Homeಕರ್ನಾಟಕ‘ಅಂಬೇಡ್ಕರ್‌ ಹೇಳಿಕೆ ನಾನು ಓದಿದ್ದಲ್ಲ, ಬೇರೆ ಯಾರೊ ಬರೆದಿದ್ದು ತೆಗೆದುಕೊಂಡಿದ್ದೇನೆ’ - ವಿಜಯ ಕರ್ನಾಟಕ ಅಂಕಣದ...

‘ಅಂಬೇಡ್ಕರ್‌ ಹೇಳಿಕೆ ನಾನು ಓದಿದ್ದಲ್ಲ, ಬೇರೆ ಯಾರೊ ಬರೆದಿದ್ದು ತೆಗೆದುಕೊಂಡಿದ್ದೇನೆ’ – ವಿಜಯ ಕರ್ನಾಟಕ ಅಂಕಣದ ಕುರಿತು ಎನ್‌. ಮಹೇಶ್‌

ಅಂಬೇಡ್ಕರ್‌ ಅವರು ಸಾವರ್ಕರ್ ಅನ್ನು ‘ಸ್ವಾತಂತ್ರ್ಯವೀರ’ ಎಂದು ಕರೆದಿದ್ದಾರೆ ಎಂದು ಅಂಕಣದಲ್ಲಿ ಉಲ್ಲೇಖಿಸಲಾಗಿದೆ

- Advertisement -
- Advertisement -

ಬಿಜೆಪಿ ಶಾಸಕ ಎನ್‌. ಮಹೇಶ್‌ ಅವರು ವಿಜಯ ಕರ್ನಾಟಕ ಪತ್ರಿಕೆಗೆ ಬರೆದ ಅಂಕಣ ಬರಹದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌‌.ಅಂಬೇಡ್ಕರ್‌ ಅವರ ಹೇಳಿಕೆಯನ್ನು ತಿರುಚಿ ಬರೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪಕ್ಕೆ ಉತ್ತರಿಸಿರುವ ಅವರು, “ಈ ಬಗ್ಗೆ ಬೇರೆ ಯಾರೊ ಬರೆದಿದ್ದನ್ನು ತೆಗೆದುಕೊಂಡಿದ್ದೇನೆ. ಅವರಲ್ಲಿ ಉಲ್ಲೇಖ ಕೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.

ಮಾಜಿ ಬಿಎಸ್‌ಪಿ ನಾಯಕ, ಪ್ರಸ್ತುತ ಬಿಜೆಪಿ ಪಕ್ಷಕ್ಕೆ ಪಕ್ಷಾಂತರವಾಗಿರುವ ಕೊಳ್ಳೆಗಾಲದ ಶಾಸಕರಾದ ಮಹೇಶ್ ಅವರು ಮಂಗಳವಾರದ ವಿಜಯ ಕರ್ನಾಟಕ ಪತ್ರಿಕೆಗೆ ‘ಸಮಾಜ ಸುಧಾರಣೆಯ ದಿವ್ಯಚೇತನ ಸಾರ್ವರ್ಕರ್‌’ ಎಂಬ ಲೇಖನವನ್ನು ಬರೆದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬರಹದ ಮೊದಲ ಪ್ಯಾರಾದಲ್ಲಿ, “ಸಮಾಜ ಸುಧಾರಣೆಯ ದಿವ್ಯಚೈತನ್ಯದ ಸೊಡರು ಸ್ವಾತಂತ್ಯ್ರವೀರ ಸಾವರ್ಕರ್‌. ಹಿಂದೂ ಧರ್ಮದಲ್ಲಿರುವ ಅಸ್ಪೃಶ್ಯತೆಯ ಆಚರಣೆಯು ಒಂದು ಕಳಂಕವಾಗಿದ್ದ, ಇಂಥ ಅಮಾನವೀಯ ಆಚರಣೆಯಿಂದ ನನ್ನಂಥವರಿಗೆ ಆಗುವ ಅವಮಾನ ಅಷ್ಟಿಷ್ಟಲ್ಲ. ಆದರೆ, ಸಾವರ್ಕರ್‌ ಅವರು ಇದರ ನಿವಾರಣೆಗೆ ಕೈಗೊಂಡಿರುವ ಕ್ರಮಗಳು ಕ್ರಾಂತಿಕಾರಿಯಾಗಿವೆ. ಇಂಥ ಐದೋ ಹತ್ತೋ ಮಂದಿ ಇದ್ದರೆ ಅಸ್ಪೃಶ್ಯತೆಯು ಮುಂದಿನ ಕೆಲವೇ ವರ್ಷಗಳಲ್ಲಿ ಇತಿಹಾಸದ ಸಂಗತಿಯಾಗುತ್ತದೆ ಎನ್ನುವ ವಿಶ್ವಾಸ ನನಗಿದೆ” ಎಂದು ಅಂಬೇಡ್ಕರ್‌ ಅವರ ಹೇಳಿದ್ದಾರೆ ಎಂದು ಎನ್. ಮಹೇಶ್ ಅವರು ಬರೆದಿದ್ದಾರೆ.

ಆದರೆ ಈ ಬಗ್ಗೆ ಅನೇಕ ಅಂಬೇಡ್ಕರ್‌‌ವಾದಿಗಳು ಆಕ್ಷೇಪವೆತ್ತಿದ್ದು, ಅಂಬೇಡ್ಕರ್‌ ಅವರು ಈ ರೀತಿ ಅಥವಾ ಇದೇ ರೀತಿ ಅರ್ಥ ಬರುವ ಮಾತು ಹಾಗೂ ಬರಹವನ್ನಾಗಲಿ ಹೇಳಿಯೆ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿ.ಎಸ್.ಪಿ ಯ ಎನ್ ಮಹೇಶ್ ಹೀಗೇಕೆ ಮಾಡಿದರು?

ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿಂತಕ ಹ.ರಾ. ಮಹೇಶ್ ಅವರು, “ಈ ಮಾತು ಅಥವಾ ಬರಹ ಬಾಬಾಸಾಹೇಬರ ಯಾವ ಸಂಪುಟದಲ್ಲಿದೆ…!? ಬಾಬಾಸಾಹೇಬರು ಬರೆದಿರುವ ಯಾವ ಪುಸ್ತಕದಲ್ಲಿ ಅಥವಾ ಅವರ ಬರಹ ಭಾಷಣಗಳ‌ ಯಾವ ಸಂಪುಟದ ಯಾವ ಅಧ್ಯಾಯದ ಎಷ್ಟನೇ ಪುಟದಲ್ಲಿ ಬಾಬಾಸಾಹೇಬರು ಸಾವರ್ಕರ್ ಅನ್ನು ‘ಸ್ವಾತಂತ್ರ್ಯವೀರ’ ಎಂದು ಕರೆದಿದ್ದಾರೆ ಅಥವಾ ಆ ಅರ್ಥ ಬರುವಂತೆ ಬರೆದಿದ್ದಾರೆ..?” ಎಂದು ಪ್ರಶ್ನಿಸಿದ್ದಾರೆ.

“ಈ ಲೇಖನ ಬರೆದವರು ಅಥವಾ ಬರೆದುಕೊಟ್ಟವರು ಸಾರ್ವಜನಿಕರಿಗೆ ಆಧಾರ ಸಮೇತ ಸಾಕ್ಷೀಕರಿಸಬೇಕು. ಇಲ್ಲದಿದ್ದರೆ ಈ ಲೇಖನದ ವಿಷಯ ಮತ್ತು ಬರೆದವರ ವ್ಯಕ್ತಿತ್ವ ಎರಡೂ ಫೇಕ್ ಎಂದು ಮತ್ತೆ ಸಾಬೀತಾಗುತ್ತದೆ. ಮತ್ತು ಇದು ಬಾಬಾಸಾಹೇಬರಿಗೆ ಮಾಡಿದ ಅವಮಾನ ಮತ್ತು ಅಂಬೇಡ್ಕರ್ ವಾದಿಗಳಿಗೆ ಮಾಡಿದ ದ್ರೋಹವಾಗುತ್ತದೆ. ಈ ನಡೆಯನ್ನು ಜನ ಎಂದೆಂದಿಗೂ ಕ್ಷಮಿಸುವುದಿಲ್ಲ” ಎಂದು ಹ.ರಾ.ಹೇಶ್‌ ಅವರು ಹೇಳಿದ್ದಾರೆ.

 

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶಾಸಕ ಎನ್‌. ಮಹೇಶ್‌, “ಈ ಬಗ್ಗೆ ಬೇರೆ ಯಾರೊ ಬರೆದಿದ್ದನ್ನು ತೆಗೆದುಕೊಂಡಿದ್ದೇನೆ. ಅವರಲ್ಲಿ ಉಲ್ಲೇಖ ಕೇಳುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ವಿಜಯ ಕರ್ನಾಟಕದ ಲೇಖನವನ್ನು ಶಾಸಕ ಎನ್‌. ಮಹೇಶ್ ಅವರು ಬರೆದಿಲ್ಲ, ಬೇರೆ ಯಾರೋ ಬರೆದು ಅವರ ಹೆಸರು ಹಾಕಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು,“ಆ ಬರಹ ನಾನೆ ಬರೆದಿರುವುದು, ಈ ಬಗ್ಗೆ ಸಂಶಯ ಯಾಕೆ? ಮನುಷ್ಯ ಬದಲಾಗಬಾರದೆ, ನಾನು ನನ್ನ ಗ್ರಹಿಕೆಯಿಂದ ಬರೆದಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

“ಲೇಖನದ ಉಲ್ಲೇಖವನ್ನು ನಾನು ಕೊಡುತ್ತೇನೆ. ಅದನ್ನು ಅವರು ಎಲ್ಲಿಂದ ತೆಗೆದುಕೊಂಡಿದ್ದಾರೆ ಎಂದು ನಾನು ಅವರೊಂದಿಗೆ ಕೇಳುತ್ತಿದ್ದೇನೆ. ಅದನ್ನು ಪಡೆದುಕೊಂಡು ಕೊಡುತ್ತೇನೆ. ಈಗ ನಾನು ಹೊರಗಡೆ ಇದ್ದು, ನಂತರ ನಾನೇ ಮಾಹಿತಿ ನೀಡುತ್ತೇನೆ” ಎಂದು ನಾನುಗೌರಿ.ಕಾಂ ಜೊತೆಗೆ ಶಾಸಕ ಮಹೇಶ್ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಈ ಅಯ್ಯೋಗ್ಯ ಯಾರಿಗೆ ಬೇಕಾದರೂ ಚಮಚಾಗಿರಿ ಮಾಡಿಕೊಂಡು ಗುಲಾಮಗಿರಿ ಮಾಡಿಕೊಳ್ಳಲಿ,ಅದರೆ ಇಲ್ಲಿ ಭಾಬಾಸಾಹೇಬರ ಹೆಸರನ್ನ ಯಾಕೆ ತೆಗೆದುಕೊಂಡು ಬಂದ? ಇವನ ಸ್ವಾರ್ಥ ತೆವಲಿಗೆ ಇವನ ಕ್ಷೇತ್ರದ ಜನತೆ ಸರಿಯಾಗಿ ವಿಚಾರಿಸಿಕೊಳ್ಳಲಿ.

  2. ಬರಹ ಬೇರೆಯವರದು, ಹೆಸರು ಇವರದು, ದಲಿತರನ್ನು ದಿಕ್ಕು ತಪ್ಪಿಸುವ ಪ್ರಯತ್ನ, ಮುಂದೆ ಒಂದು ದಿನ ದಲಿತ ನಾಯಕರೇ ದಲಿತರಿಗೆ ಮೀಸಲಾತಿಯ ಅಗತ್ಯವಿಲ್ಲ ಎಂದು ಹೇಳುವಂತಹ ಪರಿಸ್ಥಿತಿಗೆ ತರುತ್ತಾರೆ, ಇದು ಶತ ಸಿದ್ಧ, ದಲಿತರು ಹುಷಾರಾಗಿರಿ.

  3. ನಂಗೂ ಮಿಸಲಾತಿ ಬೇಡ … ಆದ್ರೆ ಬಾಬಾ ಸಾಹೇಬರು ಹೇಳಿದ ಸಮ ಪಾಲು ಸಮ ಬಾಳು ಬೇಕು…..

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...