Homeಕರ್ನಾಟಕ‘ಅಂಬೇಡ್ಕರ್‌ ಹೇಳಿಕೆ ನಾನು ಓದಿದ್ದಲ್ಲ, ಬೇರೆ ಯಾರೊ ಬರೆದಿದ್ದು ತೆಗೆದುಕೊಂಡಿದ್ದೇನೆ’ - ವಿಜಯ ಕರ್ನಾಟಕ ಅಂಕಣದ...

‘ಅಂಬೇಡ್ಕರ್‌ ಹೇಳಿಕೆ ನಾನು ಓದಿದ್ದಲ್ಲ, ಬೇರೆ ಯಾರೊ ಬರೆದಿದ್ದು ತೆಗೆದುಕೊಂಡಿದ್ದೇನೆ’ – ವಿಜಯ ಕರ್ನಾಟಕ ಅಂಕಣದ ಕುರಿತು ಎನ್‌. ಮಹೇಶ್‌

ಅಂಬೇಡ್ಕರ್‌ ಅವರು ಸಾವರ್ಕರ್ ಅನ್ನು ‘ಸ್ವಾತಂತ್ರ್ಯವೀರ’ ಎಂದು ಕರೆದಿದ್ದಾರೆ ಎಂದು ಅಂಕಣದಲ್ಲಿ ಉಲ್ಲೇಖಿಸಲಾಗಿದೆ

- Advertisement -
- Advertisement -

ಬಿಜೆಪಿ ಶಾಸಕ ಎನ್‌. ಮಹೇಶ್‌ ಅವರು ವಿಜಯ ಕರ್ನಾಟಕ ಪತ್ರಿಕೆಗೆ ಬರೆದ ಅಂಕಣ ಬರಹದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌‌.ಅಂಬೇಡ್ಕರ್‌ ಅವರ ಹೇಳಿಕೆಯನ್ನು ತಿರುಚಿ ಬರೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪಕ್ಕೆ ಉತ್ತರಿಸಿರುವ ಅವರು, “ಈ ಬಗ್ಗೆ ಬೇರೆ ಯಾರೊ ಬರೆದಿದ್ದನ್ನು ತೆಗೆದುಕೊಂಡಿದ್ದೇನೆ. ಅವರಲ್ಲಿ ಉಲ್ಲೇಖ ಕೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.

ಮಾಜಿ ಬಿಎಸ್‌ಪಿ ನಾಯಕ, ಪ್ರಸ್ತುತ ಬಿಜೆಪಿ ಪಕ್ಷಕ್ಕೆ ಪಕ್ಷಾಂತರವಾಗಿರುವ ಕೊಳ್ಳೆಗಾಲದ ಶಾಸಕರಾದ ಮಹೇಶ್ ಅವರು ಮಂಗಳವಾರದ ವಿಜಯ ಕರ್ನಾಟಕ ಪತ್ರಿಕೆಗೆ ‘ಸಮಾಜ ಸುಧಾರಣೆಯ ದಿವ್ಯಚೇತನ ಸಾರ್ವರ್ಕರ್‌’ ಎಂಬ ಲೇಖನವನ್ನು ಬರೆದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬರಹದ ಮೊದಲ ಪ್ಯಾರಾದಲ್ಲಿ, “ಸಮಾಜ ಸುಧಾರಣೆಯ ದಿವ್ಯಚೈತನ್ಯದ ಸೊಡರು ಸ್ವಾತಂತ್ಯ್ರವೀರ ಸಾವರ್ಕರ್‌. ಹಿಂದೂ ಧರ್ಮದಲ್ಲಿರುವ ಅಸ್ಪೃಶ್ಯತೆಯ ಆಚರಣೆಯು ಒಂದು ಕಳಂಕವಾಗಿದ್ದ, ಇಂಥ ಅಮಾನವೀಯ ಆಚರಣೆಯಿಂದ ನನ್ನಂಥವರಿಗೆ ಆಗುವ ಅವಮಾನ ಅಷ್ಟಿಷ್ಟಲ್ಲ. ಆದರೆ, ಸಾವರ್ಕರ್‌ ಅವರು ಇದರ ನಿವಾರಣೆಗೆ ಕೈಗೊಂಡಿರುವ ಕ್ರಮಗಳು ಕ್ರಾಂತಿಕಾರಿಯಾಗಿವೆ. ಇಂಥ ಐದೋ ಹತ್ತೋ ಮಂದಿ ಇದ್ದರೆ ಅಸ್ಪೃಶ್ಯತೆಯು ಮುಂದಿನ ಕೆಲವೇ ವರ್ಷಗಳಲ್ಲಿ ಇತಿಹಾಸದ ಸಂಗತಿಯಾಗುತ್ತದೆ ಎನ್ನುವ ವಿಶ್ವಾಸ ನನಗಿದೆ” ಎಂದು ಅಂಬೇಡ್ಕರ್‌ ಅವರ ಹೇಳಿದ್ದಾರೆ ಎಂದು ಎನ್. ಮಹೇಶ್ ಅವರು ಬರೆದಿದ್ದಾರೆ.

ಆದರೆ ಈ ಬಗ್ಗೆ ಅನೇಕ ಅಂಬೇಡ್ಕರ್‌‌ವಾದಿಗಳು ಆಕ್ಷೇಪವೆತ್ತಿದ್ದು, ಅಂಬೇಡ್ಕರ್‌ ಅವರು ಈ ರೀತಿ ಅಥವಾ ಇದೇ ರೀತಿ ಅರ್ಥ ಬರುವ ಮಾತು ಹಾಗೂ ಬರಹವನ್ನಾಗಲಿ ಹೇಳಿಯೆ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿ.ಎಸ್.ಪಿ ಯ ಎನ್ ಮಹೇಶ್ ಹೀಗೇಕೆ ಮಾಡಿದರು?

ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿಂತಕ ಹ.ರಾ. ಮಹೇಶ್ ಅವರು, “ಈ ಮಾತು ಅಥವಾ ಬರಹ ಬಾಬಾಸಾಹೇಬರ ಯಾವ ಸಂಪುಟದಲ್ಲಿದೆ…!? ಬಾಬಾಸಾಹೇಬರು ಬರೆದಿರುವ ಯಾವ ಪುಸ್ತಕದಲ್ಲಿ ಅಥವಾ ಅವರ ಬರಹ ಭಾಷಣಗಳ‌ ಯಾವ ಸಂಪುಟದ ಯಾವ ಅಧ್ಯಾಯದ ಎಷ್ಟನೇ ಪುಟದಲ್ಲಿ ಬಾಬಾಸಾಹೇಬರು ಸಾವರ್ಕರ್ ಅನ್ನು ‘ಸ್ವಾತಂತ್ರ್ಯವೀರ’ ಎಂದು ಕರೆದಿದ್ದಾರೆ ಅಥವಾ ಆ ಅರ್ಥ ಬರುವಂತೆ ಬರೆದಿದ್ದಾರೆ..?” ಎಂದು ಪ್ರಶ್ನಿಸಿದ್ದಾರೆ.

“ಈ ಲೇಖನ ಬರೆದವರು ಅಥವಾ ಬರೆದುಕೊಟ್ಟವರು ಸಾರ್ವಜನಿಕರಿಗೆ ಆಧಾರ ಸಮೇತ ಸಾಕ್ಷೀಕರಿಸಬೇಕು. ಇಲ್ಲದಿದ್ದರೆ ಈ ಲೇಖನದ ವಿಷಯ ಮತ್ತು ಬರೆದವರ ವ್ಯಕ್ತಿತ್ವ ಎರಡೂ ಫೇಕ್ ಎಂದು ಮತ್ತೆ ಸಾಬೀತಾಗುತ್ತದೆ. ಮತ್ತು ಇದು ಬಾಬಾಸಾಹೇಬರಿಗೆ ಮಾಡಿದ ಅವಮಾನ ಮತ್ತು ಅಂಬೇಡ್ಕರ್ ವಾದಿಗಳಿಗೆ ಮಾಡಿದ ದ್ರೋಹವಾಗುತ್ತದೆ. ಈ ನಡೆಯನ್ನು ಜನ ಎಂದೆಂದಿಗೂ ಕ್ಷಮಿಸುವುದಿಲ್ಲ” ಎಂದು ಹ.ರಾ.ಹೇಶ್‌ ಅವರು ಹೇಳಿದ್ದಾರೆ.

 

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶಾಸಕ ಎನ್‌. ಮಹೇಶ್‌, “ಈ ಬಗ್ಗೆ ಬೇರೆ ಯಾರೊ ಬರೆದಿದ್ದನ್ನು ತೆಗೆದುಕೊಂಡಿದ್ದೇನೆ. ಅವರಲ್ಲಿ ಉಲ್ಲೇಖ ಕೇಳುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ವಿಜಯ ಕರ್ನಾಟಕದ ಲೇಖನವನ್ನು ಶಾಸಕ ಎನ್‌. ಮಹೇಶ್ ಅವರು ಬರೆದಿಲ್ಲ, ಬೇರೆ ಯಾರೋ ಬರೆದು ಅವರ ಹೆಸರು ಹಾಕಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು,“ಆ ಬರಹ ನಾನೆ ಬರೆದಿರುವುದು, ಈ ಬಗ್ಗೆ ಸಂಶಯ ಯಾಕೆ? ಮನುಷ್ಯ ಬದಲಾಗಬಾರದೆ, ನಾನು ನನ್ನ ಗ್ರಹಿಕೆಯಿಂದ ಬರೆದಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

“ಲೇಖನದ ಉಲ್ಲೇಖವನ್ನು ನಾನು ಕೊಡುತ್ತೇನೆ. ಅದನ್ನು ಅವರು ಎಲ್ಲಿಂದ ತೆಗೆದುಕೊಂಡಿದ್ದಾರೆ ಎಂದು ನಾನು ಅವರೊಂದಿಗೆ ಕೇಳುತ್ತಿದ್ದೇನೆ. ಅದನ್ನು ಪಡೆದುಕೊಂಡು ಕೊಡುತ್ತೇನೆ. ಈಗ ನಾನು ಹೊರಗಡೆ ಇದ್ದು, ನಂತರ ನಾನೇ ಮಾಹಿತಿ ನೀಡುತ್ತೇನೆ” ಎಂದು ನಾನುಗೌರಿ.ಕಾಂ ಜೊತೆಗೆ ಶಾಸಕ ಮಹೇಶ್ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಈ ಅಯ್ಯೋಗ್ಯ ಯಾರಿಗೆ ಬೇಕಾದರೂ ಚಮಚಾಗಿರಿ ಮಾಡಿಕೊಂಡು ಗುಲಾಮಗಿರಿ ಮಾಡಿಕೊಳ್ಳಲಿ,ಅದರೆ ಇಲ್ಲಿ ಭಾಬಾಸಾಹೇಬರ ಹೆಸರನ್ನ ಯಾಕೆ ತೆಗೆದುಕೊಂಡು ಬಂದ? ಇವನ ಸ್ವಾರ್ಥ ತೆವಲಿಗೆ ಇವನ ಕ್ಷೇತ್ರದ ಜನತೆ ಸರಿಯಾಗಿ ವಿಚಾರಿಸಿಕೊಳ್ಳಲಿ.

  2. ಬರಹ ಬೇರೆಯವರದು, ಹೆಸರು ಇವರದು, ದಲಿತರನ್ನು ದಿಕ್ಕು ತಪ್ಪಿಸುವ ಪ್ರಯತ್ನ, ಮುಂದೆ ಒಂದು ದಿನ ದಲಿತ ನಾಯಕರೇ ದಲಿತರಿಗೆ ಮೀಸಲಾತಿಯ ಅಗತ್ಯವಿಲ್ಲ ಎಂದು ಹೇಳುವಂತಹ ಪರಿಸ್ಥಿತಿಗೆ ತರುತ್ತಾರೆ, ಇದು ಶತ ಸಿದ್ಧ, ದಲಿತರು ಹುಷಾರಾಗಿರಿ.

  3. ನಂಗೂ ಮಿಸಲಾತಿ ಬೇಡ … ಆದ್ರೆ ಬಾಬಾ ಸಾಹೇಬರು ಹೇಳಿದ ಸಮ ಪಾಲು ಸಮ ಬಾಳು ಬೇಕು…..

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...