Homeಕರ್ನಾಟಕ'ಮೋದಿಯನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡೋನು ನಾನೇ': ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು

‘ಮೋದಿಯನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡೋನು ನಾನೇ’: ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು

- Advertisement -
- Advertisement -

ಪ್ರಕಾಶ್ ರಾಜ್ ಬಹುಭಾಷಾ ನಟರಲ್ವಾ? ಕರ್ನಾಟಕದಲ್ಲಿ ಮಾತ್ರವಲ್ಲ, ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದಿದ್ದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು ನೀಡಿದ್ದಾರೆ.

ವಿಡಿಯೋ ಮೂಲಕ ಮಾತನಾಡಿರುವ ಪ್ರಕಾಶ್ ರಾಜ್, “ಇದು ಕರ್ನಾಟಕದ ದೇವನಹಳ್ಳಿಯ ರೈತರ ಸಮಸ್ಯೆ. ಹಾಗಾಗಿ, ದೇವನಹಳ್ಳಿಯಲ್ಲೇ ಹೋರಾಟ ಮಾಡ್ಬೇಕು. ನೀವು ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದಿದ್ದೀರಿ. ನಾವು ಅಲ್ಲೆಲ್ಲ ಹೋರಾಟ ಮಾಡಿದ್ದೇವೆ” ಎಂದಿದ್ದಾರೆ.

“ತಮಿಳುನಾಡಿನಲ್ಲಿ ರೈತರು 100 ದಿನಗಳ ಹೋರಾಟ ಹಮ್ಮಿಕೊಂಡಾಗ ದೆಹಲಿಯಲ್ಲಿ ಕೂತವನು ನಾನೇ. ಪಂಜಾಬ್, ಹರಿಯಾಣದ ರೈತರು ಹೋರಾಟ ಮಾಡಿದಾಗಲೂ ಇದ್ದವನು ನಾನೇ. ನಾವು ಎಲ್ಲಾ ಕಡೆನೂ ಮಾತನಾಡ್ತೀವಿ. ನಾವು ಮಣಿಪುರದಲ್ಲಿ ಅನ್ಯಾಯವಾದಗಲೂ ಮಾತನಾಡ್ತೀವಿ, ಪ್ಯಾಲೆಸ್ತೀನಲ್ಲಿ ಅನ್ಯಾಯವಾದಗಲೂ ಮಾತನಾಡ್ತೀವಿ ಎಂದು ಹೇಳಿದ್ದಾರೆ.

ಗುಜರಾತಿನ ಗುಜರಾತಿ ಮಹಾಪ್ರಭು ಪ್ರಧಾನಿಯವರನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡಿದವನು ನಾನೇ. ಆಯಾ ಹೋರಾಟಗಳಲ್ಲಿ ಮಾಡ್ತಾ ಇರ್ತೀವಿ. ಏಕೆಂದರೆ, ನಾವು ಯಾವ ಪಕ್ಷದವರೂ ಅಲ್ಲ, ಜನರ ಪಕ್ಷದವರು. ನೀವು ಒಂದು ಪಕ್ಷದವರು, ನಾವು ಜನರ ಪಕ್ಷದವರು. ಹಾಗಾಗಿ, ಜನರಿಗೆ ಎಲ್ಲೇ ಸಮಸ್ಯೆ ಆದರೂ ಮಾತನಾಡೋದು ನಮ್ಮ ಕರ್ತವ್ಯ. ಅದು ಹೋರಾಟ, ಅದು ನಿಮಗೆ ಅರ್ಥವಾಗಲ್ಲ ಬಿಡಿ ಎಂದಿದ್ದಾರೆ.

ದೇವನಹಳ್ಳಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಸಭೆ ಕರೆದು ನಾವು ಜನಪರ ನಿರ್ಧಾರ ತೆಗೆದುಕೊಳ್ಳಬೇಕು ಅಂತ ಇದ್ದೀವಿ. ಆದರೆ, ಅದರಲ್ಲಿ ಕಾನೂನಿನ ತೊಡಕಿದೆ. ಹಾಗಾಗಿ, 15ನೇ ತಾರೀಖು ನಿರ್ಧಾರ ತಿಳಿಸುತ್ತೇವೆ ಎಂದಿದ್ದಾರೆ. ಹಾಗಾಗಿ, ನೀವು ಅದರ ಬಗ್ಗೆ ಯೋಚನೆ ಮಾಡಿ. ಹೇಗೆ ಕಾನೂನು ತೊಡಕು ನಿವಾರಿಸಬಹುದು, ಜನರ ಕಷ್ಟಗಳನ್ನು ಹೇಗೆ ಪರಿಹರಿಸಬಹುದು ಎಂದು ಯೋಚಿಸಿ ಎಂದು ಹೇಳಿದ್ದಾರೆ.

ಈ ನಡುವೆ ದೇವನಹಳ್ಳಿಯಲ್ಲಿ ಒಂದಿಷ್ಟು ಕಿಡಿಗೇಡಿಗಳು ಹೋಗಿ, ನಿಮಗೆ ಮೂರು ಕೋಟಿ ಕೊಡ್ತೀವಿ. ಸರ್ಕಾರದಿಂದ ಕಾನೂನು ಪ್ರಕಾರ ಕೊಡುವಾಗ ತುಂಬಾ ಲೇಟ್ ಆಗುತ್ತೆ ಎಂದು ಹೇಳಿ ರೈತರ ಒಗ್ಗಟ್ಟು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅಲ್ಲದೆ, ಇಡೀ ಪ್ರದೇಶವನ್ನು ಹಸಿರು ವಲಯ ಮಾಡ್ತೀವಿ. ಇನ್ನು 25 ವರ್ಷ ನೀವು ಮಾರೋದಕ್ಕೆ ಆಗಲ್ಲ ಎಂದು ರೈತರನ್ನು ಬೆದರಿಸುತ್ತಿದ್ದಾರಂತೆ. ಅವರೇನಾದರು ನಿಮಗೆ ಪರಿಚಯ ಇದ್ದರೆ ಈ ರೀತಿಯೆಲ್ಲ ಮಾಡ್ಬೇಡಿ ಎಂದು ಹೇಳಿ. ಏಕೆಂದರೆ, ಎಲ್ಲದಕ್ಕೂ ಕಾನೂನು ರೀತಿ ಒಂದು ಪರಿಹಾರ ಇದ್ದೇ ಇರುತ್ತದೆ ಎಂದಿದ್ದಾರೆ.

ನೀವು 15ನೇ ತಾರೀಖಿನ ಸಭೆಯಲ್ಲಿ ಕುಳಿತು ಮಾತನಾಡಿ. ಅಲ್ಲಿ ನಿಮ್ಮ ಸಮಸ್ಯೆ ಬಗೆಹರಿಯದಿದ್ದರೆ, ನಮ್ಮತ್ರ ಬನ್ನಿ. ನಮ್ಮ ಬಳಿಯೂ ನ್ಯಾಯ ತಜ್ಞರು ಇದ್ದಾರೆ. ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಅವರು ಇದ್ದಾರೆ. ಅವರು ಯಾರು ಗೊತ್ತಾ ಪಶ್ಚಿಮ ಬಂಗಾಳದಲ್ಲಿ 1 ಸಾವಿರಕ್ಕೂ ಅಧಿಕ ಎಕರೆ ಭೂಮಿಯನ್ನು ರೈತರಿಗೆ ಕೊಡಬೇಕೆಂದು ಐತಿಹಾಸಿಕ ತೀರ್ಪು ಕೊಟ್ಟವರು. ಸಂವಿಧಾನ ಗೊತ್ತಿರುವವರು. ನಿಮಗೇನಾದರು 15ನೇ ತಾರೀಖು ಒಳಗಡೆ ಸಮಸ್ಯೆ ಇತ್ಯರ್ಥ ಆಗದಿದ್ದರೆ, ಬಂದು ಕೇಳಿ ಅದನ್ನೂ ಹೇಳ್ತೀವಿ. ಜನರಿಂದ ಆಯ್ಧ ಪ್ರತಿನಿಧಿ ನೀವು, ಜನಪರವಾಗಿ ಜವಾಬ್ದಾರಿಯಿಂದ ಇರಿ. 15ನೇ ತಾರೀಖು ಸಿಗೋಣ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ಭೂ ಸ್ವಾಧೀನ ವಿರೋಧಿ ಹೋರಾಟ: ಚನ್ನರಾಯಪಟ್ಟಣಕ್ಕೆ ಜಗಜಿತ್ ಸಿಂಗ್ ದಲ್ಲೆವಾಲ್ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...