Homeಕರ್ನಾಟಕ'ಮೋದಿಯನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡೋನು ನಾನೇ': ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು

‘ಮೋದಿಯನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡೋನು ನಾನೇ’: ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು

- Advertisement -
- Advertisement -

ಪ್ರಕಾಶ್ ರಾಜ್ ಬಹುಭಾಷಾ ನಟರಲ್ವಾ? ಕರ್ನಾಟಕದಲ್ಲಿ ಮಾತ್ರವಲ್ಲ, ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದಿದ್ದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು ನೀಡಿದ್ದಾರೆ.

ವಿಡಿಯೋ ಮೂಲಕ ಮಾತನಾಡಿರುವ ಪ್ರಕಾಶ್ ರಾಜ್, “ಇದು ಕರ್ನಾಟಕದ ದೇವನಹಳ್ಳಿಯ ರೈತರ ಸಮಸ್ಯೆ. ಹಾಗಾಗಿ, ದೇವನಹಳ್ಳಿಯಲ್ಲೇ ಹೋರಾಟ ಮಾಡ್ಬೇಕು. ನೀವು ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದಿದ್ದೀರಿ. ನಾವು ಅಲ್ಲೆಲ್ಲ ಹೋರಾಟ ಮಾಡಿದ್ದೇವೆ” ಎಂದಿದ್ದಾರೆ.

“ತಮಿಳುನಾಡಿನಲ್ಲಿ ರೈತರು 100 ದಿನಗಳ ಹೋರಾಟ ಹಮ್ಮಿಕೊಂಡಾಗ ದೆಹಲಿಯಲ್ಲಿ ಕೂತವನು ನಾನೇ. ಪಂಜಾಬ್, ಹರಿಯಾಣದ ರೈತರು ಹೋರಾಟ ಮಾಡಿದಾಗಲೂ ಇದ್ದವನು ನಾನೇ. ನಾವು ಎಲ್ಲಾ ಕಡೆನೂ ಮಾತನಾಡ್ತೀವಿ. ನಾವು ಮಣಿಪುರದಲ್ಲಿ ಅನ್ಯಾಯವಾದಗಲೂ ಮಾತನಾಡ್ತೀವಿ, ಪ್ಯಾಲೆಸ್ತೀನಲ್ಲಿ ಅನ್ಯಾಯವಾದಗಲೂ ಮಾತನಾಡ್ತೀವಿ ಎಂದು ಹೇಳಿದ್ದಾರೆ.

ಗುಜರಾತಿನ ಗುಜರಾತಿ ಮಹಾಪ್ರಭು ಪ್ರಧಾನಿಯವರನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡಿದವನು ನಾನೇ. ಆಯಾ ಹೋರಾಟಗಳಲ್ಲಿ ಮಾಡ್ತಾ ಇರ್ತೀವಿ. ಏಕೆಂದರೆ, ನಾವು ಯಾವ ಪಕ್ಷದವರೂ ಅಲ್ಲ, ಜನರ ಪಕ್ಷದವರು. ನೀವು ಒಂದು ಪಕ್ಷದವರು, ನಾವು ಜನರ ಪಕ್ಷದವರು. ಹಾಗಾಗಿ, ಜನರಿಗೆ ಎಲ್ಲೇ ಸಮಸ್ಯೆ ಆದರೂ ಮಾತನಾಡೋದು ನಮ್ಮ ಕರ್ತವ್ಯ. ಅದು ಹೋರಾಟ, ಅದು ನಿಮಗೆ ಅರ್ಥವಾಗಲ್ಲ ಬಿಡಿ ಎಂದಿದ್ದಾರೆ.

ದೇವನಹಳ್ಳಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಸಭೆ ಕರೆದು ನಾವು ಜನಪರ ನಿರ್ಧಾರ ತೆಗೆದುಕೊಳ್ಳಬೇಕು ಅಂತ ಇದ್ದೀವಿ. ಆದರೆ, ಅದರಲ್ಲಿ ಕಾನೂನಿನ ತೊಡಕಿದೆ. ಹಾಗಾಗಿ, 15ನೇ ತಾರೀಖು ನಿರ್ಧಾರ ತಿಳಿಸುತ್ತೇವೆ ಎಂದಿದ್ದಾರೆ. ಹಾಗಾಗಿ, ನೀವು ಅದರ ಬಗ್ಗೆ ಯೋಚನೆ ಮಾಡಿ. ಹೇಗೆ ಕಾನೂನು ತೊಡಕು ನಿವಾರಿಸಬಹುದು, ಜನರ ಕಷ್ಟಗಳನ್ನು ಹೇಗೆ ಪರಿಹರಿಸಬಹುದು ಎಂದು ಯೋಚಿಸಿ ಎಂದು ಹೇಳಿದ್ದಾರೆ.

ಈ ನಡುವೆ ದೇವನಹಳ್ಳಿಯಲ್ಲಿ ಒಂದಿಷ್ಟು ಕಿಡಿಗೇಡಿಗಳು ಹೋಗಿ, ನಿಮಗೆ ಮೂರು ಕೋಟಿ ಕೊಡ್ತೀವಿ. ಸರ್ಕಾರದಿಂದ ಕಾನೂನು ಪ್ರಕಾರ ಕೊಡುವಾಗ ತುಂಬಾ ಲೇಟ್ ಆಗುತ್ತೆ ಎಂದು ಹೇಳಿ ರೈತರ ಒಗ್ಗಟ್ಟು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅಲ್ಲದೆ, ಇಡೀ ಪ್ರದೇಶವನ್ನು ಹಸಿರು ವಲಯ ಮಾಡ್ತೀವಿ. ಇನ್ನು 25 ವರ್ಷ ನೀವು ಮಾರೋದಕ್ಕೆ ಆಗಲ್ಲ ಎಂದು ರೈತರನ್ನು ಬೆದರಿಸುತ್ತಿದ್ದಾರಂತೆ. ಅವರೇನಾದರು ನಿಮಗೆ ಪರಿಚಯ ಇದ್ದರೆ ಈ ರೀತಿಯೆಲ್ಲ ಮಾಡ್ಬೇಡಿ ಎಂದು ಹೇಳಿ. ಏಕೆಂದರೆ, ಎಲ್ಲದಕ್ಕೂ ಕಾನೂನು ರೀತಿ ಒಂದು ಪರಿಹಾರ ಇದ್ದೇ ಇರುತ್ತದೆ ಎಂದಿದ್ದಾರೆ.

ನೀವು 15ನೇ ತಾರೀಖಿನ ಸಭೆಯಲ್ಲಿ ಕುಳಿತು ಮಾತನಾಡಿ. ಅಲ್ಲಿ ನಿಮ್ಮ ಸಮಸ್ಯೆ ಬಗೆಹರಿಯದಿದ್ದರೆ, ನಮ್ಮತ್ರ ಬನ್ನಿ. ನಮ್ಮ ಬಳಿಯೂ ನ್ಯಾಯ ತಜ್ಞರು ಇದ್ದಾರೆ. ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಅವರು ಇದ್ದಾರೆ. ಅವರು ಯಾರು ಗೊತ್ತಾ ಪಶ್ಚಿಮ ಬಂಗಾಳದಲ್ಲಿ 1 ಸಾವಿರಕ್ಕೂ ಅಧಿಕ ಎಕರೆ ಭೂಮಿಯನ್ನು ರೈತರಿಗೆ ಕೊಡಬೇಕೆಂದು ಐತಿಹಾಸಿಕ ತೀರ್ಪು ಕೊಟ್ಟವರು. ಸಂವಿಧಾನ ಗೊತ್ತಿರುವವರು. ನಿಮಗೇನಾದರು 15ನೇ ತಾರೀಖು ಒಳಗಡೆ ಸಮಸ್ಯೆ ಇತ್ಯರ್ಥ ಆಗದಿದ್ದರೆ, ಬಂದು ಕೇಳಿ ಅದನ್ನೂ ಹೇಳ್ತೀವಿ. ಜನರಿಂದ ಆಯ್ಧ ಪ್ರತಿನಿಧಿ ನೀವು, ಜನಪರವಾಗಿ ಜವಾಬ್ದಾರಿಯಿಂದ ಇರಿ. 15ನೇ ತಾರೀಖು ಸಿಗೋಣ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ಭೂ ಸ್ವಾಧೀನ ವಿರೋಧಿ ಹೋರಾಟ: ಚನ್ನರಾಯಪಟ್ಟಣಕ್ಕೆ ಜಗಜಿತ್ ಸಿಂಗ್ ದಲ್ಲೆವಾಲ್ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...