋದಿ ವಿರುದ್ಧ ವಿರೋಧ ಪಕ್ಷಗಳ ಒಕ್ಕೂಟವನ್ನು ಸಂಘಟಿಸುವ ಯತ್ನಕ್ಕೆ ಕೈ ಹಾಕಿದ್ದಾರೆ. ಬಂಗಾಳ ಚುನಾವಣೆಯ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳು ಒಟ್ಟಾದರೆ ಪ್ರಧಾನಿ ಮೋದಿಯವರನ್ನು ಸೋಲಿಸಬಹುದು ಎಂದಿದ್ದರು. ಹಾಗೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿ ಹಲವು ನಾಯಕರುಗಳಿಗೆ ಬೆಂಬಲ ಕೋರಿ ಪತ್ರ ಬರೆದಿದ್ದರು.

ಇದಕ್ಕೂ ಹಿಂದೆ 2019 ರ ಲೋಕಸಭೆ ಚುನಾವಣೆಯ ಸಮಯದಲ್ಲೂ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷಗಳ ಒಕ್ಕೂಟವಾದ ತೃತೀಯ ರಂಗವನ್ನು ಸಂಘಟಿಸಲು ಪ್ರಯತ್ನಿಸಿದ್ದರು. ಈ ನಡುವೆ ಮಮಾತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿಯವರ ನಡುವಿನ ವಾಕ್ಸಮರಗಳು, ಅಧಿಕಾರಿ ವರ್ಗಾವಣೆ ತಿಕ್ಕಾಟಗಳನ್ನು ಗಮನಿಸಿದರೆ ಪ್ರಶಾಂತ್ ಕಿಶೋರ್ ಶರದ್‌ ಪವಾರ್ ಭೇಟಿಯೆ ಹಿಂದೆ ಹಲವು ಅರ್ಥಗಳು ಹುಟ್ಟಿಕೊಳ್ಳುತ್ತವೆ. ಜೊತೆಗೆ ಪ್ರಶಾಂತ್ ಕಿಶೋರ್ ಸ್ಥಾಪಿಸಿದ I-PAC  ಸಂಸ್ಥೆ ಜೊತೆ ತೃಣಮೂಲ್ ಒಪ್ಪಂದವನ್ನು ಮುಂದುವರೆಸಿರುವುದು ಸಹ ಮಮತಾ ಬ್ಯಾನರ್ಜಿಯವರ ರಾಷ್ಟ್ರ ರಾಜಕಾರಣದ ಮಹತ್ವಾಕಾಂಕ್ಷೆಯ ಜಾಡನ್ನು ಸೂಚಿಸುವಂತಿದೆ.

ಒಟ್ಟಿನಲ್ಲಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ ಗೆಲುವು, ಚುನಾವಣೆಯ ನಂತರದ ಬಿಜೆಪಿ ನಾಯಕರ ವಲಸೆ, ಪ್ರಶಾಂತ್ ಕಿಶೋರ್- ಶರದ್ ಪವಾರ್ ನಿಗೂಢ ಭೇಟಿ ಎಲ್ಲವೂ ಮಮತಾ ಬ್ಯಾನರ್ಜಿ ಅವರನ್ನು ಮತ್ತೊಮ್ಮೆ ರಾಷ್ಟ್ರ ರಾಜಕಾರಣದ ಮುನ್ನೆಲೆಗೆ ತಂದು ನಿಲ್ಲಿಸಿವೆ.


ಇದನ್ನೂ ಓದಿ : ಅಕ್ರಮ‌ ಹಣ ವರ್ಗಾವಣೆ ಆರೋಪ: ಬಿಎಸ್‌ವೈ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...