Homeಕರ್ನಾಟಕ‘ಅಂಬೇಡ್ಕರ್‌ ಹೇಳಿಕೆ ನಾನು ಓದಿದ್ದಲ್ಲ, ಬೇರೆ ಯಾರೊ ಬರೆದಿದ್ದು ತೆಗೆದುಕೊಂಡಿದ್ದೇನೆ’ - ವಿಜಯ ಕರ್ನಾಟಕ ಅಂಕಣದ...

‘ಅಂಬೇಡ್ಕರ್‌ ಹೇಳಿಕೆ ನಾನು ಓದಿದ್ದಲ್ಲ, ಬೇರೆ ಯಾರೊ ಬರೆದಿದ್ದು ತೆಗೆದುಕೊಂಡಿದ್ದೇನೆ’ – ವಿಜಯ ಕರ್ನಾಟಕ ಅಂಕಣದ ಕುರಿತು ಎನ್‌. ಮಹೇಶ್‌

ಅಂಬೇಡ್ಕರ್‌ ಅವರು ಸಾವರ್ಕರ್ ಅನ್ನು ‘ಸ್ವಾತಂತ್ರ್ಯವೀರ’ ಎಂದು ಕರೆದಿದ್ದಾರೆ ಎಂದು ಅಂಕಣದಲ್ಲಿ ಉಲ್ಲೇಖಿಸಲಾಗಿದೆ

- Advertisement -
- Advertisement -

ಬಿಜೆಪಿ ಶಾಸಕ ಎನ್‌. ಮಹೇಶ್‌ ಅವರು ವಿಜಯ ಕರ್ನಾಟಕ ಪತ್ರಿಕೆಗೆ ಬರೆದ ಅಂಕಣ ಬರಹದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌‌.ಅಂಬೇಡ್ಕರ್‌ ಅವರ ಹೇಳಿಕೆಯನ್ನು ತಿರುಚಿ ಬರೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪಕ್ಕೆ ಉತ್ತರಿಸಿರುವ ಅವರು, “ಈ ಬಗ್ಗೆ ಬೇರೆ ಯಾರೊ ಬರೆದಿದ್ದನ್ನು ತೆಗೆದುಕೊಂಡಿದ್ದೇನೆ. ಅವರಲ್ಲಿ ಉಲ್ಲೇಖ ಕೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.

ಮಾಜಿ ಬಿಎಸ್‌ಪಿ ನಾಯಕ, ಪ್ರಸ್ತುತ ಬಿಜೆಪಿ ಪಕ್ಷಕ್ಕೆ ಪಕ್ಷಾಂತರವಾಗಿರುವ ಕೊಳ್ಳೆಗಾಲದ ಶಾಸಕರಾದ ಮಹೇಶ್ ಅವರು ಮಂಗಳವಾರದ ವಿಜಯ ಕರ್ನಾಟಕ ಪತ್ರಿಕೆಗೆ ‘ಸಮಾಜ ಸುಧಾರಣೆಯ ದಿವ್ಯಚೇತನ ಸಾರ್ವರ್ಕರ್‌’ ಎಂಬ ಲೇಖನವನ್ನು ಬರೆದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬರಹದ ಮೊದಲ ಪ್ಯಾರಾದಲ್ಲಿ, “ಸಮಾಜ ಸುಧಾರಣೆಯ ದಿವ್ಯಚೈತನ್ಯದ ಸೊಡರು ಸ್ವಾತಂತ್ಯ್ರವೀರ ಸಾವರ್ಕರ್‌. ಹಿಂದೂ ಧರ್ಮದಲ್ಲಿರುವ ಅಸ್ಪೃಶ್ಯತೆಯ ಆಚರಣೆಯು ಒಂದು ಕಳಂಕವಾಗಿದ್ದ, ಇಂಥ ಅಮಾನವೀಯ ಆಚರಣೆಯಿಂದ ನನ್ನಂಥವರಿಗೆ ಆಗುವ ಅವಮಾನ ಅಷ್ಟಿಷ್ಟಲ್ಲ. ಆದರೆ, ಸಾವರ್ಕರ್‌ ಅವರು ಇದರ ನಿವಾರಣೆಗೆ ಕೈಗೊಂಡಿರುವ ಕ್ರಮಗಳು ಕ್ರಾಂತಿಕಾರಿಯಾಗಿವೆ. ಇಂಥ ಐದೋ ಹತ್ತೋ ಮಂದಿ ಇದ್ದರೆ ಅಸ್ಪೃಶ್ಯತೆಯು ಮುಂದಿನ ಕೆಲವೇ ವರ್ಷಗಳಲ್ಲಿ ಇತಿಹಾಸದ ಸಂಗತಿಯಾಗುತ್ತದೆ ಎನ್ನುವ ವಿಶ್ವಾಸ ನನಗಿದೆ” ಎಂದು ಅಂಬೇಡ್ಕರ್‌ ಅವರ ಹೇಳಿದ್ದಾರೆ ಎಂದು ಎನ್. ಮಹೇಶ್ ಅವರು ಬರೆದಿದ್ದಾರೆ.

ಆದರೆ ಈ ಬಗ್ಗೆ ಅನೇಕ ಅಂಬೇಡ್ಕರ್‌‌ವಾದಿಗಳು ಆಕ್ಷೇಪವೆತ್ತಿದ್ದು, ಅಂಬೇಡ್ಕರ್‌ ಅವರು ಈ ರೀತಿ ಅಥವಾ ಇದೇ ರೀತಿ ಅರ್ಥ ಬರುವ ಮಾತು ಹಾಗೂ ಬರಹವನ್ನಾಗಲಿ ಹೇಳಿಯೆ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿ.ಎಸ್.ಪಿ ಯ ಎನ್ ಮಹೇಶ್ ಹೀಗೇಕೆ ಮಾಡಿದರು?

ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿಂತಕ ಹ.ರಾ. ಮಹೇಶ್ ಅವರು, “ಈ ಮಾತು ಅಥವಾ ಬರಹ ಬಾಬಾಸಾಹೇಬರ ಯಾವ ಸಂಪುಟದಲ್ಲಿದೆ…!? ಬಾಬಾಸಾಹೇಬರು ಬರೆದಿರುವ ಯಾವ ಪುಸ್ತಕದಲ್ಲಿ ಅಥವಾ ಅವರ ಬರಹ ಭಾಷಣಗಳ‌ ಯಾವ ಸಂಪುಟದ ಯಾವ ಅಧ್ಯಾಯದ ಎಷ್ಟನೇ ಪುಟದಲ್ಲಿ ಬಾಬಾಸಾಹೇಬರು ಸಾವರ್ಕರ್ ಅನ್ನು ‘ಸ್ವಾತಂತ್ರ್ಯವೀರ’ ಎಂದು ಕರೆದಿದ್ದಾರೆ ಅಥವಾ ಆ ಅರ್ಥ ಬರುವಂತೆ ಬರೆದಿದ್ದಾರೆ..?” ಎಂದು ಪ್ರಶ್ನಿಸಿದ್ದಾರೆ.

“ಈ ಲೇಖನ ಬರೆದವರು ಅಥವಾ ಬರೆದುಕೊಟ್ಟವರು ಸಾರ್ವಜನಿಕರಿಗೆ ಆಧಾರ ಸಮೇತ ಸಾಕ್ಷೀಕರಿಸಬೇಕು. ಇಲ್ಲದಿದ್ದರೆ ಈ ಲೇಖನದ ವಿಷಯ ಮತ್ತು ಬರೆದವರ ವ್ಯಕ್ತಿತ್ವ ಎರಡೂ ಫೇಕ್ ಎಂದು ಮತ್ತೆ ಸಾಬೀತಾಗುತ್ತದೆ. ಮತ್ತು ಇದು ಬಾಬಾಸಾಹೇಬರಿಗೆ ಮಾಡಿದ ಅವಮಾನ ಮತ್ತು ಅಂಬೇಡ್ಕರ್ ವಾದಿಗಳಿಗೆ ಮಾಡಿದ ದ್ರೋಹವಾಗುತ್ತದೆ. ಈ ನಡೆಯನ್ನು ಜನ ಎಂದೆಂದಿಗೂ ಕ್ಷಮಿಸುವುದಿಲ್ಲ” ಎಂದು ಹ.ರಾ.ಹೇಶ್‌ ಅವರು ಹೇಳಿದ್ದಾರೆ.

 

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶಾಸಕ ಎನ್‌. ಮಹೇಶ್‌, “ಈ ಬಗ್ಗೆ ಬೇರೆ ಯಾರೊ ಬರೆದಿದ್ದನ್ನು ತೆಗೆದುಕೊಂಡಿದ್ದೇನೆ. ಅವರಲ್ಲಿ ಉಲ್ಲೇಖ ಕೇಳುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ವಿಜಯ ಕರ್ನಾಟಕದ ಲೇಖನವನ್ನು ಶಾಸಕ ಎನ್‌. ಮಹೇಶ್ ಅವರು ಬರೆದಿಲ್ಲ, ಬೇರೆ ಯಾರೋ ಬರೆದು ಅವರ ಹೆಸರು ಹಾಕಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು,“ಆ ಬರಹ ನಾನೆ ಬರೆದಿರುವುದು, ಈ ಬಗ್ಗೆ ಸಂಶಯ ಯಾಕೆ? ಮನುಷ್ಯ ಬದಲಾಗಬಾರದೆ, ನಾನು ನನ್ನ ಗ್ರಹಿಕೆಯಿಂದ ಬರೆದಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

“ಲೇಖನದ ಉಲ್ಲೇಖವನ್ನು ನಾನು ಕೊಡುತ್ತೇನೆ. ಅದನ್ನು ಅವರು ಎಲ್ಲಿಂದ ತೆಗೆದುಕೊಂಡಿದ್ದಾರೆ ಎಂದು ನಾನು ಅವರೊಂದಿಗೆ ಕೇಳುತ್ತಿದ್ದೇನೆ. ಅದನ್ನು ಪಡೆದುಕೊಂಡು ಕೊಡುತ್ತೇನೆ. ಈಗ ನಾನು ಹೊರಗಡೆ ಇದ್ದು, ನಂತರ ನಾನೇ ಮಾಹಿತಿ ನೀಡುತ್ತೇನೆ” ಎಂದು ನಾನುಗೌರಿ.ಕಾಂ ಜೊತೆಗೆ ಶಾಸಕ ಮಹೇಶ್ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಈ ಅಯ್ಯೋಗ್ಯ ಯಾರಿಗೆ ಬೇಕಾದರೂ ಚಮಚಾಗಿರಿ ಮಾಡಿಕೊಂಡು ಗುಲಾಮಗಿರಿ ಮಾಡಿಕೊಳ್ಳಲಿ,ಅದರೆ ಇಲ್ಲಿ ಭಾಬಾಸಾಹೇಬರ ಹೆಸರನ್ನ ಯಾಕೆ ತೆಗೆದುಕೊಂಡು ಬಂದ? ಇವನ ಸ್ವಾರ್ಥ ತೆವಲಿಗೆ ಇವನ ಕ್ಷೇತ್ರದ ಜನತೆ ಸರಿಯಾಗಿ ವಿಚಾರಿಸಿಕೊಳ್ಳಲಿ.

  2. ಬರಹ ಬೇರೆಯವರದು, ಹೆಸರು ಇವರದು, ದಲಿತರನ್ನು ದಿಕ್ಕು ತಪ್ಪಿಸುವ ಪ್ರಯತ್ನ, ಮುಂದೆ ಒಂದು ದಿನ ದಲಿತ ನಾಯಕರೇ ದಲಿತರಿಗೆ ಮೀಸಲಾತಿಯ ಅಗತ್ಯವಿಲ್ಲ ಎಂದು ಹೇಳುವಂತಹ ಪರಿಸ್ಥಿತಿಗೆ ತರುತ್ತಾರೆ, ಇದು ಶತ ಸಿದ್ಧ, ದಲಿತರು ಹುಷಾರಾಗಿರಿ.

  3. ನಂಗೂ ಮಿಸಲಾತಿ ಬೇಡ … ಆದ್ರೆ ಬಾಬಾ ಸಾಹೇಬರು ಹೇಳಿದ ಸಮ ಪಾಲು ಸಮ ಬಾಳು ಬೇಕು…..

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...