Homeಮುಖಪುಟ2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್ ಬೇಸರ

2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್ ಬೇಸರ

2017ರಲ್ಲಿ ಗೋರಖ್ ಪುರದ ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯುಂಟಾಗಿ ತಾಯಂದಿರ ಎದುರೇ 70 ಎಳೆಗೂಸುಗಳು ಜೀವಬಿಟ್ಟಿದ್ದವು.

- Advertisement -
- Advertisement -

ದೇಶದಲ್ಲಿ ಉದ್ಭವಿಸಿರುವ ಕೋವಿಡ್ ಎರಡನೇ ಅಲೆಯಿಂದಾಗಿ ದೇಶದ ಆರೋಗ್ಯ ವ್ಯವಸ್ಥೆ ಬಿಕ್ಕಟ್ಟಿಗೆ ಸಿಲುಕಿದೆ.  ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಿದಂತೆಲ್ಲಾ ಬೆಡ್‌ಗಳ ಕೊರತೆ, ಆಕ್ಸಿಜನ್, ರೆಮ್‌ಡಿಸಿವಿರ್, ಲಸಿಕೆ ಕೊರತೆಯ ಆಹಾಕಾರ ಎದ್ದಿದೆ. ಕೊರೊನಾ ದೇಶಕ್ಕೆ ಪರಿಚಯವಾಗಿ 15 ತಿಂಗಳಾದರೂ ಏಕೆ ಸರ್ಕಾರಗಳು ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲಿಲ್ಲ ಎಂಬ ಗಂಭೀರ ಪ್ರಶ್ನೆಗಳು ಕೇಳಿಬಂದಿವೆ. ಇದೇ ಸಂದರ್ಭದಲ್ಲಿ 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು ಎಂದು ಉತ್ತರ ಪ್ರದೇಶದ ಜನಪರ ವೈದ್ಯ ಡಾ.ಕಫೀಲ್ ಖಾನ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸೋಮವಾರ ರಾತ್ರಿ ಟ್ವೀಟ್ ಮಾಡಿರುವ ಅವರು, “2017ರಲ್ಲಿ ಆಕ್ಸಿಜನ್ ಸಂಗ್ರಹ ಕೊರತೆಯ ಬಿಕ್ಕಟ್ಟಿನ ಬಗ್ಗೆ ಪ್ರಶ್ನೆ ಎತ್ತಿದ್ದಾಗ ಯಾರೂ ನನ್ನನ್ನು ಗಂಭೀರವಾಗಿ ಪರಿಗಣಿಸಲಿಲ್ಲ, ಬದಲಿಗೆ ನನ್ನನ್ನು ಜೈಲಿಗೆ ಹಾಕಲಾಯಿತು. ಅಂದಿನಿಂದಲೂ ಹಲವಾರು ಜನ ‘ಎಲ್ಲರಿಗೂ ಉತ್ತಮ ಆರೋಗ್ಯ ವ್ಯವಸ್ಥೆ ಮತ್ತು ನೀತಿಗಾಗಿ’ ಒತ್ತಾಯಿಸುತ್ತಲೇ ಇದ್ದೇವೆ. ಇಂದು ಇಡೀ ದೇಶವು ಆಕ್ಸಿಜನ್ ಕೊರತೆಯಿಂದ ಬಳಲುತ್ತಿದೆ. ಆರೋಗ್ಯ ಸಚಿವ ಹರ್ಷವರ್ಧನ್‌ರವರೆ ದಯವಿಟ್ಟು ಎಚ್ಚರಗೊಳ್ಳಿ” ಎಂದು ಮನವಿ ಮಾಡಿದ್ದಾರೆ.

2017ರಲ್ಲಿ ಗೋರಖ್ ಪುರದ ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯುಂಟಾಗಿ ತಾಯಂದಿರ ಎದುರೇ 70 ಎಳೆಗೂಸುಗಳು ಜೀವಬಿಟ್ಟಿದ್ದವು. ತಮ್ಮ ಮಕ್ಕಳನ್ನು ಬದುಕಿಸಿಕೊಡುವಂತೆ ತಾಯಂದಿರು ಗೋಗರೆಯುತ್ತಿದ್ದರು, ಆದರೆ ಒಂದೇ ಒಂದು ಸಿಲಿಂಡರ್ ಇತ್ತು ಹೀಗಾಗಿ ಕೆಲ ಮಕ್ಕಳನ್ನು ಮಾತ್ರವೇ ಬದುಕಿಸಲಾಯಿತು ಮತ್ತು ಇತರ ಮಕ್ಕಳು ಸಾವನಪ್ಪಿದ್ದರು. ಈ ಮಕ್ಕಳ ದುರಂತದ ಪ್ರಕರಣದಲ್ಲಿ ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಮತ್ತು ವೈದ್ಯಕೀಯ ನಿರ್ಲಕ್ಷ್ಯದ ಆರೋಪದ ಮೇಲೆ ಡಾ. ಕಫೀಲ್‌ ಖಾನ್ ಅವರು‌ ಅಮಾನತು ಮತ್ತು 9 ತಿಂಗಳ ಜೈಲುವಾಸಕ್ಕೆ ಒಳಗಾಗಿದ್ದರು. ಆದರೆ ನ್ಯಾಯಾಲಯ ಅವರು ಅಮಾಯಕರು ಮತ್ತು ಉದ್ದೇಶಪೂರ್ವಕವಾಗಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿ ಪ್ರಕರಣ ಕೈಬಿಟ್ಟಿತ್ತು.

ಇದನ್ನೂ ಓದಿ: ಬಿಆರ್‌ಡಿ ಆಸ್ಪತ್ರೆಯಲ್ಲಿ ಮಕ್ಕಳ ಸಾವಿನ ದುರಂತ: ಡಾ.ಕಫೀಲ್ ಖಾನ್ ಆರೋಪಮುಕ್ತ. ಆದರೆ…

ಆಗ ಡಾ.ಕಫೀಲ್ ಖಾನ್ ದೇಶಾದ್ಯಂತದ ಎಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ ಕೊರತೆ ನೀಗಿಸಲು ದೊಡ್ಡ ಮಟ್ಟದ ಸಂಗ್ರಹಕ್ಕೆ ಆಗ್ರಹಿಸಿದ್ದರು. ಅಲ್ಲದೇ ಜನಪರ ಆರೋಗ್ಯ ನೀತಿಗಾಗಿ ಒತ್ತಾಯಿಸಿದ್ದರು. ಆದರೆ ಸಿಎಎ ವಿರುದ್ಧ ಅವರು ಮಾತನಾಡಿದ್ದಕ್ಕಾಗಿ ಅವರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಅವರನ್ನು ಮತ್ತೊಮ್ಮೆ ಜೈಲಿಗೆ ಹಾಕಲಾಗಿತ್ತು. ತದನಂತರವು ಅವರು ನಿರಪರಾಧಿಗಳಾಗಿ ಬಿಡುಗಡೆಯಾಗಿದ್ದಾರೆ.

ಈಗ ಕೊರೊನಾ ಸಾಂಕ್ರಾಮಿಕ ಉಲ್ಭಣಿಸಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಕೊರತೆ ವಿಷಯ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಆಕ್ಸಿಜನ್ ಇಲ್ಲದ ಕಾರಣಕ್ಕಾಗಿಯೇ ಸಾವಿರಾರು ಜನ ಪ್ರಾಣ ಬಿಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


ಇದನ್ನೂ ಓದಿ: ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಕೊರತೆ: ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಾದುದ್ದೇನು?

Also Read: Dr. Kafeel Khan: Shocking status of Indian Health System- Solutions and Approach

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...