Homeಕರ್ನಾಟಕ'ಮೋದಿಯನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡೋನು ನಾನೇ': ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು

‘ಮೋದಿಯನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡೋನು ನಾನೇ’: ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು

- Advertisement -
- Advertisement -

ಪ್ರಕಾಶ್ ರಾಜ್ ಬಹುಭಾಷಾ ನಟರಲ್ವಾ? ಕರ್ನಾಟಕದಲ್ಲಿ ಮಾತ್ರವಲ್ಲ, ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದಿದ್ದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು ನೀಡಿದ್ದಾರೆ.

ವಿಡಿಯೋ ಮೂಲಕ ಮಾತನಾಡಿರುವ ಪ್ರಕಾಶ್ ರಾಜ್, “ಇದು ಕರ್ನಾಟಕದ ದೇವನಹಳ್ಳಿಯ ರೈತರ ಸಮಸ್ಯೆ. ಹಾಗಾಗಿ, ದೇವನಹಳ್ಳಿಯಲ್ಲೇ ಹೋರಾಟ ಮಾಡ್ಬೇಕು. ನೀವು ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದಿದ್ದೀರಿ. ನಾವು ಅಲ್ಲೆಲ್ಲ ಹೋರಾಟ ಮಾಡಿದ್ದೇವೆ” ಎಂದಿದ್ದಾರೆ.

“ತಮಿಳುನಾಡಿನಲ್ಲಿ ರೈತರು 100 ದಿನಗಳ ಹೋರಾಟ ಹಮ್ಮಿಕೊಂಡಾಗ ದೆಹಲಿಯಲ್ಲಿ ಕೂತವನು ನಾನೇ. ಪಂಜಾಬ್, ಹರಿಯಾಣದ ರೈತರು ಹೋರಾಟ ಮಾಡಿದಾಗಲೂ ಇದ್ದವನು ನಾನೇ. ನಾವು ಎಲ್ಲಾ ಕಡೆನೂ ಮಾತನಾಡ್ತೀವಿ. ನಾವು ಮಣಿಪುರದಲ್ಲಿ ಅನ್ಯಾಯವಾದಗಲೂ ಮಾತನಾಡ್ತೀವಿ, ಪ್ಯಾಲೆಸ್ತೀನಲ್ಲಿ ಅನ್ಯಾಯವಾದಗಲೂ ಮಾತನಾಡ್ತೀವಿ ಎಂದು ಹೇಳಿದ್ದಾರೆ.

ಗುಜರಾತಿನ ಗುಜರಾತಿ ಮಹಾಪ್ರಭು ಪ್ರಧಾನಿಯವರನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡಿದವನು ನಾನೇ. ಆಯಾ ಹೋರಾಟಗಳಲ್ಲಿ ಮಾಡ್ತಾ ಇರ್ತೀವಿ. ಏಕೆಂದರೆ, ನಾವು ಯಾವ ಪಕ್ಷದವರೂ ಅಲ್ಲ, ಜನರ ಪಕ್ಷದವರು. ನೀವು ಒಂದು ಪಕ್ಷದವರು, ನಾವು ಜನರ ಪಕ್ಷದವರು. ಹಾಗಾಗಿ, ಜನರಿಗೆ ಎಲ್ಲೇ ಸಮಸ್ಯೆ ಆದರೂ ಮಾತನಾಡೋದು ನಮ್ಮ ಕರ್ತವ್ಯ. ಅದು ಹೋರಾಟ, ಅದು ನಿಮಗೆ ಅರ್ಥವಾಗಲ್ಲ ಬಿಡಿ ಎಂದಿದ್ದಾರೆ.

ದೇವನಹಳ್ಳಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಸಭೆ ಕರೆದು ನಾವು ಜನಪರ ನಿರ್ಧಾರ ತೆಗೆದುಕೊಳ್ಳಬೇಕು ಅಂತ ಇದ್ದೀವಿ. ಆದರೆ, ಅದರಲ್ಲಿ ಕಾನೂನಿನ ತೊಡಕಿದೆ. ಹಾಗಾಗಿ, 15ನೇ ತಾರೀಖು ನಿರ್ಧಾರ ತಿಳಿಸುತ್ತೇವೆ ಎಂದಿದ್ದಾರೆ. ಹಾಗಾಗಿ, ನೀವು ಅದರ ಬಗ್ಗೆ ಯೋಚನೆ ಮಾಡಿ. ಹೇಗೆ ಕಾನೂನು ತೊಡಕು ನಿವಾರಿಸಬಹುದು, ಜನರ ಕಷ್ಟಗಳನ್ನು ಹೇಗೆ ಪರಿಹರಿಸಬಹುದು ಎಂದು ಯೋಚಿಸಿ ಎಂದು ಹೇಳಿದ್ದಾರೆ.

ಈ ನಡುವೆ ದೇವನಹಳ್ಳಿಯಲ್ಲಿ ಒಂದಿಷ್ಟು ಕಿಡಿಗೇಡಿಗಳು ಹೋಗಿ, ನಿಮಗೆ ಮೂರು ಕೋಟಿ ಕೊಡ್ತೀವಿ. ಸರ್ಕಾರದಿಂದ ಕಾನೂನು ಪ್ರಕಾರ ಕೊಡುವಾಗ ತುಂಬಾ ಲೇಟ್ ಆಗುತ್ತೆ ಎಂದು ಹೇಳಿ ರೈತರ ಒಗ್ಗಟ್ಟು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅಲ್ಲದೆ, ಇಡೀ ಪ್ರದೇಶವನ್ನು ಹಸಿರು ವಲಯ ಮಾಡ್ತೀವಿ. ಇನ್ನು 25 ವರ್ಷ ನೀವು ಮಾರೋದಕ್ಕೆ ಆಗಲ್ಲ ಎಂದು ರೈತರನ್ನು ಬೆದರಿಸುತ್ತಿದ್ದಾರಂತೆ. ಅವರೇನಾದರು ನಿಮಗೆ ಪರಿಚಯ ಇದ್ದರೆ ಈ ರೀತಿಯೆಲ್ಲ ಮಾಡ್ಬೇಡಿ ಎಂದು ಹೇಳಿ. ಏಕೆಂದರೆ, ಎಲ್ಲದಕ್ಕೂ ಕಾನೂನು ರೀತಿ ಒಂದು ಪರಿಹಾರ ಇದ್ದೇ ಇರುತ್ತದೆ ಎಂದಿದ್ದಾರೆ.

ನೀವು 15ನೇ ತಾರೀಖಿನ ಸಭೆಯಲ್ಲಿ ಕುಳಿತು ಮಾತನಾಡಿ. ಅಲ್ಲಿ ನಿಮ್ಮ ಸಮಸ್ಯೆ ಬಗೆಹರಿಯದಿದ್ದರೆ, ನಮ್ಮತ್ರ ಬನ್ನಿ. ನಮ್ಮ ಬಳಿಯೂ ನ್ಯಾಯ ತಜ್ಞರು ಇದ್ದಾರೆ. ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಅವರು ಇದ್ದಾರೆ. ಅವರು ಯಾರು ಗೊತ್ತಾ ಪಶ್ಚಿಮ ಬಂಗಾಳದಲ್ಲಿ 1 ಸಾವಿರಕ್ಕೂ ಅಧಿಕ ಎಕರೆ ಭೂಮಿಯನ್ನು ರೈತರಿಗೆ ಕೊಡಬೇಕೆಂದು ಐತಿಹಾಸಿಕ ತೀರ್ಪು ಕೊಟ್ಟವರು. ಸಂವಿಧಾನ ಗೊತ್ತಿರುವವರು. ನಿಮಗೇನಾದರು 15ನೇ ತಾರೀಖು ಒಳಗಡೆ ಸಮಸ್ಯೆ ಇತ್ಯರ್ಥ ಆಗದಿದ್ದರೆ, ಬಂದು ಕೇಳಿ ಅದನ್ನೂ ಹೇಳ್ತೀವಿ. ಜನರಿಂದ ಆಯ್ಧ ಪ್ರತಿನಿಧಿ ನೀವು, ಜನಪರವಾಗಿ ಜವಾಬ್ದಾರಿಯಿಂದ ಇರಿ. 15ನೇ ತಾರೀಖು ಸಿಗೋಣ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ಭೂ ಸ್ವಾಧೀನ ವಿರೋಧಿ ಹೋರಾಟ: ಚನ್ನರಾಯಪಟ್ಟಣಕ್ಕೆ ಜಗಜಿತ್ ಸಿಂಗ್ ದಲ್ಲೆವಾಲ್ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...