Homeಮುಖಪುಟ2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್ ಬೇಸರ

2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್ ಬೇಸರ

2017ರಲ್ಲಿ ಗೋರಖ್ ಪುರದ ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯುಂಟಾಗಿ ತಾಯಂದಿರ ಎದುರೇ 70 ಎಳೆಗೂಸುಗಳು ಜೀವಬಿಟ್ಟಿದ್ದವು.

- Advertisement -
- Advertisement -

ದೇಶದಲ್ಲಿ ಉದ್ಭವಿಸಿರುವ ಕೋವಿಡ್ ಎರಡನೇ ಅಲೆಯಿಂದಾಗಿ ದೇಶದ ಆರೋಗ್ಯ ವ್ಯವಸ್ಥೆ ಬಿಕ್ಕಟ್ಟಿಗೆ ಸಿಲುಕಿದೆ.  ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಿದಂತೆಲ್ಲಾ ಬೆಡ್‌ಗಳ ಕೊರತೆ, ಆಕ್ಸಿಜನ್, ರೆಮ್‌ಡಿಸಿವಿರ್, ಲಸಿಕೆ ಕೊರತೆಯ ಆಹಾಕಾರ ಎದ್ದಿದೆ. ಕೊರೊನಾ ದೇಶಕ್ಕೆ ಪರಿಚಯವಾಗಿ 15 ತಿಂಗಳಾದರೂ ಏಕೆ ಸರ್ಕಾರಗಳು ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲಿಲ್ಲ ಎಂಬ ಗಂಭೀರ ಪ್ರಶ್ನೆಗಳು ಕೇಳಿಬಂದಿವೆ. ಇದೇ ಸಂದರ್ಭದಲ್ಲಿ 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು ಎಂದು ಉತ್ತರ ಪ್ರದೇಶದ ಜನಪರ ವೈದ್ಯ ಡಾ.ಕಫೀಲ್ ಖಾನ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸೋಮವಾರ ರಾತ್ರಿ ಟ್ವೀಟ್ ಮಾಡಿರುವ ಅವರು, “2017ರಲ್ಲಿ ಆಕ್ಸಿಜನ್ ಸಂಗ್ರಹ ಕೊರತೆಯ ಬಿಕ್ಕಟ್ಟಿನ ಬಗ್ಗೆ ಪ್ರಶ್ನೆ ಎತ್ತಿದ್ದಾಗ ಯಾರೂ ನನ್ನನ್ನು ಗಂಭೀರವಾಗಿ ಪರಿಗಣಿಸಲಿಲ್ಲ, ಬದಲಿಗೆ ನನ್ನನ್ನು ಜೈಲಿಗೆ ಹಾಕಲಾಯಿತು. ಅಂದಿನಿಂದಲೂ ಹಲವಾರು ಜನ ‘ಎಲ್ಲರಿಗೂ ಉತ್ತಮ ಆರೋಗ್ಯ ವ್ಯವಸ್ಥೆ ಮತ್ತು ನೀತಿಗಾಗಿ’ ಒತ್ತಾಯಿಸುತ್ತಲೇ ಇದ್ದೇವೆ. ಇಂದು ಇಡೀ ದೇಶವು ಆಕ್ಸಿಜನ್ ಕೊರತೆಯಿಂದ ಬಳಲುತ್ತಿದೆ. ಆರೋಗ್ಯ ಸಚಿವ ಹರ್ಷವರ್ಧನ್‌ರವರೆ ದಯವಿಟ್ಟು ಎಚ್ಚರಗೊಳ್ಳಿ” ಎಂದು ಮನವಿ ಮಾಡಿದ್ದಾರೆ.

2017ರಲ್ಲಿ ಗೋರಖ್ ಪುರದ ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯುಂಟಾಗಿ ತಾಯಂದಿರ ಎದುರೇ 70 ಎಳೆಗೂಸುಗಳು ಜೀವಬಿಟ್ಟಿದ್ದವು. ತಮ್ಮ ಮಕ್ಕಳನ್ನು ಬದುಕಿಸಿಕೊಡುವಂತೆ ತಾಯಂದಿರು ಗೋಗರೆಯುತ್ತಿದ್ದರು, ಆದರೆ ಒಂದೇ ಒಂದು ಸಿಲಿಂಡರ್ ಇತ್ತು ಹೀಗಾಗಿ ಕೆಲ ಮಕ್ಕಳನ್ನು ಮಾತ್ರವೇ ಬದುಕಿಸಲಾಯಿತು ಮತ್ತು ಇತರ ಮಕ್ಕಳು ಸಾವನಪ್ಪಿದ್ದರು. ಈ ಮಕ್ಕಳ ದುರಂತದ ಪ್ರಕರಣದಲ್ಲಿ ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಮತ್ತು ವೈದ್ಯಕೀಯ ನಿರ್ಲಕ್ಷ್ಯದ ಆರೋಪದ ಮೇಲೆ ಡಾ. ಕಫೀಲ್‌ ಖಾನ್ ಅವರು‌ ಅಮಾನತು ಮತ್ತು 9 ತಿಂಗಳ ಜೈಲುವಾಸಕ್ಕೆ ಒಳಗಾಗಿದ್ದರು. ಆದರೆ ನ್ಯಾಯಾಲಯ ಅವರು ಅಮಾಯಕರು ಮತ್ತು ಉದ್ದೇಶಪೂರ್ವಕವಾಗಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿ ಪ್ರಕರಣ ಕೈಬಿಟ್ಟಿತ್ತು.

ಇದನ್ನೂ ಓದಿ: ಬಿಆರ್‌ಡಿ ಆಸ್ಪತ್ರೆಯಲ್ಲಿ ಮಕ್ಕಳ ಸಾವಿನ ದುರಂತ: ಡಾ.ಕಫೀಲ್ ಖಾನ್ ಆರೋಪಮುಕ್ತ. ಆದರೆ…

ಆಗ ಡಾ.ಕಫೀಲ್ ಖಾನ್ ದೇಶಾದ್ಯಂತದ ಎಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ ಕೊರತೆ ನೀಗಿಸಲು ದೊಡ್ಡ ಮಟ್ಟದ ಸಂಗ್ರಹಕ್ಕೆ ಆಗ್ರಹಿಸಿದ್ದರು. ಅಲ್ಲದೇ ಜನಪರ ಆರೋಗ್ಯ ನೀತಿಗಾಗಿ ಒತ್ತಾಯಿಸಿದ್ದರು. ಆದರೆ ಸಿಎಎ ವಿರುದ್ಧ ಅವರು ಮಾತನಾಡಿದ್ದಕ್ಕಾಗಿ ಅವರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಅವರನ್ನು ಮತ್ತೊಮ್ಮೆ ಜೈಲಿಗೆ ಹಾಕಲಾಗಿತ್ತು. ತದನಂತರವು ಅವರು ನಿರಪರಾಧಿಗಳಾಗಿ ಬಿಡುಗಡೆಯಾಗಿದ್ದಾರೆ.

ಈಗ ಕೊರೊನಾ ಸಾಂಕ್ರಾಮಿಕ ಉಲ್ಭಣಿಸಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಕೊರತೆ ವಿಷಯ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಆಕ್ಸಿಜನ್ ಇಲ್ಲದ ಕಾರಣಕ್ಕಾಗಿಯೇ ಸಾವಿರಾರು ಜನ ಪ್ರಾಣ ಬಿಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


ಇದನ್ನೂ ಓದಿ: ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಕೊರತೆ: ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಾದುದ್ದೇನು?

Also Read: Dr. Kafeel Khan: Shocking status of Indian Health System- Solutions and Approach

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...