Homeಕರ್ನಾಟಕ'ಮೋದಿಯನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡೋನು ನಾನೇ': ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು

‘ಮೋದಿಯನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡೋನು ನಾನೇ’: ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು

- Advertisement -
- Advertisement -

ಪ್ರಕಾಶ್ ರಾಜ್ ಬಹುಭಾಷಾ ನಟರಲ್ವಾ? ಕರ್ನಾಟಕದಲ್ಲಿ ಮಾತ್ರವಲ್ಲ, ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದಿದ್ದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು ನೀಡಿದ್ದಾರೆ.

ವಿಡಿಯೋ ಮೂಲಕ ಮಾತನಾಡಿರುವ ಪ್ರಕಾಶ್ ರಾಜ್, “ಇದು ಕರ್ನಾಟಕದ ದೇವನಹಳ್ಳಿಯ ರೈತರ ಸಮಸ್ಯೆ. ಹಾಗಾಗಿ, ದೇವನಹಳ್ಳಿಯಲ್ಲೇ ಹೋರಾಟ ಮಾಡ್ಬೇಕು. ನೀವು ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದಿದ್ದೀರಿ. ನಾವು ಅಲ್ಲೆಲ್ಲ ಹೋರಾಟ ಮಾಡಿದ್ದೇವೆ” ಎಂದಿದ್ದಾರೆ.

“ತಮಿಳುನಾಡಿನಲ್ಲಿ ರೈತರು 100 ದಿನಗಳ ಹೋರಾಟ ಹಮ್ಮಿಕೊಂಡಾಗ ದೆಹಲಿಯಲ್ಲಿ ಕೂತವನು ನಾನೇ. ಪಂಜಾಬ್, ಹರಿಯಾಣದ ರೈತರು ಹೋರಾಟ ಮಾಡಿದಾಗಲೂ ಇದ್ದವನು ನಾನೇ. ನಾವು ಎಲ್ಲಾ ಕಡೆನೂ ಮಾತನಾಡ್ತೀವಿ. ನಾವು ಮಣಿಪುರದಲ್ಲಿ ಅನ್ಯಾಯವಾದಗಲೂ ಮಾತನಾಡ್ತೀವಿ, ಪ್ಯಾಲೆಸ್ತೀನಲ್ಲಿ ಅನ್ಯಾಯವಾದಗಲೂ ಮಾತನಾಡ್ತೀವಿ ಎಂದು ಹೇಳಿದ್ದಾರೆ.

ಗುಜರಾತಿನ ಗುಜರಾತಿ ಮಹಾಪ್ರಭು ಪ್ರಧಾನಿಯವರನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡಿದವನು ನಾನೇ. ಆಯಾ ಹೋರಾಟಗಳಲ್ಲಿ ಮಾಡ್ತಾ ಇರ್ತೀವಿ. ಏಕೆಂದರೆ, ನಾವು ಯಾವ ಪಕ್ಷದವರೂ ಅಲ್ಲ, ಜನರ ಪಕ್ಷದವರು. ನೀವು ಒಂದು ಪಕ್ಷದವರು, ನಾವು ಜನರ ಪಕ್ಷದವರು. ಹಾಗಾಗಿ, ಜನರಿಗೆ ಎಲ್ಲೇ ಸಮಸ್ಯೆ ಆದರೂ ಮಾತನಾಡೋದು ನಮ್ಮ ಕರ್ತವ್ಯ. ಅದು ಹೋರಾಟ, ಅದು ನಿಮಗೆ ಅರ್ಥವಾಗಲ್ಲ ಬಿಡಿ ಎಂದಿದ್ದಾರೆ.

ದೇವನಹಳ್ಳಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಸಭೆ ಕರೆದು ನಾವು ಜನಪರ ನಿರ್ಧಾರ ತೆಗೆದುಕೊಳ್ಳಬೇಕು ಅಂತ ಇದ್ದೀವಿ. ಆದರೆ, ಅದರಲ್ಲಿ ಕಾನೂನಿನ ತೊಡಕಿದೆ. ಹಾಗಾಗಿ, 15ನೇ ತಾರೀಖು ನಿರ್ಧಾರ ತಿಳಿಸುತ್ತೇವೆ ಎಂದಿದ್ದಾರೆ. ಹಾಗಾಗಿ, ನೀವು ಅದರ ಬಗ್ಗೆ ಯೋಚನೆ ಮಾಡಿ. ಹೇಗೆ ಕಾನೂನು ತೊಡಕು ನಿವಾರಿಸಬಹುದು, ಜನರ ಕಷ್ಟಗಳನ್ನು ಹೇಗೆ ಪರಿಹರಿಸಬಹುದು ಎಂದು ಯೋಚಿಸಿ ಎಂದು ಹೇಳಿದ್ದಾರೆ.

ಈ ನಡುವೆ ದೇವನಹಳ್ಳಿಯಲ್ಲಿ ಒಂದಿಷ್ಟು ಕಿಡಿಗೇಡಿಗಳು ಹೋಗಿ, ನಿಮಗೆ ಮೂರು ಕೋಟಿ ಕೊಡ್ತೀವಿ. ಸರ್ಕಾರದಿಂದ ಕಾನೂನು ಪ್ರಕಾರ ಕೊಡುವಾಗ ತುಂಬಾ ಲೇಟ್ ಆಗುತ್ತೆ ಎಂದು ಹೇಳಿ ರೈತರ ಒಗ್ಗಟ್ಟು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅಲ್ಲದೆ, ಇಡೀ ಪ್ರದೇಶವನ್ನು ಹಸಿರು ವಲಯ ಮಾಡ್ತೀವಿ. ಇನ್ನು 25 ವರ್ಷ ನೀವು ಮಾರೋದಕ್ಕೆ ಆಗಲ್ಲ ಎಂದು ರೈತರನ್ನು ಬೆದರಿಸುತ್ತಿದ್ದಾರಂತೆ. ಅವರೇನಾದರು ನಿಮಗೆ ಪರಿಚಯ ಇದ್ದರೆ ಈ ರೀತಿಯೆಲ್ಲ ಮಾಡ್ಬೇಡಿ ಎಂದು ಹೇಳಿ. ಏಕೆಂದರೆ, ಎಲ್ಲದಕ್ಕೂ ಕಾನೂನು ರೀತಿ ಒಂದು ಪರಿಹಾರ ಇದ್ದೇ ಇರುತ್ತದೆ ಎಂದಿದ್ದಾರೆ.

ನೀವು 15ನೇ ತಾರೀಖಿನ ಸಭೆಯಲ್ಲಿ ಕುಳಿತು ಮಾತನಾಡಿ. ಅಲ್ಲಿ ನಿಮ್ಮ ಸಮಸ್ಯೆ ಬಗೆಹರಿಯದಿದ್ದರೆ, ನಮ್ಮತ್ರ ಬನ್ನಿ. ನಮ್ಮ ಬಳಿಯೂ ನ್ಯಾಯ ತಜ್ಞರು ಇದ್ದಾರೆ. ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಅವರು ಇದ್ದಾರೆ. ಅವರು ಯಾರು ಗೊತ್ತಾ ಪಶ್ಚಿಮ ಬಂಗಾಳದಲ್ಲಿ 1 ಸಾವಿರಕ್ಕೂ ಅಧಿಕ ಎಕರೆ ಭೂಮಿಯನ್ನು ರೈತರಿಗೆ ಕೊಡಬೇಕೆಂದು ಐತಿಹಾಸಿಕ ತೀರ್ಪು ಕೊಟ್ಟವರು. ಸಂವಿಧಾನ ಗೊತ್ತಿರುವವರು. ನಿಮಗೇನಾದರು 15ನೇ ತಾರೀಖು ಒಳಗಡೆ ಸಮಸ್ಯೆ ಇತ್ಯರ್ಥ ಆಗದಿದ್ದರೆ, ಬಂದು ಕೇಳಿ ಅದನ್ನೂ ಹೇಳ್ತೀವಿ. ಜನರಿಂದ ಆಯ್ಧ ಪ್ರತಿನಿಧಿ ನೀವು, ಜನಪರವಾಗಿ ಜವಾಬ್ದಾರಿಯಿಂದ ಇರಿ. 15ನೇ ತಾರೀಖು ಸಿಗೋಣ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ಭೂ ಸ್ವಾಧೀನ ವಿರೋಧಿ ಹೋರಾಟ: ಚನ್ನರಾಯಪಟ್ಟಣಕ್ಕೆ ಜಗಜಿತ್ ಸಿಂಗ್ ದಲ್ಲೆವಾಲ್ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...