Homeಕರ್ನಾಟಕ‘ಅಂಬೇಡ್ಕರ್‌ ಹೇಳಿಕೆ ನಾನು ಓದಿದ್ದಲ್ಲ, ಬೇರೆ ಯಾರೊ ಬರೆದಿದ್ದು ತೆಗೆದುಕೊಂಡಿದ್ದೇನೆ’ - ವಿಜಯ ಕರ್ನಾಟಕ ಅಂಕಣದ...

‘ಅಂಬೇಡ್ಕರ್‌ ಹೇಳಿಕೆ ನಾನು ಓದಿದ್ದಲ್ಲ, ಬೇರೆ ಯಾರೊ ಬರೆದಿದ್ದು ತೆಗೆದುಕೊಂಡಿದ್ದೇನೆ’ – ವಿಜಯ ಕರ್ನಾಟಕ ಅಂಕಣದ ಕುರಿತು ಎನ್‌. ಮಹೇಶ್‌

ಅಂಬೇಡ್ಕರ್‌ ಅವರು ಸಾವರ್ಕರ್ ಅನ್ನು ‘ಸ್ವಾತಂತ್ರ್ಯವೀರ’ ಎಂದು ಕರೆದಿದ್ದಾರೆ ಎಂದು ಅಂಕಣದಲ್ಲಿ ಉಲ್ಲೇಖಿಸಲಾಗಿದೆ

- Advertisement -
- Advertisement -

ಬಿಜೆಪಿ ಶಾಸಕ ಎನ್‌. ಮಹೇಶ್‌ ಅವರು ವಿಜಯ ಕರ್ನಾಟಕ ಪತ್ರಿಕೆಗೆ ಬರೆದ ಅಂಕಣ ಬರಹದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌‌.ಅಂಬೇಡ್ಕರ್‌ ಅವರ ಹೇಳಿಕೆಯನ್ನು ತಿರುಚಿ ಬರೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪಕ್ಕೆ ಉತ್ತರಿಸಿರುವ ಅವರು, “ಈ ಬಗ್ಗೆ ಬೇರೆ ಯಾರೊ ಬರೆದಿದ್ದನ್ನು ತೆಗೆದುಕೊಂಡಿದ್ದೇನೆ. ಅವರಲ್ಲಿ ಉಲ್ಲೇಖ ಕೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.

ಮಾಜಿ ಬಿಎಸ್‌ಪಿ ನಾಯಕ, ಪ್ರಸ್ತುತ ಬಿಜೆಪಿ ಪಕ್ಷಕ್ಕೆ ಪಕ್ಷಾಂತರವಾಗಿರುವ ಕೊಳ್ಳೆಗಾಲದ ಶಾಸಕರಾದ ಮಹೇಶ್ ಅವರು ಮಂಗಳವಾರದ ವಿಜಯ ಕರ್ನಾಟಕ ಪತ್ರಿಕೆಗೆ ‘ಸಮಾಜ ಸುಧಾರಣೆಯ ದಿವ್ಯಚೇತನ ಸಾರ್ವರ್ಕರ್‌’ ಎಂಬ ಲೇಖನವನ್ನು ಬರೆದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬರಹದ ಮೊದಲ ಪ್ಯಾರಾದಲ್ಲಿ, “ಸಮಾಜ ಸುಧಾರಣೆಯ ದಿವ್ಯಚೈತನ್ಯದ ಸೊಡರು ಸ್ವಾತಂತ್ಯ್ರವೀರ ಸಾವರ್ಕರ್‌. ಹಿಂದೂ ಧರ್ಮದಲ್ಲಿರುವ ಅಸ್ಪೃಶ್ಯತೆಯ ಆಚರಣೆಯು ಒಂದು ಕಳಂಕವಾಗಿದ್ದ, ಇಂಥ ಅಮಾನವೀಯ ಆಚರಣೆಯಿಂದ ನನ್ನಂಥವರಿಗೆ ಆಗುವ ಅವಮಾನ ಅಷ್ಟಿಷ್ಟಲ್ಲ. ಆದರೆ, ಸಾವರ್ಕರ್‌ ಅವರು ಇದರ ನಿವಾರಣೆಗೆ ಕೈಗೊಂಡಿರುವ ಕ್ರಮಗಳು ಕ್ರಾಂತಿಕಾರಿಯಾಗಿವೆ. ಇಂಥ ಐದೋ ಹತ್ತೋ ಮಂದಿ ಇದ್ದರೆ ಅಸ್ಪೃಶ್ಯತೆಯು ಮುಂದಿನ ಕೆಲವೇ ವರ್ಷಗಳಲ್ಲಿ ಇತಿಹಾಸದ ಸಂಗತಿಯಾಗುತ್ತದೆ ಎನ್ನುವ ವಿಶ್ವಾಸ ನನಗಿದೆ” ಎಂದು ಅಂಬೇಡ್ಕರ್‌ ಅವರ ಹೇಳಿದ್ದಾರೆ ಎಂದು ಎನ್. ಮಹೇಶ್ ಅವರು ಬರೆದಿದ್ದಾರೆ.

ಆದರೆ ಈ ಬಗ್ಗೆ ಅನೇಕ ಅಂಬೇಡ್ಕರ್‌‌ವಾದಿಗಳು ಆಕ್ಷೇಪವೆತ್ತಿದ್ದು, ಅಂಬೇಡ್ಕರ್‌ ಅವರು ಈ ರೀತಿ ಅಥವಾ ಇದೇ ರೀತಿ ಅರ್ಥ ಬರುವ ಮಾತು ಹಾಗೂ ಬರಹವನ್ನಾಗಲಿ ಹೇಳಿಯೆ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿ.ಎಸ್.ಪಿ ಯ ಎನ್ ಮಹೇಶ್ ಹೀಗೇಕೆ ಮಾಡಿದರು?

ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿಂತಕ ಹ.ರಾ. ಮಹೇಶ್ ಅವರು, “ಈ ಮಾತು ಅಥವಾ ಬರಹ ಬಾಬಾಸಾಹೇಬರ ಯಾವ ಸಂಪುಟದಲ್ಲಿದೆ…!? ಬಾಬಾಸಾಹೇಬರು ಬರೆದಿರುವ ಯಾವ ಪುಸ್ತಕದಲ್ಲಿ ಅಥವಾ ಅವರ ಬರಹ ಭಾಷಣಗಳ‌ ಯಾವ ಸಂಪುಟದ ಯಾವ ಅಧ್ಯಾಯದ ಎಷ್ಟನೇ ಪುಟದಲ್ಲಿ ಬಾಬಾಸಾಹೇಬರು ಸಾವರ್ಕರ್ ಅನ್ನು ‘ಸ್ವಾತಂತ್ರ್ಯವೀರ’ ಎಂದು ಕರೆದಿದ್ದಾರೆ ಅಥವಾ ಆ ಅರ್ಥ ಬರುವಂತೆ ಬರೆದಿದ್ದಾರೆ..?” ಎಂದು ಪ್ರಶ್ನಿಸಿದ್ದಾರೆ.

“ಈ ಲೇಖನ ಬರೆದವರು ಅಥವಾ ಬರೆದುಕೊಟ್ಟವರು ಸಾರ್ವಜನಿಕರಿಗೆ ಆಧಾರ ಸಮೇತ ಸಾಕ್ಷೀಕರಿಸಬೇಕು. ಇಲ್ಲದಿದ್ದರೆ ಈ ಲೇಖನದ ವಿಷಯ ಮತ್ತು ಬರೆದವರ ವ್ಯಕ್ತಿತ್ವ ಎರಡೂ ಫೇಕ್ ಎಂದು ಮತ್ತೆ ಸಾಬೀತಾಗುತ್ತದೆ. ಮತ್ತು ಇದು ಬಾಬಾಸಾಹೇಬರಿಗೆ ಮಾಡಿದ ಅವಮಾನ ಮತ್ತು ಅಂಬೇಡ್ಕರ್ ವಾದಿಗಳಿಗೆ ಮಾಡಿದ ದ್ರೋಹವಾಗುತ್ತದೆ. ಈ ನಡೆಯನ್ನು ಜನ ಎಂದೆಂದಿಗೂ ಕ್ಷಮಿಸುವುದಿಲ್ಲ” ಎಂದು ಹ.ರಾ.ಹೇಶ್‌ ಅವರು ಹೇಳಿದ್ದಾರೆ.

 

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶಾಸಕ ಎನ್‌. ಮಹೇಶ್‌, “ಈ ಬಗ್ಗೆ ಬೇರೆ ಯಾರೊ ಬರೆದಿದ್ದನ್ನು ತೆಗೆದುಕೊಂಡಿದ್ದೇನೆ. ಅವರಲ್ಲಿ ಉಲ್ಲೇಖ ಕೇಳುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ವಿಜಯ ಕರ್ನಾಟಕದ ಲೇಖನವನ್ನು ಶಾಸಕ ಎನ್‌. ಮಹೇಶ್ ಅವರು ಬರೆದಿಲ್ಲ, ಬೇರೆ ಯಾರೋ ಬರೆದು ಅವರ ಹೆಸರು ಹಾಕಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು,“ಆ ಬರಹ ನಾನೆ ಬರೆದಿರುವುದು, ಈ ಬಗ್ಗೆ ಸಂಶಯ ಯಾಕೆ? ಮನುಷ್ಯ ಬದಲಾಗಬಾರದೆ, ನಾನು ನನ್ನ ಗ್ರಹಿಕೆಯಿಂದ ಬರೆದಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

“ಲೇಖನದ ಉಲ್ಲೇಖವನ್ನು ನಾನು ಕೊಡುತ್ತೇನೆ. ಅದನ್ನು ಅವರು ಎಲ್ಲಿಂದ ತೆಗೆದುಕೊಂಡಿದ್ದಾರೆ ಎಂದು ನಾನು ಅವರೊಂದಿಗೆ ಕೇಳುತ್ತಿದ್ದೇನೆ. ಅದನ್ನು ಪಡೆದುಕೊಂಡು ಕೊಡುತ್ತೇನೆ. ಈಗ ನಾನು ಹೊರಗಡೆ ಇದ್ದು, ನಂತರ ನಾನೇ ಮಾಹಿತಿ ನೀಡುತ್ತೇನೆ” ಎಂದು ನಾನುಗೌರಿ.ಕಾಂ ಜೊತೆಗೆ ಶಾಸಕ ಮಹೇಶ್ ಅವರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

4 COMMENTS

  1. ಈ ಅಯ್ಯೋಗ್ಯ ಯಾರಿಗೆ ಬೇಕಾದರೂ ಚಮಚಾಗಿರಿ ಮಾಡಿಕೊಂಡು ಗುಲಾಮಗಿರಿ ಮಾಡಿಕೊಳ್ಳಲಿ,ಅದರೆ ಇಲ್ಲಿ ಭಾಬಾಸಾಹೇಬರ ಹೆಸರನ್ನ ಯಾಕೆ ತೆಗೆದುಕೊಂಡು ಬಂದ? ಇವನ ಸ್ವಾರ್ಥ ತೆವಲಿಗೆ ಇವನ ಕ್ಷೇತ್ರದ ಜನತೆ ಸರಿಯಾಗಿ ವಿಚಾರಿಸಿಕೊಳ್ಳಲಿ.

  2. ಬರಹ ಬೇರೆಯವರದು, ಹೆಸರು ಇವರದು, ದಲಿತರನ್ನು ದಿಕ್ಕು ತಪ್ಪಿಸುವ ಪ್ರಯತ್ನ, ಮುಂದೆ ಒಂದು ದಿನ ದಲಿತ ನಾಯಕರೇ ದಲಿತರಿಗೆ ಮೀಸಲಾತಿಯ ಅಗತ್ಯವಿಲ್ಲ ಎಂದು ಹೇಳುವಂತಹ ಪರಿಸ್ಥಿತಿಗೆ ತರುತ್ತಾರೆ, ಇದು ಶತ ಸಿದ್ಧ, ದಲಿತರು ಹುಷಾರಾಗಿರಿ.

  3. ನಂಗೂ ಮಿಸಲಾತಿ ಬೇಡ … ಆದ್ರೆ ಬಾಬಾ ಸಾಹೇಬರು ಹೇಳಿದ ಸಮ ಪಾಲು ಸಮ ಬಾಳು ಬೇಕು…..

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...