Homeಕರ್ನಾಟಕ'ಮೋದಿಯನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡೋನು ನಾನೇ': ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು

‘ಮೋದಿಯನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡೋನು ನಾನೇ’: ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು

- Advertisement -
- Advertisement -

ಪ್ರಕಾಶ್ ರಾಜ್ ಬಹುಭಾಷಾ ನಟರಲ್ವಾ? ಕರ್ನಾಟಕದಲ್ಲಿ ಮಾತ್ರವಲ್ಲ, ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದಿದ್ದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು ನೀಡಿದ್ದಾರೆ.

ವಿಡಿಯೋ ಮೂಲಕ ಮಾತನಾಡಿರುವ ಪ್ರಕಾಶ್ ರಾಜ್, “ಇದು ಕರ್ನಾಟಕದ ದೇವನಹಳ್ಳಿಯ ರೈತರ ಸಮಸ್ಯೆ. ಹಾಗಾಗಿ, ದೇವನಹಳ್ಳಿಯಲ್ಲೇ ಹೋರಾಟ ಮಾಡ್ಬೇಕು. ನೀವು ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದಿದ್ದೀರಿ. ನಾವು ಅಲ್ಲೆಲ್ಲ ಹೋರಾಟ ಮಾಡಿದ್ದೇವೆ” ಎಂದಿದ್ದಾರೆ.

“ತಮಿಳುನಾಡಿನಲ್ಲಿ ರೈತರು 100 ದಿನಗಳ ಹೋರಾಟ ಹಮ್ಮಿಕೊಂಡಾಗ ದೆಹಲಿಯಲ್ಲಿ ಕೂತವನು ನಾನೇ. ಪಂಜಾಬ್, ಹರಿಯಾಣದ ರೈತರು ಹೋರಾಟ ಮಾಡಿದಾಗಲೂ ಇದ್ದವನು ನಾನೇ. ನಾವು ಎಲ್ಲಾ ಕಡೆನೂ ಮಾತನಾಡ್ತೀವಿ. ನಾವು ಮಣಿಪುರದಲ್ಲಿ ಅನ್ಯಾಯವಾದಗಲೂ ಮಾತನಾಡ್ತೀವಿ, ಪ್ಯಾಲೆಸ್ತೀನಲ್ಲಿ ಅನ್ಯಾಯವಾದಗಲೂ ಮಾತನಾಡ್ತೀವಿ ಎಂದು ಹೇಳಿದ್ದಾರೆ.

ಗುಜರಾತಿನ ಗುಜರಾತಿ ಮಹಾಪ್ರಭು ಪ್ರಧಾನಿಯವರನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡಿದವನು ನಾನೇ. ಆಯಾ ಹೋರಾಟಗಳಲ್ಲಿ ಮಾಡ್ತಾ ಇರ್ತೀವಿ. ಏಕೆಂದರೆ, ನಾವು ಯಾವ ಪಕ್ಷದವರೂ ಅಲ್ಲ, ಜನರ ಪಕ್ಷದವರು. ನೀವು ಒಂದು ಪಕ್ಷದವರು, ನಾವು ಜನರ ಪಕ್ಷದವರು. ಹಾಗಾಗಿ, ಜನರಿಗೆ ಎಲ್ಲೇ ಸಮಸ್ಯೆ ಆದರೂ ಮಾತನಾಡೋದು ನಮ್ಮ ಕರ್ತವ್ಯ. ಅದು ಹೋರಾಟ, ಅದು ನಿಮಗೆ ಅರ್ಥವಾಗಲ್ಲ ಬಿಡಿ ಎಂದಿದ್ದಾರೆ.

ದೇವನಹಳ್ಳಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಸಭೆ ಕರೆದು ನಾವು ಜನಪರ ನಿರ್ಧಾರ ತೆಗೆದುಕೊಳ್ಳಬೇಕು ಅಂತ ಇದ್ದೀವಿ. ಆದರೆ, ಅದರಲ್ಲಿ ಕಾನೂನಿನ ತೊಡಕಿದೆ. ಹಾಗಾಗಿ, 15ನೇ ತಾರೀಖು ನಿರ್ಧಾರ ತಿಳಿಸುತ್ತೇವೆ ಎಂದಿದ್ದಾರೆ. ಹಾಗಾಗಿ, ನೀವು ಅದರ ಬಗ್ಗೆ ಯೋಚನೆ ಮಾಡಿ. ಹೇಗೆ ಕಾನೂನು ತೊಡಕು ನಿವಾರಿಸಬಹುದು, ಜನರ ಕಷ್ಟಗಳನ್ನು ಹೇಗೆ ಪರಿಹರಿಸಬಹುದು ಎಂದು ಯೋಚಿಸಿ ಎಂದು ಹೇಳಿದ್ದಾರೆ.

ಈ ನಡುವೆ ದೇವನಹಳ್ಳಿಯಲ್ಲಿ ಒಂದಿಷ್ಟು ಕಿಡಿಗೇಡಿಗಳು ಹೋಗಿ, ನಿಮಗೆ ಮೂರು ಕೋಟಿ ಕೊಡ್ತೀವಿ. ಸರ್ಕಾರದಿಂದ ಕಾನೂನು ಪ್ರಕಾರ ಕೊಡುವಾಗ ತುಂಬಾ ಲೇಟ್ ಆಗುತ್ತೆ ಎಂದು ಹೇಳಿ ರೈತರ ಒಗ್ಗಟ್ಟು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅಲ್ಲದೆ, ಇಡೀ ಪ್ರದೇಶವನ್ನು ಹಸಿರು ವಲಯ ಮಾಡ್ತೀವಿ. ಇನ್ನು 25 ವರ್ಷ ನೀವು ಮಾರೋದಕ್ಕೆ ಆಗಲ್ಲ ಎಂದು ರೈತರನ್ನು ಬೆದರಿಸುತ್ತಿದ್ದಾರಂತೆ. ಅವರೇನಾದರು ನಿಮಗೆ ಪರಿಚಯ ಇದ್ದರೆ ಈ ರೀತಿಯೆಲ್ಲ ಮಾಡ್ಬೇಡಿ ಎಂದು ಹೇಳಿ. ಏಕೆಂದರೆ, ಎಲ್ಲದಕ್ಕೂ ಕಾನೂನು ರೀತಿ ಒಂದು ಪರಿಹಾರ ಇದ್ದೇ ಇರುತ್ತದೆ ಎಂದಿದ್ದಾರೆ.

ನೀವು 15ನೇ ತಾರೀಖಿನ ಸಭೆಯಲ್ಲಿ ಕುಳಿತು ಮಾತನಾಡಿ. ಅಲ್ಲಿ ನಿಮ್ಮ ಸಮಸ್ಯೆ ಬಗೆಹರಿಯದಿದ್ದರೆ, ನಮ್ಮತ್ರ ಬನ್ನಿ. ನಮ್ಮ ಬಳಿಯೂ ನ್ಯಾಯ ತಜ್ಞರು ಇದ್ದಾರೆ. ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಅವರು ಇದ್ದಾರೆ. ಅವರು ಯಾರು ಗೊತ್ತಾ ಪಶ್ಚಿಮ ಬಂಗಾಳದಲ್ಲಿ 1 ಸಾವಿರಕ್ಕೂ ಅಧಿಕ ಎಕರೆ ಭೂಮಿಯನ್ನು ರೈತರಿಗೆ ಕೊಡಬೇಕೆಂದು ಐತಿಹಾಸಿಕ ತೀರ್ಪು ಕೊಟ್ಟವರು. ಸಂವಿಧಾನ ಗೊತ್ತಿರುವವರು. ನಿಮಗೇನಾದರು 15ನೇ ತಾರೀಖು ಒಳಗಡೆ ಸಮಸ್ಯೆ ಇತ್ಯರ್ಥ ಆಗದಿದ್ದರೆ, ಬಂದು ಕೇಳಿ ಅದನ್ನೂ ಹೇಳ್ತೀವಿ. ಜನರಿಂದ ಆಯ್ಧ ಪ್ರತಿನಿಧಿ ನೀವು, ಜನಪರವಾಗಿ ಜವಾಬ್ದಾರಿಯಿಂದ ಇರಿ. 15ನೇ ತಾರೀಖು ಸಿಗೋಣ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ಭೂ ಸ್ವಾಧೀನ ವಿರೋಧಿ ಹೋರಾಟ: ಚನ್ನರಾಯಪಟ್ಟಣಕ್ಕೆ ಜಗಜಿತ್ ಸಿಂಗ್ ದಲ್ಲೆವಾಲ್ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...