HomeUncategorizedಪ್ರಶಾಂತ್ ಕಿಶೋರ್ ಇಲ್ಲದೆಯೂ TMC ಗಾಗಿ ಕೆಲಸ ಮಾಡಲಿದೆ I-PAC!

ಪ್ರಶಾಂತ್ ಕಿಶೋರ್ ಇಲ್ಲದೆಯೂ TMC ಗಾಗಿ ಕೆಲಸ ಮಾಡಲಿದೆ I-PAC!

- Advertisement -
- Advertisement -

ದೇಶದಲ್ಲಿ ಮತ್ತೊಮ್ಮೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಸುದ್ದಿಯಲ್ಲಿದ್ದಾರೆ. 2021 ರ ಪಶ್ಚಿಮ ಬಂಗಾಳ ಚುನಾವಣೆಯ ತೃಣಮೂಲ ಗೆಲುವಿನೊಂದಿಗೆ ತಮ್ಮ ರಾಜಕೀಯ ತಂತ್ರಗಾರಿಕೆಯ ವೃತ್ತಿಯಿಂದ ನಿವೃತ್ತಿ ಹೊಂದುವುದಾಗಿ ಹೇಳಿ ಪ್ರಶಾಂತ್ ಕಿಶೋರ್ ಆಶ್ಚರ್ಯ ಮೂಡಿಸಿದ್ದರು. ಇದರ ನಡುವೆ ಪ್ರಶಾಂತ್ ಕಿಶೋರ್ ರಾಜಕೀಯಕ್ಕೆ ಪ್ರವೇಶಿಸುತ್ತಾರ ಎಂಬ ಸುದ್ದಿಗಳು ಕೆಲವುದಿನ ಹರಿದಾಡುತ್ತಿತ್ತು. ಬಿಹಾರ ಮೂಲದ ಚುನಾವಣಾ ತಂತ್ರಜ್ಞ ಸದ್ಯ ರಾಜಕೀಯದ ಕಡೆ ಮುಖ ಮಾಡಿಲ್ಲ. ಹಾಗೆಂದು ರಾಜಕೀಯದಿಂದ ದೂರವೂ ಉಳಿದಿಲ್ಲ. ಇದರ ನಡುವೆ ತೃಣಮೂಲ್ ಕಾಂಗ್ರೆಸ್ ಪ್ರಶಾಂತ್ ಕಿಶೋರ್ ಹುಟ್ಟು ಹಾಕಿದ I-PAC ಚುನಾವಣಾ ವಿಶ್ಲೇಷಣಾ ಸಂಸ್ಥೆಯ ಜೊತೆ ತನ್ನ ಒಪ್ಪಂದವನ್ನು ಮುಂದುವರೆಸಿದೆ. ಪಶ್ಚಿಮ ಬಂಗಾಳದ ಜಿಲ್ಲಾ ಪಂಚಾಯತಿ, ಸ್ಥಳೀಯ ಸಂಸ್ಥೆಗಳು, ಇತರ ಚುನಾವಣೆಗಳು ಸೇರಿ ಎಲ್ಲಾ ಚುನಾವಣಾ ಪ್ರಕ್ರಿಯೆಯಲ್ಲಿ I-PAC ತೃಣಮೂಲ ಕಾಂಗ್ರೆಸ್‌ಗೆ ಸಹಾಯ ಮಾಡಲಿದೆ. ತೃಣಮೂಲ ಕಾಂಗ್ರೆಸ್‌ ಮತ್ತು I-PAC ನಡುವಿನ ಒಪ್ಪಂದ 2026 ರ ವರೆಗೂ ಮುಂದುವರೆಯಲಿದೆ. ಆದರೆ ಈಗ I-PAC ನಲ್ಲಿ ಮುಖ್ಯಸ್ಥರಾಗಿ ಪ್ರಶಾಂತ್ ಕಿಶೋರ್ ಕೆಲಸ ಮಾಡುತ್ತಿಲ್ಲ. ಅವರ ಬದಲಾಗಿ 9 ಜನ ಹಿರಿಯ ಸದಸ್ಯರ ನೇತೃತ್ವದಲ್ಲಿ I-PAC ಕಾರ್ಯನಿರ್ವಹಿಸುತ್ತಿದೆ. ಪ್ರಶಾಂತ್ ಕಿಶೋರ್ ಇಲ್ಲದೇ ತೃಣಮೂಲ್-I-PAC ಜೋಡಿ ಚುನಾವಣೆಗಳಲ್ಲಿ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂದು ಬಂಗಾಳದ ಉಪಚುನಾವಣೆಗಳು ಸ್ಪಷ್ಟಪಡಿಸಲಿವೆ.

ಇದನ್ನೂ ಓದಿ : ಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

ಇವೆಲ್ಲದರ ನಡುವೆ ಇತ್ತ ಪ್ರಶಾಂತ್ ಕಿಶೋರ್ ಸದ್ದಿಲ್ಲದೇ ಶರತ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ. ಬಂಗಾಳ ಚುನಾವಣೆಯಲ್ಲಿ ಬೆಂಬಲಿಸಿದ್ದಕ್ಕೆ ಕೃತಜ್ಞತೆ ತಿಳಿಸಲು ಪವಾರ್ ಭೇಟಿಯಾಗಿದ್ದಾಗಿ ಪ್ರಶಾಂತ್ ಕಿಶೋರ್ ಹೇಳುತ್ತಿದ್ದಾರಾದರೂ  ಭೇಟಿ ಹಿಂದೆ ಮಹತ್ವದ ರಾಜಕೀಯ ಉದ್ಧೇಶವಿದೆಯೆಂದು ಹೇಳಲಾಗುತ್ತಿದೆ. ಮಮತಾ ಬ್ಯಾನರ್ಜಿ ಪರವಾಗಿ ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ. ಮಮತಾ ಬ್ಯಾನರ್ಜಿ ರಾಷ್ಟ್ರ ಮಟ್ಟದಲ್ಲಿ ವಿರೋಧ ಪಕ್ಷಗಳ ಒಕ್ಕೂಟಗಳನ್ನು ಸಂಘಟಿಸಲು ಆರಂಭಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ಕೇಳಿ ಬರುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ತೃಣಮೂಲ್ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ ಪಕ್ಷವನ್ನು ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯುವ ಅವಶ್ಯಕತೆಯಿದೆಯೆಂದು ಹೇಳಿದ್ದಾರೆ. ಮತ್ತೊಬ್ಬ ತೃಣಮೂಲ್ ನಾಯಕ ಅಭಿಷೇಕ್ ಬ್ಯಾನರ್ಜಿ ಕೂಡ ಇದೇ ರೀತಿಯ ಹೇಳಿಕೆಯನ್ನು ಇತ್ತೀಚೆಗೆ ನೀಡಿದ್ದಾರೆ. ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು ಭೇಟಿಯಾಗಿರುವುದು, ಮಮತಾ ಬ್ಯಾನರ್ಜಿಯವರ ರಾಷ್ಟ್ರ ರಾಜಕಾರಣದ ಕನಸು ಎಲ್ಲವನ್ನೂ ತಾಳೆಹಾಕಿ ನೋಡಿದರೆ ತೃಣಮೂಲ ಕಾಂಗ್ರೆಸ್‌ ತೆರೆಮರೆಯಲ್ಲಿ ರಾಷ್ಟ್ರರಾಜಕಾರಣದಲ್ಲಿ ಮಹತ್ವದ ಹೆಜ್ಜೆಯಿಡಲು ಸಜ್ಜಾಗುತ್ತಿರುವುದು ಸ್ಪಷ್ಟವಾಗುತ್ತದೆ.

ಬಂಗಾಳದ ಗೆಲುವು ಮಮತಾ ಬ್ಯಾನರ್ಜಿ ಅವರಲ್ಲಿ ದೆಹಲಿ ಗದ್ದುಗೆಯ ಕನಸನ್ನು ಬಿತ್ತಿರಬಹುದು. ಹಾಗಾಗಿ ಮಮತಾ ಈಗಿನಿಂದಲೇ ಪ್ರಧಾನಿ ಮೋದಿ ವಿರುದ್ಧ ವಿರೋಧ ಪಕ್ಷಗಳ ಒಕ್ಕೂಟವನ್ನು ಸಂಘಟಿಸುವ ಯತ್ನಕ್ಕೆ ಕೈ ಹಾಕಿದ್ದಾರೆ. ಬಂಗಾಳ ಚುನಾವಣೆಯ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳು ಒಟ್ಟಾದರೆ ಪ್ರಧಾನಿ ಮೋದಿಯವರನ್ನು ಸೋಲಿಸಬಹುದು ಎಂದಿದ್ದರು. ಹಾಗೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿ ಹಲವು ನಾಯಕರುಗಳಿಗೆ ಬೆಂಬಲ ಕೋರಿ ಪತ್ರ ಬರೆದಿದ್ದರು.

ಇದಕ್ಕೂ ಹಿಂದೆ 2019 ರ ಲೋಕಸಭೆ ಚುನಾವಣೆಯ ಸಮಯದಲ್ಲೂ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷಗಳ ಒಕ್ಕೂಟವಾದ ತೃತೀಯ ರಂಗವನ್ನು ಸಂಘಟಿಸಲು ಪ್ರಯತ್ನಿಸಿದ್ದರು. ಈ ನಡುವೆ ಮಮಾತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿಯವರ ನಡುವಿನ ವಾಕ್ಸಮರಗಳು, ಅಧಿಕಾರಿ ವರ್ಗಾವಣೆ ತಿಕ್ಕಾಟಗಳನ್ನು ಗಮನಿಸಿದರೆ ಪ್ರಶಾಂತ್ ಕಿಶೋರ್ ಶರದ್‌ ಪವಾರ್ ಭೇಟಿಯೆ ಹಿಂದೆ ಹಲವು ಅರ್ಥಗಳು ಹುಟ್ಟಿಕೊಳ್ಳುತ್ತವೆ. ಜೊತೆಗೆ ಪ್ರಶಾಂತ್ ಕಿಶೋರ್ ಸ್ಥಾಪಿಸಿದ I-PAC  ಸಂಸ್ಥೆ ಜೊತೆ ತೃಣಮೂಲ್ ಒಪ್ಪಂದವನ್ನು ಮುಂದುವರೆಸಿರುವುದು ಸಹ ಮಮತಾ ಬ್ಯಾನರ್ಜಿಯವರ ರಾಷ್ಟ್ರ ರಾಜಕಾರಣದ ಮಹತ್ವಾಕಾಂಕ್ಷೆಯ ಜಾಡನ್ನು ಸೂಚಿಸುವಂತಿದೆ.

ಒಟ್ಟಿನಲ್ಲಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ ಗೆಲುವು, ಚುನಾವಣೆಯ ನಂತರದ ಬಿಜೆಪಿ ನಾಯಕರ ವಲಸೆ, ಪ್ರಶಾಂತ್ ಕಿಶೋರ್- ಶರದ್ ಪವಾರ್ ನಿಗೂಢ ಭೇಟಿ ಎಲ್ಲವೂ ಮಮತಾ ಬ್ಯಾನರ್ಜಿ ಅವರನ್ನು ಮತ್ತೊಮ್ಮೆ ರಾಷ್ಟ್ರ ರಾಜಕಾರಣದ ಮುನ್ನೆಲೆಗೆ ತಂದು ನಿಲ್ಲಿಸಿವೆ.


ಇದನ್ನೂ ಓದಿ : ಅಕ್ರಮ‌ ಹಣ ವರ್ಗಾವಣೆ ಆರೋಪ: ಬಿಎಸ್‌ವೈ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....