Homeಕ್ರೀಡೆಒಲಂಪಿಕ್ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ..

ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ..

- Advertisement -
- Advertisement -

ಮಿಜೋರಾಂನಿಂದ ಒಲಿಂಪಿಕ್ಸ್‌ಗೆ ಆಯ್ಕೆಯಾದ ಮೊದಲ ಹಾಕಿ ಆಟಗಾರ್ತಿ ಲಾಲ್‌ರೆಮ್ಸಿಯಾಮಿ. ನನಗೆ ಹಾಕಿ ಆಡಬೇಕು ಎಂಬ ‘ಅವಾಸ್ತವಿಕ’ವಾದ ಕನಸೊಂದಿತ್ತು ಎನ್ನುವ ರೆಮ್ಸಿಯಾಮಿ, ಅದು ನನಸಾಗಿದ್ದೇಗೆ? ಎಂದು ಮನಬಿಚ್ಚಿ ವಿವರಿಸಿದ್ದಾರೆ.

ನಮ್ಮದು ಬಡ ರೈತ ಕುಟುಂಬ. ಅಪ್ಪ ಕೃಷಿ ಭೂಮಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ದಿನಕ್ಕೆ 250 ರೂ ಸಿಗುವುದು ಕೂಡ ಕಷ್ಟವಾಗಿತ್ತು. ಅಮ್ಮ ನನ್ನ ಹಾಗೂ ನನ್ನೊಂದಿಗೆ ಒಡಹುಟ್ಟಿದ ಏಳು ಜನರನ್ನು ನೋಡಿಕೊಳ್ಳುತ್ತಾ ಮನೆಯಲ್ಲಿದ್ದರು. ನಾವೆಲ್ಲರೂ ಸರ್ಕಾರಿ ಶಾಲೆಯಲ್ಲಿ ಓದಿದವರು. ನಾನು ಹಿರಿಯ ಮಗಳಾಗಿದ್ದೆ. ಅಪ್ಪ, ಅಮ್ಮನಿಗೆ ಸಹಾಯ ಮಾಡಬೇಕಿದ್ದ ಜವಾಬ್ದಾರಿ ನನಗಿತ್ತು. ಆದರೆ ನನಗೊಂದು ‘ಅವಾಸ್ತವಿಕ’ವಾದ ಕನಸೊಂದಿತ್ತು. ಅದೆಂದರೆ ನಾನು ಹಾಕಿ ಆಡಲು ಬಯಸಿದ್ದೆ.

ನನ್ನಮ್ಮ ಫುಟ್‌ಬಾಲ್‌ ಆಟಗಾರ್ತಿಯಾಗಿದ್ದರು. ನಮ್ಮನ್ನು ಆಟದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸುತ್ತಿದ್ದರು. ನನಗೆ ಹಾಕಿ ಕ್ರೀಡೆಯಲ್ಲಿ ಆಸಕ್ತಿಯಿತ್ತು. ನಾವು ಇದ್ದ ಮನೆಯಿಂದ ಸುಮಾರು 84 ಕಿ.ಮೀ ದೂರದಲ್ಲಿ ಹಾಕಿ ಅಕಾಡೆಮಿಯಿತ್ತು. ನಾನು ಹಾಕಿ ಕಲಿಯಲು ಪ್ರತಿದಿನ ಅಲ್ಲಿಗೆ ಹೋಗಿ ಬರುವ ಖರ್ಚನ್ನು ವ್ಯಯಿಸುವಷ್ಟು ಹಣ ನಮ್ಮಲ್ಲಿರಲಿಲ್ಲ. ನನ್ನಪ್ಪ ‘ನಮ್ಮ ಬಳಿ ಹಣವಿಲ್ಲ’ ಎಂದು ಹೇಳಿದ್ದರು.

ಅಕಾಡೆಮಿಯಲ್ಲಿ ಆಟಗಾರರಿಗೆ ತರಬೇತಿ ನೀಡಲು ಹಾಗೂ ಹಾಸ್ಟೆಲ್‌ನಲ್ಲಿ ಉಳಿದುಕೊಳ್ಳಲು ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂಬುದು ಹೇಗೋ ನನಗೆ ತಿಳಿಯಿತು. ಇದನ್ನು ಖುಷಿಯಿಂದಲೇ ನನ್ನ ಪೋಷಕರಿಗೆ ತಿಳಿಸಿದೆ. ಅಕಾಡೆಮಿಯಲ್ಲಿಯೇ ಉಳಿದು ತರಬೇತಿ ಪಡೆಯಲು ಸಮ್ಮತಿ ನೀಡುವಂತೆ ಅವರನ್ನು ಕೋರಿಕೊಂಡೆ. ಹಾಕಿ ಕ್ರೀಡೆ ಬಗ್ಗೆ ನನಗಿದ್ದ ಆಸಕ್ತಿಯನ್ನು ಅವರಿಗೆ ಮನವರಿಕೆ ಮಾಡಿದೆ. ಪದೇ ಪದೇ ಒತ್ತಾಯ ಮಾಡಿದ ನಂತರ ಅವರು ನಾನು ಅಕಾಡೆಮಿಯಲ್ಲಿ ಉಳಿಯಲು ಒಪ್ಪಿಗೆ ಸೂಚಿಸಿದರು.

ಹಾಕಿ ಟ್ರಯಲ್ಸ್‌ ರೌಂಡ್‌ನಲ್ಲಿ ನಾನು ಉತ್ತಮ ಪ್ರದರ್ಶನ ನೀಡಿ ಅಕಾಡೆಮಿಗೆ ಆಯ್ಕೆಯಾದೆ. ಅಪ್ಪ ನನ್ನನ್ನು ಅಕಾಡೆಮಿಯಲ್ಲಿ ಬಿಟ್ಟು ಮನೆಗೆ ಹೋಗುವಾಗ ‘ನಿನಗೆ ಇಷ್ಟವಾದದ್ದನ್ನೇ ಮಾಡುತ್ತಾ ಸಂತೋಷದಿಂದಿರು’ ಎಂದರು. ನನ್ನ ಕುಟುಂಬದವರನ್ನು ಬಿಟ್ಟಿರುವುದು ನನಗೂ ಕಷ್ಟವಾಗಿತ್ತು. ಪ್ರತಿವರ್ಷ ಕ್ರಿಸ್‌ಮಸ್‌ ರಜಾ ದಿನಗಳಲ್ಲಿ ಮಾತ್ರ ಕುಟುಂಬದವರನ್ನು ಭೇಟಿ ಮಾಡುತ್ತಿದ್ದೆ. ನಾನು ಮನೆಗೆ ಮರಳಿದ್ದಾಗ ಸುತ್ತಮುತ್ತಲಿನ ಜನ, ಸಂಬಂಧಿಕರು ಎಲ್ಲರೂ ‘ನಿಮ್ಮ ಮಗಳು ನಿಮ್ಮೊಟ್ಟಿಗೆ ಇದ್ದು, ಕುಟುಂಬ ನಿರ್ವಹಿಸಬೇಕಿತ್ತು’, ‘ಆಕೆಗೆ ಭವಿಷ್ಯವಿಲ್ಲ’ ಎಂದೆಲ್ಲಾ ನನ್ನ ಕುಟುಂಬದವನ್ನು ಹಂಗಿಸುತ್ತಿದ್ದರು. ಇದೆಲ್ಲವೂ ನನ್ನನ್ನು ಕಾಡದಂತೆ ನನ್ನ ಕುಟುಂಬದವರು ನೋಡಿಕೊಂಡರು. ಆದರೆ, ನನಗೆ ಭಯವಾಯಿತು. ‘ಒಂದಲ್ಲಾ ಒಂದು ದಿನ ನಾನು ಆ ನೀಲಿ ಜರ್ಸಿಯನ್ನು ಧರಿಸುತ್ತೇನೆ ಮತ್ತು ನಿಮಗೆ ಎಲ್ಲವನ್ನೂ ಕೊಡುತ್ತೇನೆ’ ಎಂದು ನಾನು ಅವರಿಗೆ ಭರವಸೆ ನೀಡಿದೆ. ಇದೇ ನನಗೆ ಅಕಾಡೆಮಿಯಲ್ಲಿ ಕಠಿಣ ತರಬೇತಿ ಪಡೆಯಲು ಸಹಕಾರಿಯಾಯಿತು.

ನನ್ನ ಪೋಷಕರು ನನ್ನನ್ನು ಬೆಂಬಲಿಸಿದ್ದು ಮಾತ್ರವಲ್ಲದೇ ಅದಕ್ಕೂ ಮೀರಿ ಜೊತೆಗಿದ್ದರು. ಹೀಗೆ ಒಮ್ಮೆ, ಒಂದು ಪಂದ್ಯಾವಳಿಯಲ್ಲಿ ಆಡಲು ನನ್ನ ಪೋಷಕರ ಸಹಿ ಬೇಕಿತ್ತು. ಅವರು 45 ಕಿ.ಮೀ ದೂರದಲ್ಲಿದ್ದರು. ನಾನು ಇರುವಲ್ಲಿಗೆ ಬಂದು ಸಹಿ ಮಾಡಲು ಬೇಕಾಗುವಷ್ಟು ಹಣ ಅವರ ಹತ್ತಿರವಿರಲಿಲ್ಲ. ಆದರೂ ನನ್ನಪ್ಪ ಬಂದರು; ಅಪ್ಪ ನನ್ನ ಹೀರೋ!

ನಾನು ರಾಷ್ಟ್ರೀಯ ಜೂನಿಯರ್‌ ಹಾಕಿ ತಂಡಕ್ಕೆ ಆಯ್ಕೆಯಾದೆ. ತಂಡದೊಂದಿಗೆ ಆಡಲು ನಾನು ದೆಹಲಿಗೆ ಹೋದೆ. ಹೊಸ ತಂಡ, ಹೊಸ ಪ್ರದೇಶ.. ಎಲ್ಲವೂ ನನಗೆ ಹೊಸದಾಗಿತ್ತು. ನಾನು ಮಾತನಾಡಲು ಸಂಕೋಚಪಡುತ್ತಿದ್ದೆ. ಆದರೆ ನನ್ನ ತಂಡದ ಸಂಗಾತಿಗಳು ತಂಡದ ಸಭೆಗಳಲ್ಲಿ ನಾನು ಮಾತನಾಡುವಂತೆ ಪ್ರೋತ್ಸಾಹಿಸಿದರು. ನನ್ನ ಆತ್ಮವಿಶ್ವಾಸ ಹೆಚ್ಚಾಯಿತು. ಅದನ್ನು ಮೈದಾನದಲ್ಲಿಯೂ ವ್ಯಕ್ತಪಡಿಸಲು ಸಾಧ್ಯವಾಯಿತು. 2016ರಲ್ಲಿ ನಡೆದ ಏಷ್ಯನ್‌ ಕಪ್‌ನಲ್ಲಿ ನಾನು ಭಾರತವನ್ನು ಪ್ರತಿನಿಧಿಸಿದ್ದ ತಂಡದಲ್ಲಿದೆ.

ನನ್ನ ಕಠಿಣ ದಿನಗಳು ಮುಂದಿದ್ದವು. 2019ರಲ್ಲಿ ಜಪಾನ್‌ನಲ್ಲಿ ನಡೆದ ಅಂತರಾಷ್ಟ್ರೀಯ ಹಾಕಿ ಫೇಡರೇಷನ್‌ನ ಸರಣಿಯಲ್ಲಿ ಚಿಲಿ ವಿರುದ್ಧ ಭಾರತದ ಸೆಮಿಫೈನಲ್‌ ಪಂದ್ಯವಿತ್ತು. ಆ ಪಂದ್ಯ ನಡೆಯುವ ಒಂದು ದಿನ ಮೊದಲು ಅಪ್ಪ ನಿಧನರಾದರು. ಅಪ್ಪನ ನಿಧನದಿಂದ ಸಂಪೂರ್ಣವಾಗಿ ಕುಗ್ಗಿಹೋದೆ, ಈ ಕೂಡಲೇ ಮನೆಗೆ ಹೋಗಬೇಕೆಂದು ತುಂಬಾ ಅನ್ನಿಸುತ್ತಿತ್ತು. ಆದರೆ, ಧೈರ್ಯ ಮಾಡಿ ನಾನು ಪಂದ್ಯದಲ್ಲಿ ಆಟವಾಡಲು ನಿರ್ಧರಿಸಿದ್ದೆ. ನನ್ನಪ್ಪ ಕೂಡ ಬಯಸುತ್ತಿದ್ದದ್ದು ಅದನ್ನೆ. ಅಪ್ಪನ ಪ್ರೀತಿ ಎಲ್ಲವನ್ನು ಮರೆತು ನಾನು ಚೆನ್ನಾಗಿ ಆಡುವಂತೆ ಮಾಡುತ್ತಿತ್ತು. ಆ ಟೂರ್ನಿಯಲ್ಲಿ ಭಾರತ ಜಯಗಳಿಸಿತು.

ಆ ದಿನ ಇಂದಿಗೂ ನನಗೆ ನೆನಪಿದೆ. ಆಟ ಮುಗಿಯಿತು ಎಂದು ಸೀಟಿ ಕೂಗುತ್ತಿದ್ದಂತೆ ನಾನು ಭಾವುಕಳಾದೆ. ಅಳಲು ಆರಂಭಿಸಿದೆ. ನನ್ನ ತಂಡದ ಸದಸ್ಯರು ನನ್ನ ಸುತ್ತಲೂ ಒಟ್ಟುಗೂಡಿ, ‘ನಿಮ್ಮ ತಂದೆ ತುಂಬಾ ಸಂತೋಷಪಡುತ್ತಾರೆ’ ಎಂದರು. ನಾನು ಬಯಸಿದ್ದು ಅಪ್ಪನಿಗೆ ನನ್ನ ಬಗ್ಗೆ ಹೆಮ್ಮೆ ಮೂಡಿಸುವುದಾಗಿತ್ತು. ನನ್ನನ್ನು ಬೆಂಬಲಿಸುತ್ತಿದ್ದ, ನನ್ನ ಬಗ್ಗೆ ಹೆಮ್ಮೆ ಪಡುತ್ತಿದ್ದ ನನ್ನ ಅಪ್ಪನಿಗೆ ವಿದಾಯ ಹೇಳಲಾಗಲಿಲ್ಲ ಎಂಬುದು ನನ್ನ ಜೀವನದ ದೊಡ್ಡ ವಿಷಾದದ ಸಂಗತಿ.

ಈಗ ನನ್ನ ಗುರಿ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಗೋಲು ಗಳಿಸುವುದು, ಗೆಲ್ಲುವುದು ಮಾತ್ರ. ನನ್ನಪ್ಪನಿಗಾಗಿ, ನನ್ನ ತಂಡಕ್ಕಾಗಿ, ನನ್ನ ಭಾರತಕ್ಕಾಗಿ ನಾನು ಆಡುತ್ತೇನೆ ಎನ್ನುವ ಲಾಲ್‌ರೆಮ್ಸಿಯಾಮಿ ಭಾಗವಹಿಸಿರುವ ಭಾರತ ತಂಡ ಒಲಿಂಪಿಕ್ಸ್‌ನಲ್ಲಿ ಸೆಮಿಫೈನಲ್‌ ತಲುಪುವತ್ತ ದಾಪುಗಾಲಿಟ್ಟಿದೆ. ಇದೇ ಮೊದಲ ಬಾರಿಗೆ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿರುವ ಭಾರತೀಯ ಮಹಿಳಾ ಹಾಕಿ ತಂಡ ಗೆಲುವು ಸಾಧಿಸಲಿ ಎಂಬುದು ನಮ್ಮಲ್ಲೆರ ಆಶಯ.

ಕೃಪೆ: ಹ್ಯೂಮನ್ಸ್‌ ಆಫ್‌ ಬಾಂಬೆ (Humans of Bombay)

ಲಾಲ್‌ರೆಮ್ಸಿಯಾಮಿ ಮಿಜೋರಾಂನಿಂದ ಒಲಿಂಪಿಕ್ಸ್‌ಗೆ ಆಯ್ಕೆಯಾದ ಮೊದಲ ಮಹಿಳೆ, ಹಾಕಿ ಆಟಗಾರ್ತಿ ಲಾಲ್‌ರೆಮ್ಸಿಯಾಮಿ ಜನಿಸಿದ್ದು 2000 ಮಾರ್ಚ್‌ 3ರಂದು. ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿರುವ ಮ್ಸಿಯಾಮಿ, 18 ವರ್ಷದೊಳಗಿನ ಭಾರತದ ಹಾಕಿ ತಂಡವನ್ನು ಪ್ರತಿನಿಧಿಸಿ 2018ರ ವರ್ಲ್ಡ್‌ ಕಪ್‌ನಲ್ಲಿ ಸ್ಪರ್ಧಿಸಿದ್ದರು. ಏಷ್ಯನ್‌ ಕಪ್‌ನಲ್ಲಿ ಇವರು ಪ್ರತಿನಿಧಿಸಿದ್ದ ಭಾರತ ತಂಡವು ಬೆಳ್ಳಿ ಪದಕ ಗೆದ್ದಿತ್ತು. ಪ್ರಸ್ತುತ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಇವರು ಪ್ರತಿನಿಧಿಸಿರುವ ಹಾಕಿ ತಂಡವು ಸೆಮಿಫೈನಲ್‌ ಪ್ರವೇಶಿಸಿದೆ.


ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್...

ವಿದ್ಯಾರ್ಥಿಗಳ ಪ್ರತಿಭಟನೆ: ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇರಿಸಿದ ಜಮ್ಮು-ಕಾಶ್ಮೀರ ಪೊಲೀಸರು

ಸರ್ಕಾರ ಮೀಸಲಾತಿ ನೀತಿಯನ್ನು ತರ್ಕಬದ್ಧಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆ & ಕೆ ವಿದ್ಯಾರ್ಥಿಗಳು ಪ್ರತಿಭಟನೆ ಘೋಷಿಸುತ್ತಿದ್ದಂತೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸಂಸದ ಮತ್ತು ಪೀಪಲ್ಸ್...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌...

ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು...

ತ್ರಿಪುರಾ: ಮಸೀದಿಗೆ ಮದ್ಯದ ಬಾಟಲಿಗಳನ್ನು ಇಟ್ಟು ಬೆಂಕಿ ಹಚ್ಚಲು ಯತ್ನ: ಬಜರಂಗದಳ ಧ್ವಜ ಕಟ್ಟಿದ ದುಷ್ಕರ್ಮಿಗಳು

ತ್ರಿಪುರಾದ ಧಲೈ ಜಿಲ್ಲೆಯ ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ, ಇದನ್ನು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಬೆದರಿಸುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ನಿವಾಸಿಗಳು ಮತ್ತು ಮಸೀದಿ ಅಧಿಕಾರಿಗಳು ಹೇಳಿದ್ದಾರೆ.  ಮನು-ಚೌಮಾನು ರಸ್ತೆಯಲ್ಲಿರುವ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

"ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು" ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ. ಡಿಸೆಂಬರ್...

“ನನಗೆ ಏನೂ ಆಗುವುದಿಲ್ಲ”: ಅತ್ಯಾಚಾರ ಮಾಡಿ ಸಂತ್ರಸ್ತೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್ ಪತಿ 

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ...

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನಕ್ಕೆ ದೇಶದಾದ್ಯಂತ ತೀವ್ರ ವಿರೋಧ : ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನದಿಂದ ಪರಿಸರದ ಮೇಲಾಗುವ ಹಾನಿಯ ಕುರಿತು ದೇಶದ ಜನರು ತೀವ್ರ ಆತಂಕ ಮತ್ತು ಕಳವಳ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್‌ ಈ ಕುರಿತು ಸ್ವಯಂ ಪ್ರೇರಿತ (Suo Motu...